AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದ್ಭುತ ಕೆಲಸಗಳನ್ನು ಮಾಡಿರುವ ಪ್ರಧಾನಿ ಮೋದಿ ಇನ್ನೂ 2 ಬಾರಿ ಅಧಿಕಾರಕ್ಕೇರಬೇಕು; ದೀಪಕ್ ಪರೇಖ್

ಪ್ರಜಾಪ್ರಭುತ್ವಕ್ಕೆ ಪ್ರಬಲ ಪ್ರತಿಪಕ್ಷದ ಅಗತ್ಯವಿದೆ. ಆದರೆ ನಮ್ಮ ದೇಶದಲ್ಲಿ ಸರಿಯಾದ ವಿರೋಧ ಪಕ್ಷವೇ ಇಲ್ಲ ಎಂದು ಎಚ್‌ಡಿಎಫ್‌ಸಿ ಅಧ್ಯಕ್ಷರಾಗಿರುವ ದೀಪಕ್ ಪರೇಖ್ ಟೀಕಿಸಿದ್ದಾರೆ.

ಅದ್ಭುತ ಕೆಲಸಗಳನ್ನು ಮಾಡಿರುವ ಪ್ರಧಾನಿ ಮೋದಿ ಇನ್ನೂ 2 ಬಾರಿ ಅಧಿಕಾರಕ್ಕೇರಬೇಕು; ದೀಪಕ್ ಪರೇಖ್
ದೀಪಕ್ ಪರೇಖ್
TV9 Web
| Updated By: ಸುಷ್ಮಾ ಚಕ್ರೆ|

Updated on: Aug 31, 2022 | 1:16 PM

Share

ನವದೆಹಲಿ: ಕಳೆದ 8 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಅದ್ಭುತ ಕೆಲಸಗಳನ್ನು ಮಾಡಿದ್ದಾರೆ ಎಂದು ಖ್ಯಾತ ಫೈನಾನ್ಸ್​ ಉದ್ಯಮಿ ದೀಪಕ್ ಪರೇಖ್ (Deepak Parekh) ಶ್ಲಾಘಿಸಿದ್ದಾರೆ. ಅತಿದೊಡ್ಡ ಪ್ಯೂರ್-ಪ್ಲೇ ಮಾರ್ಟ್‌ಗೇಜ್ ಫೈನಾನ್ಸ್ ಕಂಪನಿಯಾದ ಎಚ್‌ಡಿಎಫ್‌ಸಿ ಅಧ್ಯಕ್ಷರಾಗಿರುವ ದೀಪಕ್ ಪರೇಖ್, ಭಾರತದ ಮುಖವನ್ನು ಬದಲಾಯಿಸಲು ನರೇಂದ್ರ ಮೋದಿ ಇನ್ನೂ ಎರಡು ಅವಧಿಗೆ ಅಧಿಕಾರದ ಚುಕ್ಕಾಣಿ ಹಿಡಿಯುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

“ಗೌರವಾನ್ವಿತ ಪ್ರಧಾನಮಂತ್ರಿಯವರು ಗಮನಾರ್ಹವಾದ ಕೆಲಸವನ್ನು ಮಾಡಿದ್ದಾರೆ. ಅವರ ಜೀವನದಲ್ಲಿ ಅವರ ಏಕೈಕ ಗುರಿಯೆಂದರೆ ಭಾರತವನ್ನು ಬೆಳೆಸುವುದು, ಪ್ರಗತಿಯನ್ನು ನೋಡುವುದು. ತಾವು ಅಂದುಕೊಂಡಿದ್ದನ್ನು ಸಾಧಿಸುವುದರಲ್ಲಿಯೇ ಅವರು ತಮ್ಮ ಸಮಯವನ್ನು ಕಳೆಯುತ್ತಾರೆ” ಎಂದು ಪರೇಖ್ ಹೇಳಿದ್ದಾರೆ.

ಇದನ್ನೂ ಓದಿ: ಸೆ. 1, 2ರಂದು ಕೇರಳ, ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ; ಮಂಗಳೂರಿನಲ್ಲಿ 3,800 ಕೋಟಿ ರೂ. ಯೋಜನೆಗಳಿಗೆ ಚಾಲನೆ

“ಅಭ್ಯುದಯ ವಾತ್ಸಲ್ಯಂ” ಪತ್ರಿಕೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವಕ್ಕೆ ಪ್ರಬಲ ಪ್ರತಿಪಕ್ಷದ ಅಗತ್ಯವಿದೆ. ಆದರೆ ನಮ್ಮ ದೇಶದಲ್ಲಿ ಸರಿಯಾದ ವಿರೋಧ ಪಕ್ಷವೇ ಇಲ್ಲ ಎಂದು ಟೀಕಿಸಿದ್ದಾರೆ. ರಾಹುಲ್ ಗಾಂಧಿ ಮತ್ತು ನರೇಂದ್ರ ಮೋದಿ ನಡುವೆ ಹೋಲಿಸಲು ಯಾವುದೇ ಕಾರಣಗಳಿಲ್ಲ ಎಂಬುದು ಜನರಿಗೂ ತುಂಬಾ ಸ್ಪಷ್ಟವಾಗಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ.

ಮುಂದಿನ 25 ವರ್ಷಗಳು ಭಾರತಕ್ಕೆ ಬಹಳ ಉತ್ತಮವಾಗಿರುತ್ತದೆ. ಉನ್ನತ ಶಿಕ್ಷಣಕ್ಕಾಗಿ ಹೊರರಾಜ್ಯಗಳಿಗೆ ಹೋಗಿರುವ ಬಹಳಷ್ಟು ಯುವಕರು ಇದೀಗ ಭಾರತದಲ್ಲಿ ಇರುವ ಅವಕಾಶಗಳನ್ನು ಗಮನದಲ್ಲಿಟ್ಟುಕೊಂಡು ಸ್ವಇಚ್ಛೆಯಿಂದ ನಮ್ಮ ದೇಶಕ್ಕೆ ಮರಳುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Daily Devotional: ಹುತ್ತವಿರುವ ನಿವೇಶನ ಖರೀದಿಸಿದರೆ ಲಾಭವೋ ನಷ್ಟವೋ?
Daily Devotional: ಹುತ್ತವಿರುವ ನಿವೇಶನ ಖರೀದಿಸಿದರೆ ಲಾಭವೋ ನಷ್ಟವೋ?
Daily horoscope: ಈ ರಾಶಿಯವರಿಗೆ ಆರ್ಥಿಕ ಲಾಭ ಮತ್ತು ವಾಹನ ಖರೀದಿ ಯೋಗ
Daily horoscope: ಈ ರಾಶಿಯವರಿಗೆ ಆರ್ಥಿಕ ಲಾಭ ಮತ್ತು ವಾಹನ ಖರೀದಿ ಯೋಗ
ಶಿಥಿಲಾವಸ್ಥೆಗೆ ತಲುಪಿದ 1937ರಲ್ಲಿ ನಿರ್ಮಾಣವಾದ ಸರ್ಕಾರಿ ಶಾಲೆ
ಶಿಥಿಲಾವಸ್ಥೆಗೆ ತಲುಪಿದ 1937ರಲ್ಲಿ ನಿರ್ಮಾಣವಾದ ಸರ್ಕಾರಿ ಶಾಲೆ
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?