AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಕೃಷಿ ಕಾಯ್ದೆಗಳನ್ನು ಬಿಟ್ಟುಕೊಡುತ್ತಿಲ್ಲ ಪ್ರಧಾನಿ ಮೋದಿ.. FICCI ಸಭೆಯಲ್ಲಿ ಹೇಳಿದ್ದೇನು?

2020ರಲ್ಲಿ ಅಡ್ಡಿಯೇ ಜಾಸ್ತಿಯಾಯಿತು. ನಮ್ಮ ದೇಶವಷ್ಟೇ ಅಲ್ಲ, ಇಡೀ ಜಗತ್ತು ಅನೇಕ ಏರಿಳಿತವನ್ನು ಕಂಡಿತು. ಆದರೆ ಈಗ ಪರಿಸ್ಥಿತಿ ವೇಗವಾಗಿ ಸುಧಾರಿಸುತ್ತಿರುವುದು ಸಮಾಧಾನಕರ ಸಂಗತಿ ಎಂದು ನರೇಂದ್ರ ಮೋದಿ ಹೇಳಿದರು.

ಹೊಸ ಕೃಷಿ ಕಾಯ್ದೆಗಳನ್ನು ಬಿಟ್ಟುಕೊಡುತ್ತಿಲ್ಲ ಪ್ರಧಾನಿ ಮೋದಿ.. FICCI ಸಭೆಯಲ್ಲಿ ಹೇಳಿದ್ದೇನು?
ಪ್ರಧಾನಿ ನರೇಂದ್ರ ಮೋದಿ
Lakshmi Hegde
| Updated By: ಸಾಧು ಶ್ರೀನಾಥ್​|

Updated on: Dec 12, 2020 | 1:20 PM

Share

ದೆಹಲಿ: ನೂತನ ಕೃಷಿ ಸುಧಾರಣಾ ಕಾಯ್ದೆಗಳಿಂದ ರೈತರಿಗೆ ಹೆಚ್ಚೆಚ್ಚು ಅವಕಾಶ ಮತ್ತು ನೂತನ ಮಾರುಕಟ್ಟೆ ಸೃಷ್ಟಿಯಾಗಿದೆ.. ಅಲ್ಲದೇ ಈಗ ಕೃಷಿಕರು ತಂತ್ರಜ್ಞಾನದ ಮೂಲಕವೂ ಸಂಪಾದನೆ ಮಾಡಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಸುಧಾರಿತ ಕೃಷಿ ಕಾಯ್ದೆಗಳ ವಿರುದ್ಧ ರೈತರು ಸಿಡಿದೆದ್ದಿದ್ದಾರೆ. ವಾಪಸ್ ಪಡೆಯುವಂತೆ ಪಟ್ಟು ಹಿಡಿದಿದ್ದಾರೆ. ಆದರೆ ಪ್ರಧಾನಿ ಮೋದಿ ಎಲ್ಲ ಸಂದರ್ಭಗಳಲ್ಲೂ ಈ ಕಾಯ್ದೆಗಳನ್ನು ಸಮರ್ಥಿಸಿಕೊಳ್ಳುತ್ತಲೇ ಇದ್ದಾರೆ. ಇಂದು ಫೆಡರೇಶನ್​ ಆಫ್​ ಇಂಡಿಯನ್​ ಚೇಂಬರ್ಸ್​ ಆಫ್​ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ (Federation of Indian Chambers of Commerce & Industry –FICCI)ಯ 93ನೇ ವಾರ್ಷಿಕ ಸಾಮಾನ್ಯ ಸಭೆ ಉದ್ದೇಶಿಸಿ ಮಾತನಾಡುವಾಗಲೂ ಸಹ ನೂತನ ಕೃಷಿ ಕಾಯ್ದೆಗಳಿಂದಾಗುವ ಒಳಿತುಗಳ ಬಗ್ಗೆಯೇ ತಿಳಿಸಿದ್ದಾರೆ.

ಪ್ರಸ್ತುತ ಕಾಯ್ದೆಗಳಿಂದ ಕೃಷಿ ಕ್ಷೇತ್ರದಲ್ಲಿ ಹೂಡಿಕೆ ಹೆಚ್ಚಾಗಲಿದ್ದು, ರೈತರಿಗೆ ಲಾಭ ತಂದುಕೊಡಲಿದೆ. ಅದರಲ್ಲೂ ಸಣ್ಣ ರೈತರಿಗೆ ಅನುಕೂಲ ಹೆಚ್ಚು. ಈಗ ರೈತರು ತಮ್ಮ ಉತ್ಪನ್ನಗಳನ್ನು ಸ್ಥಳೀಯ ಮಂಡಿಯಲ್ಲೂ ಮಾರಾಟ ಮಾಡಬಹುದು. ಹೊರಗಿನ ಮಾರುಕಟ್ಟೆಯಲ್ಲೂ ಮಾರಬಹುದು. ಅಷ್ಟೇ ಏಕೆ, ಡಿಜಿಟಲ್​ ವೇದಿಕೆಯಲ್ಲೂ ಮಾರುವ ಅವಕಾಶ ಪಡೆದಿದ್ದಾರೆ. ಕೃಷಿಕರ ಆದಾಯ ಹೆಚ್ಚಳ ಮತ್ತು ಅವರ ಉಜ್ವಲ ಭವಿಷ್ಯಕ್ಕಾಗಿ ನಾವು ಈ ಕ್ರಮ ಕೈಗೊಂಡಿದ್ದೇವೆ ಎಂದು ಹೇಳಿದ್ದಾರೆ.

ಕೃಷಿ ಕ್ಷೇತ್ರ ಮತ್ತು ಅದಕ್ಕೆ ಸಂಬಂಧಿಸಿದ ಪೂರಕ ವಲಯಗಳ ನಡುವೆ.. ಅಂದರೆ ಕೃಷಿಯ ಮೂಲಸೌಕರ್ಯಗಳು, ಆಹಾರ ಸಂಸ್ಕರಣೆ, ಶೇಖರಣೆ ಮತ್ತು ಶೀತಲೀಕರಣ ವ್ಯವಸ್ಥೆಗಳ ನಡುವೆ ಗೋಡೆ ಇತ್ತು. ಇದೀಗ ಅಂಥ ಅಡೆತಡೆಗಳನ್ನೆಲ್ಲ ತೊಡೆದುಹಾಕಲಾಗಿದೆ. ಹಾಗೇ, ಭಾರತದಲ್ಲಿ ಸ್ಪರ್ಧಾತ್ಮಕ ಅನುಕೂಲತೆಯುಳ್ಳ ಕ್ಷೇತ್ರದಲ್ಲಿ ತಂತ್ರಜ್ಞಾನ ಆಧಾರಿತ ಕೈಗಾರಿಕೆಗಳನ್ನು ಇನ್ನಷ್ಟು ಬಲಗೊಳಿಸಲು ಒತ್ತು ನೀಡಲಾಗುತ್ತಿದೆ ಎಂದು ಪ್ರಧಾನಿ ತಿಳಿಸಿದರು.

20-20ಯಿಂದ 2020ರವರೆಗೆ ಕ್ರಿಕೆಟ್​ನ 20-20 ಪಂದ್ಯದಲ್ಲಿ ಎಲ್ಲವೂ ವೇಗವಾಗಿ ಬದಲಾಗುವುದನ್ನು ನಾವು ನೋಡಿದ್ದೆವು. ಆದರೆ 2020ರಲ್ಲಿ ಅಡ್ಡಿಯೇ ಜಾಸ್ತಿಯಾಯಿತು. ನಮ್ಮ ದೇಶವಷ್ಟೇ ಅಲ್ಲ, ಇಡೀ ಜಗತ್ತು ಅನೇಕ ಏರಿಳಿತಗಳನ್ನು ಕಂಡಿತು. ಆದರೆ ಈಗ ಪರಿಸ್ಥಿತಿ ವೇಗವಾಗಿ ಸುಧಾರಿಸುತ್ತಿರುವುದು ಸಮಾಧಾನಕರ ಸಂಗತಿ ಎಂದು ನರೇಂದ್ರ ಮೋದಿ ಹೇಳಿದರು.

Delhi Chalo: ಪಂಜಾಬ್​ನಿಂದ ಹೊರಟಿವೆ 1300 ಟ್ರ್ಯಾಕ್ಟರ್​ಗಳು, ಪ್ರತಿಭಟನೆಯ ಕಾವಿಗೆ ಟೋಲ್​ಗಳು ಮುಕ್ತ ಮುಕ್ತ ಮುಕ್ತ..

ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣ: ಕಿಂಗ್​ಪಿನ್ ಅರೆಸ್ಟ್

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು