AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರಿಕ್ಸ್ ಯಾರ ವಿರುದ್ಧವೂ ಇಲ್ಲ: ಪಾಶ್ಚಿಮಾತ್ಯರಿಗೆ ಪ್ರಧಾನಿ ಮೋದಿ ಖಡಕ್ ಸಂದೇಶ, ಜಾಗತಿಕ ಆಡಳಿತಕ್ಕೆ 10 ಅಂಶಗಳ ಸೂತ್ರ

ಪ್ರಧಾನಿ ಮೋದಿ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಶ್ಚಿಮಾತ್ಯ ವಿರೋಧಿಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಜಾಗತಿಕ ಆಡಳಿತ ಸುಧಾರಣೆಗೆ 10 ಅಂಶಗಳ ಸೂತ್ರ ಮಂಡಿಸಿದ ಅವರು, 'ಗ್ಲೋಬಲ್ ಸೌತ್' ರಾಷ್ಟ್ರಗಳು ಜಾಗತಿಕ ನಾಯಕರಾಗಬೇಕು ಎಂದರು. ವಿಶ್ವಸಂಸ್ಥೆ ಭದ್ರತಾ ಮಂಡಳಿ ಸುಧಾರಣೆ, ಜಾಗತಿಕ ಹಣಕಾಸು ಸಂಸ್ಥೆಗಳಲ್ಲಿ ಸಮಾನ ಮತದಾನ ಹಕ್ಕು ಹಾಗೂ ಸಮುದ್ರಯಾನಿಗಳ ಸುರಕ್ಷತೆಗೆ ಒತ್ತು ನೀಡಿದರು. ಬ್ರಿಕ್ಸ್ ಬಹುಧ್ರುವೀಯ ಜಾಗತಿಕ ಸಮತೋಲನಕ್ಕೆ ಬದ್ಧವಾಗಿದೆ ಎಂದು ಸಾರಿದರು.

ಬ್ರಿಕ್ಸ್ ಯಾರ ವಿರುದ್ಧವೂ ಇಲ್ಲ: ಪಾಶ್ಚಿಮಾತ್ಯರಿಗೆ ಪ್ರಧಾನಿ ಮೋದಿ ಖಡಕ್ ಸಂದೇಶ, ಜಾಗತಿಕ ಆಡಳಿತಕ್ಕೆ 10 ಅಂಶಗಳ ಸೂತ್ರ
ನರೇಂದ್ರ ಮೋದಿImage Credit source: Narendra Modi X Account
ನಯನಾ ರಾಜೀವ್
|

Updated on:Sep 13, 2026 | 11:58 AM

Share

ನವದೆಹಲಿ, ಸೆಪ್ಟೆಂಬರ್ 13: ಬ್ರಿಕ್ಸ್ ಒಕ್ಕೂಟವು ಯಾವುದೇ ಪಾಶ್ಚಿಮಾತ್ಯ ದೇಶಗಳ ವಿರುದ್ಧವಾಗಿರುವ ಸಂಘಟನೆಯಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟಪಡಿಸಿದ್ದಾರೆ. ನವದೆಹಲಿಯ ಭಾರತ್ ಮಂಟಪದಲ್ಲಿ ಆಯೋಜಿಸಲಾಗಿರುವ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿಶ್ವ ನಾಯಕರನ್ನುದ್ದೇಶಿಸಿ ಮಾತನಾಡಿದ ಅವರು, ಜಾಗತಿಕ ವ್ಯವಸ್ಥೆಯಲ್ಲಿ ಸುಧಾರಣೆ ತರಲು 10 ಅಂಶಗಳ ಸಮಗ್ರ ಮಾರ್ಗಸೂಚಿಯನ್ನು ಪ್ರಸ್ತಾಪಿಸಿದರು. ಅಭಿವೃದ್ಧಿಶೀಲ ‘ಗ್ಲೋಬಲ್ ಸೌತ್’ ರಾಷ್ಟ್ರಗಳು ಕೇವಲ ನಿಯಮ ಪಾಲಕರಾಗದೆ, ಜಾಗತಿಕ ನಿಯಮಗಳನ್ನು ರೂಪಿಸುವ ನಾಯಕರಾಗಿ ಹೊರಹೊಮ್ಮಬೇಕು ಎಂದು ಪ್ರಧಾನಿ ಕರೆ ನೀಡಿದರು.

ಪಿರಮಿಡ್ ಆಡಳಿತ ಕೊನೆಗೊಳ್ಳಲಿ: ವಿಶ್ವದ ಅಧಿಕಾರ ಮತ್ತು ನಿರ್ಧಾರಗಳು ಕೆಲವೇ ಶ್ರೀಮಂತ ರಾಷ್ಟ್ರಗಳ ಕೈಯಲ್ಲಿ ಕೇಂದ್ರೀಕೃತವಾಗಿರುವ ‘ಸವಲತ್ತುಗಳ ಪಿರಮಿಡ್’ ಮಾದರಿಯನ್ನು ಬದಲಾಯಿಸಬೇಕು. ಪ್ರತಿಯೊಂದು ದೇಶಕ್ಕೂ ಸಮಾನ ಧ್ವನಿ ನೀಡುವ ‘ಪಾಲುದಾರಿಕೆಯ ವೇದಿಕೆ’ ನಿರ್ಮಾಣವಾಗಬೇಕು ಎಂದು ಪ್ರತಿಪಾದಿಸಿದರು.

ಯುಎನ್‌ಎಸ್‌ಸಿ ತುರ್ತು ಸುಧಾರಣೆ: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ವಿಸ್ತರಣೆ ಮತ್ತು ಸುಧಾರಣೆಯನ್ನು ಇನ್ನು ಮುಂದೆ ಕಾಲಹರಣ ಮಾಡಿ ಮುಂದೂಡಲು ಸಾಧ್ಯವಿಲ್ಲ. ಸ್ಪಷ್ಟ ಕಾಲಮಿತಿಯೊಳಗೆ ಫಲಿತಾಂಶ ಆಧಾರಿತ ಮಾತುಕತೆಗಳು ನಡೆಯಬೇಕು ಹಾಗೂ ಜಾಗತಿಕ ಹಣಕಾಸು ಸಂಸ್ಥೆಗಳಲ್ಲಿನ ಮತದಾನದ ಹಕ್ಕು ಇಂದಿನ ಆರ್ಥಿಕ ವಾಸ್ತವಕ್ಕೆ ತಕ್ಕಂತೆ ಇರಬೇಕು ಎಂದರು.

ಮತ್ತಷ್ಟು ಓದಿ: ಪರಿಸರ ಜಾಗೃತಿಯ ಸಂದೇಶ; ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ

ನಾವಿಕರಿಗೆ ತುರ್ತು ಬೆಂಬಲ ಜಾಲ: ಹಾರ್ಮುಜ್ ಜಲಸಂಧಿ ಸೇರಿದಂತೆ ಸಮುದ್ರ ಮಾರ್ಗಗಳಲ್ಲಿ ಸರಕು ಹಡಗುಗಳ ಮೇಲೆ ನಡೆಯುತ್ತಿರುವ ದಾಳಿಗಳ ಹಿನ್ನೆಲೆಯಲ್ಲಿ, ಜಾಗತಿಕ ವ್ಯಾಪಾರಕ್ಕೆ ಬೆನ್ನೆಲುಬಾಗಿರುವ ಸಮುದ್ರಯಾನಿಗರ ಸುರಕ್ಷತೆಗಾಗಿ ‘ನಾವಿಕರ ತುರ್ತು ಬೆಂಬಲ ಜಾಲ’ ಸ್ಥಾಪಿಸಲು ಪ್ರಧಾನಿ ಕರೆ ನೀಡಿದರು.

ಭವಿಷ್ಯದ ತಂತ್ರಜ್ಞಾನಕ್ಕೆ ನಿಯಮಾವಳಿ: ಕೃತಕ ಬುದ್ಧಿಮತ್ತೆ (AI), ಸೈಬರ್ ಸ್ಪೇಸ್, ಬಾಹ್ಯಾಕಾಶ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಕೇವಲ ಕೆಲವೇ ದೇಶಗಳ ಪ್ರಾಬಲ್ಯ ಇರಬಾರದು, ಇವುಗಳ ಜಾಗತಿಕ ನೀತಿ-ನಿಯಮಗಳನ್ನು ರೂಪಿಸುವಲ್ಲಿ ಅಭಿವೃದ್ಧಿಶೀಲ ರಾಷ್ಟ್ರಗಳೂ ಸಮಾನ ಪಾಲು ಹೊಂದಿರಬೇಕು ಎಂದು ಒತ್ತಿ ಹೇಳಿದರು.

ಪಾಶ್ಚಿಮಾತ್ಯರ ಆತಂಕಕ್ಕೆ ಸ್ಪಷ್ಟನೆ: ಬ್ರಿಕ್ಸ್ ಒಕ್ಕೂಟವನ್ನು ಅಮೆರಿಕ ಮತ್ತು ಯುರೋಪ್ ವಿರೋಧಿ ಬಣ ಎಂದು ಬಿಂಬಿಸಲು ಯತ್ನಿಸುತ್ತಿರುವ ಪಾಶ್ಚಿಮಾತ್ಯ ಮಾಧ್ಯಮಗಳಿಗೆ ಪ್ರಧಾನಿ ಮೋದಿ ಈ ಮೂಲಕ ನೇರ ಪ್ರತ್ಯುತ್ತರ ನೀಡಿದ್ದಾರೆ. ಬ್ರಿಕ್ಸ್ ವಿರೋಧಿಸುವುದಕ್ಕಲ್ಲ, ಬದಲಾಗಿ ಎಲ್ಲರನ್ನೂ ಒಳಗೊಳ್ಳುವ ಬಹುಧ್ರುವೀಯ ಜಾಗತಿಕ ಸಮತೋಲನಕ್ಕಾಗಿ ಇದೆ ಎಂಬುದನ್ನು ಜಗತ್ತಿಗೆ ಸಾರಿದರು.

ಗ್ಲೋಬಲ್ ಸೌತ್‌ಗೆ ಭಾರತದ ಬದ್ಧತೆ: ಬಡ ಮತ್ತು ಮುಂದುವರೆಯುತ್ತಿರುವ ದೇಶಗಳ ಯುವ ರಾಜತಾಂತ್ರಿಕರಿಗೆ ಮಾತುಕತೆ ಕೌಶಲ್ಯ, ಅಂತಾರಾಷ್ಟ್ರೀಯ ಕಾನೂನು ಪರಿಣತಿ ಹಾಗೂ ನೀತಿ ರಚನೆಯಲ್ಲಿ ತರಬೇತಿ ನೀಡಲು ಭಾರತ ಸದಾ ಸಿದ್ಧವಿದೆ ಎಂದು ಘೋಷಿಸುವ ಮೂಲಕ ಭಾರತವು ‘ಗ್ಲೋಬಲ್ ಸೌತ್’ನ ಅಘೋಷಿತ ನಾಯಕನಾಗಿ ತನ್ನ ಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:57 am, Sun, 13 September 26

Follow Us
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು