AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

G20 Summit: G20 ಶೃಂಗಸಭೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ದೆಹಲಿ ಪೊಲೀಸರೊಂದಿಗೆ ಪ್ರಧಾನಿ ಮೋದಿ ಔತಣಕೂಟ

ದೆಹಲಿಯಲ್ಲಿ ನಡೆದ 18ನೇ ಜಿ-20 ಶೃಂಗಸಭೆ ಮುಗಿದ್ದು, ಇದೀಗ ಈ ಸಭೆಯನ್ನು ಸುಗಮವಾಗಿ ನಡೆಸಲು ಹಗಲು-ರಾತ್ರಿ ಎನ್ನದೇ ಸೇವೆ ನೀಡಿದ ದೆಹಲಿ ಪೊಲೀಸರೊಂದಿಗೆ ಪ್ರಧಾನಿ ಮೋದಿ ಅವರು ಔತಣಕೂಟದಲ್ಲಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿದೆ.

G20 Summit: G20 ಶೃಂಗಸಭೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ದೆಹಲಿ ಪೊಲೀಸರೊಂದಿಗೆ ಪ್ರಧಾನಿ ಮೋದಿ ಔತಣಕೂಟ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Sep 13, 2023 | 4:27 PM

Share

ದೆಹಲಿ, ಸೆ.13: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ 18ನೇ ಜಿ-20 ಶೃಂಗಸಭೆ (G20 Summit) ಈಗಾಗಲೇ ಮುಗಿದಿದ್ದು, ಇದೀಗ ಈ ಸಭೆಯನ್ನು ಸುಗಮವಾಗಿ ನಡೆಸಲು ಹಗಲು-ರಾತ್ರಿಯೆನ್ನದೇ ಕರ್ತವ್ಯ ನಿರ್ವಹಿಸಿದ್ದ ದೆಹಲಿ ಪೊಲೀಸರೊಂದಿಗೆ ಪ್ರಧಾನಿ ಮೋದಿ ಅವರು ಔತಣಕೂಟದಲ್ಲಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿದೆ. ಈ ಕಾರ್ಯಕ್ರಮ ಯಶಸ್ವಿಯಾಗಲು ದೆಹಲಿ ಪೊಲೀಸರ ಶ್ರಮ ಹೆಚ್ಚು ಇದೆ ಎಂದು ಪ್ರಧಾನಿ ಮೋದಿ ಅವರು ಈ ಭೋಜನ ಕೂಟವನ್ನು ಏರ್ಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿದೆ.

ಶೃಂಗಸಭೆಯಲ್ಲಿ ಕೆಲಸ ಮಾಡಿದ ಕಾನ್‌ಸ್ಟೆಬಲ್‌ಗಳು, ಇನ್ಸ್‌ಪೆಕ್ಟರ್‌ಗಳನ್ನು ಗುರುತಿಸಿ, ಪ್ರತಿ ಜಿಲ್ಲೆಯಿಂದ ಪಟ್ಟಿ ಕಳುಹಿಸುವಂತೆ ದೆಹಲಿ ಪೊಲೀಸ್ ಕಮಿಷನರ್ ಸಂಜಯ್ ಅರೋರಾ ಅವರು ಜಿಲ್ಲಾ ಮುಖ್ಯ ಠಾಣೆಗಳಿಗೆ ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ.

ಇನ್ನು ಈ ಪಟ್ಟಿಯಲ್ಲಿ 450 ಸಿಬ್ಬಂದಿಗಳನ್ನು ಗುರುತಿಸಲಾಗಿದೆ. ಜತೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್​​ ಕ್ರೇಜಿವಾಲ್​​ ಕೂಡ ಭಾರತ್​ ಮಂಟಪಂನಲ್ಲಿ ನಡೆಯುವ ಈ ಭೋಜನ ಕೂಟದಲ್ಲಿ ಭಾಗವಹಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಪ್ರಧಾನಿ ಮೋದಿ ಅವರು ಇಂತಹ ಸೇವೆಯಲ್ಲಿ ತೋಡಗಿಕೊಂಡಿರುವವರನ್ನು ಗೌರವಿಸುವುದು ಇದೇ ಮೊದಲಲ್ಲ. ಈ ಹಿಂದೆ ಅಂದರೆ ಮೇ ತಿಂಗಳಲ್ಲಿ, ಹೊಸ ಸಂಸತ್ ಭವನದ ಉದ್ಘಾಟನೆಗೂ ಮುನ್ನ, ಅದರ ನಿರ್ಮಾಣದಲ್ಲಿ ತೊಡಗಿರುವ ಕಾರ್ಮಿಕರನ್ನು ಸನ್ಮಾನಿಸಿದ್ದರು.

ಇದನ್ನೂ ಓದಿ:ಜಿ-20 ಶೃಂಗಸಭೆಗೆ ವ್ಯಯಿಸಿದ ಹಣವೆಷ್ಟು? ಇಲ್ಲಿದೆ ಮಾಹಿತಿ

ಇನ್ನು ಈ ಶೃಂಗಸಭೆಯಲ್ಲಿ ಭಾಗವಹಿಸಿದ ಪೊಲೀಸ್​​ ಸಿಬ್ಬಂದಿಗಳಿಗೆ ಸಂಜಯ್ ಅರೋರಾ ಅವರು ಪೊಲೀಸ್ ಆಯುಕ್ತರ ವಿಶೇಷ ಪ್ರಶಂಸಾ ಫಲಕ ಮತ್ತು ಪ್ರಮಾಣಪತ್ರವನ್ನು ನೀಡಿದರು. ಈ ಬಗ್ಗೆ ಸೆಪ್ಟೆಂಬರ್ 11ರಂದು ಹೊರಡಿಸಲಾದ ಆದೇಶಕ್ಕೆ ಸಂಬಂಧಿಸಿದಂತೆ ದಿಲ್ಲಿ ಪೊಲೀಸರ ಸಂಪೂರ್ಣ ಶ್ರೇಣಿ ಮತ್ತು ವಿಶೇಷ ಕಾಳಜಿಯ ಭಾಗವಹಿಸುವಿಕೆ, ಬದ್ಧತೆ ಮತ್ತು ಕೊಡುಗೆಯನ್ನು ಕಂಡು, G20 ವ್ಯವಸ್ಥೆಗಳ ಸುಗಮ, ವೃತ್ತಿಪರ ಮತ್ತು ನಿಖರವಾದ ಕಾರ್ಯಗತಗೊಳಿಸುವಿಕೆ ಸಾಧ್ಯವಾಯಿತು. ಪ್ರತಿಯೊಬ್ಬರ ಶ್ರಮದಿಂದ ಈ ಕಾರ್ಯಕ್ರಮ ಯಶಸ್ವಿಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ಜಿ-20 ಶೃಂಗಸಭೆಯಲ್ಲಿ ದೆಹಲಿ ಪೊಲೀಸರ ಸೇವೆ ಸ್ಮರಣಿಯ, ಉನ್ನತಮಟ್ಟದ ಭದ್ರತೆ, ಗೌಪ್ಯತೆ, ವಿಶ್ವ ನಾಯಕರಿಗೆ ನೀಡಿದ ಭದ್ರತೆ ಎಲ್ಲವನ್ನು ಸ್ಮರಿಸುವಂತದೇ ಎಂದು ಹೇಳಿದ್ದಾರೆ. ಇನ್ನು ಜಿ-20 ನಾಯಕರು ಭೇಟಿ ನೀಡುವ ಪ್ರದೇಶಗಳಿಗೆ ದೆಹಲಿ ಪೊಲೀಸರು ನೀಡಿದ ಉತ್ತಮ ಭದ್ರತೆಯನ್ನು ನೀಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:22 pm, Wed, 13 September 23

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ಪ್ರಸ್ತುತ ನಾನು ಟಿವಿ9 ಕನ್ನಡ ಡಿಜಿಟಲ್​​​ ವಿಭಾಗದಲ್ಲಿ​​​​ ಕೆಲಸ ಮಾಡುತ್ತಿದ್ದೇನೆ, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More