AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mann Ki Baat: ನಾಳೆ ಮನ್​ ಕೀ ಬಾತ್​ನ ನೂರನೇ ಆವೃತ್ತಿ; ತಮ್ಮದೇ ಮನದ ಮಾತು ಕೇಳಲು ಮೋದಿ ಎಲ್ಲಿರುತ್ತಾರೆ ಗೊತ್ತೇ?

ಧ್ವನಿ ಮುದ್ರೀಕರಿಸಿಕೊಂಡಿರುವ ನೂರನೇ ಸಂಚಿಕೆಯ ಮನ್ ಕೀ ಬಾತ್ ಭಾನುವಾರ ಬೆಳಿಗ್ಗೆ 11 ಗಂಟೆಗೆ ಪ್ರಸಾರವಾಗಲಿದೆ. ಆದರೆ, ಸದ್ಯ ಕರ್ನಾಟಕದಲ್ಲಿ ಚುನಾವಣಾ ಪ್ರಚಾರದಲ್ಲಿ ವ್ಯಸ್ತರಾಗಿರುವ ಮೋದಿ ಭಾನುವಾರವೂ ರಾಜ್ಯದಲ್ಲೇ ಇರಲಿದ್ದಾರೆ. ಅವರು ಮನ್ ಕೀ ಬಾತ್​​ನ ನೂರನೇ ಸಂಚಿಕೆ ಕಾರ್ಯಕ್ರಮ ವೀಕ್ಷಣೆ / ಕೇಳಲು ಎಲ್ಲಿರುತ್ತಾರೆ ಗೊತ್ತೇ?

Mann Ki Baat: ನಾಳೆ ಮನ್​ ಕೀ ಬಾತ್​ನ ನೂರನೇ ಆವೃತ್ತಿ; ತಮ್ಮದೇ ಮನದ ಮಾತು ಕೇಳಲು ಮೋದಿ ಎಲ್ಲಿರುತ್ತಾರೆ ಗೊತ್ತೇ?
Follow us
Ganapathi Sharma
|

Updated on:Apr 29, 2023 | 5:33 PM

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ (Narendra Modi) ಮನ್ ಕೀ ಬಾತ್ (Mann Ki Baat) ಕಾರ್ಯಕ್ರಮದ 100 ನೇ ಸಂಚಿಕೆಯ ಪ್ರಸಾರಕ್ಕಾಗಿ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಈಗಾಗಲೇ ವಿಶೇಷ ಸಿದ್ಧತೆಗಳನ್ನು ನಡೆಸಿದೆ. ಈ ನಿಟ್ಟಿನಲ್ಲಿ ದೆಹಲಿಯಲ್ಲಿ ಬುಧವಾರ ರಾಷ್ಟ್ರೀಯ ಸಮಾವೇಶ ಆಯೋಜಿಸಲಾಗಿತ್ತು. ಇದರಲ್ಲಿ 105 ಜನರನ್ನು ವಿಶೇಷವಾಗಿ ಆಹ್ವಾನಿಸಲಾಗಿದ್ದು, ಅವರ ಸೃಜನಶೀಲ ಮತ್ತು ಸಾಮಾಜಿಕ ಕಾರ್ಯಗಳನ್ನು ಪ್ರಧಾನಿ ಮೋದಿ ತಮ್ಮ ಮನ್​ ಕೀ ಬಾತ್​ನಲ್ಲಿ ಪ್ರಸ್ತಾಪಿಸಿದ್ದಾರೆ. ನೂರನೇ ಸಂಚಿಕೆಯ ಮನ್ ಕೀ ಬಾತ್ ಭಾನುವಾರ ಬೆಳಿಗ್ಗೆ 11 ಗಂಟೆಗೆ ಪ್ರಸಾರವಾಗಲಿದೆ. ಆದರೆ, ಸದ್ಯ ಕರ್ನಾಟಕದಲ್ಲಿ ಚುನಾವಣಾ ಪ್ರಚಾರದಲ್ಲಿ ವ್ಯಸ್ತರಾಗಿರುವ ಮೋದಿ ಭಾನುವಾರವೂ ರಾಜ್ಯದಲ್ಲೇ ಇರಲಿದ್ದಾರೆ. ಅವರು ಮನ್ ಕೀ ಬಾತ್​​ನ ನೂರನೇ ಸಂಚಿಕೆ ಕಾರ್ಯಕ್ರಮ ವೀಕ್ಷಣೆ / ಕೇಳಲು ಎಲ್ಲಿರುತ್ತಾರೆ ಗೊತ್ತೇ?

ರಾಜ್ಯ ಪ್ರವಾಸದಲ್ಲಿರುವ ಮೋದಿ ಇಂದು (ಶನಿವಾರ) ರಾತ್ರಿ ಬೆಂಗಳೂರಿನ ರಾಜಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ನಾಳೆ ಬೆಳಗ್ಗೆ ಅವರು ಚುನಾವಣಾ ಪ್ರಚಾರಕ್ಕೆ ಹೊರಡುವ ಮೊದಲು ರಾಜಭವನದಲ್ಲೇ ಇದ್ದುಕೊಂಡು ಮನ್ ಕೀ ಬಾತ್​​ನ ನೂರನೇ ಸಂಚಿಕೆ ಪ್ರಸಾರ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಂತರ ತೆರಳಲಿದ್ದು ಕೋಲಾರ, ಮೈಸೂರು, ಚನ್ನಪಟ್ಟಣಗಳಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ.

ಮನ್​ ಕೀ ಬಾತ್​​ ಆರಂಭವಾಗಿದ್ದು ಯಾವಾಗ?

ಮನ್ ಕೀ ಬಾತ್ ಕಾರ್ಯಕ್ರಮದ ಮೊದಲ ಸಂಚಿಕೆ 2014 ರ ಅಕ್ಟೋಬರ್ 3 ರಂದು ಪ್ರಸಾರವಾಯಿತು. 9 ವರ್ಷಗಳಲ್ಲಿ, ಪ್ರಧಾನಿ ಮೋದಿ ಅವರು ತಮ್ಮ ಭಾಷಣದಲ್ಲಿ ಹಲವಾರು ಜನರ, ಎಲೆಮರೆಯ ಕಾಯಿಯಂತಿದ್ದ ಸಾಧಕರ ಬಗ್ಗೆ ಪ್ರಸ್ತಾಪಿಸಿದ್ದಾರೆ. ನಂತರ ಆ ಸಾಧಕರು ಪ್ರಸಿದ್ಧರಾಗಿದ್ದಾರೆ ಮತ್ತು ದೇಶದ ಜನರ ಗಮನ ಸೆಳೆದಿದ್ದಾರೆ.

ಮನ್​ ಕೀ ಬಾತ್​​ನ 99ನೇ ಸಂಚಿಕೆಯಲ್ಲಿ ಮೋದಿ ಅವರು, ದೇಶದ ಅತ್ಯಂತ ಕಿರಿಯ ಅಂಗಾಂಗ ದಾನಿ ಅಬಾಬತ್ ಕೌರ್ ಬಗ್ಗೆ ಪ್ರಸ್ತಾಪಿಸಿದ್ದರು. ಹರಿಯಾಣದ ಸುನಿಲ್ ಜಗ್ಲಾನ್ ಬಗ್ಗೆ ಪ್ರಧಾನಿ ಮೋದಿ ನಾಲ್ಕು ಬಾರಿ ಪ್ರಸ್ತಾಪಿಸಿದ್ದಾರೆ. ಜಿಂದ್‌ನ ನಿವಾಸಿಯಾದ ಜಗ್ಲಾನ್ ಅವರು ‘ಸೆಲ್ಫಿ ವಿದ್​ ಡಾಟರ್’ ಅಭಿಯಾನ ಆರಂಭಿಸಿದ್ದರು. ಈ ಅಭಿಯಾನವು ವಿಶ್ವದ ಸುಮಾರು 80 ದೇಶಗಳನ್ನು ತಲುಪಿದೆ. ಜಮ್ಮುವಿನ ಪಲ್ಲಿಯಲ್ಲಿ ವಾಸಿಸುತ್ತಿರುವ ವಿನೋದ್ ಕುಮಾರ್ ಅವರನ್ನೂ ಪ್ರಧಾನಿ ಮೋದಿ ಪ್ರಸ್ತಾಪಿಸಿದ್ದರು. 27 ವರ್ಷಗಳಿಂದ ಜೇನು ಸಾಕಾಣಿಕೆ ಮಾಡುತ್ತಿರುವ ಇವರು ವರ್ಷಕ್ಕೆ 15ರಿಂದ 20 ಲಕ್ಷ ರೂಪಾಯಿ ಆದಾಯ ಪಡೆಯುತ್ತಿದ್ದಾರೆ.

ಇದನ್ನೂ ಓದಿ: Mann Ki Baat: ಮನ್ ಕಿ ಬಾತ್​​ನ 100ನೇ ಸಂಚಿಕೆ, 9 ಸಾವಿರ ಕಡೆಗಳಲ್ಲಿ ಸಾಕ್ಷಿಯಾಗಲಿರುವ ಹರಿಯಾಣದ 9 ಲಕ್ಷ ಜನ

ಪ್ರಸಾರ ಭಾರತಿಯು 11 ವಿದೇಶಿ ಸೇರಿದಂತೆ 52 ಭಾಷೆಗಳು ಮತ್ತು ಉಪಭಾಷೆಗಳಲ್ಲಿ ಮನ್ ಕೀ ಬಾತ್‌ನ ಅನುವಾದ ಮತ್ತು ಪ್ರಸಾರವನ್ನು ಮಾಡುತ್ತದೆ. ಮನ್ ಕೀ ಬಾತ್ ರೇಡಿಯೊ ಕಾರ್ಯಕ್ರಮವಾಗಿದ್ದು, ಇದನ್ನು ಟಿವಿ ಚಾನೆಲ್‌ಗಳು ಏಕಕಾಲದಲ್ಲಿ ಪ್ರಸಾರ ಮಾಡುತ್ತವೆ. ದೂರದರ್ಶನ ನೆಟ್‌ವರ್ಕ್‌ನ 34 ಚಾನೆಲ್‌ಗಳು ಮತ್ತು 100 ಕ್ಕೂ ಹೆಚ್ಚು ಖಾಸಗಿ ಉಪಗ್ರಹ ಟಿವಿ ಚಾನೆಲ್‌ಗಳು ಈ ವಿನೂತನ ಕಾರ್ಯಕ್ರಮವನ್ನು ದೇಶದ ಮೂಲೆ ಮೂಲೆಗೂ ತಲುಪಿಸುತ್ತವೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:34 pm, Sat, 29 April 23

‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ