AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಯಾಸ್ ಸಿಲಿಂಡರ್ ಬೆಲೆ ಇಳಿಸುವ ಮೂಲಕ ಪ್ರಧಾನಿ ಮೋದಿ ನವರಾತ್ರಿಯ ಖುಷಿ ಹೆಚ್ಚಿಸಿದ್ದಾರೆ: ಧರ್ಮೇಂದ್ರ ಪ್ರಧಾನ್

Dharmendra Pradhan: ಸರ್ಕಾರದ ಈ ನಿರ್ಧಾರದ ಕುರಿತು ಮಾತನಾಡಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು, ಕೇಂದ್ರ ಸರ್ಕಾರವು ಉಜ್ವಲ ಫಲಾನುಭವಿಗಳಿಗೆ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಮತ್ತೆ 100 ರೂ. ಇಳಿಸಿದೆ. ಪ್ರಧಾನಿ ನರೇಂದ್ರ ಮೋದಿಯವರ ಈ ನಿರ್ಧಾರದಿಂದ ದೇಶದ ಕೋಟ್ಯಂತರ ತಾಯಂದಿರು ಮತ್ತು ಸಹೋದರಿಯರ ನವರಾತ್ರಿ ಮತ್ತು ಇತರ ಹಬ್ಬಗಳ ಹೊಳಪು ಹೆಚ್ಚಿದೆ.

ಗ್ಯಾಸ್ ಸಿಲಿಂಡರ್ ಬೆಲೆ ಇಳಿಸುವ ಮೂಲಕ ಪ್ರಧಾನಿ ಮೋದಿ ನವರಾತ್ರಿಯ ಖುಷಿ ಹೆಚ್ಚಿಸಿದ್ದಾರೆ: ಧರ್ಮೇಂದ್ರ ಪ್ರಧಾನ್
ಧರ್ಮೇಂದ್ರ ಪ್ರಧಾನ್
Follow us
ರಶ್ಮಿ ಕಲ್ಲಕಟ್ಟ
|

Updated on: Oct 05, 2023 | 3:13 PM

ದೆಹಲಿ ಅಕ್ಟೋಬರ್ 05ಪಿಎಂ ಉಜ್ವಲ ಯೋಜನೆಯ (PM Ujjwala Yojana) ಫಲಾನುಭವಿಗಳಿಗೆ ಎಲ್​ಪಿಜಿ ಸಿಲಿಂಡರ್ ದರದಲ್ಲಿ ಸಿಗುವ ಸಬ್ಸಿಡಿ (LPG price subsidy) ಮೊತ್ತವನ್ನು ಕೇಂದ್ರ ಸರ್ಕಾರ ಹೆಚ್ಚಿಸಿದೆ. 200 ರೂನಷ್ಟು ನೀಡಲಾಗುತ್ತಿದ್ದ ಸಬ್ಸಿಡಿಯನ್ನು 300 ರುಪಾಯಿಗೆ ಏರಿಸಲಾಗಿದೆ. ಕೇಂದ್ರ ಸಂಪುಟ ಬುಧವಾರ  ತೆಗೆದುಕೊಂಡ ನಿರ್ಧಾರಗಳಲ್ಲಿ ಇದೂ ಒಂದಾಗಿದೆ. ಸಂಪುಟ ಸಭೆಯ ಬಳಿಕ ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ಪಿಎಂ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಎಲ್​ಪಿಜಿ ಸಬ್ಸಿಡಿ ಏರಿಸಿರುವ ವಿಚಾರವನ್ನು ತಿಳಿಸಿದ್ದಾರೆ.

ಸರ್ಕಾರದ ಈ ನಿರ್ಧಾರದ ಕುರಿತು ಮಾತನಾಡಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು, ಕೇಂದ್ರ ಸರ್ಕಾರವು ಉಜ್ವಲ ಫಲಾನುಭವಿಗಳಿಗೆ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಮತ್ತೆ 100 ರೂ. ಇಳಿಸಿದೆ. ಪ್ರಧಾನಿ ನರೇಂದ್ರ ಮೋದಿಯವರ ಈ ನಿರ್ಧಾರದಿಂದ ದೇಶದ ಕೋಟ್ಯಂತರ ತಾಯಂದಿರು ಮತ್ತು ಸಹೋದರಿಯರ ನವರಾತ್ರಿ ಮತ್ತು ಇತರ ಹಬ್ಬಗಳ ಹೊಳಪು ಹೆಚ್ಚಿದೆ. ಪ್ರತಿ ಸಿಲಿಂಡರ್‌ಗೆ 200 ರೂಪಾಯಿ ಸಬ್ಸಿಡಿ, ರಾಖಿ ಉಡುಗೊರೆಯಾಗಿ 200 ರೂಪಾಯಿ ರಿಯಾಯಿತಿ ಮತ್ತು ನಿನ್ನೆಯ ಕ್ಯಾಬಿನೆಟ್ ನಿರ್ಧಾರದಲ್ಲಿ 100 ರೂಪಾಯಿ ಕಡಿಮೆ ಮಾಡಿ ನಂತರ ಈಗ ಒಟ್ಟಾರೆ ಎಲ್‌ಪಿಜಿ ಉಜ್ವಲ ಫಲಾನುಭವಿಗಳಿಗೆ 500 ರೂಪಾಯಿಗಳಷ್ಟು ಅಗ್ಗವಾಗಿದೆ ಎಂದು ಹೇಳಿದರು.

ಇದರೊಂದಿಗೆ 2014ರಲ್ಲಿ ಗ್ಯಾಸ್ ಸಿಲಿಂಡರ್‌ಗಳು ಲಭ್ಯವಿದ್ದ ದರದಲ್ಲಿಯೇ ಇಂದು 2023ರಲ್ಲಿ ಉಜ್ವಲಾ ತಾಯಂದಿರು ಮತ್ತು ಸಹೋದರಿಯರಿಗೆ ಬಹುತೇಕ ಅದೇ ದರದಲ್ಲಿ ಗ್ಯಾಸ್ ಸಿಲಿಂಡರ್ ಲಭ್ಯವಾಗಲಿದೆ ಎಂದು ಹೇಳಿದರು. ಈ ನಿರ್ಧಾರವು ಬಡವರು, ತಾಯಂದಿರು, ಸಹೋದರಿಯರು, ಹೆಣ್ಣುಮಕ್ಕಳು ಮತ್ತು ವಂಚಿತ ವರ್ಗಗಳ ಹಿತಾಸಕ್ತಿ, ಸ್ವಾಭಿಮಾನ ಮತ್ತು ಘನತೆಯನ್ನು ರಕ್ಷಿಸುವ ನಿಟ್ಟಿನಲ್ಲಿ ಮೋದಿ ಸರ್ಕಾರದ ಸೂಕ್ಷ್ಮತೆ ಮತ್ತು ಬದ್ಧತೆಯನ್ನು ತೋರಿಸುತ್ತದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಪಿಎಂ ಉಜ್ವಲ ಯೋಜನೆ ಅಡಿ ಎಲ್​ಪಿಜಿಗೆ ಸಬ್ಸಿಡಿ ಮೊತ್ತ 200 ರೂನಿಂದ 300 ರೂಗೆ ಹೆಚ್ಚಳ

ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

ನಿನ್ನೆ ಅಂದರೆ ಅಕ್ಟೋಬರ್ 4 ರಂದು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಕ್ಯಾಬಿನೆಟ್ ಸಭೆ ನಡೆದಿದ್ದು, ಇದರಲ್ಲಿ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಸಹಾಯಧನದ ಮೊತ್ತವನ್ನು ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ.

ಏನಿದು ಪಿಎಂ ಉಜ್ವಲ ಯೋಜನೆ?

ಪ್ರತಿಯೊಂದು ಮನೆಗೂ ಎಲ್​ಪಿಜಿ ಸಂಪರ್ಕ ಕಲ್ಪಿಸಬೇಕೆಂಬ ಸರ್ಕಾರದ ಮಹದ್ಗುರಿ ಹಿನ್ನೆಲೆಯಲ್ಲಿ ಪಿಎಂ ಉಜ್ವಲ ಯೋಜನೆಯನ್ನು ರೂಪಿಸಲಾಗಿದೆ. 2016ರಲ್ಲಿ ಬಿಪಿಎಲ್ ಕಾರ್ಡ್​ದಾರರಿಗೆ ಉಚಿತ ಎಲ್​ಪಿಜಿ ಸಂಪರ್ಕ ಕಲ್ಪಿಸುವುದರೊಂದಿಗೆ ಯೋಜನೆ ಚಾಲನೆಗೊಂಡಿತು. 2021ರಲ್ಲಿ ಎರಡನೇ ಹಂತದ ಉಜ್ವಲ ಸ್ಕೀಮ್ ಅನ್ನು ಚಾಲನೆಗೆ ತರಲಾಯಿತು. ಕೆಲಸಕ್ಕೆಂದು ಬೇರೆ ರಾಜ್ಯಗಳಿಗೆ ವಲಸೆ ಹೋದ ಕುಟುಂಬದವರಿಗೂ ಕೂಡ ಯೋಜನೆ ಸಿಗುವಂತೆ ಮಾಡಲಾಗಿದೆ.

ಉಚಿತವಾಗಿ ಎಲ್​ಪಿಜಿ ಸಂಪರ್ಕದ ಜೊತೆಗೆ ಮೊದಲ ಸಿಲಿಂಡರ್ ಕೂಡ ಉಚಿತವಾಗಿ ಸಿಗುತ್ತದೆ. ಈಗ ಪ್ರತೀ ಸಿಲಿಂಡರ್​ಗೆ 300 ರೂನಷ್ಟು ಸಬ್ಸಿಡಿ ಸಿಗುತ್ತದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ
ಪ್ರಲ್ಹಾದ್ ಜೋಶಿ ಸುದ್ದಿಗೋಷ್ಠಿ ಲೈವ್
ಪ್ರಲ್ಹಾದ್ ಜೋಶಿ ಸುದ್ದಿಗೋಷ್ಠಿ ಲೈವ್
‘ಜನರಿಗೆ ಮನು ಬುದ್ಧಿ ತೋರಿಸಲು ಆ ಆಡಿಯೋ ಬಿಟ್ಟೆ’; ಸಂತ್ರಸ್ತೆಯ ನೇರ ಮಾತು
‘ಜನರಿಗೆ ಮನು ಬುದ್ಧಿ ತೋರಿಸಲು ಆ ಆಡಿಯೋ ಬಿಟ್ಟೆ’; ಸಂತ್ರಸ್ತೆಯ ನೇರ ಮಾತು
ಒಂದೇ ವಿಮಾನದಲ್ಲಿ ದೆಹಲಿಗೆ ಹೊರಟ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಒಂದೇ ವಿಮಾನದಲ್ಲಿ ದೆಹಲಿಗೆ ಹೊರಟ ಸಿದ್ದರಾಮಯ್ಯ ಮತ್ತು ಶಿವಕುಮಾರ್
Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ