AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi Ayodhya Visit: ಇಂದು ಸಂಜೆ ಅಯೋಧ್ಯೆಗೆ ಮೋದಿ ಭೇಟಿ, ರಾಮಲಲ್ಲಾನ ದರ್ಶನ, ರೋಡ್ ಶೋ

ಪ್ರಧಾನಿ ನರೇಂದ್ರ ಮೋದಿ ಇಂದು ಅಯೋಧ್ಯೆಗೆ ಭೇಟಿ ನೀಡಲಿದ್ದು, ರೋಡ್​ ಶೋ ನಡೆಸಲಿದ್ದಾರೆ. ರಾಮಲಲ್ಲಾನ ದರ್ಶನ ಪಡೆದು, ಪೂಜೆ ಮಾಡಿ ಬಳಿಕ ರೋಡ್​ ಶೋ ಆರಂಭಿಸಲಿದ್ದಾರೆ. ಅಯೋಧ್ಯೆಯಲ್ಲಿ 2 ಕಿಲೋಮೀಟರ್ ರೋಡ್ ಶೋ ನಡೆಯಲಿದ್ದು, ಅದಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ

PM Modi Ayodhya Visit: ಇಂದು ಸಂಜೆ ಅಯೋಧ್ಯೆಗೆ ಮೋದಿ ಭೇಟಿ, ರಾಮಲಲ್ಲಾನ ದರ್ಶನ, ರೋಡ್ ಶೋ
ನರೇಂದ್ರ ಮೋದಿImage Credit source: India TV
Follow us
ನಯನಾ ರಾಜೀವ್
|

Updated on: May 05, 2024 | 10:05 AM

ಲೋಕಸಭಾ ಚುನಾವಣೆ(Lok Sabha Election) ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ಇಂದು ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ. ರಾಮಲಲ್ಲಾ(Ram Lalla) ನ ದರ್ಶನ ಪಡೆದು ಬಳಿಕ ರೋಡ್​ ಶೋ(Road Show) ನಡೆಸಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅಯೋಧ್ಯೆಯಲ್ಲಿ 2 ಕಿಲೋಮೀಟರ್ ರೋಡ್ ಶೋ ನಡೆಯಲಿದ್ದು, ಅದಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ರಾಮಲಲ್ಲಾ ದರ್ಶನ ಮತ್ತು ಪೂಜೆಯ ಬಳಿಕ ರೋಡ್​ ಶೋ ಆರಂಭಗೊಳ್ಳಲಿದೆ. ಧಾನಿಯವರ ಅಯೋಧ್ಯೆ ಭೇಟಿಗೆ ಸಂಬಂಧಿಸಿದಂತೆ ವಿಮಾನ ನಿಲ್ದಾಣದ ನಿರ್ಗಮನ ಮಾರ್ಗಗಳಲ್ಲಿ ಬ್ಯಾರಿಕೇಡ್​ ಅಳವಡಿಸಲಾಗಿದೆ.

ಮೂರನೇ ಹಂತದ ಲೋಕಸಭೆ ಚುನಾವಣೆಗೆ ಮುನ್ನ ಇಟಾವಾ ಮತ್ತು ಧೌರಾಹರಾದಲ್ಲಿ ಚುನಾವಣಾ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದಾದ ಬಳಿಕ ಮೋದಿ ಅವರು ಅಯೋಧ್ಯೆಯ ರಾಮ ಮಂದಿರಕ್ಕೆ ಭೇಟಿ ನೀಡಲಿದ್ದು, ಮೊದಲು ಅಲ್ಲಿ ಮೆಗಾ ರೋಡ್ ಶೋ ನಡೆಸಲಿದ್ದಾರೆ.

ಮಧ್ಯಾಹ್ನ 2.45 ರ ಸುಮಾರಿಗೆ ಇಟಾವಾದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ, ನಂತರ ಅವರು ಧೌರಾಹರಾಗೆ ತೆರಳುತ್ತಾರೆ, ಅಲ್ಲಿ ಅವರು ಸಂಜೆ 4.45 ರ ಸುಮಾರಿಗೆ ಮತ್ತೊಂದು ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಮತ್ತಷ್ಟು ಓದಿ: TV9 Interview with PM Modi: ಕರ್ನಾಟಕ ಕಾಂಗ್ರೆಸ್​ ಸರ್ಕಾರದ ಗ್ಯಾರಂಟಿಗಳ ಬಗ್ಗೆ ಮೋದಿ ವಾಗ್ದಾಳಿ

ಸಂಜೆ 7 ಗಂಟೆಗೆ, ಪ್ರಧಾನಿ ಅವರು ಈ ವರ್ಷದ ಜನವರಿಯಲ್ಲಿ ಉದ್ಘಾಟಿಸಿದ ಅಯೋಧ್ಯೆಯ ರಾಮ ಮಂದಿರದಲ್ಲಿ ಪೂಜೆ ಮತ್ತು ದರ್ಶನ ಪಡೆಯಲಿದ್ದಾರೆ. ರಾತ್ರಿ 7:15 ರ ಸುಮಾರಿಗೆ, ಮೋದಿ ನಗರದಲ್ಲಿ ಮೆಗಾ ರೋಡ್‌ಶೋ ನಡೆಸಲಿದ್ದಾರೆ, ಇದು ಭಾರಿ ಜನಸಮೂಹವನ್ನು ಸೆಳೆಯುವ ನಿರೀಕ್ಷೆಯಿದೆ.

ಸಂಭಾಲ್, ಹತ್ರಾಸ್, ಆಗ್ರಾ, ಫತೇಪುರ್ ಸಿಕ್ರಿ, ಫಿರೋಜಾಬಾದ್, ಮೈನ್‌ಪುರಿ, ಎತಾಹ್, ಬದೌನ್, ಬರೇಲಿ ಮತ್ತು ಅಒನ್ಲಾ ಸೇರಿದಂತೆ ಹತ್ತು ಕ್ಷೇತ್ರಗಳಿಗೆ ಮೇ 7 ರಂದು ನಡೆಯಲಿರುವ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನಕ್ಕೆ ಮುಂಚಿತವಾಗಿ ಮೋದಿ ಭೇಟಿ ನೀಡಲಿದ್ದಾರೆ.

70 ವರ್ಷ ಮೇಲ್ಪಟ್ಟ ವೃದ್ಧರಿಗೆ ಚಿಕಿತ್ಸೆಗಾಗಿ 5 ಲಕ್ಷ ರೂ. ಕಾನ್ಪುರದಲ್ಲಿ ಮಾತನಾಡಿದ ಪ್ರಧಾನಿ, ಕಳೆದ 10 ವರ್ಷಗಳಲ್ಲಿ ನಾವು ಬಿಹಾರದಲ್ಲಿ 40 ಲಕ್ಷ ಬಡವರಿಗೆ ಶಾಶ್ವತ ಮನೆಗಳನ್ನು ನೀಡಿದ್ದೇವೆ. ಸುಮಾರು 1.25 ಕೋಟಿ ಗ್ಯಾಸ್ ಸಂಪರ್ಕ ನೀಡಲಾಗಿದೆ. ಇಂದು ಬಡವರು ಉಚಿತ ಪಡಿತರ, ಉಚಿತ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಈಗ ಮೋದಿಯವರು ಕೂಡ ನಿಮ್ಮ ಕುಟುಂಬದಲ್ಲಿ 70 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯರಿದ್ದರೆ ಅವರ ಮಕ್ಕಳ ಅನಾರೋಗ್ಯದ ಚಿಕಿತ್ಸೆಯ ವೆಚ್ಚವನ್ನು ಭರಿಸಬೇಕಾಗಿಲ್ಲ ಎಂದು ನಿರ್ಧರಿಸಿದ್ದಾರೆ. ಈಗ ಈ ವೆಚ್ಚವನ್ನು ದೆಹಲಿಯಲ್ಲಿರುವ ನಿಮ್ಮ ಮಗ ಭರಿಸುತ್ತಾನೆ. ಪ್ರತಿಯೊಬ್ಬ ವೃದ್ಧರಿಗೂ 5 ಲಕ್ಷದವರೆಗೆ ಉಚಿತ ಚಿಕಿತ್ಸೆ ದೊರೆಯಲಿದೆ ಎಂದು ಹೇಳಿದರು.

ರಾಮ ಮಂದಿರ ಉದ್ಘಾಟನೆಯಾಗಿದ್ದು ಯಾವಾಗ? ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಿಸಲಾದ ಬೃಹತ್​ ರಾಮ ಮಂದಿರವನ್ನು ಜನವರಿ 22ರಂದು ಉದ್ಘಾಟಿಸಲಾಯಿತು. ರಾಮಲಲ್ಲಾನನ್ನು ಸ್ಥಾಪಿಸಲಾಯಿತು. ಪ್ರಧಾನಿ ನರೇಂದ್ರ ಮೋದಿಯಲ್ಲದೆ ದೇಶದ ವಿವಿಧ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹಿರಿತೆರೆ-ಕಿರುತೆರೆನ ಹೇಗೆ ಬ್ಯಾಲೆನ್ಸ್ ಮಾಡ್ತಾರೆ ನಿಶಾ ರವಿಕೃಷ್ಣನ್?
ಹಿರಿತೆರೆ-ಕಿರುತೆರೆನ ಹೇಗೆ ಬ್ಯಾಲೆನ್ಸ್ ಮಾಡ್ತಾರೆ ನಿಶಾ ರವಿಕೃಷ್ಣನ್?
VIDEO: 5 ವರ್ಷದ ಪೋರನ ಸ್ಫೋಟಕ ಬ್ಯಾಟಿಂಗ್ ನೀವು ನೋಡಲೇಬೇಕು
VIDEO: 5 ವರ್ಷದ ಪೋರನ ಸ್ಫೋಟಕ ಬ್ಯಾಟಿಂಗ್ ನೀವು ನೋಡಲೇಬೇಕು
ನಟಿ ಪ್ರೇಮಾ ಈಗಲೂ ಹೇಗೆ ಡ್ಯಾನ್ಸ್ ಮಾಡ್ತಾರೆ ನೋಡಿ; ಇಲ್ಲಿದೆ ವಿಡಿಯೋ
ನಟಿ ಪ್ರೇಮಾ ಈಗಲೂ ಹೇಗೆ ಡ್ಯಾನ್ಸ್ ಮಾಡ್ತಾರೆ ನೋಡಿ; ಇಲ್ಲಿದೆ ವಿಡಿಯೋ
ಹುಲಿಗಳನ್ನು ಕೊಂದ ಅಪರಾಧಿಗಳಿಗೆ ಡಬಲ್ ಶಿಕ್ಷೆಯಾಗಲಿದೆ: ಅರಣ್ಯಾಧಿಕಾರಿ
ಹುಲಿಗಳನ್ನು ಕೊಂದ ಅಪರಾಧಿಗಳಿಗೆ ಡಬಲ್ ಶಿಕ್ಷೆಯಾಗಲಿದೆ: ಅರಣ್ಯಾಧಿಕಾರಿ
VIDEO: ಕೊನೆಯ ಎಸೆತದಲ್ಲಿ ಸಿಕ್ಸ್​... ದಾಖಲೆಯ ರನ್ ಚೇಸ್​..!
VIDEO: ಕೊನೆಯ ಎಸೆತದಲ್ಲಿ ಸಿಕ್ಸ್​... ದಾಖಲೆಯ ರನ್ ಚೇಸ್​..!
ಗರ್ಭವತಿಯಾದ ಹೆಣ್ಣಿನ ಸಂತೋಷ ಕುಟುಂಬಕ್ಕೆ ಸರ್ವಶುಭಮಂಗಳ ಹೇಗೆ?
ಗರ್ಭವತಿಯಾದ ಹೆಣ್ಣಿನ ಸಂತೋಷ ಕುಟುಂಬಕ್ಕೆ ಸರ್ವಶುಭಮಂಗಳ ಹೇಗೆ?
Daily Horoscope: ಈ ರಾಶಿಯವರು ಆತುರದಲ್ಲಿ ಏನನ್ನಾದರೂ ಮಾಡಲು ಹೋಗದಿರಿ
Daily Horoscope: ಈ ರಾಶಿಯವರು ಆತುರದಲ್ಲಿ ಏನನ್ನಾದರೂ ಮಾಡಲು ಹೋಗದಿರಿ
ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ