AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರದ ವಲಸೆ ಬಿಕ್ಕಟ್ಟಿಗೆ ಆರ್‌ಜೆಡಿ-ಕಾಂಗ್ರೆಸ್ ಯುಗವನ್ನು ದೂಷಿಸಿದ ಪ್ರಧಾನಿ ಮೋದಿ

ಉದ್ಯೋಗ ಮತ್ತು ಸ್ವಾವಲಂಬನೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿರುವ ಹಲವಾರು ಯುವ ಕೇಂದ್ರಿತ ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಅವುಗಳಲ್ಲಿ 60,000 ಕೋಟಿ ರೂ.ಗಳ ಯೋಜನೆಯಾದ ಪಿಎಂ-ಸೇತು ಯೋಜನೆಯೂ ಸೇರಿದೆ. ಇದು 200 ಹಬ್ ಐಟಿಐಗಳು ಮತ್ತು 800 ಸ್ಪೋಕ್ ಸಂಸ್ಥೆಗಳನ್ನು ಒಳಗೊಂಡಿರುವ ಹಬ್-ಆ್ಯಂಡ್-ಸ್ಪೋಕ್ ಮಾದರಿಯನ್ನು ಬಳಸಿಕೊಂಡು ಭಾರತದಾದ್ಯಂತ 1,000 ಸರ್ಕಾರಿ ಐಟಿಐಗಳನ್ನು ಮೇಲ್ದರ್ಜೆಗೇರಿಸುವ ಯೋಜನೆಯಾಗಿದೆ.

ಬಿಹಾರದ ವಲಸೆ ಬಿಕ್ಕಟ್ಟಿಗೆ ಆರ್‌ಜೆಡಿ-ಕಾಂಗ್ರೆಸ್ ಯುಗವನ್ನು ದೂಷಿಸಿದ ಪ್ರಧಾನಿ ಮೋದಿ
Pm Modi In Bihar
ಸುಷ್ಮಾ ಚಕ್ರೆ
|

Updated on:Oct 04, 2025 | 3:59 PM

Share

ನವದೆಹಲಿ, ಅಕ್ಟೋಬರ್ 4: ಆರ್‌ಜೆಡಿ-ಕಾಂಗ್ರೆಸ್ ಆಳ್ವಿಕೆಯಲ್ಲಿ ಸಂಪೂರ್ಣ ಅಧೋಗತಿಗೆ ಇಳಿದಿದ್ದ ಬಿಹಾರದ ಶಿಕ್ಷಣ ವ್ಯವಸ್ಥೆಯನ್ನು ಮತ್ತೆ ಪರಿವರ್ತಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ (PM Modi) ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ತಮ್ಮ ಎನ್‌ಡಿಎ ಸರ್ಕಾರವನ್ನು ಶ್ಲಾಘಿಸಿದ್ದಾರೆ. 62,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಕೌಶಲ್ಯ ಮತ್ತು ಶಿಕ್ಷಣ ಯೋಜನೆಗಳ ಉದ್ಘಾಟನೆಯಲ್ಲಿ ಮಾತನಾಡಿದ ಮೋದಿ, ಶಾಲೆಗಳನ್ನು ಪುನರ್ನಿರ್ಮಿಸಲು, ಉನ್ನತ ಶಿಕ್ಷಣ ಸಂಸ್ಥೆಗಳನ್ನು ವಿಸ್ತರಿಸಲು ಮತ್ತು ಯುವಕರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಈಗಿನ ಸರ್ಕಾರ ಬದ್ಧವಾಗಿದೆ ಎಂದಿದ್ದಾರೆ.

ಆರ್‌ಜೆಡಿ ಯುಗದಲ್ಲಿ ಶಿಕ್ಷಣ ವ್ಯವಸ್ಥೆಯ ಕುಸಿತವು ಬಿಹಾರದಿಂದ ಸಾಮೂಹಿಕ ವಲಸೆಗೆ ಕಾರಣವಾಯಿತು. ಇದರಿಂದಾಗಿ ಲೆಕ್ಕವಿಲ್ಲದಷ್ಟು ಕುಟುಂಬಗಳು ತಮ್ಮ ಮಕ್ಕಳನ್ನು ಅಧ್ಯಯನ ಮತ್ತು ಕೆಲಸಕ್ಕಾಗಿ ಇತರ ರಾಜ್ಯಗಳಿಗೆ ಕಳುಹಿಸಿದರು. ಇದೇ ವಲಸೆಯ ನಿಜವಾದ ಆರಂಭವಾಯಿತು. ವಲಸೆ ಬಿಕ್ಕಟ್ಟಿಗೆ ಆಗಿನ ಸರ್ಕಾರವೇ ಮುಖ್ಯ ಕಾರಣ ಎಂದು ಮೋದಿ ಟೀಕಿಸಿದ್ದಾರೆ.

ಇಂದು ಕಾಂಗ್ರೆಸ್ ವಿರುದ್ಧ ತೀಕ್ಷ್ಣವಾಗಿ ಪರೋಕ್ಷ ವಾಗ್ದಾಳಿ ನಡೆಸಿದ ಮೋದಿ, ಕೆಲವು ರಾಜಕೀಯ ನಾಯಕರು ಬಿಹಾರದ ಮಾಜಿ ಮುಖ್ಯಮಂತ್ರಿ ಮತ್ತು ಒಬಿಸಿ ಐಕಾನ್ ಆಗಿರುವ ಜನನಾಯಕ್ ಕರ್ಪೂರಿ ಠಾಕೂರ್ ಅವರ ಪರಂಪರೆಯನ್ನು ಕದಿಯಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಹೆಸರಿಸದೆ ವಾಗ್ದಾಳಿ ನಡೆಸಿದ ಮೋದಿ, ಠಾಕೂರ್ ಅವರ ಗೌರವಾನ್ವಿತ “ಜನನಾಯಕ್” ಸಾಮಾಜಿಕ ಮಾಧ್ಯಮ ಟ್ರೋಲ್‌ಗಳ ಸೃಷ್ಟಿಯಲ್ಲ. ಅದು ಜನರ ಆಳವಾದ ಪ್ರೀತಿ ಮತ್ತು ಗೌರವದ ಪ್ರತಿಬಿಂಬವಾಗಿದೆ ಎಂದು ಟೀಕಿಸಿದರು.

ಇದನ್ನೂ ಓದಿ: ಬಿಹಾರದ ಯುವಕರಿಗೆ ಪ್ರಧಾನಿ ಮೋದಿ ಭರ್ಜರಿ ಗಿಫ್ಟ್: 62000 ಕೋಟಿ ರೂ.ಗೂ ಹೆಚ್ಚು ಮೌಲ್ಯದ ವಿವಿಧ ಯೋಜನೆಗಳಿಗೆ ಚಾಲನೆ

ಮೋದಿ ಸರ್ಕಾರವು ಕಳೆದ ವರ್ಷ ಕರ್ಪೂರಿ ಠಾಕೂರ್ ಅವರಿಗೆ ಭಾರತ ರತ್ನವನ್ನು ನೀಡಿದೆ ಎಂದು ಅವರು ಸಭಿಕರಿಗೆ ನೆನಪಿಸಿದರು. ಬಿಹಾರದಲ್ಲಿ ಹೊಸದಾಗಿ ಉದ್ಘಾಟನೆಯಾದ ಜನ್ ನಾಯಕ್ ಕರ್ಪೂರಿ ಠಾಕೂರ್ ಕೌಶಲ್ಯ ವಿಶ್ವವಿದ್ಯಾಲಯವನ್ನು ಶಿಕ್ಷಣದ ಮೂಲಕ ಅವರ ಸಾಮಾಜಿಕ ನ್ಯಾಯ, ಸಮಾನತೆ ಮತ್ತು ಸಬಲೀಕರಣದ ಆದರ್ಶಗಳನ್ನು ಸಂರಕ್ಷಿಸಲು ಹೆಸರಿಸಲಾಗಿದೆ ಎಂದು ಅವರು ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:58 pm, Sat, 4 October 25

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ