ONGC ಸೀ ಸರ್ವೈವಲ್ ಸೆಂಟರ್, ಇಂಡಿಯಾ ಎನರ್ಜಿ ವೀಕ್ 2024 ಕಾರ್ಯಕ್ರಮ ಉದ್ಘಾಟಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಗೋವಾ ಪ್ರವಾಸದಲ್ಲಿದ್ದು, ಹಲವು ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ಭಾರತದ ಸಮುದ್ರಯಾನವನ್ನು ಜಾಗತಿಮಟ್ಟಿಕ್ಕೆ ತಲುಪಿಸುವ ನಿಟ್ಟಿನಲ್ಲಿ, ONGC (Oil and Natural Gas Corporation) ಸಮುದ್ರ ಸರ್ವೈವಲ್ ಸೆಂಟರ್​​ನ್ನು ಉದ್ಘಾಟಿಸಿದರು. ದಕ್ಷಿಣ ಗೋವಾದ ಬೆತುಲ್ ಗ್ರಾಮದಲ್ಲಿ ಈ ಕೇಂದ್ರಕ್ಕೆ ಚಾಲನೆ ನೀಡಿದ್ದಾರೆ. ಇದರ ಜತೆಗೆ ಇಂಡಿಯಾ ಎನರ್ಜಿ ವೀಕ್ 2024ನ್ನು ಕೂಡ ಅನಾವರಣಗೊಳಿಸಿದರು.

ONGC ಸೀ ಸರ್ವೈವಲ್ ಸೆಂಟರ್, ಇಂಡಿಯಾ ಎನರ್ಜಿ ವೀಕ್ 2024 ಕಾರ್ಯಕ್ರಮ ಉದ್ಘಾಟಿಸಿದ ಪ್ರಧಾನಿ ಮೋದಿ
Follow us
|

Updated on:Feb 06, 2024 | 12:00 PM

ಗೋವಾ, ಫೆ.6: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು (ಫೆ.6) ONGC (Oil and Natural Gas Corporation) ಸಮುದ್ರ ಸರ್ವೈವಲ್ ಸೆಂಟರ್​​ನ್ನು ಉದ್ಘಾಟಿಸಿದರು. ದಕ್ಷಿಣ ಗೋವಾದ ಬೆತುಲ್ ಗ್ರಾಮದಲ್ಲಿ ಈ ಕೇಂದ್ರಕ್ಕೆ ಚಾಲನೆ ನೀಡಿದ್ದಾರೆ. ಇದರ ಜತೆಗೆ ಇಂಡಿಯಾ ಎನರ್ಜಿ ವೀಕ್ 2024ನ್ನು ಕೂಡ ಅನಾವರಣಗೊಳಿಸಿದರು. ಇನ್ನು ಈ ಯೋಜನೆಯನ್ನು 2047ಕ್ಕೆ ಗುರಿಯಾಗಿಸಿಕೊಂಡಿದ್ದು. ಈ ಯೋಜನೆಗೆ 1,330 ಕೋಟಿ ರೂ. ವೆಚ್ಚವನ್ನು ಮಾಡಲಾಗುವುದು ಎಂದು ಹೇಳಲಾಗಿದೆ.

ಈ ಯೋಜನೆ ಬಗ್ಗೆ ಪ್ರಧಾನಮಂತ್ರಿಗಳ ಕಾರ್ಯಾಲಯ ನೀಡಿದ ಹೇಳಿಕೆ ಪ್ರಕಾರ, ONGC ಸಮುದ್ರ ಸರ್ವೈವಲ್ ಸೆಂಟರ್​​​ನ್ನು ಅತ್ಯಾಧುನಿಕ ಇಂಟಿಗ್ರೇಟೆಡ್ ಸೀ ಸರ್ವೈವಲ್ ಟ್ರೈನಿಂಗ್ ಸೆಂಟರ್ ಆಗಿ ಅಭಿವೃದ್ಧಿಪಡಿಸಲಾಗಿದೆ. ವಾರ್ಷಿಕವಾಗಿ 10,000-15,000 ಸಿಬ್ಬಂದಿಗೆ ತರಬೇತಿ ನೀಡುವ ಸಾಮರ್ಥ್ಯ ಹೊಂದಿದ್ದು, ಭಾರತದ ಸಮುದ್ರಯಾನದ ತರಬೇತಿಯನ್ನು ಜಾಗತಿಕಮಟ್ಟಕ್ಕೆ ಕೊಂಡೊಯ್ಯಲಿದೆ.

ಇದನ್ನೂ ಓದಿ: ಜಾತಿ, ಧರ್ಮ, ಪ್ರಾಂತ್ಯ ಬೇಧವಿಲ್ಲ, ಎಲ್ಲರಿಗೂ ಒಂದೇ ಕಾನೂನು, ಏಕರೂಪ ನಾಗರಿಕ ಸಂಹಿತೆ ಮಸೂದೆ ಮಂಡನೆ

ಇಂಡಿಯಾ ಎನರ್ಜಿ ವೀಕ್ 2024 ಮೂಲಕ ಇಂಧನ ಅಗತ್ಯತೆಗಳಲ್ಲಿ ಸ್ವಾವಲಂಬನೆ ಸಾಧಿಸುವ ಗುರಿಯನ್ನು ಹೊಂದಿದೆ. ಫೆಬ್ರವರಿ 6 ರಿಂದ 9 ರವರೆಗೆ ಗೋವಾದಲ್ಲಿ ಆಯೋಜಿಸಲಾದ ಕಾರ್ಯಕ್ರಮ ಭಾರತದ ಅತಿದೊಡ್ಡ ಮತ್ತು ಏಕೈಕ ಸಮಗ್ರ ಇಂಧನ ಪ್ರದರ್ಶನದ ಸಮ್ಮೇಳನವಾಗಿದೆ. ಇದು ದೇಶದ ಶಕ್ತಿ ಮೌಲ್ಯ ಸರಪಳಿಯನ್ನು ಒಟ್ಟುಗೂಡಿಸುತ್ತದೆ. ಹಾಗೂ ಭಾರತದ ಶಕ್ತಿ ಪರಿವರ್ತನೆ ಗುರಿಗಳಿಗೆ ವೇಗವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ. ಈ ಕಾರ್ಯಕ್ರಮದ ನಂತರ ಜಾಗತಿಕ ತೈಲ ಮತ್ತು ಅನಿಲ ಸಿಇಒಗಳು ಹಾಗೂ ತಜ್ಞರೊಂದಿಗೆ ಪ್ರಧಾನಿ ಸಭೆ ನಡೆಸಲಿದ್ದಾರೆ.

ವಿಡಿಯೋ ಇಲ್ಲಿದೆ ನೋಡಿ:

&

ಇಂಡಿಯಾ ಎನರ್ಜಿ ವೀಕ್ 2024 ಕಾರ್ಯಕ್ರಮದಲ್ಲಿ ಕೆನಡಾ, ಜರ್ಮನಿ, ನೆದರ್ಲ್ಯಾಂಡ್ಸ್, ರಷ್ಯಾ, ಯುಕೆ ಮತ್ತು ಯುಎಸ್ ದೇಶಗಳು ಭಾಗವಹಿಸಲಿದೆ. ಭಾರತೀಯ ಎಂಎಸ್‌ಎಂಇಗಳು ಇಂಧನ ಕ್ಷೇತ್ರದಲ್ಲಿ ಸಾಧನೆಯನ್ನು ಮಾಡಲಿದೆ. ಇದರ ಜತೆಗೆ ವಿಶೇಷವಾಗಿ ಮೇಕ್ ಇನ್ ಇಂಡಿಯಾ ಪೆವಿಲಿಯನ್ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:59 am, Tue, 6 February 24

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ