AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಮಿಲಿಟರಿ ಸನ್ನದ್ಧತೆ ಪರಿಶೀಲನಾ ಸಭೆ ನಡೆಸಿದ ಪ್ರಧಾನಿ ಮೋದಿ; ಪ್ರಮುಖ ವಿಷಯಗಳ ಚರ್ಚೆ

ಪಂಚರಾಜ್ಯಗಳಲ್ಲಿ ನಾಲ್ಕು ರಾಜ್ಯಗಳಲ್ಲಿ ಗೆಲುವು ಸಿಕ್ಕ ಬೆನ್ನಲ್ಲ ಗುಜರಾತ್​ಗೆ ತೆರಳಿ ಅಲ್ಲಿ ರೋಡ್ ಶೋ ನಡೆಸಿದ್ದ ಪ್ರಧಾನಿ ಮೋದಿ ಎರಡು ದಿನ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ಅಲ್ಲಿಂದ ವಾಪಸ್​ ಬರುತ್ತಿದ್ದಂತೆ ಈ ಸಭೆ ನಡೆಸಿದ್ದಾರೆ.

ಭಾರತದಲ್ಲಿ ಮಿಲಿಟರಿ ಸನ್ನದ್ಧತೆ ಪರಿಶೀಲನಾ ಸಭೆ ನಡೆಸಿದ ಪ್ರಧಾನಿ ಮೋದಿ; ಪ್ರಮುಖ ವಿಷಯಗಳ ಚರ್ಚೆ
ಪ್ರಧಾನಿ ಮೋದಿ ಸಭೆ
TV9 Web
| Edited By: |

Updated on: Mar 13, 2022 | 1:27 PM

Share

ಭಾರತದ ಮಿಲಿಟರಿ ಸನ್ನದ್ಧತೆ, ಭದ್ರತಾ ಪರಿಶೀಲನೆ ಸಂಬಂಧ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಉಕ್ರೇನ್​ನಲ್ಲಿ ಯುದ್ಧ ಮುಂದುವರಿದಿರುವ ಹಿನ್ನೆಲೆಯಲ್ಲಿ ಜಾಗತಿಕವಾಗಿ ಯಾವ ರೀತಿಯ ಸನ್ನಿವೇಶ ಇದೆ ಎಂಬ ಬಗ್ಗೆಯೂ ಪ್ರಸ್ತುತ ಸಭೆಯಲ್ಲಿ ಚರ್ಚೆ ನಡೆದಿದೆ ಎಂದು ಹೇಳಲಾಗಿದೆ. ರಷ್ಯಾ-ಉಕ್ರೇನ್​ ಯುದ್ಧ ಶುರುವಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ಹಲವಾರು ಉನ್ನತ ಸಭೆಗಳನ್ನು ನಡೆಸಿದ್ದಾರೆ. ಅಲ್ಲದೆ, ರಷ್ಯಾ ಮತ್ತು ಉಕ್ರೇನ್​ ಅಧ್ಯಕ್ಷರೊಂದಿಗೆ ಪ್ರತ್ಯೇಕವಾಗಿ ಚರ್ಚಿಸಿ, ಅಲ್ಲಿನ ಸಂದರ್ಭವನ್ನೂ ಕೇಳಿದ್ದಾರೆ.

ರಷ್ಯಾ ಉಕ್ರೇನ್​ ಮೇಲೆ ಯುದ್ಧ ಸಾರಿದಾಗಿನಿಂದಲೂ ಉಕ್ರೇನ್​ನಲ್ಲಿದ್ದ ಭಾರತದ ವಿದ್ಯಾರ್ಥಿಗಳನ್ನು ಕರೆತರಲು ಕೇಂದ್ರ ಸರ್ಕಾರ ಅವಿರತವಾಗಿ ಶ್ರಮಿಸಿದೆ. ಆಪರೇಶನ್​ ಗಂಗಾ ಮೂಲಕ ಉಕ್ರೇನ್​ ನೆರೆ ರಾಷ್ಟ್ರಗಳಿಂದ ವಿಮಾನ ವ್ಯವಸ್ಥೆ ಮಾಡಿ ಅವರನ್ನೆಲ್ಲ ತಾಯ್ನಾಡಿಗೆ ಕರೆದುಕೊಂಡು ಬಂದಿದೆ. ಈ ಆಪರೇಶನ್ ಗಂಗಾ ಪರಿಣಾಮಕಾರಿಯಾಗಿ ನಡೆಯಲು ಪ್ರಧಾನಿ ಮೋದಿಯವರು ನಾಲ್ವರು ಸಚಿವರನ್ನು ಉಕ್ರೇನ್​ನ ನಾಲ್ಕು ಗಡಿ ರಾಷ್ಟ್ರಗಳಿಗೆ ಕಳಿಸಿದ್ದರು. ಒಟ್ಟಿಲ್ಲಿ ಯಶಸ್ವಿಯಾಗಿ ಭಾರತೀಯ ವಿದ್ಯಾರ್ಥಿಗಳ ಸ್ಥಳಾಂತರ ಕಾರ್ಯ ನಡೆದಿದೆ.

ಹೀಗೆ ಯುದ್ಧಪೀಡಿತ ನೆಲದಿಂದ ಭಾರತೀಯರನ್ನು ರಕ್ಷಣೆ ಮಾಡುವ ಸಲುವಾಗಿ ಯೋಜನೆಗಳನ್ನು ರೂಪಿಸಲು ಪ್ರಧಾನಿ ಮೋದಿ ಹಲವಾರು ಸಭೆ ನಡೆಸಿದ್ದರು. ಪಂಚರಾಜ್ಯಗಳಲ್ಲಿ ನಾಲ್ಕು ರಾಜ್ಯಗಳಲ್ಲಿ ಗೆಲುವು ಸಿಕ್ಕ ಬೆನ್ನಲ್ಲ ಗುಜರಾತ್​ಗೆ ತೆರಳಿ ಅಲ್ಲಿ ರೋಡ್ ಶೋ ನಡೆಸಿದ್ದ ಪ್ರಧಾನಿ ಮೋದಿ ಎರಡು ದಿನ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ತಮ್ಮ ತಾಯಿ ಹೀರಾಬೆನ್​ರನ್ನು ಭೇಟಿಯಾಗಿ ಅವರೊಂದಿಗೆ ಊಟ ಮಾಡಿ, ಆಶೀರ್ವಾದ ಪಡೆದು ದೆಹಲಿಗೆ ವಾಪಸ್ ಬಂದ ಬೆನ್ನಲ್ಲೇ ಈ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಇಂದಿನ ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್​, ವಿದೇಶಾಂಗ ವ್ಯವಹಾರಗಳ ಇಲಾಖೆ ಸಚಿವ ಎಸ್​.ಜೈಶಂಕರ್​, ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್​, ವಿದೇಶಾಂಗ ಇಲಾಖೆ ಸಚಿವ ಎಸ್​.ಜೈಶಂಕರ್​, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​, ವಿದೇಶಾಂಗ ಇಲಾಖೆ ಕಾರ್ಯದರ್ಶಿ ಹರ್ಷ ವರ್ಧನ್ ಶ್ರಿಂಗ್ಲಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್​ ಇತರರು ಇದ್ದರು.

ಇದನ್ನೂ ಓದಿ: BSNL: ಒಂದಲ್ಲ ಎರಡಲ್ಲ ಬರೋಬ್ಬರಿ 1000GB ಡೇಟಾ: ಬಿಎಸ್ಎಲ್​ನಿಂದ ಹೀಗೊಂದು ಬಂಪರ್ ಆಫರ್

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್