AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದಾನಿ ವ್ಯಾಪಾರ ಸಾಮ್ರಾಜ್ಯಕ್ಕೆ ಮೋದಿ ಸಹಾಯ ಮಾಡುತ್ತಿದ್ದಾರೆ: ರಾಹುಲ್ ಗಾಂಧಿ ಆರೋಪ

"2014 ಮತ್ತು 2022 ರ ನಡುವೆ ಅದಾನಿ ನಿವ್ವಳ ಮೌಲ್ಯವು $ 8 ಶತಕೋಟಿಯಿಂದ 140 ಶತಕೋಟಿಗೆ ಹೇಗೆ ಹೆಚ್ಚಾಯಿತು ಎಂದು ಜನರು ನನ್ನನ್ನು ಕೇಳಿದರು. 2014 ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗ ಉದ್ಯಮಿ ಅದಾನಿ 600 ನೇ ಸ್ಥಾನದಿಂದ ಎರಡನೇ ಸ್ಥಾನಕ್ಕೆ ಹೋದರು ಎಂದು ರಾಹುಲ್ ಹೇಳಿದ್ದಾರೆ.

ಅದಾನಿ ವ್ಯಾಪಾರ ಸಾಮ್ರಾಜ್ಯಕ್ಕೆ ಮೋದಿ ಸಹಾಯ ಮಾಡುತ್ತಿದ್ದಾರೆ: ರಾಹುಲ್ ಗಾಂಧಿ ಆರೋಪ
ಲೋಕಸಭೆಯಲ್ಲಿ ರಾಹುಲ್ ಗಾಂಧಿ
ರಶ್ಮಿ ಕಲ್ಲಕಟ್ಟ
|

Updated on:Feb 07, 2023 | 6:10 PM

Share

ದೆಹಲಿ: ಬಿಲಿಯನೇರ್ ಗೌತಮ್ ಅದಾನಿಗೆ (Gautam Adani) ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ರಾಹುಲ್ ಗಾಂಧಿ (Rahul Gandhi) ಇಂದು ಸಂಸತ್ತಿನಲ್ಲಿ ಹಲವಾರು ಆರೋಪಗಳನ್ನು ಮಾಡಿದ್ದಾರೆ. ಯುಎಸ್ ಇನ್ವೆಸ್ಟ್‌ಮೆಂಟ್ ಗ್ರೂಪ್ ಹಿಂಡೆನ್‌ಬರ್ಗ್ ರಿಸರ್ಚ್ ಗುಂಪಿನಿಂದ ಲೆಕ್ಕಪತ್ರ ವಂಚನೆ ಆರೋಪದ ನಂತರ , ಅದಾನಿ ಅವರ ಕಂಪನಿಗಳು ಸುಮಾರು $ 120 ಬಿಲಿಯನ್ ಮೌಲ್ಯವನ್ನು ಕಳೆದುಕೊಂಡಿದೆ. ವಿವಿಧ ಕ್ಷೇತ್ರಗಳಲ್ಲಿ ಪ್ರಧಾನಿ ಮೋದಿ ಅವರು ಗೌತಮ್ ಅದಾನಿ ಅವರ ವ್ಯಾಪಾರ ಸಾಮ್ರಾಜ್ಯಕ್ಕೆ ಸಹಾಯ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ಆರೋಪಿಸಿದ್ದು ಬಿಜೆಪಿ ಪ್ರತ್ಯಾರೋಪಗಳನ್ನು ಮಾಡಿದೆ.”ಅದಾನಿ ಜೀ ಅವರು ಸೌರಶಕ್ತಿ, ಪವನ ಶಕ್ತಿಯಲ್ಲಿ ವ್ಯವಹಾರ ಮಾಡಿದ್ದು ಅವರು ಎಂದಿಗೂ ವಿಫಲರಾಗುವುದಿಲ್ಲ. ಅದಾನಿ ಅನೇಕ ಕ್ಷೇತ್ರಗಳಲ್ಲಿ ಅಂತಹ ಯಶಸ್ಸನ್ನು ಹೇಗೆ ಪಡೆದರು, ಪ್ರಧಾನಿಯೊಂದಿಗೆ ಅವರ ಸಂಬಂಧವೇನು ಎಂದು ಭಾರತ್ ಜೋಡೋ ಯಾತ್ರೆಯಲ್ಲಿ ಜನರು ನನ್ನಲ್ಲಿ ಕೇಳಿದ್ದರು ಎಂದು ರಾಹುಲ್ ಗಾಂಧಿ ಲೋಕಸಭೆಯಲ್ಲಿ ಹೇಳಿದ್ದಾರೆ. ಪ್ರಧಾನಿ ಮೋದಿ ಭೇಟಿ ನೀಡಿದ ದೇಶಗಳಲ್ಲಿ ಅದಾನಿ ಗುತ್ತಿಗೆ ಪಡೆದಿದ್ದಾರೆ ಎಂದು ರಾಹುಲ್ ಆರೋಪಿಸಿದ್ದಾರೆ.

“2014 ಮತ್ತು 2022 ರ ನಡುವೆ ಅದಾನಿ ನಿವ್ವಳ ಮೌಲ್ಯವು $ 8 ಶತಕೋಟಿಯಿಂದ 140 ಶತಕೋಟಿಗೆ ಹೇಗೆ ಹೆಚ್ಚಾಯಿತು ಎಂದು ಜನರು ನನ್ನನ್ನು ಕೇಳಿದರು. 2014 ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗ ಉದ್ಯಮಿ ಅದಾನಿ 600 ನೇ ಸ್ಥಾನದಿಂದ ಎರಡನೇ ಸ್ಥಾನಕ್ಕೆ ಹೋದರು ಎಂದು ರಾಹುಲ್ ಹೇಳಿದ್ದಾರೆ.

ವ್ಯಥಾರೋಪ ಮಾಡಬೇಡಿ, ಪುರಾವೆ ನೀಡಿ ಎಂದು ಕಾನೂನು ಸಚಿವ ಕಿರಣ್ ರಿಜಿಜು ರಾಹುಲ್ ಗೆ ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ನಾವು ಯಾರ ಬಿ ಟೀಮ್ ಅಲ್ಲ, ನಾವು ಯಾರ ಮುಂದೆಯೂ ತಲೆಬಾಗಲ್ಲ: ಅಮಿತ್ ಶಾಗೆ ತಿಪ್ರಾ ಮೋಥಾ ಮುಖ್ಯಸ್ಥರ ಪ್ರತಿಕ್ರಿಯೆ

ಅದಾನಿ ಗ್ರೂಪ್ ಹಿಂಡೆನ್‌ಬರ್ಗ್ ವರದಿಯನ್ನು “ಆಯ್ದ ತಪ್ಪು ಮಾಹಿತಿಯ ದುರುದ್ದೇಶಪೂರಿತ ಸಂಯೋಜನೆ ಮತ್ತು ಭಾರತದ ಅತ್ಯುನ್ನತ ನ್ಯಾಯಾಲಯಗಳಿಂದ ಪರೀಕ್ಷಿಸಲ್ಪಟ್ಟ ಮತ್ತು ತಿರಸ್ಕರಿಸಲ್ಪಟ್ಟ ಹಳೆಯ, ಆಧಾರರಹಿತ ಮತ್ತು ಅಪಖ್ಯಾತಿಗೊಳಗಾದ ಆರೋಪಗಳು” ಎಂದು ಕರೆದಿದೆ.

ಸಾರ್ವಜನಿಕ ವಲಯದ ಕಂಪನಿಗಳಾದ ಎಲ್‌ಐಸಿ (ಲೈಫ್ ಇನ್ಶುರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ) ಮತ್ತು ಎಸ್‌ಬಿಐ (ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ) ಹೂಡಿಕೆ ಮಾಡಿರುವುದರಿಂದ ಅದಾನಿ ಗ್ರೂಪ್ ಷೇರುಗಳ ಇತ್ತೀಚಿನ ಕರಗುವಿಕೆ ಸಾರ್ವಜನಿಕ ಹಣವನ್ನು ಒಳಗೊಂಡಿರುತ್ತದೆ ಎಂದು ವಿರೋಧ ಪಕ್ಷಗಳು ಆರೋಪಿಸುತ್ತವೆ. ಆದರೆ ಅದಾನಿ ಸಮೂಹವು ನಾವು ಎಲ್ಲ ಕಾನೂನುಗಳನ್ನು ಅನುಸರಿಸಿದ್ದೇವೆ ಎಂದಿದೆ. ಹಿಂಡೆನ್‌ಬರ್ಗ್-ಅದಾನಿ ವಿವಾದಕ್ಕೆ ಸಂಬಂಧಿಸಿದ ಪ್ರತಿಭಟನೆಗಳಿಂದಾಗಿ ಸಂಸತ್ತಿನ ಎರಡೂ ಸದನಗಳಲ್ಲಿ ಪದೇ ಪದೇ ಕಲಾಪಕ್ಕೆ ಅಡ್ಡಿಯಾಗಿದೆ.

“ಪುನರುತ್ಥಾನ ಗುಜರಾತ್” (resurgent Gujarat) ಎಂಬ ಕಲ್ಪನೆಯನ್ನು ನಿರ್ಮಿಸಲು ಅದಾನಿ ಪ್ರಧಾನಿ ಮೋದಿಯವರಿಗೆ ಸಹಾಯ ಮಾಡಿದರು ನಂತರ ಅವರು ದೇಶದ ಪ್ರಧಾನ ಮಂತ್ರಿಯಾಗಿ ಉನ್ನತೀಕರಣದಿಂದ ಲಾಭ ಪಡೆದರು ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಹಲವು ವರ್ಷಗಳ ಹಿಂದೆ ನರೇಂದ್ರ ಮೋದಿ ಗುಜರಾತ್‌ನ ಮುಖ್ಯಮಂತ್ರಿಯಾಗಿದ್ದಾಗ ಸಂಬಂಧಗಳು ಪ್ರಾರಂಭವಾದವು .ಒಬ್ಬ ವ್ಯಕ್ತಿ ಪ್ರಧಾನಿ ಮೋದಿಯ ಭುಜಕ್ಕೆ ಭುಜದಿಂದ ನಿಂತರು, ಅವರು ಪ್ರಧಾನಿಗೆ ನಿಷ್ಠರಾಗಿದ್ದರು ಮತ್ತು ‘ಪುನರುತ್ಥಾನ ಗುಜರಾತ್’ ಕಲ್ಪನೆಯನ್ನು ನಿರ್ಮಿಸಲು ಮೋದಿಗೆ ಸಹಾಯ ಮಾಡಿದರು. 2014 ರಲ್ಲಿ ಪ್ರಧಾನಿ ಮೋದಿ ರಾಷ್ಟ್ರ ರಾಜಧಾನಿ ತಲುಪಿದಾಗ ನಿಜವಾದ ಮ್ಯಾಜಿಕ್ ಪ್ರಾರಂಭವಾಯಿತು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ತಮ್ಮ ಭಾಷಣದ ಸಮಯದಲ್ಲಿ, ಅದಾನಿ ವಿಚಾರಕ್ಕೆ ಸಂಬಂಧಿಸಿದಂತೆ ರಾಹುಲ್ ಪ್ರಧಾನಿಯವರಲ್ಲಿ ಕೆಲವು ಪ್ರಶ್ನೆಗಳನ್ನು ಕೇಳಿದ್ದಾರೆ.

ಲೋಕಸಭೆಯಲ್ಲಿ ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ ಕೇಳಿದ ನಾಲ್ಕು ಪ್ರಶ್ನೆಗಳು ಇಲ್ಲಿವೆ:

  • ನೀವು ಮತ್ತು ಅದಾನಿ ಎಷ್ಟು ಬಾರಿ ಒಟ್ಟಿಗೆ ವಿದೇಶ ಪ್ರವಾಸ ಮಾಡಿದ್ದೀರಿ?
  • ನಿಮ್ಮ ವಿದೇಶಿ ಪ್ರವಾಸಗಳಲ್ಲಿ ಅದಾನಿ ನಿಮ್ಮೊಂದಿಗೆ ಎಷ್ಟು ಬಾರಿ ಜತೆಯಾಗಿದ್ದಾರೆ?
  • ನಿಮ್ಮ ಫಾರಿನ್ ಟ್ರಿಪ್ ಆದ ತಕ್ಷಣ ಅದಾನಿ ಆ ದೇಶಕ್ಕೆ ಎಷ್ಟು ಬಾರಿ ಹೋಗಿ ಒಪ್ಪಂದ ಮಾಡಿಕೊಂಡಿದ್ದಾರೆ?
  • ಚುನಾವಣಾ ಬಾಂಡ್‌ಗಳಲ್ಲಿ ಬಿಜೆಪಿಗೆ ಅದಾನಿ ನೀಡಿದ ಹಣವೆಷ್ಟು?

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:28 pm, Tue, 7 February 23

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!