AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi Interaction: ವಿಕಸಿತ್ ವೈಬ್ರೆಂಟ್ ಗ್ರಾಮ ಯೋಜನೆ; ಪ್ರಧಾನಿ ಜೊತೆ ಅನುಭವ ಹಂಚಿಕೊಂಡ ಯುವಜನರು

PM Modi interacts with students and youth: ಪ್ರಧಾನಿ ನರೇಂದ್ರ ಮೋದಿ ಅವರು ವಿಕಸಿತ್ ವೈಬ್ರೆಂಟ್ ವಿಲೇಜ್ ಪ್ರೋಗ್ರಾಮ್​ನಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಮೈ ಭಾರತ್ ಅಭಿಯಾನದ ಭಾಗವಾಗಿ ಆಯೋಜನೆಯಾದ ವಿವಿವಿಪಿ ಕಾರ್ಯಕ್ರಮದಲ್ಲಿ 400ಕ್ಕೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಜೂನ್ 4ರಿಂದ 30ರವರೆಗೆ ನಡೆದ ಕಾರ್ಯಕ್ರಮದಲ್ಲಿ ತಮ್ಮ ಅನುಭವವನ್ನು ಈ ಮಕ್ಕಳು ಪ್ರಧಾನಿ ಜೊತೆ ಹಂಚಿಕೊಂಡರು.

PM Modi Interaction: ವಿಕಸಿತ್ ವೈಬ್ರೆಂಟ್ ಗ್ರಾಮ ಯೋಜನೆ; ಪ್ರಧಾನಿ ಜೊತೆ ಅನುಭವ ಹಂಚಿಕೊಂಡ ಯುವಜನರು
ವಿದ್ಯಾರ್ಥಿಗಳೊಂದಿಗೆ ಮೋದಿ ಸಂವಾದ
ಸುಗ್ಗನಹಳ್ಳಿ ವಿಜಯಸಾರಥಿ
| Edited By: |

Updated on:Jul 28, 2026 | 2:58 PM

Share

ನವದೆಹಲಿ, ಜುಲೈ 26: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ವಿಕಸಿತ್ ವೈಬ್ರೆಂಟ್ ವಿಲೇಜ್ ಪ್ರೋಗ್ರಾಮ್​ನಲ್ಲಿ (Viksit Vibrant Village Programme 2026) ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಮೈ ಭಾರತ್ ಪ್ಲಾಟ್​ಫಾರ್ಮ್ ವತಿಯಿಂದ ಆಯೋಜನೆಯಾದ ವಿವಿವಿಪಿ ಕಾರ್ಯಕ್ರಮದಲ್ಲಿ 400ಕ್ಕೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಜೂನ್ 4ರಿಂದ 30ರವರೆಗೆ ನಡೆದ ಕಾರ್ಯಕ್ರಮದಲ್ಲಿ ತಮ್ಮ ಅನುಭವವನ್ನು ಈ ಮಕ್ಕಳು ಪ್ರಧಾನಿ ಜೊತೆ ಹಂಚಿಕೊಂಡರು. ಗ್ರಾಮಸ್ಥರೊಂದಿಗಿನ ಒಡನಾಟ, ಅಲ್ಲಿ ಕಂಡಿರುವ ಅಭಿವೃದ್ಧಿ ಇತ್ಯಾದಿ ಎಲ್ಲವನ್ನೂ ಅವರು ಮೋದಿ ಜೊತೆ ಹಂಚಿಕೊಂಡಿದ್ದಾರೆ.

ವಿಕಸಿತ್ ವೈಬ್ರೆಂಟ್ ವಿಲೇಜ್ ಪ್ರೋಗ್ರಾಮ್ 2026 ಅನ್ನು ಎರಡು ಹಂತಗಳಲ್ಲಿ ಆಯೋಜನೆ ಮಾಡಲಾಗಿತ್ತು. ಲಡಾಖ್, ಹಿಮಾಚಲಪ್ರದೇಶ ಮತ್ತು ಉತ್ತರಾಖಂಡ್​ನಾದ್ಯಂತ ಗಡಿಭಾಗದ 74 ಗ್ರಾಮಗಳಲ್ಲಿ ಜೂನ್ 4ರಿಂದ 30ರವರೆಗೆ ಎರಡು ಹಂತಗಳಲ್ಲಿ ಈ ಗ್ರಾಮ ಸೇವೆಯ ಕಾರ್ಯಕ್ರಮ ನಡೆಸಲಾಯಿತು.

ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳು ಮತ್ತು ಯುವಜನರು ಈ ಗಡಿ ಭಾಗದ ಗ್ರಾಮಗಳ ಸಮುದಾಯದೊಂದಿಗೆ ವಾಸವಿದ್ದರು. ಸರ್ಕಾರದ ಯೋಜನೆಗಳ ಬಗ್ಗೆ ಅರಿವು ಮೂಡಿಸುವುದು, ಸ್ವಚ್ಛತಾ ಕಾರ್ಯ, ಸಸಿ ನೆಡುವುದು, ಯುವ ಸಮ್ಮೇಳನ ನಡೆಸುವುದು, ಸಾಂಸ್ಕೃತ ವಿನಿಯಮ ಕಾರ್ಯಕ್ರಮಗಳನ್ನು ನಡೆಸುವುದು ಇತ್ಯಾದಿ ಕಾರ್ಯಗಳನ್ನು ಈ ಯುವಜನರು ಕೈಗೊಂಡಿದ್ದು ವಿಶೇಷ.

ಆನ್​ಲೈನ್ ಕ್ವಿಜ್ ಸ್ಪರ್ಧೆ ಮೂಲಕ ಈ ಯೋಜನೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಯಿತು. ರಾಷ್ಟ್ರ ಮಟ್ಟದಲ್ಲಿ ನಡೆದ ಕ್ವಿಜ್ ಸ್ಪರ್ಧೆಯಲ್ಲಿ 3 ಲಕ್ಷಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದರು. ಅವರಲ್ಲಿ 400 ಮಂದಿಯನ್ನು ವಿಕಸಿತ್ ವೈಬ್ರೆಂಟ್ ವಿಲೇಜ್ ಪ್ರೋಗ್ರಾಮ್​ಗೆ ಆಯ್ಕೆ ಮಾಡಲಾಗಿತ್ತು. ಇದರಲ್ಲಿ ಪಾಲ್ಗೊಂಡಿದ್ದ ಯುವಜನರಿಗೆ ಗ್ರಾಮೀಣ ಭಾಗದ ಸಂಸ್ಕೃತಿಯ ಸಮೀಪ ದರ್ಶನವಾಗಿದೆ. ಸ್ಥಳೀಯ ಕಲಾವಿದರು, ಸಂಸ್ಥೆಗಳನ್ನು ಭೇಟಿ ಮಾಡಿ ಅನುಭವ ಕೂಡ ಪಡೆದಿದ್ದಾರೆ.

ಈ ವಿಕಸಿತ್ ವೈಬ್ರೆಂಟ್ ವಿಲೇಜ್ ಪ್ರೋಗ್ರಾಮ್ ಅನ್ನು ಮೈ ಭಾರತ್ ಯೋಜನೆಯ ಭಾಗವಾಗಿ ಹಮ್ಮಿಕೊಳ್ಳಲಾಗಿತ್ತು.

Published On - 5:10 pm, Sun, 26 July 26

Follow Us
ದರ್ಶನ್ ಮತ್ತೆ ಜೈಲು ಸೇರಿ 1 ವರ್ಷ, ಏನೇನಾಯ್ತು? ವಿವರ ಇಲ್ಲಿದೆ
ದರ್ಶನ್ ಮತ್ತೆ ಜೈಲು ಸೇರಿ 1 ವರ್ಷ, ಏನೇನಾಯ್ತು? ವಿವರ ಇಲ್ಲಿದೆ
ಬಿಗ್​​ಬಾಸ್ ಮನೆಗೆ ಹೋಗಲು ಅಪ್ಪ-ಮಗನ ನಡುವೆಯೇ ಪೈಪೋಟಿ: ವಿಡಿಯೋ
ಬಿಗ್​​ಬಾಸ್ ಮನೆಗೆ ಹೋಗಲು ಅಪ್ಪ-ಮಗನ ನಡುವೆಯೇ ಪೈಪೋಟಿ: ವಿಡಿಯೋ
ಹೆಬ್ಬಾಳ್ಕರ್​​ ಪರ ನಿಂತ ಜಾರಕಿಹೊಳಿ, ಹಾವು ಮುಂಗುಸಿಯಂತಿದ್ದವರು ಒಂದಾದ್ರಾ?
ಹೆಬ್ಬಾಳ್ಕರ್​​ ಪರ ನಿಂತ ಜಾರಕಿಹೊಳಿ, ಹಾವು ಮುಂಗುಸಿಯಂತಿದ್ದವರು ಒಂದಾದ್ರಾ?
ಸೋಮಾವತಿ ನದಿಗೆ ಬಿದ್ದ ಕಾರು: ಬಂಡೆಯಿಂದಾಗಿ ಉಳಿದ ದಂಪತಿ ಜೀವ
ಸೋಮಾವತಿ ನದಿಗೆ ಬಿದ್ದ ಕಾರು: ಬಂಡೆಯಿಂದಾಗಿ ಉಳಿದ ದಂಪತಿ ಜೀವ
ಸ್ವಾತಂತ್ರ್ಯ ದಿನಾಚರಣೆ ವೇಳೆ ಖಡ್ಗ ಪ್ರದರ್ಶನ; ಓರ್ವನ ಬಂಧನ
ಸ್ವಾತಂತ್ರ್ಯ ದಿನಾಚರಣೆ ವೇಳೆ ಖಡ್ಗ ಪ್ರದರ್ಶನ; ಓರ್ವನ ಬಂಧನ
RSS ನೋಂದಣಿ ಆಗಿಲ್ಲ, ಆಗೋದು ಇಲ್ಲ: ಪ್ರಿಯಾಂಕ್ ಖರ್ಗೆ ಸಂತೋಷ್​​ ತಿರುಗೇಟು
RSS ನೋಂದಣಿ ಆಗಿಲ್ಲ, ಆಗೋದು ಇಲ್ಲ: ಪ್ರಿಯಾಂಕ್ ಖರ್ಗೆ ಸಂತೋಷ್​​ ತಿರುಗೇಟು
'ವಂದೇ ಮಾತರಂ' ಗೀತೆಗೆ ಅವಮಾನಿಸಿದರೇ ಸೋನಿಯಾ ಗಾಂಧಿ?
'ವಂದೇ ಮಾತರಂ' ಗೀತೆಗೆ ಅವಮಾನಿಸಿದರೇ ಸೋನಿಯಾ ಗಾಂಧಿ?
ನಾನು ಮಾತಾಡಲ್ಲ ಅಂದ್ರೆ ಸೈಲೆಂಟ್ ಆಗಿದ್ದೀನಿ ಅಂತಾ ಅರ್ಥ ಅಲ್ಲ ಎಂದ ಸಿದ್ದು
ನಾನು ಮಾತಾಡಲ್ಲ ಅಂದ್ರೆ ಸೈಲೆಂಟ್ ಆಗಿದ್ದೀನಿ ಅಂತಾ ಅರ್ಥ ಅಲ್ಲ ಎಂದ ಸಿದ್ದು
6ನೇ ತರಗತಿಯಿಂದ AI ಶಿಕ್ಷಣ, AI ವಿಶ್ವವಿದ್ಯಾಲಯ: ಸಿಎಂ ಮಹತ್ವದ ಘೋಷಣೆ
6ನೇ ತರಗತಿಯಿಂದ AI ಶಿಕ್ಷಣ, AI ವಿಶ್ವವಿದ್ಯಾಲಯ: ಸಿಎಂ ಮಹತ್ವದ ಘೋಷಣೆ
ಸರ್ಕಾರದ ಅಭಿವೃದ್ಧಿ ಯೋಜನೆಗಳ ಬಗ್ಗೆ ಸಿಎಂ ಡಿಕೆ ಶಿವಕುಮಾರ ಏನಂದ್ರು?
ಸರ್ಕಾರದ ಅಭಿವೃದ್ಧಿ ಯೋಜನೆಗಳ ಬಗ್ಗೆ ಸಿಎಂ ಡಿಕೆ ಶಿವಕುಮಾರ ಏನಂದ್ರು?