AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi in WITT Summit 2026: ಯುದ್ಧದ ಸಮಯದಲ್ಲೂ ಭಾರತದ ಆರ್ಥಿಕ ಸ್ಥಿರತೆ ಕಂಡು ಜಗತ್ತು ಬೆರಗಾಗಿದೆ; ಟಿವಿ9 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಬಣ್ಣನೆ

TV9 ನೆಟ್‌ವರ್ಕ್‌ ಆಯೋಜಿಸಿರುವ'ವಾಟ್ ಇಂಡಿಯಾ ಥಿಂಕ್ಸ್ ಟುಡೇ (WITT) ಶೃಂಗಸಭೆ 2026' ದೆಹಲಿಯಲ್ಲಿ ನಡೆಯುತ್ತಿದೆ. ಇಂದು ಮತ್ತು ನಾಳೆ ನಡೆಯಲಿರುವ ಈ ಶೃಂಗಸಭೆಯಲ್ಲಿ ಇಂದು ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರಮುಖ ಭಾಷಣ ಮಾಡಿದ್ದಾರೆ. ಈ ಶೃಂಗಸಭೆಯಲ್ಲಿ ಜಾಗತಿಕ ಸಂಘರ್ಷಗಳ ಕುರಿತು ಭಾರತದ ಕಾರ್ಯತಂತ್ರವನ್ನು ಪ್ರಧಾನಿ ನರೇಂದ್ರ ಮೋದಿ ವಿವರಿಸಿದರು. ಇಂದು ಜಗತ್ತು ಎದುರಿಸುತ್ತಿರುವ ಗಂಭೀರ ಪರಿಸ್ಥಿತಿಗಳು ತೀವ್ರ ಕಳವಳಕಾರಿ ಎಂದು ಅವರು ಹೇಳಿದರು.

PM Modi in WITT Summit 2026: ಯುದ್ಧದ ಸಮಯದಲ್ಲೂ ಭಾರತದ ಆರ್ಥಿಕ ಸ್ಥಿರತೆ ಕಂಡು ಜಗತ್ತು ಬೆರಗಾಗಿದೆ; ಟಿವಿ9 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಬಣ್ಣನೆ
PM Modi Speech In WITT Summit
ಸುಷ್ಮಾ ಚಕ್ರೆ
|

Updated on:Mar 23, 2026 | 10:50 PM

Share

ನವದೆಹಲಿ, ಮಾರ್ಚ್ 23: ಇರಾನ್, ಇಸ್ರೇಲ್-ಅಮೆರಿಕದ ನಡುವೆ ಯುದ್ಧ ನಡೆಯುತ್ತಿರುವುದರಿಂದ ಅದರ ಪರಿಣಾಮಗಳನ್ನು ಬೇರೆ ದೇಶಗಳೂ ಅನುಭವಿಸುತ್ತಿವೆ. ಮಧ್ಯ ಏಷ್ಯಾದ ಈ ಸಂಘರ್ಷದ ಕುರಿತು ಇಂದು ಟಿವಿ9ನ ವಾಟ್ ಇಂಡಿಯಾ ಥಿಂಕ್ಸ್ ಟುಡೇ (WITT Summit 2026) ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ. “2014ರ ನೀರಸತೆಯನ್ನು ಬಿಟ್ಟು ಭಾರತವು ಹೊಸ ಆತ್ಮವಿಶ್ವಾಸದೊಂದಿಗೆ ಹೊರಹೊಮ್ಮುತ್ತಿದೆ. ಕೋವಿಡ್ -19 ಸಾಂಕ್ರಾಮಿಕ ರೋಗದಿಂದ ಇಂದಿನ ಯುದ್ಧ ವಾತಾವರಣದವರೆಗೆ ಭಾರತೀಯರು ಪ್ರತಿ ವರ್ಷವೂ ಪರೀಕ್ಷೆಗಳನ್ನು ಎದುರಿಸುತ್ತಲೇ ಇದ್ದಾರೆ. 140 ಕೋಟಿ ಭಾರತೀಯರ ಸಾಮೂಹಿಕ ಪ್ರಯತ್ನದಿಂದ ಮಾತ್ರ ನಾವು ಪ್ರತಿಯೊಂದು ವಿಪತ್ತನ್ನು, ಸವಾಲನ್ನು ಎದುರಿಸಲು ಸಾಧ್ಯವಾಗಿದೆ. ಯುದ್ಧದ ಸಮಯದಲ್ಲೂ ಭಾರತ ಅನುಸರಿಸುತ್ತಿರುವ ತಂತ್ರಗಳು ಮತ್ತು ಆರ್ಥಿಕ ಸ್ಥಿರತೆಯಿಂದ ಜಗತ್ತು ಬೆರಗುಗೊಂಡಿದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

“ಫೆಬ್ರವರಿ 28ರಿಂದ ಜಗತ್ತು ಪ್ರಕ್ಷುಬ್ಧತೆಯಿಂದ ಕೂಡಿದೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷಗಳಿಂದ ಯಾವುದೇ ದೇಶವು ಪ್ರಭಾವಿತವಾಗದೆ ಇರುವುದು ಅಸಾಧ್ಯ. ಯುದ್ಧಗಳು ನಮ್ಮ ಗಡಿಗಳಿಂದ ದೂರದಲ್ಲಿ ನಡೆಯುತ್ತಿದ್ದರೂ ಅವುಗಳ ಅಡ್ಡಪರಿಣಾಮಗಳನ್ನು ಪ್ರಪಂಚದಾದ್ಯಂತ ದೇಶಗಳು ಅನುಭವಿಸುತ್ತಿವೆ ಎಂದು ಅವರು ಕಳವಳ ವ್ಯಕ್ತಪಡಿಸಿದರು. ಇಂತಹ ಭೀಕರ ಪರಿಸ್ಥಿತಿಯಲ್ಲೂ ಭಾರತ ತನ್ನ ಅಭಿವೃದ್ಧಿಯ ವೇಗವನ್ನು ನಿಧಾನಗೊಳಿಸಿಲ್ಲ” ಎಂದು ಅವರು ಹೆಮ್ಮೆಯಿಂದ ಘೋಷಿಸಿದರು.

ಇದನ್ನೂ ಓದಿ: PM Modi in WITT Summit 2026: ಕಾಂಗ್ರೆಸ್​ನ ಪಾಪದ ಹೊರೆಯನ್ನು ನಾವು ಹೊತ್ತಿದ್ದೇವೆ; ವಿಟ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ

“ಜಗತ್ತು ವಿಭಿನ್ನ ಬಣಗಳಾಗಿ ವಿಭಜನೆಯಾಗುತ್ತಿದ್ದರೆ ಭಾರತ ದೇಶಗಳ ನಡುವೆ ಅಭೂತಪೂರ್ವ ಸೇತುವೆಗಳನ್ನು ನಿರ್ಮಿಸುತ್ತಿದೆ. ಜಾಗತಿಕ ದಕ್ಷಿಣದಿಂದ ನಮ್ಮ ನೆರೆಹೊರೆಯವರವರೆಗೆ ಭಾರತವು ವಿಶ್ವಾಸಾರ್ಹ ಪಾಲುದಾರನಾಗಿ ಮಾರ್ಪಟ್ಟಿದೆ. ನಾವು ಶಾಂತಿ ಮತ್ತು ಸಂವಾದಕ್ಕಾಗಿ ಮಾತ್ರ ನಿಲ್ಲುತ್ತೇವೆ. ಅದು ಬಿಟ್ಟು ನಾವು ಯಾವ ದೇಶದ ಪರವಾಗಿಯೂ ಅಲ್ಲ” ಎಂದು ಮೋದಿ ವಿವರಿಸಿದರು.

“ಯುದ್ಧದ ಪರಿಣಾಮದ ಹೊರತಾಗಿಯೂ, ಭಾರತವು ತನ್ನ ಅಭಿವೃದ್ಧಿಯ ವೇಗವನ್ನು ನಿಲ್ಲಿಸಿಲ್ಲ. ಕಳೆದ 23 ದಿನಗಳಲ್ಲಿ ಸರ್ಕಾರ ಹಲವಾರು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದೆ. ಯುದ್ಧದ ನಡುವೆಯೂ ಭಾರತ ಪ್ರಗತಿಯನ್ನು ಕಾಯ್ದುಕೊಂಡಿದೆ” ಎಂದು ಪ್ರಧಾನಿ ಮೋದಿ ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:34 pm, Mon, 23 March 26

Follow Us
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್