AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದ ಭಿಲ್ವಾರ ದೇವನಾರಾಯಣ ದೇವಸ್ಥಾನದ ಕಾಣಿಕೆ ಡಬ್ಬಿಯಲ್ಲಿ ಲಕೋಟೆ ಹಾಕಿದ್ದರೇ ಪ್ರಧಾನಿ ಮೋದಿ; ಕೊನೆಗೂ ಬಯಲಾಯ್ತು ಸತ್ಯ

ವಿಡಿಯೋದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಣಿಗೆ ಪೆಟ್ಟಿಗೆಯಲ್ಲಿ ಹಣ ಹಾಕುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಮೋದಿ ಅವರು ಜನವರಿ 28 ರಂದು ಮಲಸೇರಿ ದೇವದುಂಗರಿಯಲ್ಲಿರುವ ದೇವಸ್ಥಾನಕ್ಕೆ ಪೂಜೆ ಸಲ್ಲಿಸಲು ಬಂದಿದ್ದರು. ದೇವಾಲಯದ ಕಾಣಿಕೆ ಪೆಟ್ಟಿಗೆಯಲ್ಲಿ ಪ್ರಧಾನಿ ಮೋದಿ ಬಿಳಿ ಲಕೋಟೆಯನ್ನು ಹಾಕಿದ್ದರು ಎಂದು ದೇವಾಲಯದ ಅರ್ಚಕರು ಹೇಳಿಕೊಂಡಿದ್ದರು.

TV9 Web
| Edited By: |

Updated on: Sep 27, 2023 | 10:58 PM

Share

ಜೈಪುರ, ಸೆಪ್ಟೆಂಬರ್ 27: ರಾಜಸ್ಥಾನದ ಭಿಲ್ವಾರದಲ್ಲಿರುವ ಮಲಸೇರಿ ದೇವಡೂಂಗರಿಯಲ್ಲಿರುವ ದೇವನಾರಾಯಣ ದೇವಸ್ಥಾನದ ಕಾಣಿಕೆ ಪೆಟ್ಟಿಗೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) 21 ರೂಪಾಯಿ ಕಾಣಿಕೆ ಹಾಕಿರುವ ವಿಷಯಕ್ಕೆ ಸಂಬಂಧಿಸಿ ಹೊಸದೊಂದು ವಿಚಾರ ಬಹಿರಂಗವಾಗಿದೆ. ಪ್ರಧಾನಿ ಮೋದಿ ದೇಣಿಗೆ ಪೆಟ್ಟಿಗೆಯಲ್ಲಿ ಲಕೋಟೆಯಲ್ಲ, ನಗದನ್ನೇ ಹಾಕಿದ್ದಾರೆ ಎಂಬುದು ‘ಟಿವಿ9 ಭಾರತವರ್ಷ್​’ಗೆ ದೊರೆತಿರುವ ವಿಡಿಯೋದಿಂದ ತಿಳಿದುಬಂದಿದೆ. ದೇವಸ್ಥಾನದ ಕಾಣಿಕೆ ಪೆಟ್ಟಿಗೆಯಲ್ಲಿ ಪ್ರಧಾನಿ ಮೋದಿ ಅವರು ಲಕೋಟೆಯನ್ನು ಹಾಕಿದ್ದರು ಮತ್ತು ಅದರಲ್ಲಿ 20 ರೂಪಾಯಿ ನೋಟು ಮತ್ತು ನಾಣ್ಯ ಸೇರಿದಂತೆ 21 ರೂಪಾಯಿ ದೇಣಿಗೆ ಮೊತ್ತ ಪತ್ತೆಯಾಗಿದೆ ಎಂದು ದೇವಸ್ಥಾನದ ಅರ್ಚಕರು ಹೇಳಿಕೊಂಡಿದ್ದರು.

ವಿಡಿಯೋದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಣಿಗೆ ಪೆಟ್ಟಿಗೆಯಲ್ಲಿ ಹಣ ಹಾಕುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಮೋದಿ ಅವರು ಜನವರಿ 28 ರಂದು ಮಲಸೇರಿ ದೇವದುಂಗರಿಯಲ್ಲಿರುವ ದೇವಸ್ಥಾನಕ್ಕೆ ಪೂಜೆ ಸಲ್ಲಿಸಲು ಬಂದಿದ್ದರು. ದೇವಾಲಯದ ಕಾಣಿಕೆ ಪೆಟ್ಟಿಗೆಯಲ್ಲಿ ಪ್ರಧಾನಿ ಮೋದಿ ಬಿಳಿ ಲಕೋಟೆಯನ್ನು ಹಾಕಿದ್ದರು ಎಂದು ದೇವಾಲಯದ ಅರ್ಚಕರು ಹೇಳಿಕೊಂಡಿದ್ದರು. ಭೇಟಿಯ ಎಂಟು ತಿಂಗಳ ನಂತರ ಸೆಪ್ಟೆಂಬರ್ 25 ರಂದು ದೇವಾಲಯದ ಅರ್ಚಕರು ಕಾಣಿಕೆ ಪೆಟ್ಟಿಗೆಯನ್ನು ತೆರೆದಾಗ ಅದರಲ್ಲಿ ಮೂರು ಲಕೋಟೆಗಳು ಕಂಡುಬಂದವು. ಬಿಳಿ ಲಕೋಟೆ ಪ್ರಧಾನಿ ಮೋದಿಯವರದ್ದು ಎಂದು ಹೇಳಲಾಗಿತ್ತು. ದೇವಸ್ಥಾನದ ಅರ್ಚಕರು ಎಲ್ಲರ ಮುಂದೆ ಲಕೋಟೆಯನ್ನು ತೆರೆದಿದ್ದು, ಅದರಲ್ಲಿ 21 ರೂಪಾಯಿ ಪತ್ತೆಯಾಗಿತ್ತು.

ಇದನ್ನೂ ಓದಿ: ಯೂಟ್ಯೂಬರ್​​​ಗಳೊಂದಿಗೆ ಮೋದಿ ಮಾತು; ಸ್ವಚ್ಛತೆ, ಡಿಜಿಟಲ್ ಪಾವತಿ, ವೋಕಲ್ ಫಾರ್ ಲೋಕಲ್ ಬಗ್ಗೆ ಮಾತನಾಡಿದ ಪ್ರಧಾನಿ

ಪ್ರಧಾನಿ ನರೇಂದ್ರ ಮೋದಿಯವರು ದೇವಸ್ಥಾನದ ಕಾಣಿಕೆ ಡಬ್ಬಕ್ಕೆ ನಗದು ಹಾಕುತ್ತಿರುವಾಗ ಅವರ ಹಿಂದೆ ದೇವಸ್ಥಾನದ ಅರ್ಚಕ ಹೇಮರಾಜ್ ಪೋಸ್ವಾಲ್ ನಿಂತಿರುವುದು ವಿಡಿಯೋದಲ್ಲಿ ಕಂಡು ಬರುತ್ತಿದೆ. ಪ್ರಧಾನಿ ಮೋದಿ ಅವರ ಕೈಯಲ್ಲಿ ಸ್ವಲ್ಪ ಹಣವಿದ್ದು, ಅದನ್ನು ಕಾಣಿಕೆ ಡಬ್ಬದಲ್ಲಿ ಹಾಕುತ್ತಿರುವುದು ಕಂಡುಬಂದಿದೆ.

ದೇವನಾರಾಯಣನ ಜನ್ಮಸ್ಥಳ

ಮಲಸೇರಿ ದೇವಡೂಂಗರಿ ಗುರ್ಜರ್ ಸಮುದಾಯದ ಆರಾಧಕರಾದ ದೇವನಾರಾಯಣನ ಜನ್ಮಸ್ಥಳವೆಂದು ಪರಿಗಣಿಸಲಾಗಿದೆ. 1,111 ವರ್ಷಗಳ ಹಿಂದೆ ದೇವನಾರಾಯಣನ ತಾಯಿ ಈ ಸ್ಥಳದಲ್ಲಿ ತಪಸ್ಸು ಮಾಡಿದ್ದಳು ಎಂದು ನಂಬಲಾಗಿದೆ. ನಂತರ ವಿಷ್ಣುವು ಸ್ವತಃ ದೇವನಾರಾಯಣನ ರೂಪದಲ್ಲಿ ಕಾಣಿಸಿಕೊಂಡರು. ಈ ಕಾರಣಕ್ಕಾಗಿಯೇ ಈ ದೇವಾಲಯವು ಗುರ್ಜರ್ ಸಮುದಾಯದ ಜನರಲ್ಲಿ ವಿಶೇಷ ಪ್ರಾಮುಖ್ಯತೆಯನ್ನು ಹೊಂದಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ