AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

11 ವರ್ಷದಲ್ಲಿ ಭಯೋತ್ಪಾದನೆಗೆ ಭಾರತದ ಪ್ರತ್ಯುತ್ತರ, ಆರ್ಥಿಕತೆಯಲ್ಲೂ ನಮ್ಮದೇ ಮೇಲುಗೈ: ಪ್ರಧಾನಿ ಮೋದಿ

ಭಾರತವು ಕಳೆದ 11 ವರ್ಷಗಳಲ್ಲಿ ಆರ್ಥಿಕವಾಗಿ ಭಾರಿ ಬೆಳವಣಿಗೆ ಸಾಧಿಸಿದೆ, ದುರ್ಬಲ ರಾಷ್ಟ್ರಗಳ ಪಟ್ಟಿಯಿಂದ ಅಗ್ರ ಐದು ಆರ್ಥಿಕತೆಗಳಲ್ಲಿ ಒಂದಾಗಿದೆ. ಕಡಿಮೆ ಹಣದುಬ್ಬರ ಮತ್ತು ಉತ್ತಮ ಬೆಳವಣಿಗೆ ದೇಶವಾಗಿದೆ. ಇನ್ನು ಭಯೋತ್ಪಾದಕ ದಾಳಿಗೆ ಸರ್ಜಿಕಲ್ ಸ್ಟ್ರೈಕ್, ವಾಯುದಾಳಿಗಳ ಮೂಲಕ ಸೂಕ್ತ ಪ್ರತ್ಯುತ್ತರ ನೀಡುವ ಮೂಲಕ ಭಾರತ ಆತ್ಮವಿಶ್ವಾಸದಿಂದ ಜಾಗತಿಕವಾಗಿ ಸ್ಪರ್ಧಿಸುತ್ತಿದೆ.

11 ವರ್ಷದಲ್ಲಿ ಭಯೋತ್ಪಾದನೆಗೆ ಭಾರತದ ಪ್ರತ್ಯುತ್ತರ, ಆರ್ಥಿಕತೆಯಲ್ಲೂ ನಮ್ಮದೇ ಮೇಲುಗೈ: ಪ್ರಧಾನಿ ಮೋದಿ
ನರೇಂದ್ರ ಮೋದಿ
ಅಕ್ಷಯ್​ ಪಲ್ಲಮಜಲು​​
|

Updated on: Oct 18, 2025 | 9:55 AM

Share

ಭಾರತ ಯಾವತ್ತಿಗೂ ಭಯೋತ್ಪಾದಕ ದಾಳಿ ಮಾಡಿದಾಗ ಸುಮ್ಮನೆ ಕೂತಿಲ್ಲ, ಎಲ್ಲದಕ್ಕೂ ಪ್ರತ್ಯುತ್ತರ ನೀಡಿದೆ. ವಾಯುದಾಳಿ, ಸರ್ಜಿಕಲ್ ಸ್ಟ್ರೈಕ್ ಮತ್ತು ಆಪರೇಷನ್ ಸಿಂಧೂರ್​​ಗಳಂತಹ ಸೂಕ್ತ ಉತ್ತರವನ್ನು ಪಾಕಿಸ್ತಾನಕ್ಕೆ ಹಾಗೂ ಭಯೋತ್ಪಾದಕರಿಗೆ ನೀಡಿದೆ ಎಂದು ಪ್ರಧಾನಿ ಮೋದಿ (PM Narendra Modi) ಹೇಳಿದರು. ಅವರು ಎನ್‌ಡಿಟಿವಿ ವಿಶ್ವ ಶೃಂಗಸಭೆಯನ್ನುದ್ದೇಶಿಸಿ ಶುಕ್ರವಾರ (ಅ.17) ಮಾತನಾಡಿದ್ದಾರೆ. ಕಳೆದ 11 ವರ್ಷಗಳಲ್ಲಿ ಭಾರತವು ಬಿಕ್ಕಟ್ಟುಗಳನ್ನು ನಿವಾರಿಸಿದೆ, ದುರ್ಬಲ ಐದು ರಾಷ್ಟ್ರವೂ ಒಂದಾಗಿತ್ತು. ಆದರೆ ಇದೀಗ ಅಗ್ರ ಐದು ಆರ್ಥಿಕತೆ ರಾಷ್ಟ್ರವಾಗಿ ಬೆಳೆದಿದೆ. ಹಣದುಬ್ಬರವು ಶೇಕಡಾ 2 ಕ್ಕಿಂತ ಕಡಿಮೆ ಮತ್ತು ಬೆಳವಣಿಗೆ ಶೇಕಡಾ 7 ಕ್ಕಿಂತ ಹೆಚ್ಚಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.

11 ವರ್ಷಗಳಲ್ಲಿ ದುರ್ಬಲ ರಾಷ್ಟ್ರದಿಂದ ಆರ್ಥಿಕವಾಗಿ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿದೆ

ಭಾರತ ಕಳೆದ 11 ವರ್ಷಗಳಲ್ಲಿ ತನ್ನ ಬಿಕ್ಕಟ್ಟುಗಳನ್ನು ನಿವಾರಿಸಿದೆ, ದುರ್ಬಲ ರಾಷ್ಟ್ರದಿಂದ ಆರ್ಥಿಕವಾಗಿ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಬೆಳೆದಿದೆ. ಭಾರತದ ಹಣದುಬ್ಬರ ಕೂಡ 2ಕ್ಕಿಂತ ಕಡಿಮೆಯಾಗಿದೆ. ಹಾಗೂ ದೇಶದ ಬೆಳವಣಿಗೆ ಶೇಕಡಾ 7 ಕ್ಕಿಂತ ಹೆಚ್ಚಾಗಿದೆ. ಸಣ್ಣ ವ್ಯವಹಾರಗಳಿಂದ ದೊಡ್ಡ ಕೈಗಾರಿಕೆಗಳವರೆಗೆ, ಭಾರತವು ಸ್ವಾವಲಂಬಿ ಮತ್ತು ಆತ್ಮವಿಶ್ವಾಸವನ್ನು ಹೊಂದಿದೆ. ಭಯೋತ್ಪಾದಕ ದಾಳಿಯ ನಂತರ, ಭಾರತವು ಸರ್ಜಿಕಲ್ ಸ್ಟ್ರೈಕ್‌ಗಳು, ವಾಯುದಾಳಿಗಳು ಮತ್ತು ಆಪರೇಷನ್ ಸಿಂಧೂರ್‌ನಂತಹ ಕಾರ್ಯಾಚರಣೆಗಳೊಂದಿಗೆ ನಿರ್ಣಾಯಕ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಹೇಳಿದ್ದಾರೆ.

ಹಿಂದಿನ ಸರ್ಕಾರಗಳು ಬಲವಂತದ ಸುಧಾರಣೆಗಳನ್ನು ಜಾರಿಗೆ ತಂದವು, ಆದರೆ ಇದೀಗ ಅವುಗಳಲ್ಲಿ ಬದಲಾವಣೆಗಳನ್ನು ತರಲಾಗಿದೆ. ಜಾಗತಿಕವಾಗಿ ಭಾರತ ಎಲದರಲ್ಲೂ ಪೈಪೋಟಿಯನ್ನು ನೀಡುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಇದನ್ನೂ ಓದಿ: ದೆಹಲಿಯಲ್ಲಿ ಶ್ರೀಲಂಕಾ ಪ್ರಧಾನಿಯನ್ನು ಭೇಟಿಯಾದ ಪ್ರಧಾನಿ ಮೋದಿ

ಭಾರತವು ಪ್ರತಿಯೊಂದರಲ್ಲೂ ಸುಧಾರಣೆ

ತಮ್ಮ ಸರ್ಕಾರವು ಪ್ರತಿಯೊಂದು ಸುಧಾರಣೆಯನ್ನು ತಂದಿದೆ. ಅದರಲ್ಲಿ ಸ್ಥಿತಿಸ್ಥಾಪಕತ್ವ ಹೊಂದಿದೆ. ಇದರ ಜತೆಗೆ ಹೊಸ ಹೊಸ ವಿಚಾರಗಳಲ್ಲಿ ಕ್ರಾಂತಿಯನ್ನು ತಂದಿದೆ. ಭಯೋತ್ಪಾದಕ ದಾಳಿಯ ನಂತರ ಭಾರತ ಈಗ ಮೌನವಾಗಿಲ್ಲ, ಬದಲಿಗೆ ಸರ್ಜಿಕಲ್ ಮತ್ತು ವಾಯುದಾಳಿಗಳನ್ನು ಬಳಸುವಾಗ ಪ್ರತೀಕಾರ ತೀರಿಸಿಕೊಳ್ಳುತ್ತಿದೆ ಎಂದು ಹೇಳಿದ್ದಾರೆ.

ಭಾರತ ನಿಲ್ಲುವ ಮನಸ್ಥಿತಿಯನ್ನು ಹೊಂದಿಲ್ಲ. ಯಾವುದೇ ತಡೆಗಳು ಬಂದರು ಅದನ್ನು ಎದುರಿಸುವ ಶಕ್ತಿ ಇದೆ. ನಮ್ಮ ಜತೆಗೆ 140 ಕೋಟಿ ಭಾರತೀಯರಿದ್ದರೆ. ಭಾರತ ಆರ್ಥಿಕವಾಗಿ ಬೆಳೆದಿದೆ. ಜಗತ್ತಿನ ಮುಂದೆ ನಾವು ಆರ್ಥಿಕವಾಗಿ ಬೆಳೆದು ನಿಂತಿದ್ದಾನೆ ಎಂದು ಹೇಳಿದರು.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?