AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chhath Puja 2025: ಛತ್ ಪೂಜೆಗೆ ಸಂಬಂಧಿಸಿದ ನಿಮ್ಮ ಹಾಡುಗಳನ್ನು ಪ್ರಧಾನಿ ಮೋದಿ ಹಂಚಿಕೊಳ್ಳಬೇಕಾ, ಹಾಗಾದರೆ ಈ ಸಣ್ಣ ಕೆಲಸ ಮಾಡಿ

ಛತ್ ಪೂಜೆ ಸಮೀಪಿಸುತ್ತಿದೆ. ಪ್ರತಿ ವರ್ಷವು ನಾಲ್ಕು ದಿನಗಳ ಕಾಲ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ವರ್ಷ ಅಕ್ಟೋಬರ್ 25ರಿಂದ 28ರವರೆಗೆ ನಡೆಯಲಿದೆ.ಛತ್ ಪೂಜೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ಸಾರ್ವಜನಿಕರಿಗೆ ವಿಶೇಷ ಮನವಿ ಮಾಡಿದ್ದಾರೆ. ಪ್ರಕೃತಿ ಮತ್ತು ಸಂಸ್ಕೃತಿಗೆ ಮೀಸಲಾಗಿರುವ ಭವ್ಯ ಹಬ್ಬವಾದ ಛತ್ ಸಮೀಪಿಸುತ್ತಿದೆ. ಬಿಹಾರ ಹಾಗೂ ದೇಶಾದ್ಯಂತ ಭಕ್ತರು ಈಗಾಗಲೇ ಭಕ್ತಿಯಿಂದ ಸಿದ್ಧತೆಗಳನ್ನು ಆರಂಭಿಸಿದ್ದಾರೆ. ಛತ್ ಪೂಜೆಗೆ ಸಮರ್ಪಿತವಾದ ಹಾಡುಗಳನ್ನು ನನ್ನೊಂದಿಗೆ ಹಂಚಿಕೊಳ್ಳಿ, ಮುಂದಿನ ದಿನಗಳಲ್ಲಿ ನಾನು ಅವುಗಳನ್ನು ದೇಶವಾಸಿಗಳೊಂದಿಗೆ ಹಂಚಿಕೊಳ್ಳುತ್ತೇನೆ ಎಂದು ಮೋದಿ ವಿನಂತಿಸಿದ್ದಾರೆ.

Chhath Puja 2025: ಛತ್ ಪೂಜೆಗೆ ಸಂಬಂಧಿಸಿದ ನಿಮ್ಮ ಹಾಡುಗಳನ್ನು ಪ್ರಧಾನಿ ಮೋದಿ ಹಂಚಿಕೊಳ್ಳಬೇಕಾ, ಹಾಗಾದರೆ ಈ ಸಣ್ಣ ಕೆಲಸ ಮಾಡಿ
ನರೇಂದ್ರ ಮೋದಿ
ನಯನಾ ರಾಜೀವ್
|

Updated on:Oct 24, 2025 | 11:44 AM

Share

ನವದೆಹಲಿ, ಅಕ್ಟೋಬರ್ 24: ಛತ್ ಪೂಜೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ಸಾರ್ವಜನಿಕರಿಗೆ ವಿಶೇಷ ಮನವಿ ಮಾಡಿದ್ದಾರೆ. ಪ್ರಕೃತಿ ಮತ್ತು ಸಂಸ್ಕೃತಿಗೆ ಮೀಸಲಾಗಿರುವ ಭವ್ಯ ಹಬ್ಬವಾದ ಛತ್ ಸಮೀಪಿಸುತ್ತಿದೆ. ಬಿಹಾರ ಹಾಗೂ ದೇಶಾದ್ಯಂತ ಭಕ್ತರು ಈಗಾಗಲೇ ಭಕ್ತಿಯಿಂದ ಸಿದ್ಧತೆಗಳನ್ನು ಆರಂಭಿಸಿದ್ದಾರೆ. ಛತ್ ಪೂಜೆಗೆ ಸಮರ್ಪಿತವಾದ ಹಾಡುಗಳನ್ನು ನನ್ನೊಂದಿಗೆ ಹಂಚಿಕೊಳ್ಳಿ, ಮುಂದಿನ ದಿನಗಳಲ್ಲಿ ನಾನು ಅವುಗಳನ್ನು ದೇಶವಾಸಿಗಳೊಂದಿಗೆ ಹಂಚಿಕೊಳ್ಳುತ್ತೇನೆ ಎಂದು ಮೋದಿ ವಿನಂತಿಸಿದ್ದಾರೆ.

ಛತ್ ಪೂಜೆ ನಾಲ್ಕು ದಿನಗಳ ಕಾಲ ಆಚರಿಸಿರುವ ಹಿಂದೂ ಹಬ್ಬವಾಗಿದ್ದು, ಬಿಹಾರ, ಜಾರ್ಖಂಡ್, ಉತ್ತರ ಪ್ರದೇಶ ಮತ್ತು ನೇಪಾಳದ ಕೆಲವು ಭಾಗಗಳಲ್ಲಿ ಆಚರಿಸಲಾಗುತ್ತದೆ. ಈ ಹಬ್ಬವನ್ನು ಸೂರ್ಯ ದೇವರಿಗೆ ಹಾಗೂ ಛಾತ್ ಮಯ್ಯಾ(ಉಷಾ ದೇವಿ)ಗೆ ಅರ್ಪಿಸಲಾಗುತ್ತದೆ. ಈ ಬಾರಿ ಅ.25ರಿಂದ 28ರವರೆಗೆ ನಡೆಯಲಿದೆ.

ಜನರು ದೀರ್ಘಾಯುಷ್ಯ, ಸಮೃದ್ಧಿ ಮತ್ತು ಯೋಗಕ್ಷೇಮಕ್ಕಾಗಿ ಉಪವಾಸ, ಪವಿತ್ರ ಸ್ನಾನ ಮಾಡಿ, ಸೂರ್ಯಾಸ್ತ ಮತ್ತು ಉದಯಿಸುತ್ತಿರುವ ಸೂರ್ಯನಿಗೆ ನಮಸ್ಕರಿಸುವ ಮೂಲಕ ಆಚರಿಸುತ್ತಾರೆ. ಛತ್ ಎಂದರೆ ಆರು, ಈ ಹಬ್ಬವನ್ನು ಕಾರ್ತಿಕ ಮಾಸದ ಆರನೇ ದಿನದಂದು ಆಚರಿಸಲಾಗುತ್ತದೆ ಎಂದು ಸೂಚಿಸುತ್ತದೆ. ಈ ದಿನ, ಭಕ್ತರು ಬೆಳಕಿನ ದೇವರಿಗೆ ಪ್ರಾರ್ಥನೆ ಸಲ್ಲಿಸುತ್ತಾರೆ.

ಮತ್ತಷ್ಟು ಓದಿ:Mann Ki Baat: ಛತ್ ಪೂಜೆಯನ್ನು ಯುನೆಸ್ಕೋ ಪಟ್ಟಿಯಲ್ಲಿ ಸೇರಿಸಲು ಸರ್ಕಾರ ಶ್ರಮ; ಮನ್ ಕಿ ಬಾತ್​​ನಲ್ಲಿ ಪ್ರಧಾನಿ ಮೋದಿ

ಬ್ರಹ್ಮಾಂಡದ ಎಲ್ಲಾ ಜೀವಿಗಳಿಗೆ ಶಕ್ತಿಯನ್ನು ನೀಡುವ ಜೀವ ಶಕ್ತಿ ಸೂರ್ಯ. ಈ ಹಿನ್ನಲೆ ಆತನ ಆರಾಧಿಸಲಾಗುತ್ತದೆ. ನಹಯ್​-ಖಯ್​, ಖರ್ನಾ, ಅಸ್ತಮಿಸುವ ಸೂರ್ಯನಿಗೆ ಅರ್ಘ್ಯ, ಉದಯಿಸುವ ಸೂರ್ಯನಿಗೆ ಆರ್ಘ್ಯ ಹೀಗೆ ದಿನಕ್ಕೆ ಒಂದರಂತೆ ಹಬ್ಬ ಆಚರಿಸಲಾಗುತ್ತದೆ. ಉಪವಾಸವು ಹಬ್ಬದ ಪ್ರಮುಖ ಭಾಗವಾಗಿದೆ.

ಮೋದಿ ಪೋಸ್ಟ್​

ಪ್ರಾಚೀನ ವೇದಗಳ ಕಾಲದಿಂದಲೂ ಛತ್ ಪೂಜೆಯನ್ನು ನಡೆಸಲಾಗುತ್ತಿತ್ತು. ಈ ಯುಗದಲ್ಲಿ ಋಷಿಗಳು ಉಪವಾಸವನ್ನು ಮಾಡಿದ ನಂತರ ಸೂರ್ಯನ ಕಿರಣಗಳಿಂದ ಶಕ್ತಿ ಮತ್ತು ಜೀವಶಕ್ತಿಯನ್ನು ಪಡೆಯಲು ಸೂರ್ಯನ ಬೆಳಕಿಗೆ ತಮ್ಮನ್ನು ಒಡ್ಡಿಕೊಳ್ಳುವ ಮೂಲಕ ಪ್ರಾರ್ಥನೆಗಳನ್ನು ನಡೆಸುತ್ತಿದ್ದರು.

ಈ ಛತ್ ಪೂಜೆಯನ್ನು ಮೊದಲು ಸೂರ್ಯ ಮತ್ತು ಕುಂತಿಯ ಪುತ್ರ ಕರ್ಣನು ನಡೆಸಿದ್ದ ಎಂದು ಹೇಳಲಾಗುತ್ತದೆ. ಕರ್ಣನು ಅಂಗದೇಶದ ಅಧಿಪತಿಯಾಗಿದ್ದನು, ಇದು ಇಂದಿನ ಬಿಹಾರದ ಭಾಗಲ್ಪುರವಾಗಿದ್ದು, ಈ ರಾಜ್ಯದ ಜನರು ಇಂದಿಗೂ ಈ ಪೂಜೆ ಅನುಸರಿಸಿಕೊಂಡು ಬರುತ್ತಿದ್ದಾರೆ ಎನ್ನಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:37 am, Fri, 24 October 25

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ