AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದ್ಭುತ ಕೆಲಸಗಳನ್ನು ಮಾಡಿರುವ ಪ್ರಧಾನಿ ಮೋದಿ ಇನ್ನೂ 2 ಬಾರಿ ಅಧಿಕಾರಕ್ಕೇರಬೇಕು; ದೀಪಕ್ ಪರೇಖ್

ಪ್ರಜಾಪ್ರಭುತ್ವಕ್ಕೆ ಪ್ರಬಲ ಪ್ರತಿಪಕ್ಷದ ಅಗತ್ಯವಿದೆ. ಆದರೆ ನಮ್ಮ ದೇಶದಲ್ಲಿ ಸರಿಯಾದ ವಿರೋಧ ಪಕ್ಷವೇ ಇಲ್ಲ ಎಂದು ಎಚ್‌ಡಿಎಫ್‌ಸಿ ಅಧ್ಯಕ್ಷರಾಗಿರುವ ದೀಪಕ್ ಪರೇಖ್ ಟೀಕಿಸಿದ್ದಾರೆ.

ಅದ್ಭುತ ಕೆಲಸಗಳನ್ನು ಮಾಡಿರುವ ಪ್ರಧಾನಿ ಮೋದಿ ಇನ್ನೂ 2 ಬಾರಿ ಅಧಿಕಾರಕ್ಕೇರಬೇಕು; ದೀಪಕ್ ಪರೇಖ್
ದೀಪಕ್ ಪರೇಖ್
TV9 Web
| Edited By: |

Updated on: Aug 31, 2022 | 1:16 PM

Share

ನವದೆಹಲಿ: ಕಳೆದ 8 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಅದ್ಭುತ ಕೆಲಸಗಳನ್ನು ಮಾಡಿದ್ದಾರೆ ಎಂದು ಖ್ಯಾತ ಫೈನಾನ್ಸ್​ ಉದ್ಯಮಿ ದೀಪಕ್ ಪರೇಖ್ (Deepak Parekh) ಶ್ಲಾಘಿಸಿದ್ದಾರೆ. ಅತಿದೊಡ್ಡ ಪ್ಯೂರ್-ಪ್ಲೇ ಮಾರ್ಟ್‌ಗೇಜ್ ಫೈನಾನ್ಸ್ ಕಂಪನಿಯಾದ ಎಚ್‌ಡಿಎಫ್‌ಸಿ ಅಧ್ಯಕ್ಷರಾಗಿರುವ ದೀಪಕ್ ಪರೇಖ್, ಭಾರತದ ಮುಖವನ್ನು ಬದಲಾಯಿಸಲು ನರೇಂದ್ರ ಮೋದಿ ಇನ್ನೂ ಎರಡು ಅವಧಿಗೆ ಅಧಿಕಾರದ ಚುಕ್ಕಾಣಿ ಹಿಡಿಯುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

“ಗೌರವಾನ್ವಿತ ಪ್ರಧಾನಮಂತ್ರಿಯವರು ಗಮನಾರ್ಹವಾದ ಕೆಲಸವನ್ನು ಮಾಡಿದ್ದಾರೆ. ಅವರ ಜೀವನದಲ್ಲಿ ಅವರ ಏಕೈಕ ಗುರಿಯೆಂದರೆ ಭಾರತವನ್ನು ಬೆಳೆಸುವುದು, ಪ್ರಗತಿಯನ್ನು ನೋಡುವುದು. ತಾವು ಅಂದುಕೊಂಡಿದ್ದನ್ನು ಸಾಧಿಸುವುದರಲ್ಲಿಯೇ ಅವರು ತಮ್ಮ ಸಮಯವನ್ನು ಕಳೆಯುತ್ತಾರೆ” ಎಂದು ಪರೇಖ್ ಹೇಳಿದ್ದಾರೆ.

ಇದನ್ನೂ ಓದಿ: ಸೆ. 1, 2ರಂದು ಕೇರಳ, ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ; ಮಂಗಳೂರಿನಲ್ಲಿ 3,800 ಕೋಟಿ ರೂ. ಯೋಜನೆಗಳಿಗೆ ಚಾಲನೆ

“ಅಭ್ಯುದಯ ವಾತ್ಸಲ್ಯಂ” ಪತ್ರಿಕೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವಕ್ಕೆ ಪ್ರಬಲ ಪ್ರತಿಪಕ್ಷದ ಅಗತ್ಯವಿದೆ. ಆದರೆ ನಮ್ಮ ದೇಶದಲ್ಲಿ ಸರಿಯಾದ ವಿರೋಧ ಪಕ್ಷವೇ ಇಲ್ಲ ಎಂದು ಟೀಕಿಸಿದ್ದಾರೆ. ರಾಹುಲ್ ಗಾಂಧಿ ಮತ್ತು ನರೇಂದ್ರ ಮೋದಿ ನಡುವೆ ಹೋಲಿಸಲು ಯಾವುದೇ ಕಾರಣಗಳಿಲ್ಲ ಎಂಬುದು ಜನರಿಗೂ ತುಂಬಾ ಸ್ಪಷ್ಟವಾಗಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ.

ಮುಂದಿನ 25 ವರ್ಷಗಳು ಭಾರತಕ್ಕೆ ಬಹಳ ಉತ್ತಮವಾಗಿರುತ್ತದೆ. ಉನ್ನತ ಶಿಕ್ಷಣಕ್ಕಾಗಿ ಹೊರರಾಜ್ಯಗಳಿಗೆ ಹೋಗಿರುವ ಬಹಳಷ್ಟು ಯುವಕರು ಇದೀಗ ಭಾರತದಲ್ಲಿ ಇರುವ ಅವಕಾಶಗಳನ್ನು ಗಮನದಲ್ಲಿಟ್ಟುಕೊಂಡು ಸ್ವಇಚ್ಛೆಯಿಂದ ನಮ್ಮ ದೇಶಕ್ಕೆ ಮರಳುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!