AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

G20 Summit: G20 ಶೃಂಗಸಭೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ದೆಹಲಿ ಪೊಲೀಸರೊಂದಿಗೆ ಪ್ರಧಾನಿ ಮೋದಿ ಔತಣಕೂಟ

ದೆಹಲಿಯಲ್ಲಿ ನಡೆದ 18ನೇ ಜಿ-20 ಶೃಂಗಸಭೆ ಮುಗಿದ್ದು, ಇದೀಗ ಈ ಸಭೆಯನ್ನು ಸುಗಮವಾಗಿ ನಡೆಸಲು ಹಗಲು-ರಾತ್ರಿ ಎನ್ನದೇ ಸೇವೆ ನೀಡಿದ ದೆಹಲಿ ಪೊಲೀಸರೊಂದಿಗೆ ಪ್ರಧಾನಿ ಮೋದಿ ಅವರು ಔತಣಕೂಟದಲ್ಲಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿದೆ.

G20 Summit: G20 ಶೃಂಗಸಭೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ದೆಹಲಿ ಪೊಲೀಸರೊಂದಿಗೆ ಪ್ರಧಾನಿ ಮೋದಿ ಔತಣಕೂಟ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Sep 13, 2023 | 4:27 PM

Share

ದೆಹಲಿ, ಸೆ.13: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ 18ನೇ ಜಿ-20 ಶೃಂಗಸಭೆ (G20 Summit) ಈಗಾಗಲೇ ಮುಗಿದಿದ್ದು, ಇದೀಗ ಈ ಸಭೆಯನ್ನು ಸುಗಮವಾಗಿ ನಡೆಸಲು ಹಗಲು-ರಾತ್ರಿಯೆನ್ನದೇ ಕರ್ತವ್ಯ ನಿರ್ವಹಿಸಿದ್ದ ದೆಹಲಿ ಪೊಲೀಸರೊಂದಿಗೆ ಪ್ರಧಾನಿ ಮೋದಿ ಅವರು ಔತಣಕೂಟದಲ್ಲಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿದೆ. ಈ ಕಾರ್ಯಕ್ರಮ ಯಶಸ್ವಿಯಾಗಲು ದೆಹಲಿ ಪೊಲೀಸರ ಶ್ರಮ ಹೆಚ್ಚು ಇದೆ ಎಂದು ಪ್ರಧಾನಿ ಮೋದಿ ಅವರು ಈ ಭೋಜನ ಕೂಟವನ್ನು ಏರ್ಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿದೆ.

ಶೃಂಗಸಭೆಯಲ್ಲಿ ಕೆಲಸ ಮಾಡಿದ ಕಾನ್‌ಸ್ಟೆಬಲ್‌ಗಳು, ಇನ್ಸ್‌ಪೆಕ್ಟರ್‌ಗಳನ್ನು ಗುರುತಿಸಿ, ಪ್ರತಿ ಜಿಲ್ಲೆಯಿಂದ ಪಟ್ಟಿ ಕಳುಹಿಸುವಂತೆ ದೆಹಲಿ ಪೊಲೀಸ್ ಕಮಿಷನರ್ ಸಂಜಯ್ ಅರೋರಾ ಅವರು ಜಿಲ್ಲಾ ಮುಖ್ಯ ಠಾಣೆಗಳಿಗೆ ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ.

ಇನ್ನು ಈ ಪಟ್ಟಿಯಲ್ಲಿ 450 ಸಿಬ್ಬಂದಿಗಳನ್ನು ಗುರುತಿಸಲಾಗಿದೆ. ಜತೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್​​ ಕ್ರೇಜಿವಾಲ್​​ ಕೂಡ ಭಾರತ್​ ಮಂಟಪಂನಲ್ಲಿ ನಡೆಯುವ ಈ ಭೋಜನ ಕೂಟದಲ್ಲಿ ಭಾಗವಹಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಪ್ರಧಾನಿ ಮೋದಿ ಅವರು ಇಂತಹ ಸೇವೆಯಲ್ಲಿ ತೋಡಗಿಕೊಂಡಿರುವವರನ್ನು ಗೌರವಿಸುವುದು ಇದೇ ಮೊದಲಲ್ಲ. ಈ ಹಿಂದೆ ಅಂದರೆ ಮೇ ತಿಂಗಳಲ್ಲಿ, ಹೊಸ ಸಂಸತ್ ಭವನದ ಉದ್ಘಾಟನೆಗೂ ಮುನ್ನ, ಅದರ ನಿರ್ಮಾಣದಲ್ಲಿ ತೊಡಗಿರುವ ಕಾರ್ಮಿಕರನ್ನು ಸನ್ಮಾನಿಸಿದ್ದರು.

ಇದನ್ನೂ ಓದಿ:ಜಿ-20 ಶೃಂಗಸಭೆಗೆ ವ್ಯಯಿಸಿದ ಹಣವೆಷ್ಟು? ಇಲ್ಲಿದೆ ಮಾಹಿತಿ

ಇನ್ನು ಈ ಶೃಂಗಸಭೆಯಲ್ಲಿ ಭಾಗವಹಿಸಿದ ಪೊಲೀಸ್​​ ಸಿಬ್ಬಂದಿಗಳಿಗೆ ಸಂಜಯ್ ಅರೋರಾ ಅವರು ಪೊಲೀಸ್ ಆಯುಕ್ತರ ವಿಶೇಷ ಪ್ರಶಂಸಾ ಫಲಕ ಮತ್ತು ಪ್ರಮಾಣಪತ್ರವನ್ನು ನೀಡಿದರು. ಈ ಬಗ್ಗೆ ಸೆಪ್ಟೆಂಬರ್ 11ರಂದು ಹೊರಡಿಸಲಾದ ಆದೇಶಕ್ಕೆ ಸಂಬಂಧಿಸಿದಂತೆ ದಿಲ್ಲಿ ಪೊಲೀಸರ ಸಂಪೂರ್ಣ ಶ್ರೇಣಿ ಮತ್ತು ವಿಶೇಷ ಕಾಳಜಿಯ ಭಾಗವಹಿಸುವಿಕೆ, ಬದ್ಧತೆ ಮತ್ತು ಕೊಡುಗೆಯನ್ನು ಕಂಡು, G20 ವ್ಯವಸ್ಥೆಗಳ ಸುಗಮ, ವೃತ್ತಿಪರ ಮತ್ತು ನಿಖರವಾದ ಕಾರ್ಯಗತಗೊಳಿಸುವಿಕೆ ಸಾಧ್ಯವಾಯಿತು. ಪ್ರತಿಯೊಬ್ಬರ ಶ್ರಮದಿಂದ ಈ ಕಾರ್ಯಕ್ರಮ ಯಶಸ್ವಿಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ಜಿ-20 ಶೃಂಗಸಭೆಯಲ್ಲಿ ದೆಹಲಿ ಪೊಲೀಸರ ಸೇವೆ ಸ್ಮರಣಿಯ, ಉನ್ನತಮಟ್ಟದ ಭದ್ರತೆ, ಗೌಪ್ಯತೆ, ವಿಶ್ವ ನಾಯಕರಿಗೆ ನೀಡಿದ ಭದ್ರತೆ ಎಲ್ಲವನ್ನು ಸ್ಮರಿಸುವಂತದೇ ಎಂದು ಹೇಳಿದ್ದಾರೆ. ಇನ್ನು ಜಿ-20 ನಾಯಕರು ಭೇಟಿ ನೀಡುವ ಪ್ರದೇಶಗಳಿಗೆ ದೆಹಲಿ ಪೊಲೀಸರು ನೀಡಿದ ಉತ್ತಮ ಭದ್ರತೆಯನ್ನು ನೀಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:22 pm, Wed, 13 September 23

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!