AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುರು ಪೂರ್ಣಿಮೆ ಶುಭಾಶಯ ಕೋರಿದ ಪ್ರಧಾನಿ ಮೋದಿ: ಸಂಸ್ಕೃತ ಸುಭಾಷಿತ ಹಂಚಿಕೊಂಡ ಪ್ರಧಾನಿ

ಗುರು ಪೂರ್ಣಿಮೆಯ ಶುಭ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ದೇಶದ ಸಮಸ್ತ ಜನತೆಗೆ ಶುಭ ಹಾರೈಸಿದ್ದಾರೆ. ಗುರುಗಳು ಕೇವಲ ಅಕ್ಷರ ಜ್ಞಾನವನ್ನು ನೀಡುವುದು ಮಾತ್ರವಲ್ಲದೆ, ತಮ್ಮ ಶಿಷ್ಯರಲ್ಲಿ ಸಕಾರಾತ್ಮಕ ಶಕ್ತಿ ತುಂಬಿ, ಉದಾತ್ತ ಚಿಂತನೆ ಮತ್ತು ಮೌಲ್ಯಗಳ ಮೂಲಕ ಅವರನ್ನು ನೈಜ ವ್ಯಕ್ತಿಗಳನ್ನಾಗಿ ರೂಪಿಸುತ್ತಾರೆ ಎಂದು ಪ್ರಧಾನಿ ಬಣ್ಣಿಸಿದ್ದಾರೆ. ಗುರುಗಳು ತೋರಿದ ಉನ್ನತ ಆದರ್ಶಗಳು ಹಾಗೂ ಮಾರ್ಗದರ್ಶನವನ್ನು ಪ್ರತಿಯೊಬ್ಬರೂ ತಮ್ಮ ಜೀವನದ ದಿಕ್ಸೂಚಿಯನ್ನಾಗಿ ಮಾಡಿಕೊಳ್ಳಬೇಕು ಎಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ. ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಗುರುವಿನ ಮಹತ್ವವನ್ನು ಸಾರುವ ಸುಂದರ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ.

ಗುರು ಪೂರ್ಣಿಮೆ ಶುಭಾಶಯ ಕೋರಿದ ಪ್ರಧಾನಿ ಮೋದಿ: ಸಂಸ್ಕೃತ ಸುಭಾಷಿತ ಹಂಚಿಕೊಂಡ ಪ್ರಧಾನಿ
ನರೇಂದ್ರ ಮೋದಿ
ನಯನಾ ರಾಜೀವ್
|

Updated on:Jul 29, 2026 | 12:47 PM

Share

ನವದೆಹಲಿ, ಜುಲೈ 29: ಗುರು ಪೂರ್ಣಿಮೆಯ ಶುಭ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ದೇಶದ ಸಮಸ್ತ ಜನತೆಗೆ ಶುಭ ಹಾರೈಸಿದ್ದಾರೆ. ಗುರುಗಳು ಕೇವಲ ಅಕ್ಷರ ಜ್ಞಾನವನ್ನು ನೀಡುವುದು ಮಾತ್ರವಲ್ಲದೆ, ತಮ್ಮ ಶಿಷ್ಯರಲ್ಲಿ ಸಕಾರಾತ್ಮಕ ಶಕ್ತಿ ತುಂಬಿ, ಉದಾತ್ತ ಚಿಂತನೆ ಮತ್ತು ಮೌಲ್ಯಗಳ ಮೂಲಕ ಅವರನ್ನು ನೈಜ ವ್ಯಕ್ತಿಗಳನ್ನಾಗಿ ರೂಪಿಸುತ್ತಾರೆ ಎಂದು ಪ್ರಧಾನಿ ಬಣ್ಣಿಸಿದ್ದಾರೆ. ಗುರುಗಳು ತೋರಿದ ಉನ್ನತ ಆದರ್ಶಗಳು ಹಾಗೂ ಮಾರ್ಗದರ್ಶನವನ್ನು ಪ್ರತಿಯೊಬ್ಬರೂ ತಮ್ಮ ಜೀವನದ ದಿಕ್ಸೂಚಿಯನ್ನಾಗಿ ಮಾಡಿಕೊಳ್ಳಬೇಕು ಎಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ. ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಗುರುವಿನ ಮಹತ್ವವನ್ನು ಸಾರುವ ಸುಂದರ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ.

ಪೋಸ್ಟ್​

ಪ್ರೇರಕಃ ಸೂಚಕಶ್ಚೈವ ವಾಚಕೋ ದರ್ಶಕಸ್ತಥಾ। ಶಿಕ್ಷಕಃ ಬೋಧಕಶ್ಚೈವ ಷಡೇತೇ ಗುರವಃ ಸ್ಮೃತಾಃ

ಪ್ರೇರಕ: ಆಲೋಚನೆ ಮತ್ತು ಕೆಲಸಗಳಿಗೆ ಸ್ಪೂರ್ತಿ ನೀಡುವವನು.

ಸೂಚಕ: ಸರಿಯಾದ ಮಾರ್ಗವನ್ನು ತೋರಿಸುವವನು.

ವಾಚಕ: ಜ್ಞಾನ ಮತ್ತು ಸತ್ಯವನ್ನು ತಿಳಿಸಿ ಹೇಳುವವನು.

ದರ್ಶಕ: ಸನ್ಮಾರ್ಗದೆಡೆಗೆ ನಡೆಸಿ ದಾರಿ ದೀಪವಾಗುವವನು.

ಶಿಕ್ಷಕ: ವಿದ್ಯೆ ಮತ್ತು ಕೌಶಲ್ಯಗಳನ್ನು ಬೋಧಿಸುವವನು.

ಬೋಧಕ: ಜೀವನದ ಸತ್ಯದ ಅರಿವು ಮೂಡಿಸಿ ಸ್ವಯಂ-ಅಭಿವೃದ್ಧಿಗೆ ದಾರಿ ಮಾಡಿಕೊಡುವವನು.

ಈ ಆರನ್ನೂ ಗುರುವಿನ ಶ್ರೇಷ್ಠ ರೂಪಗಳೆಂದು ಪರಿಗಣಿಸಲಾಗಿದೆ ಎಂದು ಪ್ರಧಾನಿ ಸ್ಮರಿಸಿದ್ದಾರೆ.

ಮತ್ತಷ್ಟು ಓದಿ:ಸಿಜೆಪಿ ಪ್ರತಿಭಟನೆ ವೇಳೆ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್, ಎಕ್ಸ್​ ಖಾತೆಗಳಿಗೆ ದೆಹಲಿ ಪೊಲೀಸರಿಂದ ನೋಟಿಸ್

ಪ್ರಧಾನಿ ಮೋದಿರ ಸಂದೇಶ: “ಗುರುವು ಜ್ಞಾನ ಧಾರೆ ಎರೆಯುವುದರ ಜೊತೆಗೆ ವಿದ್ಯಾರ್ಥಿಗಳಲ್ಲಿ ಸಕಾರಾತ್ಮಕ ಶಕ್ತಿಯನ್ನು ತುಂಬುತ್ತಾರೆ. ಸದುಲೋಚನೆ ಹಾಗೂ ಸಂಸ್ಕಾರಗಳೊಂದಿಗೆ ಅವರನ್ನು ಸುಶಿಕ್ಷಿತರನ್ನಾಗಿ ಮಾಡುತ್ತಾರೆ. ಬನ್ನಿ, ಅಂತಹ ಮಹಾನ್ ಗುರುಗಳ ಆದರ್ಶಗಳನ್ನು ನಮ್ಮ ಬದುಕಿನ ದಾರಿದೀಪವನ್ನಾಗಿ ಮಾಡಿಕೊಳ್ಳೋಣ” ಎಂದು ಪ್ರಧಾನಿ ದೇಶವಾಸಿಗಳಿಗೆ ಹಾರೈಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:47 pm, Wed, 29 July 26

Follow Us
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ