AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

“ರಾಜಕೀಯದಲ್ಲಿ ಪೂರ್ಣವಿರಾಮವಿಲ್ಲ”: ನಿವೃತ್ತಿ ಹೊಂದುತ್ತಿರುವ ಸಂಸದರಿಗೆ ಧನ್ಯವಾದ ಹೇಳಿದ ಪ್ರಧಾನಿ ಮೋದಿ

ರಾಜ್ಯಸಭೆಯ 37 ಸದಸ್ಯರ ನಿವೃತ್ತಿಗೆ ಪ್ರಧಾನಿ ಮೋದಿ ಭಾವಪೂರ್ಣ ವಿದಾಯ ಹೇಳಿದರು. ಅವರ ಸೇವೆಯನ್ನು ಶ್ಲಾಘಿಸಿ, ಅನುಭವದ ಮಹತ್ವವನ್ನು ಒತ್ತಿಹೇಳಿದರು. ಸಂಸತ್ತನ್ನು "ಮುಕ್ತ ವಿಶ್ವವಿದ್ಯಾಲಯ" ಎಂದ ಮೋದಿ, ನಿವೃತ್ತ ಸದಸ್ಯರು ದೇಶದ ನೀತಿ ನಿರೂಪಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಮತ್ತು ಸದನದ ಆಚೆಯೂ ಸಮಾಜಕ್ಕೆ ಕೊಡುಗೆ ನೀಡುತ್ತಾರೆ ಎಂದು ತಿಳಿಸಿದರು. ಇದು ಹೊಸ ಸದಸ್ಯರಿಗೆ ಮಾರ್ಗದರ್ಶನ ನೀಡುತ್ತದೆ.

ರಾಜಕೀಯದಲ್ಲಿ ಪೂರ್ಣವಿರಾಮವಿಲ್ಲ: ನಿವೃತ್ತಿ ಹೊಂದುತ್ತಿರುವ ಸಂಸದರಿಗೆ ಧನ್ಯವಾದ ಹೇಳಿದ ಪ್ರಧಾನಿ ಮೋದಿ
ನರೇಂದ್ರ ಮೋದಿ
ಅಕ್ಷಯ್​ ಪಲ್ಲಮಜಲು​​
|

Updated on:Mar 18, 2026 | 11:50 AM

Share

ದೆಹಲಿ, ಮಾ.18: ರಾಜ್ಯಸಭೆಯ 37 ಸದಸ್ಯರ ನಿವೃತ್ತಿಯ ಹಿನ್ನೆಲೆಯಲ್ಲಿ ಸದನವು ಇಂದು ಭಾವುಕ ಕ್ಷಣಕ್ಕೆ ಸಾಕ್ಷಿಯಾಗಿತ್ತು. ನಿವೃತ್ತರಾಗುತ್ತಿರುವ ಸದಸ್ಯರ ಸೇವೆಯನ್ನು ಶ್ಲಾಘಿಸಿದ (Rajya Sabha farewell) ಪ್ರಧಾನಿ ಮೋದಿ, ಸದನಕ್ಕೆ ಅವರು ನೀಡಿದ ಕೊಡುಗೆಗಳು ಮುಂದಿನ ಪೀಳಿಗೆಗೆ ಮಾರ್ಗದರ್ಶಿಯಾಗಿರುತ್ತವೆ ಎಂದು ತಿಳಿಸಿದರು. “ಜ್ಞಾನಕ್ಕಿಂತ ಅನುಭವಕ್ಕೆ ಶಕ್ತಿ ಹೆಚ್ಚು. ಶೈಕ್ಷಣಿಕ ಜ್ಞಾನವು ಸೀಮಿತವಾಗಿರಬಹುದು, ಆದರೆ ಸದಸ್ಯರು ಇಲ್ಲಿ ಕಳೆದ ಸಮಯ ಮತ್ತು ಪಡೆದ ಅನುಭವವು ದೇಶದ ನೀತಿ ನಿರೂಪಣೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ” ಎಂದು ಪ್ರಧಾನಿ ಹೇಳಿದರು.

ರಾಜ್ಯಸಭೆಯು ಹಿರಿಯರ ಸದನವಾಗಿದ್ದು, ಇಲ್ಲಿನ ಚರ್ಚೆಗಳು ಗುಣಮಟ್ಟದಿಂದ ಕೂಡಿರಬೇಕು. ನಿವೃತ್ತ ಸದಸ್ಯರು ತಮ್ಮ ಕ್ಷೇತ್ರಗಳಲ್ಲಿ ಈ ಅನುಭವವನ್ನು ಜನರಿಗೆ ತಲುಪಿಸಬೇಕು ಎಂದು ಅವರು ಆಶಿಸಿದರು. ರಾಜಕೀಯ ಭಿನ್ನಾಭಿಪ್ರಾಯಗಳ ನಡುವೆಯೂ ದೇಶದ ಹಿತದೃಷ್ಟಿಯಿಂದ ಸದಸ್ಯರು ಒಟ್ಟಾಗಿ ಕೆಲಸ ಮಾಡಿದ್ದನ್ನು ಪ್ರಧಾನಿ ನೆನೆದರು. ಇನ್ನು ಈ ಸಭೆಯಲ್ಲಿ ನಿವೃತ್ತರಾಗುತ್ತಿರುವ ಸದಸ್ಯರಲ್ಲಿ ವಿವಿಧ ಪಕ್ಷಗಳ ಪ್ರಮುಖ ನಾಯಕರು ಸೇರಿದ್ದಾರೆ.ನಿವೃತ್ತ ಸದಸ್ಯರಿಗೆ ನೆನಪಿನ ಸ್ಮರಣಿಕೆಗಳನ್ನು ನೀಡಿ ಗೌರವಿಸಲಾಯಿತು.

ಇದನ್ನೂ ಓದಿ: ಬಂಗಾಳದಲ್ಲಿ ಟಿಎಂಸಿಯಿಂದ 291 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಮತ್ತೆ ಮಮತಾ ಬ್ಯಾನರ್ಜಿ- ಸುವೇಂದು ಅಧಿಕಾರಿ ಮುಖಾಮುಖಿ

ಪಕ್ಷಪಾತಗಳನ್ನು ಮೀರಿ ಮೇಲೇರಲು ಇದೊಂದು ಸೂಕ್ತ ಕ್ಷಣ ಎಂದು ಕರೆದ ಅವರು, ಹೊಸ ಸಂಸದರು ಹಿರಿಯ ಸಹೋದ್ಯೋಗಿಗಳಿಂದ ಕಲಿಯಬೇಕೆಂದು ಒತ್ತಾಯಿಸಿದರು. ನಿವೃತ್ತರಾಗುವ ಸದಸ್ಯರು ಸದನದ ಆಚೆಗೆ ವಿವಿಧ ಸಾಮರ್ಥ್ಯಗಳಲ್ಲಿ ಸಮಾಜಕ್ಕೆ ಕೊಡುಗೆ ನೀಡುವುದನ್ನು ಮುಂದುವರಿಸುತ್ತಾರೆ ಎಂದು ಅವರು ಹೇಳಿದರು.

“ರಾಜಕೀಯದಲ್ಲಿ ಪೂರ್ಣವಿರಾಮವಿಲ್ಲ” ಎಂದು ಹೇಳಿ ಸಂಸತ್ತನ್ನು “ಮುಕ್ತ ವಿಶ್ವವಿದ್ಯಾಲಯ” ಎಂದು ಬಣ್ಣಿಸಿದರು. ಪಕ್ಷಪಾತಗಳನ್ನು ಮೀರಿ ಮೇಲೇರಲು ಇದೊಂದು ಸೂಕ್ತ ಕ್ಷಣ ಎಂದು ಕರೆದ ಅವರು, ಹೊಸ ಸಂಸದರು ಹಿರಿಯ ಸಹೋದ್ಯೋಗಿಗಳಿಂದ ಕಲಿಯಬೇಕೆಂದು ಒತ್ತಾಯಿಸಿದರು. ನಿವೃತ್ತರಾಗುವ ಸದಸ್ಯರು ಸದನದ ಆಚೆಗೆ ವಿವಿಧ ಸಾಮರ್ಥ್ಯಗಳಲ್ಲಿ ಸಮಾಜಕ್ಕೆ ಕೊಡುಗೆ ನೀಡುವುದನ್ನು ಮುಂದುವರಿಸುತ್ತಾರೆ ಎಂದು ಅವರು ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:48 am, Wed, 18 March 26

Follow Us