AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi: ದೇಶದ ವಿಪತ್ತು ನಿರ್ವಹಣೆ ಸಾಮರ್ಥ್ಯವನ್ನು ವಿಶ್ವವೇ ಮೆಚ್ಚಿದೆ; ಪ್ರಧಾನಿ ಮೋದಿ

ಕೆಲಸದ ಗುರುತಿಸುವಿಕೆ ಮತ್ತು ಸುಧಾರಣೆಗಳು ವಿಪತ್ತು ನಿರ್ವಹಣೆಯನ್ನು ಬಲಪಡಿಸುವ ಎರಡು ಪ್ರಮುಖ ಅಂಶಗಳಾಗಿವೆ. ದೇಶದ ವಿಪತ್ತು ನಿರ್ವಹಣೆ ಸಾಮರ್ಥ್ಯವನ್ನು ವಿಶ್ವವೇ ಮೆಚ್ಚಿದೆ ಎಂದು ಪ್ರಧಾನಿ ನರೇಂದ್ರ ಮೋದಿ ದೆಹಲಿಯ ವಿಜ್ಞಾನ ಭವನದಲ್ಲಿ ಹೇಳಿದರು.

Narendra Modi: ದೇಶದ ವಿಪತ್ತು ನಿರ್ವಹಣೆ ಸಾಮರ್ಥ್ಯವನ್ನು ವಿಶ್ವವೇ ಮೆಚ್ಚಿದೆ; ಪ್ರಧಾನಿ ಮೋದಿ
ನರೇಂದ್ರ ಮೋದಿ
Ganapathi Sharma
|

Updated on: Mar 10, 2023 | 8:19 PM

Share

ನವದೆಹಲಿ: ಕೆಲಸದ ಗುರುತಿಸುವಿಕೆ ಮತ್ತು ಸುಧಾರಣೆಗಳು ವಿಪತ್ತು ನಿರ್ವಹಣೆಯನ್ನು ಬಲಪಡಿಸುವ ಎರಡು ಪ್ರಮುಖ ಅಂಶಗಳಾಗಿವೆ. ದೇಶದ ವಿಪತ್ತು ನಿರ್ವಹಣೆ ಸಾಮರ್ಥ್ಯವನ್ನು ವಿಶ್ವವೇ ಮೆಚ್ಚಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದರು. ದೆಹಲಿಯ ವಿಜ್ಞಾನ ಭವನದಲ್ಲಿ ಶುಕ್ರವಾರ ನಡೆದ ‘ವಿಪತ್ತು ಅಪಾಯ ಕಡಿಮೆ ಮಾಡುವುದು ಮತ್ತು ನಿರ್ವಹಣಾ ವೇದಿಕೆ (NDPRR)’ಯ 3ನೇ ಸೆಷನ್​ ಅನ್ನು ಉದ್ಘಾಟಿಸಿ ಅವರು ಮಾತನಾಡಿದರು. ‘ಹವಾಮಾನ ಬದಲಾವಣೆಗೆ ಸ್ಥಳೀಯವಾಗಿ ಸ್ಥಿತಿಸ್ಥಾಪಕತ್ವ ಹೊಂದುವುದು’ ಎಂಬ ಧ್ಯೇಯದೊಂದಿಗೆ ಸೆಷನ್ ಆಯೋಜಿಸಲಾಗಿದೆ. ಕಾರ್ಯಕ್ರಮದ ಸಂದರ್ಭದಲ್ಲಿ ಪ್ರಧಾನಿಯವರು ವಿಜೇತರಿಗೆ ‘ಸುಭಾಷ್​ ಚಂದ್ರ ಬೋಸ್ ಆಪ್​ದಾ ಪ್ರಬಂಧನ್ ಪುರಸ್ಕಾರ’ ಪ್ರದಾನ ಮಾಡಿದರು. ಒಡಿಶಾ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮತ್ತು ಮಿಜೋರಾಂನ ಲುಂಗ್ಲೆಯಿ ಫೈರ್ ಸ್ಟೇಷನ್ ಅನ್ನು 2023ರ ವಿಜೇತರೆಂದು ಘೋಷಿಸಲಾಯಿತು. ನಂತರ ವಿಪತ್ತಿನ ಅಪಾಯ ಕಡಿಮೆ ಮಾಡುವ ವಿಷಯಕ್ಕೆ ಸಂಬಂಧಿಸಿದ ಪ್ರದರ್ಶನ ಮಳಿಗೆಯನ್ನು ಉದ್ಘಾಟನೆ ಮಾಡಿದರು.

ಬಳಿಕ ಮಾತನಾಡಿದ ಮೋದಿ, ಕೆಲಸದ ಗುರುತಿಸುವಿಕೆ ಮತ್ತು ಸುಧಾರಣೆಗಳು ವಿಪತ್ತು ನಿರ್ವಹಣೆಯನ್ನು ಬಲಪಡಿಸುವ ಎರಡು ಪ್ರಮುಖ ಅಂಶಗಳಾಗಿವೆ. ಟರ್ಕಿ ಮತ್ತು ಸಿರಿಯಾದಲ್ಲಿ ಭೂಕಂಪ ಸಂಭವಿಸಿದ್ದಾಗ ಭಾರತದ ರಕ್ಷಣಾ ತಂಡಗಳು ಕೈಗೊಂಡಿದ್ದ ಕಾರ್ಯಾಚರಣೆಗೆ ಜಾಗತಿಕವಾಗಿ ಮೆಚ್ಚುಗೆ ವ್ಯಕ್ತವಾಗಿತ್ತು. ಇದು ಪ್ರತಿಯೊಬ್ಬ ಭಾರತೀಯ ಹೆಮ್ಮೆಪಡುವಂತೆ ಮಾಡಿದೆ ಎಂದರು.

ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಕರ್ನಾಟಕದ ಅಭಿವೃದ್ಧಿಯ ಪಥಕ್ಕೆ ಕೊಡುಗೆ: ಪ್ರಧಾನಿ ಮೋದಿ

ಭವಿಷ್ಯದ ತಂತ್ರಜ್ಞಾನಗಳೊಂದಿಗೆ ವಿಪತ್ತು ನಿರ್ವಹಣೆ ವಿಚಾರದಲ್ಲಿ ಸ್ಥಿತಿಸ್ಥಾಪಕತ್ವ ಹೊಂದಬೇಕಿದೆ. ಸ್ಥಳೀಯ ತಂತ್ರಜ್ಞಾನ ಮತ್ತು ಸಲಕರಣೆಗಳ ಬಳಕೆ ಸದ್ಯದ ತುರ್ತಾಗಿದೆ. ನಾವು ಭವಿಷ್ಯದ ತಂತ್ರಜ್ಞಾನದೊಂದಿಗೆ ಸ್ಥಳೀಯವಾಗಿ ಸ್ಥಿತಿಸ್ಥಾಪಕತ್ವ ಹೊಂದಬೇಕಿದೆ. ಹಾಗೆ ಮಾಡಿದಾಗ ಮಾತ್ರ ವಿಪತ್ತಿನ ಅಪಾಯವನ್ನು ಕಡಿಮೆ ಮಾಡುವ ದಿಶೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತದೆ ಎಂದು ಮೋದಿ ಹೇಳಿದರು.

ಎನ್​ಡಿಪಿಆರ್​​ಆರ್​​ ಎಂದರೇನು?

ಎನ್​​​ಪಿಡಿಆರ್​​ಆರ್​ ಅಥವಾ ವಿಪತ್ತು ಅಪಾಯ ಕಡಿಮೆ ಮಾಡುವುದು ಮತ್ತು ನಿರ್ವಹಣಾ ವೇದಿಕೆ ಕೇಂದ್ರ ಸರ್ಕಾರದಿಂದ ಸ್ಥಾಪಿಯವಾಗಿದೆ. ಹಲವರ ಸಹಭಾಗಿತ್ವದೊಂದಿಗೆ ಈ ವೇದಿಕೆ ಸ್ಥಾಪನೆಯಾಗಿದ್ದು, ವಿಪತ್ತು ನಿರ್ವಹಣಾ ಕ್ಷೇತ್ರಕ್ಕೆ ಸಂಬಂಧಿಸಿದ ಸಂವಾದ, ಅನುಭವಗಳ ಹಂಚಿಕೆ, ಪರಾಮರ್ಶೆ, ಐಡಿಯಾಗಳ ಹಂಚಿಕೆ, ಕ್ರಿಯೆ-ಆಧಾರಿತ ಸಂಶೋಧನೆಗೆ ಅನುಕೂಲ ಕಲ್ಪಿಸಿಕೊಡುತ್ತದೆ. ಸರ್ಕಾರ, ಸಂಸದರು, ಮೇಯರ್‌ಗಳು, ಮಾಧ್ಯಮಗಳು, ಅಂತಾರಾಷ್ಟ್ರೀಯ ಸಂಸ್ಥೆಗಳು, ಎನ್‌ಜಿಒಗಳು, ಸ್ಥಳೀಯ ಸಮುದಾಯಗಳ ಪ್ರತಿನಿಧಿಗಳು, ವೈಜ್ಞಾನಿಕ, ಶೈಕ್ಷಣಿಕ ಸಂಸ್ಥೆಗಳು ಮತ್ತು ಕಾರ್ಪೊರೇಟ್ ವ್ಯವಹಾರಗಳು ಇತ್ಯಾದಿಗಳನ್ನು ಒಂದೇ ವೇದಿಕೆಯಡಿ ತಂದು ದೇಶದ ವಿಪತ್ತು ಅಪಾಯ ಕಡಿಮೆ ಮಾಡುವುದು ಮತ್ತು ವಿಪತ್ತು ನಿರ್ವಹಣಾ ವ್ಯವಸ್ಥೆಯನ್ನು ಬಲಪಡಿಸುವ ಗುರಿಯನ್ನು ವೇದಿಕೆ ಹೊಂದಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಒಂದು ಆಧಾರ್ ಕಾರ್ಡ್​ಗೆ 2 ಚೀಲ ಯೂರಿಯಾ
ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಒಂದು ಆಧಾರ್ ಕಾರ್ಡ್​ಗೆ 2 ಚೀಲ ಯೂರಿಯಾ
ಪೂಜೆ ಮಾಡಿದರೆ ಇಷ್ಟಾರ್ಥಗಳು ನೆರವೇರುತ್ತವೆ ಎನ್ನುವ ಗೃಹಿಣಿಯರು
ಪೂಜೆ ಮಾಡಿದರೆ ಇಷ್ಟಾರ್ಥಗಳು ನೆರವೇರುತ್ತವೆ ಎನ್ನುವ ಗೃಹಿಣಿಯರು
‘ನಮ್ಮ ಮನೆ ಹತ್ತಿರವೇ ಅಟ್ಯಾಕ್ ಆಗಿದೆ’: ಪೊಲೀಸ್ ಎದುರು ಪ್ರಥಮ್ ಅಳಲು
‘ನಮ್ಮ ಮನೆ ಹತ್ತಿರವೇ ಅಟ್ಯಾಕ್ ಆಗಿದೆ’: ಪೊಲೀಸ್ ಎದುರು ಪ್ರಥಮ್ ಅಳಲು
ಹುಲಿರಾಯನ ಫೋಸ್​ ಕಂಡು ಹೌದು ಹುಲಿಯಾ ಎಂದ ಪ್ರವಾಸಿಗರು
ಹುಲಿರಾಯನ ಫೋಸ್​ ಕಂಡು ಹೌದು ಹುಲಿಯಾ ಎಂದ ಪ್ರವಾಸಿಗರು
PM Modi Speech Live: ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಭಾಷಣದ ನೇರಪ್ರಸಾರ
PM Modi Speech Live: ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಭಾಷಣದ ನೇರಪ್ರಸಾರ
ದರ್ಶನ್ ವಿಗ್ ಧರಿಸುತ್ತಾರೆ, ಅದನ್ನು ಹೇಗೆ ಕಿತ್ತುಕೊಳ್ಳಲಾದೀತು? ಪ್ರಥಮ್
ದರ್ಶನ್ ವಿಗ್ ಧರಿಸುತ್ತಾರೆ, ಅದನ್ನು ಹೇಗೆ ಕಿತ್ತುಕೊಳ್ಳಲಾದೀತು? ಪ್ರಥಮ್
ಹಿಮಾಚಲ ಪ್ರದೇಶದ ಮಂಡಿಯಲ್ಲಿ ಮೇಘಸ್ಫೋಟ; ದಿಢೀರ್ ಪ್ರವಾಹದಿಂದ ಮೂವರು ಸಾವು
ಹಿಮಾಚಲ ಪ್ರದೇಶದ ಮಂಡಿಯಲ್ಲಿ ಮೇಘಸ್ಫೋಟ; ದಿಢೀರ್ ಪ್ರವಾಹದಿಂದ ಮೂವರು ಸಾವು
ಪಹಲ್ಗಾಮ್ ದಾಳಿಗೆ ಭದ್ರತಾ ಲೋಪವೇ ಕಾರಣ: ಖರ್ಗೆ
ಪಹಲ್ಗಾಮ್ ದಾಳಿಗೆ ಭದ್ರತಾ ಲೋಪವೇ ಕಾರಣ: ಖರ್ಗೆ
ಕಾಂಗ್ರೆಸ್​ನ ದಲಿತ ವಿರೋಧಿ ನೀತಿಯಿಂದ ಖರ್ಗೆ ಸಿಎಂ ಆಗಲಿಲ್ಲ: ಜ್ಞಾನೇಂದ್ರ
ಕಾಂಗ್ರೆಸ್​ನ ದಲಿತ ವಿರೋಧಿ ನೀತಿಯಿಂದ ಖರ್ಗೆ ಸಿಎಂ ಆಗಲಿಲ್ಲ: ಜ್ಞಾನೇಂದ್ರ
ಅವಮಾನಗಳ ಹೊರತಾಗಿಯೂ ಸಿಎಂ ವಿರುದ್ಧ ಮಾತಾಡದ ಶಿವಕುಮಾರ್
ಅವಮಾನಗಳ ಹೊರತಾಗಿಯೂ ಸಿಎಂ ವಿರುದ್ಧ ಮಾತಾಡದ ಶಿವಕುಮಾರ್