AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mann ki Baat: ಪ್ರಧಾನಿ ಮೋದಿ 88ನೇ ಮನ್​ ಕೀ ಬಾತ್​; ಪ್ರಧಾನಮಂತ್ರಿಗಳ ಮ್ಯೂಸಿಯಂಗೆ ಭೇಟಿ ಕೊಡುವಂತೆ ದೇಶದ ಜನರಿಗೆ ಕರೆ

ಇಂದಿನ ಮನ್​ ಕೀ ಬಾತ್​ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಆನ್​ಲೈನ್​ ವ್ಯವಹಾರ, ಡಿಜಿಟಲ್​ ಪಾವತಿಯ ಬಗ್ಗೆಯೂ ಮಾತನಾಡಿದರು. ಈಗೀಗ ಸಣ್ಣಸಣ್ಣ ಹಳ್ಳಿಗಳಲ್ಲೂ ಜನರು ಯುಪಿಐ (ಏಕೀಕೃತ ಪಾವತಿಗಳ ಇಂಟರ್ಫೇಸ್) ಬಳಸುತ್ತಿದ್ದಾರೆ. ಅಂಗಡಿಗಳ ಮಾಲೀಕರು ಡಿಜಿಟಲ್​ ಪಾವತಿ ವ್ಯವಸ್ಥೆಯನ್ನು ಇಟ್ಟುಕೊಳ್ಳುತ್ತಿದ್ದಾರೆ ಎಂದರು.

Mann ki Baat: ಪ್ರಧಾನಿ ಮೋದಿ 88ನೇ ಮನ್​ ಕೀ ಬಾತ್​; ಪ್ರಧಾನಮಂತ್ರಿಗಳ ಮ್ಯೂಸಿಯಂಗೆ ಭೇಟಿ ಕೊಡುವಂತೆ ದೇಶದ ಜನರಿಗೆ ಕರೆ
ಮನ್​ ಕೀ ಬಾತ್​ನಲ್ಲಿ ಪ್ರಧಾನಿ ಮೋದಿ ಮಾತು
Follow us
TV9 Web
| Updated By: Lakshmi Hegde

Updated on:Apr 24, 2022 | 11:43 AM

ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ 88ನೇ ಆವೃತ್ತಿಯ ಮನ್​ ಕೀ ಬಾತ್​ನ್ನು, ಪ್ರಧಾನಮಂತ್ರಿಗಳ ಸಂಗ್ರಹಾಲಯ (Prime Ministers’ museum)ದ ಬಗ್ಗೆ ಪ್ರಸ್ತಾಪ ಮಾಡುವ ಮೂಲಕ ಶುರು ಮಾಡಿದರು. ಈ ಪ್ರಧಾನಿಗಳ ಸಂಗ್ರಹಾಲಯವನ್ನು ಏಪ್ರಿಲ್​ 14 ಅಂಬೇಡ್ಕರ್ ಜಯಂತಿಯಂದು ದೆಹಲಿಯಲ್ಲಿ ಪ್ರಧಾನಿ ಮೋದಿಯವರೇ ಉದ್ಘಾಟಿಸಿದ್ದಾರೆ. ಭಾರತಕ್ಕೆ ಸ್ವಾತಂತ್ರ್ಯ ಬಂದ ನಂತರ ಪ್ರಧಾನಮಂತ್ರಿ ಹುದ್ದೆಗೆ ಏರಿದ ಎಲ್ಲರಿಗೆ ಸಂಬಂಧಪಟ್ಟ ನೆನಪುಗಳು, ವಿಷಯಗಳು, ಸ್ಮರಣಿಕೆಗಳನ್ನು ಈ ಮ್ಯೂಸಿಯಂ ಒಳಗೊಂಡಿದೆ. ಎಲ್ಲ ಪ್ರಧಾನಿಗಳಿಗೆ ಗೌರವ ಸಲ್ಲಿಸುವ ಸಲುವಾಗಿ ಇದನ್ನು ನಿರ್ಮಾಣ ಮಾಡಲಾಗಿದ್ದು, ಇಂದಿನ ಮನ್​ ಕೀ ಬಾತ್​​ನಲ್ಲಿ ಮೊದಲಿಗೆ ಇದೇ ವಿಚಾರವನ್ನು ಪ್ರಧಾನಿ ಮೋದಿ ಪ್ರಸ್ತಾಪ ಮಾಡಿದರು. ‘ಈ ಸಂಗ್ರಹಾಲಯಕ್ಕೆ ಅನೇಕ ಜನರು ತಮ್ಮ ವೈಯಕ್ತಿಕ ಸಂಗ್ರಹಗಳನ್ನು ಮತ್ತು ಪ್ರಾಚೀನ ಕಲಾಕೃತಿಗಳನ್ನು ಕೊಡುಗೆ ನೀಡುತ್ತಿದ್ದಾರೆ. ಈ ಮೂಲಕ ಸಾಂಸ್ಕೃತಿಕ ಪರಂಪರೆಯನ್ನು ಸಮಾಜದೊಂದಿಗೆ ಹಂಚಿಕೊಳ್ಳುತ್ತಿದ್ದಾರೆ. ಇದು ನಿಜಕ್ಕೂ ಶ್ಲಾಘನೀಯ’ ಎಂದು ಪ್ರಧಾನಿ ಹೇಳಿದರು. ಅಷ್ಟೇ ಅಲ್ಲ, ಈ ಮ್ಯೂಸಿಯಂಗೆ ಪ್ರತಿಯೊಬ್ಬರೂ ಒಮ್ಮೆಯಾದರೂ ಭೇಟಿ ಕೊಡಬೇಕು ಎಂದು ಹೇಳಿದರು.

ನಗದು ರಹಿತವಾಗಿ ಡೇ ಔಟ್​ಗೆ ಹೋಗಿ

ಇಂದಿನ ಮನ್​ ಕೀ ಬಾತ್​ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಆನ್​ಲೈನ್​ ವ್ಯವಹಾರ, ಡಿಜಿಟಲ್​ ಪಾವತಿಯ ಬಗ್ಗೆಯೂ ಮಾತನಾಡಿದರು. ಈಗೀಗ ಸಣ್ಣಸಣ್ಣ ಹಳ್ಳಿಗಳಲ್ಲೂ ಜನರು ಯುಪಿಐ (ಏಕೀಕೃತ ಪಾವತಿಗಳ ಇಂಟರ್ಫೇಸ್) ಬಳಸುತ್ತಿದ್ದಾರೆ. ಅಂಗಡಿಗಳ ಮಾಲೀಕರು ಡಿಜಿಟಲ್​ ಪಾವತಿ ವ್ಯವಸ್ಥೆಯನ್ನು ಇಟ್ಟುಕೊಳ್ಳುತ್ತಿದ್ದಾರೆ. ಹಾಗೇ, ಗ್ರಾಹಕರೂ ಅದನ್ನು ಸರಿಯಾಗಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಈ ಆನ್​ಲೈನ್​ ಪಾವತಿ ವ್ಯವಸ್ಥೆ ಡಿಜಿಟಲ್​ ಆರ್ಥಿಕತೆಯನ್ನು ಉತ್ತೇಜಿಸುತ್ತಿದೆ. ಪ್ರತಿದಿನ ಏನಿಲ್ಲವೆಂದರೂ 20 ಸಾವಿರ ಕೋಟಿ ರೂಪಾಯಿಗಳಷ್ಟು ಆನ್​ಲೈನ್ ವಹಿವಾಟು ನಡೆಯುತ್ತಿದೆ ಎಂದು ಹೇಳಿದರು. ಅಷ್ಟೇ ಅಲ್ಲ, ಈಗ ಜನರು ಆರಾಮಾಗಿ ಕ್ಯಾಶ್​ಲೆಸ್​ ಡೇಔಟ್​ಗೆ (ನಗದು ರಹಿತವಾಗಿ) ಹೋಗಬಹುದು ಎಂದೂ ಅಭಿಪ್ರಾಯಪಟ್ಟರು.

ಜಲಸಂರಕ್ಷಣೆಯ ಮಹತ್ವ

ಪ್ರಧಾನಿ ನರೇಂದ್ರ ಮೋದಿ ಸಾಮಾನ್ಯವಾಗಿ ಪದೇಪದೆ ಜಲಸಂರಕ್ಷಣೆ ಬಗ್ಗೆ ಮಾತನಾಡುತ್ತಾರೆ. ಇಂದಿನ ಮನ್​ ಕೀ ಬಾತ್​ನಲ್ಲೂ ಕೂಡ ಅವರು ನೀರಿನ ರಕ್ಷಣೆಯ ಬಗ್ಗೆ ಮಾತನಾಡಿದರು. ನೀರನ್ನು ಮಿತವಾಗಿ ಬಳಸುವುದು, ಮಾಲಿನ್ಯವಾಗದಂತೆ ತಡೆಯುವುದು ಈ ಸಮಾಜದ ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂದೂ ಹೇಳಿದರು.  ಅಭಿವೃದ್ಧಿಯೆಡೆಗೆ ದಾಪುಗಾಲು ಹಾಕುತ್ತಿರುವ ನಮ್ಮ ದೇಶದ ಸಂಕಲ್ಪಗಳಲ್ಲಿ ಜಲಸಂರಕ್ಷಣೆಯೂ ಒಂದು. ಹಾಗೇ, ಮುಂಬರುವ ದಿನಗಳಲ್ಲಿ ಪ್ರತಿ ಜಿಲ್ಲೆಯಲ್ಲೂ 75 ಅಮೃತ ಸರೋವರಗಳ ನಿರ್ಮಾಣದ ಗುರಿಯಿದೆ ಎಂದು ಪ್ರಧಾನಿ ತಿಳಿಸಿದರು.  ನೀರು ಒಂದು ಪ್ರಮುಖ ನೈಸರ್ಗಿಕ ಸಂಪನ್ಮೂಲ. ಪ್ರತಿ ಜೀವಿಗಳ ಮೂಲಭೂತ ಅವಶ್ಯಕತೆ ಇದು ಎಂದು ಧರ್ಮಗ್ರಂಥದಲ್ಲೇ ಉಲ್ಲೇಖವಿದೆ ಎಂದು ಹೇಳಿದರು.

ಇದನ್ನೂ ಓದಿ: ರೇವಣ್ಣ, ಭವಾನಿ ವಿರುದ್ಧ ಸ್ಪರ್ಧೆಗೆ ನಾನು ರೆಡಿ: ಹಾಸನದಲ್ಲಿ ಸವಾಲು ಹಾಕಿದ ಪ್ರೀತಂಗೌಡ

Published On - 11:24 am, Sun, 24 April 22

ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ