AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi France Visit: ಭಾರತವು ಪಾಶ್ಚಿಮಾತ್ಯ ಜಗತ್ತಿಗೆ ಒಂದು ಸೇತುವೆಯಾಗಿ ಕೆಲಸ ಮಾಡಲಿದೆ: ಪ್ರಧಾನಿ ಮೋದಿ

ಭಾರತವು ಪಾಶ್ಚಿಮಾತ್ಯ ಜಗತ್ತು ಹಾಗೂ ವಿಶ್ವದ ದಕ್ಷಿಣ ಭಾಗಕ್ಕೆ ಒಂದು ಸೇತುವೆಯಾಗಿ ಕೆಲಸ ಮಾಡುವ ಕ್ಷಮತೆಯನ್ನು ಹೊಂದಿದೆ ಎಂದು ಫ್ರಾನ್ಸ್​ ದೈನಿಕಕ್ಕೆ ನೀಡಿರುವ ಸಂದರ್ಶನದಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ.

PM Modi France Visit: ಭಾರತವು ಪಾಶ್ಚಿಮಾತ್ಯ ಜಗತ್ತಿಗೆ ಒಂದು ಸೇತುವೆಯಾಗಿ ಕೆಲಸ ಮಾಡಲಿದೆ: ಪ್ರಧಾನಿ ಮೋದಿ
ನರೇಂದ್ರ ಮೋದಿImage Credit source: India Today
ನಯನಾ ರಾಜೀವ್
|

Updated on: Jul 13, 2023 | 11:49 AM

Share

ಭಾರತವು ಪಾಶ್ಚಿಮಾತ್ಯ ಜಗತ್ತು ಹಾಗೂ ವಿಶ್ವದ ದಕ್ಷಿಣ ಭಾಗಕ್ಕೆ ಒಂದು ಸೇತುವೆಯಾಗಿ ಕೆಲಸ ಮಾಡುವ ಕ್ಷಮತೆಯನ್ನು ಹೊಂದಿದೆ ಎಂದು ಫ್ರಾನ್ಸ್​ ದೈನಿಕಕ್ಕೆ ನೀಡಿರುವ ಸಂದರ್ಶನದಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ಫ್ರಾನ್ಸ್​ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಸಾಕಷ್ಟು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕುವ ನಿರೀಕ್ಷೆ ಇದೆ. ಫ್ರೆಂಚ್ ಪತ್ರಿಕೆ ಲೆಸ್ ಎಕೋಸ್‌ಗೆ ನೀಡಿದ ಸಂದರ್ಶನದಲ್ಲಿ ಪ್ರಧಾನಿ ಮೋದಿ ಅವರು ಭಾರತ-ಫ್ರಾನ್ಸ್ ನಡುವಿನ 25 ವರ್ಷಗಳ ಕಾರ್ಯತಂತ್ರದ ಪಾಲುದಾರಿಕೆಯ ಬಗ್ಗೆ ಮಾತನಾಡಿದರು.

2047ರ ಹೊತ್ತಿಗೆ 100ನೇ ಸ್ವಾತಂತ್ರ್ಯ ದಿನವನ್ನು ಆಚರಣೆ ಮಾಡಲಾಗುತ್ತದೆ, ಅಷ್ಟೊತ್ತಿಗೆ ಭಾರತವನ್ನು ಅಭಿವೃದ್ಧಿಶೀಲ ರಾಷ್ಟ್ರವನ್ನಾಗಿ ಮಾಡುವುದೇ ನಮ್ಮ ಗುರಿ. ಭಾರತವು ಈಗ ವಿಶ್ವದ ಐದನೇ ಅತಿತೊಡ್ಡ ಆರ್ಥಿಕತೆಯಾಗಿದೆ, ಹಾಗೂ ಮೂರನೇ ಅತಿದೊಡ್ಡ ಆರ್ಥಿಕತೆಯ ಹಾದಿಯಲ್ಲಿದೆ ಎಂದರು.

ಭಾರತವು ಸಾವಿರಾರು ವರ್ಷಗಳಷ್ಟು ಹಳೆಯದಾದ ಶ್ರೀಮಂತ ನಾಗರಿಕತೆಯಾಗಿದೆ. ಇಂದು ಭಾರತವು ವಿಶ್ವದಲ್ಲೇ ಅತ್ಯಂತ ಯುವ ರಾಷ್ಟ್ರವಾಗಿದೆ. ಭಾರತದ ಪ್ರಬಲ ಆಸ್ತಿ ನಮ್ಮ ಯುವಕರು. ವಿಶ್ವದ ಅನೇಕ ದೇಶಗಳು ವಯಸ್ಸಾಗುತ್ತಿರುವಾಗ ಮತ್ತು ಅವರ ಜನಸಂಖ್ಯೆಯು ಕುಗ್ಗುತ್ತಿರುವ ಸಮಯದಲ್ಲಿ, ಭಾರತದ ಯುವ ಮತ್ತು ನುರಿತ ಉದ್ಯೋಗಿಗಳು ಮುಂದಿನ ದಶಕಗಳಲ್ಲಿ ಜಗತ್ತಿಗೆ ಆಸ್ತಿಯಾಗುತ್ತಾರೆ.

ಮತ್ತಷ್ಟು ಓದಿ: PM Modi France visit: ಇಂದಿನಿಂದ ಪ್ರಧಾನಿ ಮೋದಿ 2 ದಿನಗಳ ಫ್ರಾನ್ಸ್ ಪ್ರವಾಸ, ಕಾರ್ಯಕ್ರಮದ ವೇಳಾಪಟ್ಟಿ ಇಲ್ಲಿದೆ

ಭಾರತವು ಜಗತ್ತಿನಲ್ಲಿ ಸರಿಯಾದ ಸ್ಥಾನವನ್ನು ಪಡೆಯುತ್ತಿದೆ ಎನ್ನುವ ಕುರಿತು ಪ್ರಶ್ನೆಗಳಿಗೆ ಉತ್ತರಿಸಿದ ಅವರು, ‘ನಾನು ಸರಿಯಾದ ಸ್ಥಾನವನ್ನು ಮರಳಿ ಪಡೆಯುವುದು ಎಂದು ಹೇಳುತ್ತೇನೆ, ಅನಾದಿ ಕಾಲದಿಂದಲೂ, ಜಾಗತಿಕ ಆರ್ಥಿಕ ಬೆಳವಣಿಗೆ, ತಾಂತ್ರಿಕ ಪ್ರಗತಿ ಮತ್ತು ಮಾನವ ಅಭಿವೃದ್ಧಿಗೆ ಕೊಡುಗೆ ನೀಡುವಲ್ಲಿ ಭಾರತವು ಮುಂಚೂಣಿಯಲ್ಲಿದೆ.

ಇಂದು, ಪ್ರಪಂಚದಾದ್ಯಂತ, ನಾವು ಬಹಳಷ್ಟು ಸಮಸ್ಯೆಗಳನ್ನು ಮತ್ತು ಸವಾಲುಗಳನ್ನು ನೋಡುತ್ತೇವೆ. ಆರ್ಥಿಕ ಹಿಂಜರಿತ, ಆಹಾರ ಭದ್ರತೆ, ಹಣದುಬ್ಬರ, ಸಾಮಾಜಿಕ ಉದ್ವಿಗ್ನತೆಗಳು ಅವುಗಳಲ್ಲಿ ಕೆಲವು.

ಅಂತಹ ಜಾಗತಿಕ ಹಿನ್ನೆಲೆಯಲ್ಲಿ, ನಮ್ಮ ಜನರಲ್ಲಿ ನವೀಕೃತ ವಿಶ್ವಾಸ, ಭವಿಷ್ಯದ ಬಗ್ಗೆ ಆಶಾವಾದ ಮತ್ತು ಜಗತ್ತಿನಲ್ಲಿ ಅದರ ಸರಿಯಾದ ಸ್ಥಾನವನ್ನು ಪಡೆಯಲು ಉತ್ಸುಕನಾಗಿದ್ದೇನೆ.

ನಾವು ಈಗ ಒಂದು ತಿರುವು ಪಡೆಯುತ್ತಿದ್ದೇವೆ, ನಾವು ಸಾಂಕ್ರಾಮಿಕ ನಂತರದ ಜಾಗತಿಕ ಕ್ರಮವನ್ನು ಮತ್ತು ಅದು ತೆಗೆದುಕೊಳ್ಳುತ್ತಿರುವ ಆಕಾರವನ್ನು ನೋಡಿದರೆ, ನಮ್ಮ ಕಾರ್ಯತಂತ್ರದ ಪಾಲುದಾರಿಕೆಯ ಸಕಾರಾತ್ಮಕ ಅನುಭವವು ಒಂದು ಪ್ರಮುಖ ಹೆಜ್ಜೆಯಾಗಿದೆ ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ.

ಮೂರು ದಿನಗಳ ವಿದೇಶ ಪ್ರವಾಸಕ್ಕೆ ಪ್ರಧಾನಿ ನರೇಂದ್ರ ಮೋದಿ ಗುರುವಾರ (ಜುಲೈ 13) ತೆರಳಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕಾಲ ಫ್ರಾನ್ಸ್ ಮತ್ತು ಯುಎಇಗೆ ಒಂದು ದಿನ ಭೇಟಿ ನೀಡಲಿದ್ದಾರೆ. ಫ್ರಾನ್ಸ್‌ಗೆ ತೆರಳುವ ಮುನ್ನ ಪ್ರಧಾನಿ ಮೋದಿ ಅವರು ತಮ್ಮ ಫ್ರಾನ್ಸ್ ಭೇಟಿಯ ಕುರಿತು ಹೇಳಿಕೆ ನೀಡಿ ಮಾಹಿತಿ ಹಂಚಿಕೊಂಡರು.

ನನ್ನ ಸ್ನೇಹಿತ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರ ಆಹ್ವಾನದ ಮೇರೆಗೆ ನಾನು ಜುಲೈ 13-14 ರವರೆಗೆ ಫ್ರಾನ್ಸ್‌ಗೆ ಅಧಿಕೃತ ಭೇಟಿ ನೀಡುತ್ತಿದ್ದೇನೆ . ಈ ಭೇಟಿ ವಿಶೇಷವಾಗಿದೆ ಏಕೆಂದರೆ ನಾನು ಫ್ರೆಂಚ್ ರಾಷ್ಟ್ರೀಯ ದಿನ ಅಥವಾ ಬಾಸ್ಟಿಲ್ ಡೇ ಆಚರಣೆಗಳಲ್ಲಿ ವಿಶೇಕ್ಷ ಅತಿಥಿಯಾಗಿ ಭಾಗವಹಿಸಲಿದ್ದೇನೆ ಎಂದಿದ್ದಾರೆ.

2022 ರಲ್ಲಿ ಫ್ರಾನ್ಸ್‌ಗೆ ನನ್ನ ಕೊನೆಯ ಅಧಿಕೃತ ಭೇಟಿಯ ನಂತರ, ಅಧ್ಯಕ್ಷ ಮ್ಯಾಕ್ರನ್ ಅವರನ್ನು ಹಲವಾರು ಬಾರಿ ಭೇಟಿ ಮಾಡುವ ಅವಕಾಶ ನನಗೆ ಸಿಕ್ಕಿದೆ. ಇತ್ತೀಚೆಗೆ ನಾವು ಜಿ-7 ಶೃಂಗಸಭೆಯಲ್ಲಿ ಮೇ 2023 ರಲ್ಲಿ ಜಪಾನ್‌ನ ಹಿರೋಷಿಮಾದಲ್ಲಿ ಭೇಟಿಯಾಗಿದ್ದೆವು ಎಂದರು.

ನಮ್ಮ ಎರಡು ದೇಶಗಳು ವ್ಯಾಪಾರ, ಹೂಡಿಕೆ, ಇಂಧನ, ಆಹಾರ ಭದ್ರತೆ, ವಿಜ್ಞಾನ ಮತ್ತು ತಂತ್ರಜ್ಞಾನ, ಶಿಕ್ಷಣ, ಫಿನ್‌ಟೆಕ್, ರಕ್ಷಣೆ, ಭದ್ರತೆಗಳಂತಹ ವ್ಯಾಪಕ ಶ್ರೇಣಿಯ ಕ್ಷೇತ್ರಗಳಲ್ಲಿ ಸಂಪರ್ಕ ಹೊಂದಿವೆ ಎಂದು ಪ್ರಧಾನಿ ಮೋದಿ ಹೇಳಿದರು.

ಕಳೆದ ವರ್ಷ, ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಮತ್ತು ನಾನು ನಮ್ಮ ಪಾಲುದಾರಿಕೆಯ ಭವಿಷ್ಯದ ಬಗ್ಗೆ ಮಾರ್ಗಸೂಚಿಯನ್ನು ಒಪ್ಪಿಕೊಂಡಿದ್ದೇವೆ ಮತ್ತು ನಮ್ಮ ಸಂಬಂಧಗಳನ್ನು ಇನ್ನಷ್ಟು ಗಾಢವಾಗಿಸುವುದು ಹೇಗೆ ಎಂದು ಅವರೊಂದಿಗೆ ಚರ್ಚಿಸಲು ನಾನು ಉತ್ಸುಕನಾಗಿದ್ದೇನೆ, ಯುಎಇಗೆ ನನ್ನ ಭೇಟಿಯು ನಮ್ಮ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯಲ್ಲಿ ಹೊಸ ಅಧ್ಯಾಯವನ್ನು ತೆರೆಯುತ್ತದೆ ಎಂಬ ವಿಶ್ವಾಸ ನನಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ರಾಷ್ಟ್ರೀಯ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ