AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​ ಮುಖ್ಯಮಂತ್ರಿ ಭಗವಂತ್ ಮಾನ್​​ಗೆ ಪ್ರಧಾನಿ ಮೋದಿ ಅಭಿನಂದನೆ; ಬಿರೆನ್​​ ಸಿಂಗ್​​, ಪ್ರಮೋದ್​ ಸಾವಂತ್​ಗೂ ಶುಭ ಹಾರೈಕೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಗೋವಾ ಮತ್ತು ಮಣಿಪುರ ಮುಖ್ಯಮಂತ್ರಿ ಅಭ್ಯರ್ಥಿಗಳನ್ನು ಭೇಟಿಯಾಗಿದ್ದಾರೆ. ಇದೆರಡೂ ರಾಜ್ಯಗಳಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬಂದಿದ್ದು, ಹಿಂದಿನ ಸಿಎಂಗೇ ಈ ಅವಧಿಗೂ ಮುಖ್ಯಮಂತ್ರಿಗಳಾಗಿ ಮುಂದುವರಿಯಲಿದ್ದಾರೆ.

ಪಂಜಾಬ್​ ಮುಖ್ಯಮಂತ್ರಿ ಭಗವಂತ್ ಮಾನ್​​ಗೆ ಪ್ರಧಾನಿ ಮೋದಿ ಅಭಿನಂದನೆ; ಬಿರೆನ್​​ ಸಿಂಗ್​​, ಪ್ರಮೋದ್​ ಸಾವಂತ್​ಗೂ ಶುಭ ಹಾರೈಕೆ
ಪ್ರಧಾನಿ ಮೋದಿ ಮತ್ತು ಭಗವಂತ್ ಮಾನ್​
TV9 Web
| Edited By: |

Updated on: Mar 16, 2022 | 6:14 PM

Share

ಇಂದು ಪಂಜಾಬ್​ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಭಗವಂತ್​ ಮಾನ್​ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಪಂಜಾಬ್​ ರಾಜ್ಯದ ಅಭಿವೃದ್ಧಿಗಾಗಿ, ಜನರ ಒಳಿತಿಗಾಗಿ ಕೇಂದ್ರ ಮತ್ತು ಅಲ್ಲಿನ ರಾಜ್ಯ ಸರ್ಕಾರ ಒಗ್ಗಟ್ಟಾಗಿ ಕೆಲಸ ಮಾಡೋಣ ಎಂದೂ ಹೇಳಿದ್ದಾರೆ.  ಅಂದಹಾಗೇ ಭಗವಂತ್​ ಮಾನ್​ ಇಂದು ಪಂಜಾಬ್​​ನ ಖಟ್ಕರ್​ ಕಲಾನ್​ ಗ್ರಾಮದಲ್ಲಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.  ಅವರಿಗೆ ಹಲವು ಪ್ರಮುಖ ನಾಯಕರು ಶುಭ ಹಾರೈಸಿದ್ದಾರೆ.

ಅದರೊಂದಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಗೋವಾ ಮತ್ತು ಮಣಿಪುರ ಮುಖ್ಯಮಂತ್ರಿ ಅಭ್ಯರ್ಥಿಗಳನ್ನು ಭೇಟಿಯಾಗಿದ್ದಾರೆ. ಇದೆರಡೂ ರಾಜ್ಯಗಳಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬಂದಿದ್ದು, ಹಿಂದಿನ ಸಿಎಂಗೇ ಈ ಅವಧಿಗೂ ಮುಖ್ಯಮಂತ್ರಿಗಳಾಗಿ ಮುಂದುವರಿಯಲಿದ್ದಾರೆ. ಗೋವಾದಲ್ಲಿ ಪ್ರಮೋದ್ ಸಾವಂತ್ ಮತ್ತು ಮಣಿಪುರದಲ್ಲಿ ಎನ್​.ಬಿರೆನ್​ ಸಿಂಗ್​ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದು, ಹೋಳಿ ಹುಣ್ಣಿಮೆಯ ನಂತರ ಕಾರ್ಯಕ್ರಮ ನಡೆಯುವುದಾಗಿ ಮಾಹಿತಿ ಸಿಕ್ಕಿದೆ. ಇಂದು ಪ್ರಮೋದ್​ ಸಾವಂತ್​ ಮತ್ತು ಎನ್​.ಬಿರೆನ್​ ಸಿಂಗ್​ರನ್ನು ಭೇಟಿಯಾದ ಪ್ರಧಾನಿ ಮೋದಿ ಇಬ್ಬರಿಗೂ ಅಭಿನಂದನೆ ಸಲ್ಲಿಸಿದ್ದಾರೆ. ಆಡಳಿತದಲ್ಲಿರುವ ಎಲ್ಲ ರಾಜ್ಯಗಳಲ್ಲೂ ಅಲ್ಲಿನ ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಲು ಬಿಜೆಪಿ ಸಿದ್ಧವಾಗಿದೆ ಎಂದು ಹೇಳಿದ್ದಾರೆ.  ಹಾಗೇ, ಇಬ್ಬರೂ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಫೋಟೋವನ್ನೂ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಮುಂಜಾನೆ 4 ಗಂಟೆ ಜಿಮ್​ ಸೆಷನ್​ ವಿಡಿಯೋ ಹಂಚಿಕೊಂಡು ಟ್ರೋಲ್​ ಆದ ಕಪಿಲ್​ ಶರ್ಮಾ

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ