AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ನಾಗರಿಕರ ಸ್ಥಳಾಂತರಕ್ಕೆ ಸಹಾಯ ಮಾಡುತ್ತಿರುವ ರುಮೇನಿಯಾ ಪ್ರಧಾನಿಗೆ ಪ್ರಧಾನಿ ಮೋದಿ ಧನ್ಯವಾದ ಸಲ್ಲಿಸಿದರು

ಭಾರತೀಯ ನಾಗರಿಕರನ್ನು ಸ್ಥಳಾಂತರಿಸುವ ಪ್ರಯತ್ನಗಳ ಮೇಲ್ವಿಚಾರಣೆ ನೋಡಿಕೊಳ್ಳಲು ತಮ್ಮ ವಿಶೇಷ ಪ್ರತಿನಿಧಿಯಾಗಿ ನಾಗರಿಕ ವಿಮಾನಯಾನ ಸಚಿವ ಶ್ರೀ ಜ್ಯೋತಿರಾದಿತ್ಯ ಎಂ. ಸಿಂಧಿಯಾ ಅವರನ್ನು ನಿಯೋಜಿಸುವ ಬಗ್ಗೆಯೂ ಪ್ರಧಾನ ಮಂತ್ರಿ ಚುಕಾ ಅವರಿಗೆ ಪ್ರಧಾನಿ ಮೋದಿ ತಿಳಿಸಿದರು.

ಭಾರತೀಯ ನಾಗರಿಕರ ಸ್ಥಳಾಂತರಕ್ಕೆ ಸಹಾಯ ಮಾಡುತ್ತಿರುವ ರುಮೇನಿಯಾ ಪ್ರಧಾನಿಗೆ ಪ್ರಧಾನಿ ಮೋದಿ ಧನ್ಯವಾದ ಸಲ್ಲಿಸಿದರು
ಪ್ರಧಾನಿ ನರೇಂದ್ರ ಮೋದಿ
TV9 Web
| Edited By: |

Updated on: Mar 01, 2022 | 1:27 AM

Share

ಪ್ರಧಾನ ಮಂತ್ರಿಗಳ ಕಾರ್ಯಾಲಯದಿಂದ (Prime Minister’s Office) ಸೋಮವಾರ ಸಾಯಂಕಾಲ ಬಿಡಿಗಡೆಯಾಗಿರುವ ಪ್ರಕಟಣೆಯೊಂದರ ಪ್ರಕಾರ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (PM Narendra Modi) ರುಮೇನಿಯಾದ ಪ್ರಧಾನ ಮಂತ್ರಿ ಹೆಚ್ ಈ ನಿಕೊಲಾಯ್-ಅಯೋನೆಲ್ ಚುಕಾ (Nicolae-Ionel Ciuca) ಆವರೊಂದಿಗೆ ಮಾತುಕತೆ ನಡೆಸಿದರು. ಯುದ್ಧಗ್ರಸ್ಥ ಉಕ್ರೇನಲ್ಲಿ ಸಿಲುಕಿರುವ ಭಾರತೀಯ ನಾಗರಿಕರನ್ನು ಅಲ್ಲಿಂದ ಹೊರತರಲು ಕಳೆದ ಕೆಲವು ದಿನಗಳಲ್ಲಿ ನೆರವು ಒದಗಿಸುತ್ತಿರುವುದಕ್ಕೆ ಪ್ರಧಾನ ಮಂತ್ರಿ ಮೋದಿಯವರು ನಿಕೊಲಾಯ್ ಚುಕಾ ಅವರಿಗೆ ಧನ್ಯವಾದಗಳನ್ನು ಸಲ್ಲಿಸಿದರು. ಭಾರತದ ನಾರಗರಿಕರು ರುಮೇನಿಯಾ ಪ್ರವೇಶಿಸಲು ವಿಸಾ ಹೊಂದಿರದಿದ್ದರೂ ತಮ್ಮ ದೇಶ ಪ್ರವೇಶಿಸಲು ಅನುಮತಿ ನೀಡಿದಲ್ಲದೆ, ಭಾರತೀಯರನ್ನು ಕರೆತರಲೆಂದು ಕಳಿಸಲಾಗಿದ್ದ ವಿಶೇಷ ವಿಮಾನಗಳಿಗೆ ತನ್ನ ದೇಶದಲ್ಲಿ ಹಾರುವುದಕ್ಕೆ ಅವಕಾಶ ಕಲ್ಪಿಸಿದ ಚುಕಾ ಅವರ ಔದಾರ್ಯತೆಯನ್ನು ಪ್ರಧಾನಿ ಮೋದಿಯವರು ವಿಶೇಷವಾಗಿ ಕೊಂಡಾಡಿದರು.

ಸ್ಥಳೀಯ ಅಧಿಕಾರಿಗಳ ಸಮನ್ವಯದೊಂದಿಗೆ ಮುಂದಿನ ಕೆಲವು ದಿನಗಳಲ್ಲಿ ಭಾರತೀಯ ನಾಗರಿಕರನ್ನು ಸ್ಥಳಾಂತರಿಸುವ ಪ್ರಯತ್ನಗಳ ಮೇಲ್ವಿಚಾರಣೆ ನೋಡಿಕೊಳ್ಳಲು ತಮ್ಮ ವಿಶೇಷ ಪ್ರತಿನಿಧಿಯಾಗಿ ನಾಗರಿಕ ವಿಮಾನಯಾನ ಸಚಿವ ಶ್ರೀ ಜ್ಯೋತಿರಾದಿತ್ಯ ಎಂ. ಸಿಂಧಿಯಾ ಅವರನ್ನು ನಿಯೋಜಿಸುವ ಬಗ್ಗೆಯೂ ಪ್ರಧಾನ ಮಂತ್ರಿ ಚುಕಾ ಅವರಿಗೆ ಪ್ರಧಾನಿ ಮೋದಿ ತಿಳಿಸಿದರು.

ಉಕ್ರೇನ್‌ನಲ್ಲಿ ನಡೆಯುತ್ತಿರುವ ಹಿಂಸಾಚಾರ ಮತ್ತು ಮಾನವೀಯ ಬಿಕ್ಕಟ್ಟಿನ ಬಗ್ಗೆ ಪ್ರಧಾನಮಂತ್ರಿ ತಮ್ಮ ವಿಷಾದ ವ್ಯಕ್ತಪಡಿಸಿದರು ಮತ್ತು ಯುದ್ಧವನ್ನು ನಿಲ್ಲಿಸಿ ಮತ್ತು ಮಾತುಕತೆಗೆ ಮರಳಲು ಭಾರತ ಎಡೆಬಿಡದೆ ಮಾಡುತ್ತಿರುವ ಮನವಿಯನ್ನು ಪುನರುಚ್ಚರಿಸಿದರು. ರಾಷ್ಟ್ರಗಳ ಸಾರ್ವಭೌಮತೆ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸುವ ಮಹತ್ವವನ್ನು ಪ್ರಧಾನಿ ಮೋದಿ ಒತ್ತಿ ಹೇಳಿದರು.

ಇದನ್ನೂಓದಿ:  ಭಾರತೀಯ ವಿದ್ಯಾರ್ಥಿಗಳ ತ್ವರಿತ ಸ್ಥಳಾಂತರಕ್ಕೆ ಮನವಿ ಮಾಡಿ ಪ್ರಧಾನಿ ಮೋದಿಗೆ ಪತ್ರ ಬರೆದ ಮಾಜಿ ಪ್ರಧಾನಿ H.D.ದೇವೇಗೌಡ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ