AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರಾಂತ್ಯದಲ್ಲಿ ಕಾಶ್ಮೀರಕ್ಕೆ ಪ್ರಧಾನಿ ಮೋದಿ ಭೇಟಿ ಸಾಧ್ಯತೆ

ಕಾಶ್ಮೀರ ಕಣಿವೆಯನ್ನು ದೇಶದ ಉಳಿದ ಭಾಗಗಳೊಂದಿಗೆ ಸಂಪರ್ಕಿಸುವ ಮೊದಲ ರೈಲು ಸಂಪರ್ಕವನ್ನು ಈ ವಾರಾಂತ್ಯದಲ್ಲಿ ಪ್ರಧಾನಿ ಮೋದಿ ಉದ್ಘಾಟಿಸುವ ಸಾಧ್ಯತೆ ಇದೆ. ಈ ಮಹತ್ವದ ಕಾರ್ಯಕ್ರಮಕ್ಕಾಗಿ ರೈಲ್ವೆ ಅಧಿಕಾರಿಗಳು ಅಂತಿಮ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಜಮ್ಮು ವಿಭಾಗದ ಕತ್ರಾ ಪಟ್ಟಣದಿಂದ ಕಾಶ್ಮೀರ ಕಣಿವೆಯ ಬಾರಾಮುಲ್ಲಾದವರೆಗಿನ ವಂದೇ ಭಾರತ್ ರೈಲು ಸೇವೆಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ. ಆರಂಭದಲ್ಲಿ ಏಪ್ರಿಲ್ 19ರಂದು ನಿಗದಿಯಾಗಿದ್ದ ಉದ್ಘಾಟನೆಯನ್ನು ಪ್ರತಿಕೂಲ ಹವಾಮಾನದಿಂದಾಗಿ ಮುಂದೂಡಲಾಗಿತ್ತು.

ಈ ವಾರಾಂತ್ಯದಲ್ಲಿ ಕಾಶ್ಮೀರಕ್ಕೆ ಪ್ರಧಾನಿ ಮೋದಿ ಭೇಟಿ ಸಾಧ್ಯತೆ
ನರೇಂದ್ರ ಮೋದಿ
Follow us
ನಯನಾ ರಾಜೀವ್
|

Updated on: Jun 02, 2025 | 12:30 PM

ನವದೆಹಲಿ, ಜೂನ್ 02: ಪಹಲ್ಗಾಮ್ ದಾಳಿ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ(Narendra Modi) ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ. ಈ ವಾರಾಂತ್ಯದಲ್ಲಿ(ಜೂ.7) ಮೋದಿ ಭೇಟಿ ನೀಡುವ ಸಾಧ್ಯತೆ ಇದೆ. ಕಾಶ್ಮೀರ ಕಣಿವೆಯನ್ನು ದೇಶದ ಉಳಿದ ಭಾಗಗಳೊಂದಿಗೆ ಸಂಪರ್ಕಿಸುವ ಮೊದಲ ರೈಲು ಸಂಪರ್ಕವನ್ನು ಈ ವಾರಾಂತ್ಯದಲ್ಲಿ ಉದ್ಘಾಟಿಸುವ ಸಾಧ್ಯತೆ ಇದೆ.

ಈ ಮಹತ್ವದ ಕಾರ್ಯಕ್ರಮಕ್ಕಾಗಿ ರೈಲ್ವೆ ಅಧಿಕಾರಿಗಳು ಅಂತಿಮ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಜಮ್ಮು ವಿಭಾಗದ ಕತ್ರಾ ಪಟ್ಟಣದಿಂದ ಕಾಶ್ಮೀರ ಕಣಿವೆಯ ಬಾರಾಮುಲ್ಲಾದವರೆಗಿನ ವಂದೇ ಭಾರತ್ ರೈಲು ಸೇವೆಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ. ಆರಂಭದಲ್ಲಿ ಏಪ್ರಿಲ್ 19ರಂದು ನಿಗದಿಯಾಗಿದ್ದ ಉದ್ಘಾಟನೆಯನ್ನು ಪ್ರತಿಕೂಲ ಹವಾಮಾನದಿಂದಾಗಿ ಮುಂದೂಡಲಾಗಿತ್ತು.

ಏಪ್ರಿಲ್ 22ರಂದು ಪಹಲ್ಗಾಮ್​​ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ನಡೆಸಿ 26 ಮಂದಿ ಸಾವನ್ನಪ್ಪಿದ್ದರು. ಇದಾದ ಬಳಿಕ ಕಾರ್ಯಕ್ರಮ ಮತ್ತಷ್ಟು ವಿಳಂಬವಾಗಿತ್ತು. ಭಾರತೀಯ ಸಶಸ್ತ್ರಪಡೆಗಳು ಮೇ 6 ಮತ್ತು 7ರ ರಾತ್ರಿ ಪಾಕಿಸ್ತಾನ, ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ ಅಡಗುತಾಣಗಳ ಮೇಲೆ ಆಪರೇಷನ್ ಸಿಂಧೂರ್ ಅಡಿಯಲ್ಲಿ ದಾಳಿ ನಡೆಸಿತು.

ಇದನ್ನೂ ಓದಿ
Image
ಭಾರತದೊಂದಿಗೆ ಒಪ್ಪಂದ ಮಾಡಿಕೊಳ್ಳಲು ಪಾಕ್ ಸಿದ್ಧ ಎಂದ ಡೊನಾಲ್ಡ್ ಟ್ರಂಪ್
Image
ರಾಹುಲ್ ಗಾಂಧಿ, ರೇವಂತ್ ರೆಡ್ಡಿಯಿಂದ ಸಶಸ್ತ್ರ ಪಡೆಗೆ ಅವಮಾನ; ಕಿಶನ್ ರೆಡ್ಡಿ
Image
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
Image
ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ; ಪಾಕಿಸ್ತಾನಕ್ಕೆ ಮೋದಿ ಎಚ್ಚರಿಕೆ

ಮತ್ತಷ್ಟು ಓದಿ: ಭಯೋತ್ಪಾದನೆಗೆ ಜಾಗವಿಲ್ಲ ಎಂದು ಆಪರೇಷನ್ ಸಿಂಧೂರ ಸ್ಪಷ್ಟಪಡಿಸಿದೆ; ಪ್ರಧಾನಿ ಮೋದಿ

ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಯಿತು, ಪಾಕಿಸ್ತಾನವು ಭಾರತದಲ್ಲಿ ಡ್ರೋನ್ ದಾಳಿ ಮಾಡಲು ಪ್ರಯತ್ನಿಸಿತು, ಇದನ್ನು ಭಾರತೀಯ ಪಡೆಗಳು ಯಶಸ್ವಿಯಾಗಿ ವಿಫಲಗೊಳಿಸಿದವು. ಮೇ 10 ರಂದು, ಭಾರತೀಯ ಪಡೆಗಳು ಪಾಕಿಸ್ತಾನದ 11 ವಾಯುನೆಲೆಗಳ ಮೇಲೆ ದಾಳಿ ನಡೆಸಿ ಗಮನಾರ್ಹ ಹಾನಿಯನ್ನುಂಟುಮಾಡಿದವು. ನಂತರ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿದವು.

ಕತ್ರಾ-ಶ್ರೀನಗರ ರೈಲು ಸಂಪರ್ಕ ಕತ್ರಾ ಮತ್ತು ಶ್ರೀನಗರ ನಡುವಿನ ಪ್ರಯಾಣವು ರಸ್ತೆಯ ಮೂಲಕ ಸುಮಾರು ಆರರಿಂದ ಏಳು ಗಂಟೆಗಳನ್ನು ತೆಗೆದುಕೊಳ್ಳುತ್ತದೆ ಮತ್ತು ವಿಮಾನವು ಒಂದು ಗಂಟೆಗಿಂತ ಕಡಿಮೆ ಸಮಯ ತೆಗೆದುಕೊಳ್ಳುತ್ತದೆ .ಕತ್ರಾ ದೇಶದ ಬಹುತೇಕ ಎಲ್ಲಾ ಭಾಗಗಳೊಂದಿಗೆ ಉತ್ತಮ ಸಂಪರ್ಕ ಹೊಂದಿದೆ. ದೆಹಲಿ, ಮುಂಬೈ, ಚೆನ್ನೈ ಮತ್ತು ಕನ್ಯಾಕುಮಾರಿ ಸೇರಿದಂತೆ ವಿವಿಧ ನಗರಗಳಿಂದ ನೇರ ರೈಲುಗಳಿವೆ. ಕತ್ರಾ ಮತ್ತು ಶ್ರೀನಗರ ನಡುವಿನ ಹೊಸ ವಂದೇ ಭಾರತ್ ಹೆಚ್ಚು ಆರಾಮದಾಯಕ ಪ್ರಯಾಣವನ್ನು ನೀಡುತ್ತದೆ.

ಕಾಶ್ಮೀರಕ್ಕೆ ಹೋಗಲು ಯೋಜಿಸುವವರು ಮೊದಲು ಕತ್ರಾ ತಲುಪಬಹುದು ಮತ್ತು ನಂತರ ಮುಂದಿನ ಪ್ರಯಾಣಕ್ಕಾಗಿ ಹೊಸ ವಂದೇ ಭಾರತ್ ಅನ್ನು ತೆಗೆದುಕೊಳ್ಳಬಹುದು ಎಂದು ಅಧಿಕಾರಿಯೊಬ್ಬರು ಹೇಳಿದರು.

ಉಧಮ್‌ಪುರ ಶ್ರೀನಗರ-ಬಾರಾಮುಲ್ಲಾ ರೈಲು ಸಂಪರ್ಕ ಯೋಜನೆ (USBRL) ಪೂರ್ಣಗೊಂಡ ನಂತರ ಜಮ್ಮು ಮತ್ತು ಕಾಶ್ಮೀರದ ನಡುವೆ ರೈಲು ಸಂಚಾರಕ್ಕೆ ಅವಕಾಶ ಸಿಕ್ಕಿದೆ.  ಪ್ರಸ್ತುತ, ಶ್ರೀನಗರ ಮತ್ತು ಸಂಗಲ್ದಾನ್ ರೈಲು ನಿಲ್ದಾಣಗಳ ನಡುವೆ ರೈಲುಗಳು ಕಾರ್ಯನಿರ್ವಹಿಸುತ್ತಿವೆ. ಸಂಗಲ್ದಾನ್ ಮತ್ತು ಕತ್ರಾ ನಡುವಿನ ವಿಭಾಗ ಪೂರ್ಣಗೊಂಡ ನಂತರ, ಈಗ ಈ ಪ್ರದೇಶಗಳ ನಡುವೆ ರೈಲುಗಳು ಕಾರ್ಯನಿರ್ವಹಿಸಲಿವೆ. ಪ್ರಧಾನಿ ಶನಿವಾರ ಈ ವಿಭಾಗವನ್ನು ಉದ್ಘಾಟಿಸಲಿದ್ದಾರೆ. ಕಳೆದ ಹಲವಾರು ವಾರಗಳಿಂದ ಈ ವಿಭಾಗದಲ್ಲಿ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ.

ಯುಎಸ್‌ಬಿಆರ್‌ಎಲ್ ಯೋಜನೆಯನ್ನು 1994-95ರಲ್ಲಿ ಯೋಜಿಸಿ ಘೋಷಿಸಲಾಯಿತು. ಕಾಶ್ಮೀರ ಕಣಿವೆಯ ಭಾಗವಾದ ಖಾಜಿಗುಂಡ್‌ನಿಂದ ಬಾರಾಮುಲ್ಲಾ 2009 ರ ಹೊತ್ತಿಗೆ ಕಾರ್ಯರೂಪಕ್ಕೆ ಬಂದರೂ, ಕಣಿವೆಯ ಆಚೆಗಿನ ರೈಲ್ವೆ ಜಾಲಕ್ಕೆ ಸಂಪರ್ಕವು ಪೂರ್ಣಗೊಳ್ಳದೆ ಉಳಿಯಿತು. ಅಂಜಿ ಖಾಂಡ್ ಸೇತುವೆ ಮತ್ತು ಚೆನಾಬ್ ಸೇತುವೆ ಪೂರ್ಣಗೊಂಡ ನಂತರ, ಕಣಿವೆಯು ಈಗ ದೇಶದ ಉಳಿದ ಭಾಗಗಳಿಗೆ ರೈಲು ಮೂಲಕ ಸಂಪರ್ಕ ಹೊಂದಿದೆ.

ಇತರ ನಿಲ್ದಾಣಗಳಿಗೆ ಹೋಲಿಸಿದರೆ ಕತ್ರಾ ನಿಲ್ದಾಣದಲ್ಲಿ ಹೆಚ್ಚುವರಿ ಭದ್ರತಾ ಕ್ರಮಗಳನ್ನು ಯೋಜಿಸಲಾಗುತ್ತಿದೆ. ಪ್ರದೇಶದ ಸೂಕ್ಷ್ಮತೆಯನ್ನು ಪರಿಗಣಿಸಿ, ಕಾಶ್ಮೀರಕ್ಕೆ ಹೋಗುವ ರೈಲುಗಳಿಗೆ ಸರಿಯಾದ ಭದ್ರತಾ ತಪಾಸಣೆ ಮತ್ತು ಪ್ರಯಾಣಿಕರನ್ನು ಸಂಪೂರ್ಣವಾಗಿ ತಪಾಸಣೆ ಮಾಡುವ ಬಗ್ಗೆ ಮಾತುಕತೆಗಳು ನಡೆಯುತ್ತಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?
ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್, ಕೆಂಪೇಗೌಡರ ಜಯಂತಿಯಲ್ಲಿ ಇದೆಂಥಾ ನೃತ್ಯ...?
ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್, ಕೆಂಪೇಗೌಡರ ಜಯಂತಿಯಲ್ಲಿ ಇದೆಂಥಾ ನೃತ್ಯ...?
ನಂದಿನಿ ಸ್ಕೂಟರ್​ಗೆ ಗುದ್ದಿದ ಕಾರು ಓಡಿಸುತ್ತಿದ್ದ ಮಹಿಳೆ ಕುಡಿದಿದ್ದಳೇ?
ನಂದಿನಿ ಸ್ಕೂಟರ್​ಗೆ ಗುದ್ದಿದ ಕಾರು ಓಡಿಸುತ್ತಿದ್ದ ಮಹಿಳೆ ಕುಡಿದಿದ್ದಳೇ?