AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯರ ವಿರುದ್ಧ ಅಸಭ್ಯ ಮಾತು: ಮಧ್ಯ ಪ್ರದೇಶದಲ್ಲಿ ಇಂಡಿಯಾ ಮೈತ್ರಿಕೂಟ, ನಿತೀಶ್ ಕುಮಾರ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ಭಾರತದ ವಿರೋಧ ಪಕ್ಷದ, ಘಮಂಡಿಯಾ ಘಟಬಂಧನ್​ನ ಪ್ರಮುಖ ನಾಯಕರೊಬ್ಬರು ನಿನ್ನೆ ಬಿಹಾರ ಅಸೆಂಬ್ಲಿಯಲ್ಲಿ ಮಹಿಳೆಯರ ಬಗ್ಗೆ ಅಸಭ್ಯ ಭಾಷೆ ಬಳಸಿದ್ದಾರೆ. ಅವರಿಗೆ ನಾಚಿಕೆ ಇಲ್ಲ. ಅವರ ಟೀಕೆಗಳ ವಿರುದ್ಧ ಮಾತನಾಡಲು ಭಾರತ ಮೈತ್ರಿಕೂಟದ ಒಬ್ಬನೇ ನಾಯಕನೂ ಸಿದ್ಧವಿಲ್ಲ ಎಂದು ಪ್ರಧಾನಿ ಮೋದಿ ಮಧ್ಯ ಪ್ರದೇಶದ ಗುಣಾದಲ್ಲಿ ವಾಗ್ದಾಳಿ ನಡೆಸಿದರು.

ಮಹಿಳೆಯರ ವಿರುದ್ಧ ಅಸಭ್ಯ ಮಾತು: ಮಧ್ಯ ಪ್ರದೇಶದಲ್ಲಿ ಇಂಡಿಯಾ ಮೈತ್ರಿಕೂಟ, ನಿತೀಶ್ ಕುಮಾರ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ
ಪ್ರಧಾನಿ ಮೋದಿ
Ganapathi Sharma
|

Updated on:Nov 08, 2023 | 7:32 PM

Share

ಗುಣಾ (ಮಧ್ಯ ಪ್ರದೇಶ), ನವೆಂಬರ್ 8: ಬಿಹಾರ ವಿಧಾನಸಭೆಯಲ್ಲಿ ಮಹಿಳೆಯರ ವಿರುದ್ಧ ಆಕ್ಷೇಪಾರ್ಹ ಹೆಳಿಕೆ ನೀಡಿದ ಅಲ್ಲಿನ ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ವಿರುದ್ಧ ಪ್ರಧಾನಿ ನರೇಂದ್ರ ಮೋದಿ (Narendra Modi) ಬುಧವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮಧ್ಯ ಪ್ರದೇಶದ (Madhya Pradesh) ಗುಣಾದಲ್ಲಿ ಮಾತನಾಡಿದ ಅವರು, ನೀವು ಎಷ್ಟು ಕೆಳಮಟ್ಟಕ್ಕಿಳಿದು ದೇಶಕ್ಕೆ ಅವಮಾನ ಮಾಡುತ್ತೀರಿ ಎಂದು ನಿತೀಶ್ ಅವರನ್ನು ಉದ್ದೇಶಿಸಿ ಹೇಳಿದರು.

ಮಂಗಳವಾರ ಬಿಹಾರ ವಿಧಾನಸಭೆಯಲ್ಲಿ ಜಾತಿ ಆಧಾರಿತ ಆರ್ಥಿಕ ಸಮೀಕ್ಷೆ ಕುರಿತ ಚರ್ಚೆಯಲ್ಲಿ ಜನಸಂಖ್ಯೆ ನಿಯಂತ್ರಣದ ಬಗ್ಗೆ ಮಹಿಳೆಯರಿಗೆ ಶಿಕ್ಷಣ ನೀಡುವ ಪಾತ್ರದ ಕುರಿತು ಮಾತನಾಡುವಾಗ ನಿತೀಶ್ ಕುಮಾರ್ ಅವರು ಆಕ್ಷೇಪಾರ್ಹ ವಾಕ್ಯ ಬಳಸಿದ್ದರು. ಅವರ ವಿಳಾಸದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವಿವಿಧ ವಲಯಗಳಿಂದ ತೀವ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಭಾರತದ ವಿರೋಧ ಪಕ್ಷದ, ಘಮಂಡಿಯಾ ಘಟಬಂಧನ್​ನ ಪ್ರಮುಖ ನಾಯಕರೊಬ್ಬರು ನಿನ್ನೆ ಬಿಹಾರ ಅಸೆಂಬ್ಲಿಯಲ್ಲಿ ಮಹಿಳೆಯರ ಬಗ್ಗೆ ಅಸಭ್ಯ ಭಾಷೆ ಬಳಸಿದ್ದಾರೆ. ಅವರಿಗೆ ನಾಚಿಕೆ ಇಲ್ಲ. ಅವರ ಟೀಕೆಗಳ ವಿರುದ್ಧ ಮಾತನಾಡಲು ಭಾರತ ಮೈತ್ರಿಕೂಟದ ಒಬ್ಬನೇ ನಾಯಕನೂ ಸಿದ್ಧವಿಲ್ಲ. ಹೆಣ್ಣಿನ ಬಗ್ಗೆ ಈ ರೀತಿಯ ಅಭಿಪ್ರಾಯವನ್ನು ಹೊಂದಿರುವವರು, ಅವರು ನಿಮಗೆ ಏನಾದರೂ ಒಳ್ಳೆಯದನ್ನು ಮಾಡಬಹುದೇ? ಅವರು ನಿಮ್ಮ ಘನತೆಯನ್ನು ಕಾಪಾಡಬಹುದೇ? ಅವರು ನಿಮ್ಮನ್ನು ಗೌರವಿಸಬಹುದೇ? ಪ್ರಪಂಚದ ಮುಂದೆ ದೇಶವನ್ನು ನಾಚಿಕೆಪಡುವಂತೆ ಮಾಡುವ ನೀವು ಎಷ್ಟು ಕೆಳಮಟ್ಟಕ್ಕಿಳಿಯುತ್ತೀರಿ ಎಂದು ಕುಮಾರ್ ಅವರ ಹೆಸರನ್ನು ಪ್ರಸ್ತಾಪಿಸದೇ ಮೋದಿ ವಾಗ್ದಾಳಿ ನಡೆಸಿದರು.

ತಮ್ಮ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾದ ಕಾರಣ ನಿತೀಶ್ ಅವರು, ಬುಧವಾರ ಬೆಳಿಗ್ಗೆ ಕ್ಷಮೆಯಾಚಿಸಿದ್ದರು.

ಇದನ್ನೂ ಓದಿ: ದೀಪಾವಳಿಗೆ ಸ್ಥಳೀಯ ಉತ್ಪನ್ನ ಖರೀದಿಸಿ, ನಮೋ ಆ್ಯಪ್​ನಲ್ಲಿ ಸೆಲ್ಫಿ ಪೋಸ್ಟ್ ಮಾಡಿ: ಮೋದಿ ಮನವಿ

ಏನು ಹೇಳಿದ್ದರು ನಿತೀಶ್ ಕುಮಾರ್?

ಬಿಹಾರ ವಿಧಾನಸಭೆಯಲ್ಲಿ ಮಾತನಾಡಿದ್ದ ನಿತೀಶ್ ಕುಮಾರ್, ಜನಸಂಖ್ಯೆ ನಿಯಂತ್ರಣ ವಿಚಾರದಲ್ಲಿ ಮಹಿಳೆಯರ ಶಿಕ್ಷಣ ಪ್ರಮುಖ ಪಾತ್ರವಹಿಸುತ್ತದೆ. ಶಿಕ್ಷಣ ಪಡೆದ ಮಹಿಳೆಗೆ ಪತಿಯು ಲೈಂಗಿಕ ಕ್ರಿಯೆಯಲ್ಲಿ ತೊಡಗದಂತೆ ನಿರ್ಬಂಧ ಹೇರುವ ಸಾಮರ್ಥ್ಯ ಇರುತ್ತದೆ. ಪರಿಯನ್ನು ಹೇಗೆ ನಿರ್ಬಂಧಿಸಬಹುದು ಎಂಬ ಮಾಹಿತಿ ಶಿಕ್ಷಿತ ಮಹಿಳೆಯಲ್ಲಿರುತ್ತದೆ. ಜನನ ಪ್ರಮಾಣದಲ್ಲಿ ಇಳಿಕೆಯಾಗಲು ಮಹಿಳೆಯರು ಶಿಕ್ಷಣ ಪಡೆಯುತ್ತಿರುವುದೇ ಕಾರಣ ಎಂದು ಹೇಳಿದ್ದರು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ರಾಜಕೀಯವಾಗಿಯೂ ಈ ಹೇಳಿಕೆ ವಾಕ್ಸಮರಕ್ಕೆ ಕಾರಣವಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:31 pm, Wed, 8 November 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ