AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viksit Bharat 2047: ಅಭಿವೃದ್ಧಿ ಹೊಂದಿದ ಭಾರತ 2047 ಕುರಿತು ಸಚಿವರೊಂದಿಗೆ ಪ್ರಧಾನಿ ಮೋದಿ ವಿಚಾರ ಮಂಥನ

ಲೋಕಸಭೆ ಚುನಾವಣೆ 2024: ಇಲ್ಲಿಯವರೆಗೆ, ಅಭಿವೃದ್ಧಿ ಹೊಂದಿದ ಭಾರತ 2047 ರ ಕ್ರಿಯಾ ಯೋಜನೆಗಳ ಕುರಿತು ವಿವಿಧ ಹಂತಗಳಲ್ಲಿ 2700 ಕ್ಕೂ ಹೆಚ್ಚು ಸಭೆಗಳನ್ನು ಆಯೋಜಿಸಲಾಗಿದೆ. ಈ ಸಭೆಯಲ್ಲಿ ಹಲವು ಸಚಿವಾಲಯಗಳು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿವೆ.

Viksit Bharat 2047: ಅಭಿವೃದ್ಧಿ ಹೊಂದಿದ ಭಾರತ 2047 ಕುರಿತು ಸಚಿವರೊಂದಿಗೆ ಪ್ರಧಾನಿ ಮೋದಿ ವಿಚಾರ ಮಂಥನ
ನರೇಂದ್ರ ಮೋದಿ
ನಯನಾ ರಾಜೀವ್
|

Updated on: Mar 04, 2024 | 7:25 AM

Share

ಪ್ರಧಾನಿ ನರೇಂದ್ರ ಮೋದಿ(Narendra Modi) ಅವರ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆ(Cabinet Meeting) ನಡೆಯಿತು. ಮೂಲಗಳ ಪ್ರಕಾರ, ಈ ಸಭೆಯಲ್ಲಿ ಕೇಂದ್ರ ಸರ್ಕಾರವು ‘ಅಭಿವೃದ್ಧಿ ಹೊಂದಿದ ಭಾರತ 2047′ ಬಗ್ಗೆ ಹೆಚ್ಚು ಚರ್ಚೆ ನಡೆಸಿತು. ಇದರೊಂದಿಗೆ ಮುಂದಿನ ಐದು ವರ್ಷಗಳ ಕ್ರಿಯಾ ಯೋಜನೆ ಬಗ್ಗೆಯೂ ಚರ್ಚಿಸಲಾಯಿತು. ಮುಂಬರುವ ಲೋಕಸಭೆ ಚುನಾವಣೆಗೂ ಮುನ್ನ ನಡೆದ ಕೊನೆಯ ಸಂಪುಟ ಸಭೆ ಇದಾಗಿದೆ.

ಇದರಲ್ಲಿ ವಿವಿಧ ಸಚಿವಾಲಯಗಳು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದವು. ಮೇ 2024 ರಲ್ಲಿ ಹೊಸ ಸರ್ಕಾರ ರಚನೆಯಾಗುವಾಗ ಸಂಪುಟ ಸಭೆಯಲ್ಲಿ ಚರ್ಚಿಸಲಾದ ಕಾರ್ಯಸೂಚಿಗಳ ಕುರಿತು ಕ್ರಿಯಾ ಯೋಜನೆಯನ್ನು ಸಹ ಸಿದ್ಧಪಡಿಸಲಾಗಿದೆ ಎಂದು ಹೇಳಲಾಗುತ್ತಿದೆ. ಈ ಕ್ರಿಯಾ ಯೋಜನೆ 100 ದಿನಗಳವರೆಗೆ ಇರುತ್ತದೆ.

ನವದೆಹಲಿಯ ಚಾಣಕ್ಯಪುರಿಯಲ್ಲಿರುವ ಸುಷ್ಮಾ ಸ್ವರಾಜ್ ಭವನದಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಈ ಸಂಪುಟ ಸಭೆ ನಡೆಯಿತು. ಮುಂಬರುವ ಲೋಕಸಭೆ ಚುನಾವಣೆಯ ದೃಷ್ಟಿಯಿಂದ ಈ ಸಂಪುಟ ಸಭೆ ಅತ್ಯಂತ ಮಹತ್ವದ್ದಾಗಿತ್ತು. ಇದರಲ್ಲಿ ಅಭಿವೃದ್ಧಿ ಹೊಂದಿದ ಭಾರತಕ್ಕೆ ಸಂಬಂಧಿಸಿದ ಕ್ರಿಯಾ ಯೋಜನೆ ಜತೆಗೆ ಮುಂದಿನ 100 ದಿನಗಳ ಮಾರ್ಗಸೂಚಿ ಕುರಿತು ಚರ್ಚಿಸಲಾಯಿತು. ಇದರೊಂದಿಗೆ ಮುಂಬರುವ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಚುನಾವಣಾ ಸಿದ್ಧತೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಅವರು ತಮ್ಮ ಸಚಿವರು ಮತ್ತು ನಾಯಕರಿಗೆ ಹಲವು ಪ್ರಮುಖ ಸೂಚನೆಗಳನ್ನು ನೀಡಿದರು.

ಮತ್ತಷ್ಟು ಓದಿ: 2047ರ ಹೊತ್ತಿಗೆ ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲಿದೆ ಇದೇ ಮೋದಿ ಗ್ಯಾರಂಟಿ ಎಂದ ಪ್ರಧಾನಿ

2,700 ಕ್ಕೂ ಹೆಚ್ಚು ಸಭೆಗಳನ್ನು ನಡೆಸಲಾಯಿತು

ವಿವಿಧ ಹಂತಗಳಲ್ಲಿ 2,700ಕ್ಕೂ ಹೆಚ್ಚು ಸಭೆ, ಕಾರ್ಯಾಗಾರ, ವಿಚಾರ ಸಂಕಿರಣಗಳನ್ನು ಆಯೋಜಿಸಲಾಗಿದೆ. 20 ಲಕ್ಷಕ್ಕೂ ಹೆಚ್ಚು ಯುವಕರಿಂದ ಸಲಹೆಗಳನ್ನು ಸ್ವೀಕರಿಸಲಾಗಿದೆ. ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಮಾರ್ಗಸೂಚಿಯು ಸ್ಪಷ್ಟವಾಗಿ ವ್ಯಕ್ತಪಡಿಸಿದ ರಾಷ್ಟ್ರೀಯ ದೃಷ್ಟಿ, ಆಕಾಂಕ್ಷೆಗಳು, ಗುರಿಗಳು ಮತ್ತು ಕಾರ್ಯಗಳನ್ನು ಹೊಂದಿರುವ ಸಮಗ್ರ ನೀಲನಕ್ಷೆಯಾಗಿದೆ ಎಂದು ಮೂಲಗಳು ತಿಳಿಸಿವೆ.

ಹಲವು ಸಚಿವಾಲಯಗಳು ಅಭಿಪ್ರಾಯ ವ್ಯಕ್ತಪಡಿಸಿವೆ

ಲೋಕಸಭಾ ಚುನಾವಣೆಯ ತಯಾರಿಯ ನಡುವೆ ಬಿಜೆಪಿ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶನಿವಾರ (ಮಾರ್ಚ್ 2) ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ 28 ಮಹಿಳೆಯರು ಮತ್ತು 47 ಯುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿದೆ. ಬಿಜೆಪಿ ಪಟ್ಟಿಯಲ್ಲಿ 34 ಕೇಂದ್ರ ಸಚಿವರು ಮತ್ತು ರಾಜ್ಯ ಸಚಿವರ ಹೆಸರೂ ಸೇರಿದೆ.

‘ಅಭಿವೃದ್ಧಿ ಹೊಂದಿದ ಭಾರತ 2047′ ಮಾರ್ಗಸೂಚಿ ಕುರಿತು ಚರ್ಚೆ ‘ಅಭಿವೃದ್ಧಿ ಹೊಂದಿದ ಭಾರತ 2047’ ರ ಮಾರ್ಗಸೂಚಿಯು ಆರ್ಥಿಕ ಬೆಳವಣಿಗೆ, ವ್ಯವಹಾರವನ್ನು ಸುಲಭಗೊಳಿಸುವುದು, ಮೂಲಸೌಕರ್ಯ ಮತ್ತು ಸಾಮಾಜಿಕ ಕಲ್ಯಾಣದಂತಹ ವಿವಿಧ ಅಂಶಗಳನ್ನು ಒಳಗೊಂಡಿದೆ. 2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವಾಗಿ ಪರಿವರ್ತಿಸುವುದು ಈ ಮಾರ್ಗಸೂಚಿಯ ಅಂತಿಮ ಗುರಿಯಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಉಪಚುನಾವಣಾ ಫಲಿತಾಂಶದ ಬಗ್ಗೆ ಸಚಿವ ಜಮೀರ್​ ಎದುರು ಸಿಎಂ ಹೇಳಿದ್ದೇನು?
ಉಪಚುನಾವಣಾ ಫಲಿತಾಂಶದ ಬಗ್ಗೆ ಸಚಿವ ಜಮೀರ್​ ಎದುರು ಸಿಎಂ ಹೇಳಿದ್ದೇನು?
ಶ್ರೇಯಸ್ ಹಿಡಿದ ಕ್ಯಾಚ್ ನೋಡಿ ದಂಗಾದ ಮುಂಬೈ ಆಟಗಾರರು; ವಿಡಿಯೋ
ಶ್ರೇಯಸ್ ಹಿಡಿದ ಕ್ಯಾಚ್ ನೋಡಿ ದಂಗಾದ ಮುಂಬೈ ಆಟಗಾರರು; ವಿಡಿಯೋ
ದರ್ಶನ್ ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮಿ; ಕ್ಯಾಮೆರಾ ನೋಡಿ ಪ್ರತಿಕ್ರಿಯೆ
ದರ್ಶನ್ ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮಿ; ಕ್ಯಾಮೆರಾ ನೋಡಿ ಪ್ರತಿಕ್ರಿಯೆ
ಐಪಿಎಲ್‌ನಲ್ಲಿ ವಿಶೇಷ ಶತಕ ಪೂರೈಸಿದ ಅರ್ಶ್‌ದೀಪ್ ಸಿಂಗ್
ಐಪಿಎಲ್‌ನಲ್ಲಿ ವಿಶೇಷ ಶತಕ ಪೂರೈಸಿದ ಅರ್ಶ್‌ದೀಪ್ ಸಿಂಗ್
ಮಂತ್ರಾಲಯ ಬಳಿ ಅಪಘಾತ: ಘಟನೆ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟ ಗಾಯಾಳು
ಮಂತ್ರಾಲಯ ಬಳಿ ಅಪಘಾತ: ಘಟನೆ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟ ಗಾಯಾಳು
ವಿನಯ್ ಕೇಸ್‌ ತೀರ್ಪು ನೀಡಿದ್ದ ಜಡ್ಜ್​ ಸೇರಿ 114 ನ್ಯಾಯಾಧೀಶರ ವರ್ಗಾವಣೆ
ವಿನಯ್ ಕೇಸ್‌ ತೀರ್ಪು ನೀಡಿದ್ದ ಜಡ್ಜ್​ ಸೇರಿ 114 ನ್ಯಾಯಾಧೀಶರ ವರ್ಗಾವಣೆ
ಬಿರು ಬಿಸಿಲಲ್ಲೂ ಬಿರಿಯಾನಿ, ಸೀರೆಗಾಗಿ ಮುಗ್ಗಿಬಿದ್ದ ಜನ
ಬಿರು ಬಿಸಿಲಲ್ಲೂ ಬಿರಿಯಾನಿ, ಸೀರೆಗಾಗಿ ಮುಗ್ಗಿಬಿದ್ದ ಜನ
ಲಕ್ನೋದಲ್ಲಿ ಸುಟ್ಟು ಕರಕಲಾದ ಗುಡಿಸಲುಗಳ ವಿಡಿಯೋ ವೈರಲ್
ಲಕ್ನೋದಲ್ಲಿ ಸುಟ್ಟು ಕರಕಲಾದ ಗುಡಿಸಲುಗಳ ವಿಡಿಯೋ ವೈರಲ್
ದರ್ಶನ್​ಗೆ ಮುಖ ತೋರಿಸಲು ಸಾಧ್ಯವಾಗದೇ ಊರು ಬಿಟ್ಟೆ: ಮಲ್ಲಿಕಾರ್ಜುನ್
ದರ್ಶನ್​ಗೆ ಮುಖ ತೋರಿಸಲು ಸಾಧ್ಯವಾಗದೇ ಊರು ಬಿಟ್ಟೆ: ಮಲ್ಲಿಕಾರ್ಜುನ್
ಪೆಟ್ರೋಲ್ ಟ್ಯಾಂಕರ್​​ಗೆ ಬೆಂಕಿ, ರಸ್ತೆ ಪಕ್ಕದ ಅರಣ್ಯಕ್ಕೂ ಅವರಿಸಿದ ಜ್ವಾಲೆ
ಪೆಟ್ರೋಲ್ ಟ್ಯಾಂಕರ್​​ಗೆ ಬೆಂಕಿ, ರಸ್ತೆ ಪಕ್ಕದ ಅರಣ್ಯಕ್ಕೂ ಅವರಿಸಿದ ಜ್ವಾಲೆ