AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಗನಯಾನದ ಯಶಸ್ಸಿನತ್ತ ನಮ್ಮ ಚಿತ್ತ: ಮಹಾರಾಷ್ಟ್ರದಲ್ಲಿ ಪ್ರಧಾನಿ ಮೋದಿ

ಮಹಾರಾಷ್ಟ್ರದ ಪರ್ಭಾನಿಯಲ್ಲಿ ಲೋಕಸಭಾ ಚುನಾವಣೆ ಪ್ರಚಾರ ಉದ್ದೇಶ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಗಗನಯಾನದ ಯಶಸ್ಸಿನತ್ತ ಭಾರತ ಚಿತ್ತನೆಟ್ಟಿದೆ ಎಂದರು. ಬಿಜೆಪಿ ಸರ್ಕಾರದ 10 ವರ್ಷಗಳ ಸಾಧನೆಗಳನ್ನು ಬಿಚ್ಚಿಟ್ಟ ಅವರು, ಸಂಸದ ರಾಹುಲ್ ಗಾಂಧಿ ವಿರುದ್ಧ ವ್ಯಂಗ್ಯವಾಡಲೂ ವೇದಿಕೆಯನ್ನು ಬಳಸಿಕೊಂಡರು.

ಗಗನಯಾನದ ಯಶಸ್ಸಿನತ್ತ ನಮ್ಮ ಚಿತ್ತ: ಮಹಾರಾಷ್ಟ್ರದಲ್ಲಿ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ
ಗಣಪತಿ ಶರ್ಮಾ
|

Updated on: Apr 20, 2024 | 1:48 PM

Share

ನಾಂದೇಡ್‌, ಏಪ್ರಿಲ್ 20: ಗಗನ್‌ಯಾನ್‌ ಯೋಜನೆಯ ಯಶಸ್ಸಿಗೆ ದೇಶದ ಜನತೆ ಕಾತರದಿಂದ ಎದುರು ನೋಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದರು. ಮಹಾರಾಷ್ಟ್ರದ (Maharashtra) ಪರ್ಭಾನಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತವನ್ನು ಮೂರನೇ ಅತಿದೊಡ್ಡ ಆರ್ಥಿಕ ಶಕ್ತಿಯನ್ನಾಗಿ ಮಾಡುವುದು ಈ ಚುನಾವಣೆಯ ಧ್ಯೇಯವಾಗಿದೆ ಎಂದು ಹೇಳಿದರು.

ಹಿಂದಿನ ಸರ್ಕಾರದಲ್ಲಿ ನಾವು ಚಂದ್ರಯಾನದ ಯಶಸ್ಸನ್ನು ನೋಡಿದ್ದೇವೆ. ಈಗ ಮುಂದಿನ ಸರ್ಕಾರದಲ್ಲಿ 140 ಕೋಟಿ ದೇಶವಾಸಿಗಳು ಗಗನ್ಯಾನದ ಯಶಸ್ಸನ್ನು ಎದುರು ನೋಡುತ್ತಿದ್ದಾರೆ ಎಂದು ಹೇಳಿದರು. ಸೇನೆಯಿಂದ ಹಿಡಿದು ಕೊರೊನಾ ಕಾಲದ ಔಷಧಿಗಳವರೆಗೆ ದೇಶದ ಜನತೆ ಸ್ವಾವಲಂಬನೆಯ ಉದಾಹರಣೆಗಳನ್ನು ನೋಡುತ್ತಿರುವ ಸಂದರ್ಭದಲ್ಲಿ ದೇಶದಲ್ಲಿ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಕೇವಲ ಹತ್ತು ವರ್ಷಗಳಲ್ಲಿ ದೇಶ ಅಭಿವೃದ್ಧಿಯಲ್ಲಿ ಬಹಳ ದೂರ ಕ್ರಮಿಸಿದೆ ಎಂದು ಪ್ರಧಾನಿ ಮೋದಿ ಹೇಳಿದರು. 2014ರಲ್ಲಿ ನಾನು ಮೊದಲ ಬಾರಿಗೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದಾಗ ಮಾಧ್ಯಮಗಳಲ್ಲಿ ಪ್ರತಿದಿನ ಉಗ್ರರ ದಾಳಿ, ಬಾಂಬ್ ಸ್ಫೋಟದ ಸುದ್ದಿ ಬರುತ್ತಿತ್ತು. ಆದರೆ 2019ರಿಂದ ಗಡಿಯಾಚೆಯಿಂದ ಭಯೋತ್ಪಾದಕರ ಒಳನುಸುಳುವಿಕೆ ಕೂಡ ಸ್ಥಗಿತಗೊಂಡಿದೆ ಎಂದರು. ಜತೆಗೆ, ಸರ್ಜಿಕಲ್ ಸ್ಟ್ರೈಕ್ ಬಗ್ಗೆಯೂ ಪ್ರಸ್ತಾಪಿಸಿದರು.

ವಯನಾಡ್​ನಿಂದಲೂ ರಾಹುಲ್ ಪಲಾಯನ: ಮೋದಿ ವ್ಯಂಗ್ಯ

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಗೆ ಕೇರಳದ ವಯನಾಡ್​ನಲ್ಲಿ ಕೂಡ ಜನ ಬೆಂಬಲ ಪಡೆಯುವುದು ಕಷ್ಟವಾಗಲಿದೆ. ಅವರು ಅಲ್ಲಿಂದಲೂ ಪಲಾಯನ ಮಾಡಲಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದರು. ಮಹಾರಾಷ್ಟ್ರದ ನಾಂದೇಡ್‌ನಲ್ಲಿ ಚುನಾವಣಾ ಪ್ರಚಾರ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದರು.

ರಾಹುಲ್ ಗಾಂಧಿಯನ್ನು ಶೆಹಜಾದಾ (ರಾಜಕುಮಾರ) ಎಂದು ಉಲ್ಲೇಖಿಸಿದ ಮೋದಿ, ಏಪ್ರಿಲ್ 26 ರಂದು ವಯನಾಡ್‌ನಲ್ಲಿ ಮತದಾನಕ್ಕಾಗಿ ಕಾಂಗ್ರೆಸ್ ಕಾಯುತ್ತಿದೆ. 2019 ರಲ್ಲಿ ಅಮೇಥಿಯಿಂದ ಓಡಿಹೋದ ರಾಹುಲ್ ಗಾಂಧಿ ಈ ಬಾರಿ ಚುನಾವಣೆ ನಂತರ ವಯನಾಡ್​ನಿಂದಲೂ ಓಡಿಹೋಗುತ್ತಾರೆ ಎಂದು ವ್ಯಂಗ್ಯವಾಡಿದರು.

ಇದನ್ನೂ ಓದಿ: ರಾಹುಲ್​​​ ಅಮೇಥಿಯಂತೆ ವಯನಾಡಿನಲ್ಲೂ ತನ್ನ ನೆಲೆ ಕಳೆದುಕೊಳ್ಳಲಿದ್ದಾರೆ: ಪ್ರಧಾನಿ ಮೋದಿ

ರಾಹುಲ್ ಗಾಂಧಿ ವಯನಾಡ್‌ನಲ್ಲಿ ಕೂಡ ಬಿಕ್ಕಟ್ಟನ್ನು ಎದುರಿಸುತ್ತಿದ್ದಾರೆ. ಅವರ ಸಹಾಯಕರು ಏಪ್ರಿಲ್ 26 ರಂದು ಮತದಾನಕ್ಕಾಗಿ ಕಾಯುತ್ತಿದ್ದಾರೆ. ಅಮೇಥಿಯಿಂದ ಓಡಿಹೋದ ಅವರು ವಯನಾಡ್​​ನಿಂದಲೂ ಓಡಿಹೋಗಲಿದ್ದಾರೆ ಎಂದು ನೀವು ಊಹಿಸಬಹುದು ಎಂದು ಮೋದಿ ಹೇಳಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಕತ್ತರಿಗುಪ್ಪೆಯಲ್ಲಿ ನಾನು ಚುನಾವಣೆಗೆ ನಿಲ್ಲಬಹುದು’: ಉಪೇಂದ್ರ
‘ಕತ್ತರಿಗುಪ್ಪೆಯಲ್ಲಿ ನಾನು ಚುನಾವಣೆಗೆ ನಿಲ್ಲಬಹುದು’: ಉಪೇಂದ್ರ
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?