AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ನಾಗರಿಕರ ಸ್ಥಳಾಂತರಕ್ಕೆ ಸಹಾಯ ಮಾಡುತ್ತಿರುವ ರುಮೇನಿಯಾ ಪ್ರಧಾನಿಗೆ ಪ್ರಧಾನಿ ಮೋದಿ ಧನ್ಯವಾದ ಸಲ್ಲಿಸಿದರು

ಭಾರತೀಯ ನಾಗರಿಕರನ್ನು ಸ್ಥಳಾಂತರಿಸುವ ಪ್ರಯತ್ನಗಳ ಮೇಲ್ವಿಚಾರಣೆ ನೋಡಿಕೊಳ್ಳಲು ತಮ್ಮ ವಿಶೇಷ ಪ್ರತಿನಿಧಿಯಾಗಿ ನಾಗರಿಕ ವಿಮಾನಯಾನ ಸಚಿವ ಶ್ರೀ ಜ್ಯೋತಿರಾದಿತ್ಯ ಎಂ. ಸಿಂಧಿಯಾ ಅವರನ್ನು ನಿಯೋಜಿಸುವ ಬಗ್ಗೆಯೂ ಪ್ರಧಾನ ಮಂತ್ರಿ ಚುಕಾ ಅವರಿಗೆ ಪ್ರಧಾನಿ ಮೋದಿ ತಿಳಿಸಿದರು.

ಭಾರತೀಯ ನಾಗರಿಕರ ಸ್ಥಳಾಂತರಕ್ಕೆ ಸಹಾಯ ಮಾಡುತ್ತಿರುವ ರುಮೇನಿಯಾ ಪ್ರಧಾನಿಗೆ ಪ್ರಧಾನಿ ಮೋದಿ ಧನ್ಯವಾದ ಸಲ್ಲಿಸಿದರು
ಪ್ರಧಾನಿ ನರೇಂದ್ರ ಮೋದಿ
TV9 Web
| Edited By: ಅರುಣ್​ ಕುಮಾರ್​ ಬೆಳ್ಳಿ|

Updated on: Mar 01, 2022 | 1:27 AM

Share

ಪ್ರಧಾನ ಮಂತ್ರಿಗಳ ಕಾರ್ಯಾಲಯದಿಂದ (Prime Minister’s Office) ಸೋಮವಾರ ಸಾಯಂಕಾಲ ಬಿಡಿಗಡೆಯಾಗಿರುವ ಪ್ರಕಟಣೆಯೊಂದರ ಪ್ರಕಾರ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (PM Narendra Modi) ರುಮೇನಿಯಾದ ಪ್ರಧಾನ ಮಂತ್ರಿ ಹೆಚ್ ಈ ನಿಕೊಲಾಯ್-ಅಯೋನೆಲ್ ಚುಕಾ (Nicolae-Ionel Ciuca) ಆವರೊಂದಿಗೆ ಮಾತುಕತೆ ನಡೆಸಿದರು. ಯುದ್ಧಗ್ರಸ್ಥ ಉಕ್ರೇನಲ್ಲಿ ಸಿಲುಕಿರುವ ಭಾರತೀಯ ನಾಗರಿಕರನ್ನು ಅಲ್ಲಿಂದ ಹೊರತರಲು ಕಳೆದ ಕೆಲವು ದಿನಗಳಲ್ಲಿ ನೆರವು ಒದಗಿಸುತ್ತಿರುವುದಕ್ಕೆ ಪ್ರಧಾನ ಮಂತ್ರಿ ಮೋದಿಯವರು ನಿಕೊಲಾಯ್ ಚುಕಾ ಅವರಿಗೆ ಧನ್ಯವಾದಗಳನ್ನು ಸಲ್ಲಿಸಿದರು. ಭಾರತದ ನಾರಗರಿಕರು ರುಮೇನಿಯಾ ಪ್ರವೇಶಿಸಲು ವಿಸಾ ಹೊಂದಿರದಿದ್ದರೂ ತಮ್ಮ ದೇಶ ಪ್ರವೇಶಿಸಲು ಅನುಮತಿ ನೀಡಿದಲ್ಲದೆ, ಭಾರತೀಯರನ್ನು ಕರೆತರಲೆಂದು ಕಳಿಸಲಾಗಿದ್ದ ವಿಶೇಷ ವಿಮಾನಗಳಿಗೆ ತನ್ನ ದೇಶದಲ್ಲಿ ಹಾರುವುದಕ್ಕೆ ಅವಕಾಶ ಕಲ್ಪಿಸಿದ ಚುಕಾ ಅವರ ಔದಾರ್ಯತೆಯನ್ನು ಪ್ರಧಾನಿ ಮೋದಿಯವರು ವಿಶೇಷವಾಗಿ ಕೊಂಡಾಡಿದರು.

ಸ್ಥಳೀಯ ಅಧಿಕಾರಿಗಳ ಸಮನ್ವಯದೊಂದಿಗೆ ಮುಂದಿನ ಕೆಲವು ದಿನಗಳಲ್ಲಿ ಭಾರತೀಯ ನಾಗರಿಕರನ್ನು ಸ್ಥಳಾಂತರಿಸುವ ಪ್ರಯತ್ನಗಳ ಮೇಲ್ವಿಚಾರಣೆ ನೋಡಿಕೊಳ್ಳಲು ತಮ್ಮ ವಿಶೇಷ ಪ್ರತಿನಿಧಿಯಾಗಿ ನಾಗರಿಕ ವಿಮಾನಯಾನ ಸಚಿವ ಶ್ರೀ ಜ್ಯೋತಿರಾದಿತ್ಯ ಎಂ. ಸಿಂಧಿಯಾ ಅವರನ್ನು ನಿಯೋಜಿಸುವ ಬಗ್ಗೆಯೂ ಪ್ರಧಾನ ಮಂತ್ರಿ ಚುಕಾ ಅವರಿಗೆ ಪ್ರಧಾನಿ ಮೋದಿ ತಿಳಿಸಿದರು.

ಉಕ್ರೇನ್‌ನಲ್ಲಿ ನಡೆಯುತ್ತಿರುವ ಹಿಂಸಾಚಾರ ಮತ್ತು ಮಾನವೀಯ ಬಿಕ್ಕಟ್ಟಿನ ಬಗ್ಗೆ ಪ್ರಧಾನಮಂತ್ರಿ ತಮ್ಮ ವಿಷಾದ ವ್ಯಕ್ತಪಡಿಸಿದರು ಮತ್ತು ಯುದ್ಧವನ್ನು ನಿಲ್ಲಿಸಿ ಮತ್ತು ಮಾತುಕತೆಗೆ ಮರಳಲು ಭಾರತ ಎಡೆಬಿಡದೆ ಮಾಡುತ್ತಿರುವ ಮನವಿಯನ್ನು ಪುನರುಚ್ಚರಿಸಿದರು. ರಾಷ್ಟ್ರಗಳ ಸಾರ್ವಭೌಮತೆ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸುವ ಮಹತ್ವವನ್ನು ಪ್ರಧಾನಿ ಮೋದಿ ಒತ್ತಿ ಹೇಳಿದರು.

ಇದನ್ನೂಓದಿ:  ಭಾರತೀಯ ವಿದ್ಯಾರ್ಥಿಗಳ ತ್ವರಿತ ಸ್ಥಳಾಂತರಕ್ಕೆ ಮನವಿ ಮಾಡಿ ಪ್ರಧಾನಿ ಮೋದಿಗೆ ಪತ್ರ ಬರೆದ ಮಾಜಿ ಪ್ರಧಾನಿ H.D.ದೇವೇಗೌಡ

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು