AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Women’s Day: ಮಹಿಳಾ ದಿನಾಚರಣೆ ನಿಮಿತ್ತ ನಾರಿಶಕ್ತಿ ಪುರಸ್ಕೃತರೊಂದಿಗೆ ಸಂವಾದ ನಡೆಸಿದ ಪ್ರಧಾನಿ ಮೋದಿ

ಹಿಳೆಯರ ಸಾಮರ್ಥ್ಯವನ್ನು ಅರಿತು, ಆ ಸಾಮರ್ಥ್ಯಕ್ಕೆ ತಕ್ಕಂತೆ ನೀತಿಗಳನ್ನು ರಚಿಸಲು ನಮ್ಮ ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

Women’s Day: ಮಹಿಳಾ ದಿನಾಚರಣೆ ನಿಮಿತ್ತ ನಾರಿಶಕ್ತಿ ಪುರಸ್ಕೃತರೊಂದಿಗೆ ಸಂವಾದ ನಡೆಸಿದ ಪ್ರಧಾನಿ ಮೋದಿ
ನಾರಿಶಕ್ತಿ ಪುರಸ್ಕೃತರೊಂದಿಗೆ ಪ್ರಧಾನಿ ಮೋದಿ ಸಂವಾದ
TV9 Web
| Updated By: Lakshmi Hegde|

Updated on:Mar 08, 2022 | 10:51 AM

Share

ಮಹಿಳಾ ದಿನಾಚರಣೆ (Women’s Day) ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಸೋಮವಾರ (ಮಾರ್ಚ್​ 7) ನಾರಿ ಶಕ್ತಿ ಪುರಸ್ಕಾರಕ್ಕೆ ಪಾತ್ರರಾದ ಮಹಿಳೆಯರೊಂದಿಗೆ ಸಂವಾದ ನಡೆಸಿದ್ದಾರೆ. 2020 ಮತ್ತು 2021ನೇ ಸಾಲಿನ ನಾರಿಶಕ್ತಿ ಪುರಸ್ಕಾರವನ್ನು ಒಟ್ಟು 28 ಮಹಿಳೆಯರಿಗೆ ಇಂದು ಮಹಿಳಾ ದಿನಾಚರಣೆಯಂದು (ಮಾರ್ಚ್​ 8) ರಾಷ್ಟ್ರಪತಿ ರಾಮನಾಥ ಕೋವಿಂದ್​ ಪ್ರದಾನ ಮಾಡಲಿದ್ದಾರೆ. ಅಂದರೆ 2020ನೇ ಸಾಲಿನಲ್ಲಿ 14 ಮಹಿಳೆಯರು ಮತ್ತು 2021ನೇ ಸಾಲಿನಲ್ಲಿ 14 ಮಹಿಳೆಯರು ಈ ಗೌರವಕ್ಕೆ ಪಾತ್ರರಾಗಿದ್ದು, ಇಂದು ಪ್ರಶಸ್ತಿ ಪಡೆಯಲಿದ್ದಾರೆ. ಹಿಂದುಳಿದ, ದುರ್ಬಲ ವರ್ಗದ ಮಹಿಳೆಯರ ಅಭಿವೃದ್ಧಿಗೆ ಇವರ ಪಟ್ಟ ಶ್ರಮ, ಮಾಡಿದ ಅಸಾಧಾರಣ ಕೆಲಸಗಳನ್ನು ಪರಿಗಣಿಸಿ ನಾರಿ ಶಕ್ತಿ ಪುರಸ್ಕಾರ ನೀಡಲಾಗುತ್ತಿದೆ.

ನಿನ್ನೆ ಮಹಿಳೆಯರೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೆಲ್ಲರ ಕೆಲಸಗಳನ್ನೂ ಹೊಗಳಿದ್ದಾರೆ. ಇಡೀ ಸಮಾಜ, ದೇಶಕ್ಕೆ ಅವರ ಕೊಡುಗೆ ಪ್ರಶಂಸನೀಯ ಎಂದಿದ್ದಾರೆ. ನಾರಿಶಕ್ತಿ ಪುರಸ್ಕಾರಕ್ಕೆ ಪಾತ್ರರಾದ ಈ ಮಹಿಳೆಯರ ಕೆಲಸದಲ್ಲಿ ಸೇವಾ ಮನೋಭಾವದೊಂದಿಗೆ ಹೊಸತನವೂ ಇದೆ. ಮಹಿಳೆಯರು ಕೆಲಸ ಮಾಡದ, ಸಾಧನೆ ಮಾಡದ ಕ್ಷೇತ್ರ ಯಾವುದೂ ಇಲ್ಲ. ದೇಶವನ್ನ ಹೆಮ್ಮೆ ಪಡುವಂತೆ ಮಾಡಿದ್ದಾರೆ ಎಂದು ಹೊಗಳಿದ್ದಾರೆ. ಹಾಗೇ, ತಾವು ಮಹಿಳೆಯರೊಂದಿಗೆ ಸಂವಾದ ನಡೆಸಿದ ಫೋಟೋಗಳನ್ನೂ ಟ್ವಿಟರ್​​ನಲ್ಲೂ ಶೇರ್ ಮಾಡಿಕೊಂಡಿದ್ದಾರೆ.

ಈ ವೇಳೆ ಮಾತನಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಮಹಿಳೆಯರ ಸಾಮರ್ಥ್ಯವನ್ನು ಅರಿತು, ಆ ಸಾಮರ್ಥ್ಯಕ್ಕೆ ತಕ್ಕಂತೆ ನೀತಿಗಳನ್ನು ರಚಿಸಲು ನಮ್ಮ ಕೇಂದ್ರ ಸರ್ಕಾರ ಬದ್ಧವಾಗಿದೆ.  ಮಹಿಳೆಯರು ಆರ್ಥಿಕರಾಗಿ ಸಬಲರಾಗಿದ್ದಾರೆ. ಹೀಗಾಗಿ ಒಂದು ಕುಟುಂಬದಲ್ಲಿರುವ ಪ್ರತಿ ಮಹಿಳೆಯೂ ಆಯಾ ಕುಟುಂಬದಲ್ಲಿ ಏನೇ ನಿರ್ಧಾರ ತೆಗೆದುಕೊಳ್ಳುವಲ್ಲಿ ಸಮಾನ ಹಕ್ಕು ಹೊಂದಿರುತ್ತಾರೆ ಎಂದೂ ಹೇಳಿದರು.  ಅಂದಹಾಗೇ, ಈ ನಾರಿಶಕ್ತಿ ಪುರಸ್ಕಾರ್​ ಎಂಬುದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ಒಂದು ಉಪಕ್ರಮ. ಈ ಸಮಾಜದಲ್ಲಿ ಬದಲಾವಣೆ ತಂದ, ಸುಧಾರಣೆಗಾಗಿ ಅಸಾಧಾರಣ ಕೆಲಸ ಮಾಡಿದ ಮಹಿಳೆಯರನ್ನು ಗೌರವಿಸಲು ಇದನ್ನು ಪ್ರಾರಂಭಿಸಲಾಗಿದೆ.  ಉದ್ಯಮ, ಕೃಷಿ, ಸಾಮಾಜಿಕ ಕಾರ್ಯ, ಶಿಕ್ಷಣ, ಸಾಹಿತ್ಯ, ಭಾಷಾಶಾಸ್ತ್ರ, ಕಲೆ ಮತ್ತು ಕರಕುಶಲ, STEM (ವಿಜ್ಞಾನ, ತಂತ್ರಜ್ಞಾನ, ಇಂಜಿನಿಯರಿಂಗ್ ಮತ್ತು ಗಣಿತ), ಅಂಗವೈಕಲ್ಯ ಹಕ್ಕುಗಳು, ಕಡಲ ಉದ್ಯಮ ಮತ್ತು ವನ್ಯಜೀವಿ ಸಂರಕ್ಷಣೆ ಹೀಗೆ ಇಂಥ ಯಾವುದೇ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರಿಗೆ ನಾರಿಶಕ್ತಿ ಪುರಸ್ಕಾರ ನೀಡಲಾಗುತ್ತದೆ.

ಇದನ್ನೂ ಓದಿ: Women’s Day: ಭಾರತೀಯ ಚಿತ್ರರಂಗದಲ್ಲಿ ವಿಶಿಷ್ಟ ಛಾಪು ಮೂಡಿಸಿರುವ ಈಶಾನ್ಯ ರಾಜ್ಯಗಳ ಬೆಡಗಿಯರಿವರು

Published On - 8:08 am, Tue, 8 March 22

​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು