AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

G20 Summit: G20 ಶೃಂಗಸಭೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ದೆಹಲಿ ಪೊಲೀಸರೊಂದಿಗೆ ಪ್ರಧಾನಿ ಮೋದಿ ಔತಣಕೂಟ

ದೆಹಲಿಯಲ್ಲಿ ನಡೆದ 18ನೇ ಜಿ-20 ಶೃಂಗಸಭೆ ಮುಗಿದ್ದು, ಇದೀಗ ಈ ಸಭೆಯನ್ನು ಸುಗಮವಾಗಿ ನಡೆಸಲು ಹಗಲು-ರಾತ್ರಿ ಎನ್ನದೇ ಸೇವೆ ನೀಡಿದ ದೆಹಲಿ ಪೊಲೀಸರೊಂದಿಗೆ ಪ್ರಧಾನಿ ಮೋದಿ ಅವರು ಔತಣಕೂಟದಲ್ಲಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿದೆ.

G20 Summit: G20 ಶೃಂಗಸಭೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ದೆಹಲಿ ಪೊಲೀಸರೊಂದಿಗೆ ಪ್ರಧಾನಿ ಮೋದಿ ಔತಣಕೂಟ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Sep 13, 2023 | 4:27 PM

Share

ದೆಹಲಿ, ಸೆ.13: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ 18ನೇ ಜಿ-20 ಶೃಂಗಸಭೆ (G20 Summit) ಈಗಾಗಲೇ ಮುಗಿದಿದ್ದು, ಇದೀಗ ಈ ಸಭೆಯನ್ನು ಸುಗಮವಾಗಿ ನಡೆಸಲು ಹಗಲು-ರಾತ್ರಿಯೆನ್ನದೇ ಕರ್ತವ್ಯ ನಿರ್ವಹಿಸಿದ್ದ ದೆಹಲಿ ಪೊಲೀಸರೊಂದಿಗೆ ಪ್ರಧಾನಿ ಮೋದಿ ಅವರು ಔತಣಕೂಟದಲ್ಲಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿದೆ. ಈ ಕಾರ್ಯಕ್ರಮ ಯಶಸ್ವಿಯಾಗಲು ದೆಹಲಿ ಪೊಲೀಸರ ಶ್ರಮ ಹೆಚ್ಚು ಇದೆ ಎಂದು ಪ್ರಧಾನಿ ಮೋದಿ ಅವರು ಈ ಭೋಜನ ಕೂಟವನ್ನು ಏರ್ಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿದೆ.

ಶೃಂಗಸಭೆಯಲ್ಲಿ ಕೆಲಸ ಮಾಡಿದ ಕಾನ್‌ಸ್ಟೆಬಲ್‌ಗಳು, ಇನ್ಸ್‌ಪೆಕ್ಟರ್‌ಗಳನ್ನು ಗುರುತಿಸಿ, ಪ್ರತಿ ಜಿಲ್ಲೆಯಿಂದ ಪಟ್ಟಿ ಕಳುಹಿಸುವಂತೆ ದೆಹಲಿ ಪೊಲೀಸ್ ಕಮಿಷನರ್ ಸಂಜಯ್ ಅರೋರಾ ಅವರು ಜಿಲ್ಲಾ ಮುಖ್ಯ ಠಾಣೆಗಳಿಗೆ ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ.

ಇನ್ನು ಈ ಪಟ್ಟಿಯಲ್ಲಿ 450 ಸಿಬ್ಬಂದಿಗಳನ್ನು ಗುರುತಿಸಲಾಗಿದೆ. ಜತೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್​​ ಕ್ರೇಜಿವಾಲ್​​ ಕೂಡ ಭಾರತ್​ ಮಂಟಪಂನಲ್ಲಿ ನಡೆಯುವ ಈ ಭೋಜನ ಕೂಟದಲ್ಲಿ ಭಾಗವಹಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಪ್ರಧಾನಿ ಮೋದಿ ಅವರು ಇಂತಹ ಸೇವೆಯಲ್ಲಿ ತೋಡಗಿಕೊಂಡಿರುವವರನ್ನು ಗೌರವಿಸುವುದು ಇದೇ ಮೊದಲಲ್ಲ. ಈ ಹಿಂದೆ ಅಂದರೆ ಮೇ ತಿಂಗಳಲ್ಲಿ, ಹೊಸ ಸಂಸತ್ ಭವನದ ಉದ್ಘಾಟನೆಗೂ ಮುನ್ನ, ಅದರ ನಿರ್ಮಾಣದಲ್ಲಿ ತೊಡಗಿರುವ ಕಾರ್ಮಿಕರನ್ನು ಸನ್ಮಾನಿಸಿದ್ದರು.

ಇದನ್ನೂ ಓದಿ:ಜಿ-20 ಶೃಂಗಸಭೆಗೆ ವ್ಯಯಿಸಿದ ಹಣವೆಷ್ಟು? ಇಲ್ಲಿದೆ ಮಾಹಿತಿ

ಇನ್ನು ಈ ಶೃಂಗಸಭೆಯಲ್ಲಿ ಭಾಗವಹಿಸಿದ ಪೊಲೀಸ್​​ ಸಿಬ್ಬಂದಿಗಳಿಗೆ ಸಂಜಯ್ ಅರೋರಾ ಅವರು ಪೊಲೀಸ್ ಆಯುಕ್ತರ ವಿಶೇಷ ಪ್ರಶಂಸಾ ಫಲಕ ಮತ್ತು ಪ್ರಮಾಣಪತ್ರವನ್ನು ನೀಡಿದರು. ಈ ಬಗ್ಗೆ ಸೆಪ್ಟೆಂಬರ್ 11ರಂದು ಹೊರಡಿಸಲಾದ ಆದೇಶಕ್ಕೆ ಸಂಬಂಧಿಸಿದಂತೆ ದಿಲ್ಲಿ ಪೊಲೀಸರ ಸಂಪೂರ್ಣ ಶ್ರೇಣಿ ಮತ್ತು ವಿಶೇಷ ಕಾಳಜಿಯ ಭಾಗವಹಿಸುವಿಕೆ, ಬದ್ಧತೆ ಮತ್ತು ಕೊಡುಗೆಯನ್ನು ಕಂಡು, G20 ವ್ಯವಸ್ಥೆಗಳ ಸುಗಮ, ವೃತ್ತಿಪರ ಮತ್ತು ನಿಖರವಾದ ಕಾರ್ಯಗತಗೊಳಿಸುವಿಕೆ ಸಾಧ್ಯವಾಯಿತು. ಪ್ರತಿಯೊಬ್ಬರ ಶ್ರಮದಿಂದ ಈ ಕಾರ್ಯಕ್ರಮ ಯಶಸ್ವಿಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ಜಿ-20 ಶೃಂಗಸಭೆಯಲ್ಲಿ ದೆಹಲಿ ಪೊಲೀಸರ ಸೇವೆ ಸ್ಮರಣಿಯ, ಉನ್ನತಮಟ್ಟದ ಭದ್ರತೆ, ಗೌಪ್ಯತೆ, ವಿಶ್ವ ನಾಯಕರಿಗೆ ನೀಡಿದ ಭದ್ರತೆ ಎಲ್ಲವನ್ನು ಸ್ಮರಿಸುವಂತದೇ ಎಂದು ಹೇಳಿದ್ದಾರೆ. ಇನ್ನು ಜಿ-20 ನಾಯಕರು ಭೇಟಿ ನೀಡುವ ಪ್ರದೇಶಗಳಿಗೆ ದೆಹಲಿ ಪೊಲೀಸರು ನೀಡಿದ ಉತ್ತಮ ಭದ್ರತೆಯನ್ನು ನೀಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:22 pm, Wed, 13 September 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ