AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

G20 Summit: G20 ಶೃಂಗಸಭೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ದೆಹಲಿ ಪೊಲೀಸರೊಂದಿಗೆ ಪ್ರಧಾನಿ ಮೋದಿ ಔತಣಕೂಟ

ದೆಹಲಿಯಲ್ಲಿ ನಡೆದ 18ನೇ ಜಿ-20 ಶೃಂಗಸಭೆ ಮುಗಿದ್ದು, ಇದೀಗ ಈ ಸಭೆಯನ್ನು ಸುಗಮವಾಗಿ ನಡೆಸಲು ಹಗಲು-ರಾತ್ರಿ ಎನ್ನದೇ ಸೇವೆ ನೀಡಿದ ದೆಹಲಿ ಪೊಲೀಸರೊಂದಿಗೆ ಪ್ರಧಾನಿ ಮೋದಿ ಅವರು ಔತಣಕೂಟದಲ್ಲಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿದೆ.

G20 Summit: G20 ಶೃಂಗಸಭೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ದೆಹಲಿ ಪೊಲೀಸರೊಂದಿಗೆ ಪ್ರಧಾನಿ ಮೋದಿ ಔತಣಕೂಟ
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on:Sep 13, 2023 | 4:27 PM

ದೆಹಲಿ, ಸೆ.13: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ 18ನೇ ಜಿ-20 ಶೃಂಗಸಭೆ (G20 Summit) ಈಗಾಗಲೇ ಮುಗಿದಿದ್ದು, ಇದೀಗ ಈ ಸಭೆಯನ್ನು ಸುಗಮವಾಗಿ ನಡೆಸಲು ಹಗಲು-ರಾತ್ರಿಯೆನ್ನದೇ ಕರ್ತವ್ಯ ನಿರ್ವಹಿಸಿದ್ದ ದೆಹಲಿ ಪೊಲೀಸರೊಂದಿಗೆ ಪ್ರಧಾನಿ ಮೋದಿ ಅವರು ಔತಣಕೂಟದಲ್ಲಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿದೆ. ಈ ಕಾರ್ಯಕ್ರಮ ಯಶಸ್ವಿಯಾಗಲು ದೆಹಲಿ ಪೊಲೀಸರ ಶ್ರಮ ಹೆಚ್ಚು ಇದೆ ಎಂದು ಪ್ರಧಾನಿ ಮೋದಿ ಅವರು ಈ ಭೋಜನ ಕೂಟವನ್ನು ಏರ್ಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿದೆ.

ಶೃಂಗಸಭೆಯಲ್ಲಿ ಕೆಲಸ ಮಾಡಿದ ಕಾನ್‌ಸ್ಟೆಬಲ್‌ಗಳು, ಇನ್ಸ್‌ಪೆಕ್ಟರ್‌ಗಳನ್ನು ಗುರುತಿಸಿ, ಪ್ರತಿ ಜಿಲ್ಲೆಯಿಂದ ಪಟ್ಟಿ ಕಳುಹಿಸುವಂತೆ ದೆಹಲಿ ಪೊಲೀಸ್ ಕಮಿಷನರ್ ಸಂಜಯ್ ಅರೋರಾ ಅವರು ಜಿಲ್ಲಾ ಮುಖ್ಯ ಠಾಣೆಗಳಿಗೆ ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ.

ಇನ್ನು ಈ ಪಟ್ಟಿಯಲ್ಲಿ 450 ಸಿಬ್ಬಂದಿಗಳನ್ನು ಗುರುತಿಸಲಾಗಿದೆ. ಜತೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್​​ ಕ್ರೇಜಿವಾಲ್​​ ಕೂಡ ಭಾರತ್​ ಮಂಟಪಂನಲ್ಲಿ ನಡೆಯುವ ಈ ಭೋಜನ ಕೂಟದಲ್ಲಿ ಭಾಗವಹಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಪ್ರಧಾನಿ ಮೋದಿ ಅವರು ಇಂತಹ ಸೇವೆಯಲ್ಲಿ ತೋಡಗಿಕೊಂಡಿರುವವರನ್ನು ಗೌರವಿಸುವುದು ಇದೇ ಮೊದಲಲ್ಲ. ಈ ಹಿಂದೆ ಅಂದರೆ ಮೇ ತಿಂಗಳಲ್ಲಿ, ಹೊಸ ಸಂಸತ್ ಭವನದ ಉದ್ಘಾಟನೆಗೂ ಮುನ್ನ, ಅದರ ನಿರ್ಮಾಣದಲ್ಲಿ ತೊಡಗಿರುವ ಕಾರ್ಮಿಕರನ್ನು ಸನ್ಮಾನಿಸಿದ್ದರು.

ಇದನ್ನೂ ಓದಿ:ಜಿ-20 ಶೃಂಗಸಭೆಗೆ ವ್ಯಯಿಸಿದ ಹಣವೆಷ್ಟು? ಇಲ್ಲಿದೆ ಮಾಹಿತಿ

ಇನ್ನು ಈ ಶೃಂಗಸಭೆಯಲ್ಲಿ ಭಾಗವಹಿಸಿದ ಪೊಲೀಸ್​​ ಸಿಬ್ಬಂದಿಗಳಿಗೆ ಸಂಜಯ್ ಅರೋರಾ ಅವರು ಪೊಲೀಸ್ ಆಯುಕ್ತರ ವಿಶೇಷ ಪ್ರಶಂಸಾ ಫಲಕ ಮತ್ತು ಪ್ರಮಾಣಪತ್ರವನ್ನು ನೀಡಿದರು. ಈ ಬಗ್ಗೆ ಸೆಪ್ಟೆಂಬರ್ 11ರಂದು ಹೊರಡಿಸಲಾದ ಆದೇಶಕ್ಕೆ ಸಂಬಂಧಿಸಿದಂತೆ ದಿಲ್ಲಿ ಪೊಲೀಸರ ಸಂಪೂರ್ಣ ಶ್ರೇಣಿ ಮತ್ತು ವಿಶೇಷ ಕಾಳಜಿಯ ಭಾಗವಹಿಸುವಿಕೆ, ಬದ್ಧತೆ ಮತ್ತು ಕೊಡುಗೆಯನ್ನು ಕಂಡು, G20 ವ್ಯವಸ್ಥೆಗಳ ಸುಗಮ, ವೃತ್ತಿಪರ ಮತ್ತು ನಿಖರವಾದ ಕಾರ್ಯಗತಗೊಳಿಸುವಿಕೆ ಸಾಧ್ಯವಾಯಿತು. ಪ್ರತಿಯೊಬ್ಬರ ಶ್ರಮದಿಂದ ಈ ಕಾರ್ಯಕ್ರಮ ಯಶಸ್ವಿಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ಜಿ-20 ಶೃಂಗಸಭೆಯಲ್ಲಿ ದೆಹಲಿ ಪೊಲೀಸರ ಸೇವೆ ಸ್ಮರಣಿಯ, ಉನ್ನತಮಟ್ಟದ ಭದ್ರತೆ, ಗೌಪ್ಯತೆ, ವಿಶ್ವ ನಾಯಕರಿಗೆ ನೀಡಿದ ಭದ್ರತೆ ಎಲ್ಲವನ್ನು ಸ್ಮರಿಸುವಂತದೇ ಎಂದು ಹೇಳಿದ್ದಾರೆ. ಇನ್ನು ಜಿ-20 ನಾಯಕರು ಭೇಟಿ ನೀಡುವ ಪ್ರದೇಶಗಳಿಗೆ ದೆಹಲಿ ಪೊಲೀಸರು ನೀಡಿದ ಉತ್ತಮ ಭದ್ರತೆಯನ್ನು ನೀಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:22 pm, Wed, 13 September 23

ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು
ನೆಚ್ಚಿನ ನಾಯಕಿಯ ಯಶಸ್ಸಿಗೆ ಹರಕೆ ತೀರಿಸಿದ ಡ್ರೋನ್ ಪ್ರತಾಪ್
ನೆಚ್ಚಿನ ನಾಯಕಿಯ ಯಶಸ್ಸಿಗೆ ಹರಕೆ ತೀರಿಸಿದ ಡ್ರೋನ್ ಪ್ರತಾಪ್