AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಯನಾಡಿನಲ್ಲಿ ಮತದಾನ ಮುಗಿಯುತ್ತಿದ್ದಂತೆ ರಾಹುಲ್ ಇನ್ನೊಂದು ಕಡೆ ಸ್ಪರ್ಧಿಸುವುದಾಗಿ ಘೋಷಿಸ್ತಾರೆ: ಮೋದಿ

Lok Sabha Elections 2024: ರಾಹುಲ್​ ಗಾಂಧಿ ಅಮೇಥಿಯಂತೆ ವಯನಾಡಿನಿಂದಲೂ ಓಡಿಹೋಗುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕಾಂಗ್ರೆಸ್​ ಈಗಾಗಲೇ ಸೋಲು ಒಪ್ಪಿಕೊಂಡಿದೆ. ರಾಹುಲ್​ ಗಾಂಧಿ ವಯನಾಡಿನಲ್ಲಿ ಮತದಾನ ಮುಗಿಯುತ್ತಿದ್ದಂತೆ ಬೇರೆ ಕ್ಷೇತ್ರದಿಂದ ಸ್ಪರ್ಧಿಸುವ ಘೋಷನೆ ಮಾಡುತ್ತಾರೆ ಎಂದಿದ್ದಾರೆ.

ವಯನಾಡಿನಲ್ಲಿ ಮತದಾನ ಮುಗಿಯುತ್ತಿದ್ದಂತೆ ರಾಹುಲ್ ಇನ್ನೊಂದು ಕಡೆ ಸ್ಪರ್ಧಿಸುವುದಾಗಿ ಘೋಷಿಸ್ತಾರೆ: ಮೋದಿ
ನರೇಂದ್ರ ಮೋದಿ
ನಯನಾ ರಾಜೀವ್
|

Updated on: Apr 21, 2024 | 8:55 AM

Share

ವಯನಾಡಿ(Wayanad)ನಲ್ಲಿ ಏಪ್ರಿಲ್​ 26ರಂದು ಮತದಾನ ಮುಗಿದ ಬಳಿಕ ರಾಹುಲ್​ ಗಾಂಧಿ(Rahul Gandhi) ಮತ್ತೊಂದು ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ಕಾಂಗ್ರೆಸ್​ ಸೋಲನ್ನು ಒಪ್ಪಿಕೊಂಡಿದೆ, ಹಿರಿಯ ನಾಯಕರು ಲೋಕಸಭೆ(Lok Sabha)ಗೆ ಸ್ಪರ್ಧಿಸುವ ಬದಲು ರಾಜ್ಯಸಭೆಗೆ ಹೋಗುತ್ತಿದ್ದಾರೆ ಎಂದರು. 2019ರಲ್ಲಿ ಅಮೇಥಿಯಿಂದ ಓಡಿಹೋದಂತೆ ಕೇರಳದ ವಯನಾಡಿನಲ್ಲೂ ಜನಬೆಂಬಲ ಪಡೆಯುವುದು ಕಷ್ಟವಾಗಿರುವುದರಿಂದ ಅಲ್ಲಿಂದಲೂ ಓಡಿಹೋಗುವುತ್ತಾರೆ ಎಂದು ಮೋದಿ ಟೀಕಿಸಿದ್ದಾರೆ.

ವಯನಾಡ್‌ನಿಂದ ಎರಡನೇ ಅವಧಿಗೆ ರಾಹುಲ್​ ಗಾಂಧಿ ಅವರನ್ನು ಕಾಂಗ್ರೆಸ್‌ ಕಣಕ್ಕಿಳಿಸಿದೆ. . 2019 ರಲ್ಲಿ, ಅವರು ತಮ್ಮ ಕುಟುಂಬದ ಭದ್ರಕೋಟೆಯಾದ ವಯನಾಡ್ ಮತ್ತು ಅಮೇಥಿಯಿಂದ ಸ್ಪರ್ಧಿಸಿದ್ದರು. ಅಮೇಥಿಯಲ್ಲಿ ಅವರು ಕೇಂದ್ರ ಸಚಿವೆ ಸ್ಮೃತಿ ಇರಾನಿ ವಿರುದ್ಧ ಸೋತರು. ಆದರೆ ಅವರು ವಯನಾಡಿನಲ್ಲಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾದರು.

ಇಂಡಿಯಾ ಒಕ್ಕೂಟದ ನಾಯಕರ್ಯಾರು ಎಂಬುದನ್ನು ಹೇಳಲು ಒಕ್ಕೂಟಕ್ಕೆ ಸಾಧ್ಯವಾಗುತ್ತಿಲ್ಲ. ಚುನಾವಣೆ ಘೋಷಣೆಗೂ ಮುನ್ನವೇ ಕಾಂಗ್ರೆಸ್ ನಾಯಕರು ಸೋಲನ್ನು ಒಪ್ಪಿಕೊಂಡಿದ್ದಾರೆ. ಮಹಾರಾಷ್ಟ್ರದ ಅಭಿವೃದ್ಧಿಗೆ ಕಾಂಗ್ರೆಸ್ ಅಡ್ಡಗಾಲು ಹಾಕುತ್ತಿದೆ.

ಮತ್ತಷ್ಟು ಓದಿ: PM Modi in Bengaluru: ಟೆಕ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದ ಕಾಂಗ್ರೆಸ್; ಬೆಂಗಳೂರಿನಲ್ಲಿ ಮೋದಿ ವ್ಯಂಗ್ಯ

ಮಹಾರಾಷ್ಟ್ರದ 48 ಲೋಕಸಭಾ ಸ್ಥಾನಗಳಿಗೆ ಏಪ್ರಿಲ್ 19 ರಿಂದ ಮೇ 20 ರವರೆಗೆ ಐದು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಜೂನ್ 4 ರಂದು ಫಲಿತಾಂಶ ಪ್ರಕಟವಾಗಲಿದೆ. ನಾಂದೇಡ್‌ನಲ್ಲಿ ಎರಡನೇ ಹಂತದಲ್ಲಿ ಏಪ್ರಿಲ್ 26 ರಂದು ಮತದಾನ ನಡೆಯಲಿದೆ.

ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ಚುನಾವಣೆಗೆ ಸ್ಪರ್ಧಿಸಲು ಅಭ್ಯರ್ಥಿಗಳು ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ. ಅವರ ಪಕ್ಷದ ನಾಯಕರು ಬಹುತೇಕ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರಕ್ಕೆ ಹೋಗುತ್ತಿಲ್ಲ. ಭಾರತದ ಪ್ರಜಾಸತ್ತಾತ್ಮಕ ಶಕ್ತಿ ಹೆಚ್ಚುತ್ತಿದೆ ಎಂಬುದನ್ನು ಹೆಚ್ಚಿನ ಮತದಾನದ ಶೇಕಡಾವಾರು ತೋರಿಸುತ್ತದೆ ಎಂದು ಮೋದಿ ಹೇಳಿದರು.

ಕಾಂಗ್ರೆಸ್​ ತನ್ನನ್ನು ಬೆಂಬಲಿಸುವವನನ್ನೇ ಬಾಡಿಸುವ ಬಳ್ಳಿ ಕಾಂಗ್ರೆಸ್ ಅನ್ನು ಗುರಿಯಾಗಿಟ್ಟುಕೊಂಡ ಪ್ರಧಾನಿ ಮೋದಿ, ‘ಕಾಂಗ್ರೆಸ್ ಅಂತಹ ಬಳ್ಳಿಯಾಗಿದ್ದು, ಅದು ಬೇರುಗಳಿಲ್ಲ, ಸ್ವಂತ ಭೂಮಿ ಇಲ್ಲ ಮತ್ತು ಬೆಂಬಲಿಸುವವರನ್ನು ಒಣಗಿಸುತ್ತದೆ. ಸ್ವಾತಂತ್ರ್ಯದ ಸಮಯದಲ್ಲಿ ಕಾಂಗ್ರೆಸ್ ದೇಶವನ್ನು ವಿಭಜಿಸಿತು, ಸ್ವಾತಂತ್ರ್ಯದ ನಂತರ ಕಾಶ್ಮೀರದ ಸಮಸ್ಯೆಯನ್ನು ಸೃಷ್ಟಿಸಿತು. 370ರ ನೆಪದಲ್ಲಿ ಕಾಶ್ಮೀರದಲ್ಲಿ ಬಾಬಾ ಸಾಹೇಬರ ಸಂವಿಧಾನವನ್ನು ಜಾರಿಗೆ ತರಲು ಕಾಂಗ್ರೆಸ್ ಅವಕಾಶ ನೀಡಲಿಲ್ಲ.

ಕಳೆದ ಅವಧಿಯಲ್ಲಿ ನಾವು ಚಂದ್ರಯಾನದ ಯಶಸ್ಸನ್ನು ನೋಡಿದ್ದೇವೆ, ಮುಂದಿನ ಅವಧಿಯಲ್ಲಿ ದೇಶದ ಜನರು ಗಗನಯಾನದ ಯಶಸ್ಸನ್ನು ಕಾಣುತ್ತಾರೆ. ಕೇವಲ 10 ವರ್ಷಗಳಲ್ಲಿ ದೇಶ ಅಭಿವೃದ್ಧಿಯಲ್ಲಿ ಬಹಳ ದೂರ ಕ್ರಮಿಸಿದೆ. ನಿಮ್ಮ ಕನಸುಗಳೇ ನನ್ನ ಸಂಕಲ್ಪ ಎಂದು ಪ್ರಧಾನಿ ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ