AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ರಾಜಿ ಮಾಡಿಕೊಂಡು ರಾಷ್ಟ್ರವನ್ನೇ ಮಾರಿದ್ದಾರೆ; ಅಮೆರಿಕ ವ್ಯಾಪಾರ ಒಪ್ಪಂದದ ಬಗ್ಗೆ ರಾಹುಲ್ ಗಾಂಧಿ ಆರೋಪ

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಸ್ಫೋಟಕ ಆರೋಪಗಳನ್ನು ಹೊರಿಸಿದ್ದಾರೆ. ಒತ್ತಡದಿಂದ ಪ್ರಧಾನಿ ಮೋದಿ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಆದರೆ, ಈಗ ಅದು ಅವರ ಇಮೇಜ್‌ಗೆ ಹಾನಿ ಉಂಟುಮಾಡಬಹುದು ಎಂದು ಭಯಪಡುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ. ಲೋಕಸಭಾ ಅಧಿವೇಶನದಲ್ಲಿ ಮಾತನಾಡಲು ಎದ್ದು ನಿಂತಾಗ ಆಡಳಿತ ಪಕ್ಷದವರು ವಿರೋಧಿಸಿದರು. ಇದರಿಂದ ಕೆಲಕಾಲ ಸದನದಲ್ಲಿ ಮಾತಿನ ಚಕಮಕಿ ಏರ್ಪಟ್ಟು, ಕಲಾಪವನ್ನು ಮುಂದೂಡಲಾಯಿತು.

ಪ್ರಧಾನಿ ಮೋದಿ ರಾಜಿ ಮಾಡಿಕೊಂಡು ರಾಷ್ಟ್ರವನ್ನೇ ಮಾರಿದ್ದಾರೆ; ಅಮೆರಿಕ ವ್ಯಾಪಾರ ಒಪ್ಪಂದದ ಬಗ್ಗೆ ರಾಹುಲ್ ಗಾಂಧಿ ಆರೋಪ
Rahul Gandhi In Parliament SessionImage Credit source: PTI
ಸುಷ್ಮಾ ಚಕ್ರೆ
|

Updated on: Feb 03, 2026 | 5:25 PM

Share

ನವದೆಹಲಿ, ಫೆಬ್ರವರಿ 3: ಇಂದು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಸಂಸತ್ತಿನಲ್ಲಿ ಭಾಷಣ ಮಾಡುತ್ತಿದ್ದಾಗ ಭಾರಿ ಗದ್ದಲ ಭುಗಿಲೆದ್ದಿತು. ಚೀನಾದ ವಿಷಯದ ಕುರಿತು ರಾಹುಲ್ ಗಾಂಧಿಯವರ ಭಾಷಣವನ್ನು ವಿರೋಧಿಸಿದ್ದರಿಂದ ಎರಡೂ ಕಡೆಯವರು ಗದ್ದಲ ಮಾಡುತ್ತಲೇ ಇದ್ದರು. ತನಗೆ ಮಾತನಾಡಲು ಬಿಡದಿದ್ದಕ್ಕೆ ಆಕ್ರೋಶಗೊಂಡ ರಾಹುಲ್ ಗಾಂಧಿ, “ನನಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ. ನಾನು ವಿರೋಧ ಪಕ್ಷದ ನಾಯಕ. ಸದನದಲ್ಲಿ ಮಾತನಾಡುವುದು ನನ್ನ ಹಕ್ಕಾಗಿದ್ದರೂ ನನಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ” ಎಂದು ಹೇಳಿದ್ದಾರೆ. ಅಮೆರಿಕದೊಂದಿಗಿನ ಒಪ್ಪಂದದ ಕುರಿತು ಪ್ರಧಾನಿ ಮೋದಿ ಒತ್ತಡದಲ್ಲಿ ರಾಜಿ ಮಾಡಿಕೊಳ್ಳಬೇಕಾಯಿತು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

“ಪ್ರಧಾನಿ ಮೋದಿಯವರು ಗೊಂದಲಕ್ಕೊಳಗಾಗಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಸ್ಥಗಿತಗೊಂಡಿದ್ದ ಯುಎಸ್-ಭಾರತ ವ್ಯಾಪಾರ ಒಪ್ಪಂದಕ್ಕೆ ನಿನ್ನೆ ರಾತ್ರಿ ಪ್ರಧಾನಿ ನರೇಂದ್ರ ಮೋದಿ ಸಹಿ ಹಾಕಿದ್ದಾರೆ. ಅವರ ಮೇಲೆ ತೀವ್ರ ಒತ್ತಡವಿದೆ. ಇದು ನರೇಂದ್ರ ಮೋದಿಯವರ ಇಮೇಜ್‌ಗೆ ಹಾನಿಯಾಗಬಹುದು ಎಂದು ಅವರು ಆತಂಕಗೊಂಡಿದ್ದಾರೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಇದನ್ನೂ ಓದಿ: ಲೋಕಸಭೆ ಅಧಿವೇಶನದಲ್ಲಿ ಸ್ಪೀಕರ್ ಮೇಲೆ ಪೇಪರ್ ಎಸೆದಿದ್ದ 8 ಸಂಸದರ ಅಮಾನತು

ರಾಷ್ಟ್ರಪತಿಗಳ ಭಾಷಣಕ್ಕೆ ಧನ್ಯವಾದ ಹೇಳುವ ಸಮಯದಲ್ಲಿ ಸತತ ಎರಡನೇ ದಿನವೂ ಚೀನಾ ವಿಷಯವನ್ನು ಪದೇ ಪದೇ ಪ್ರಸ್ತಾಪಿಸಿದ್ದರಿಂದ ಸಂಸತ್ತಿನಲ್ಲಿ ಮಾತನಾಡಲು ಅವಕಾಶ ಸಿಗದ ಕಾರಣ ರಾಹುಲ್ ಗಾಂಧಿ ಕೋಪಗೊಂಡರು. ಭಾರತ-ಚೀನಾದ ಸಂಬಂಧಗಳ ಕುರಿತಾದ ಲೇಖನವನ್ನು ಉಲ್ಲೇಖಿಸಿ, ಹಿಂದಿನ ತೀರ್ಪು ಮತ್ತು ನಿಯಮಗಳ ಉಲ್ಲಂಘನೆಯನ್ನು ಉಲ್ಲೇಖಿಸಿದ್ದಕ್ಕೆ ರಾಹುಲ್ ಗಾಂಧಿಯವರಿಗೆ ಅವಕಾಶ ನೀಡಲು ನಿರಾಕರಿಸಲಾಯಿತು.

“ನಮ್ಮ ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ. ಸಾರ್ವಜನಿಕರು ಇದರ ಬಗ್ಗೆ ಯೋಚಿಸಬೇಕು. ಮೊದಲ ಬಾರಿಗೆ, ವಿರೋಧ ಪಕ್ಷದ ನಾಯಕನಿಗೆ ಈ ಸದನದಲ್ಲಿ ರಾಷ್ಟ್ರಪತಿಗಳ ಭಾಷಣದ ಬಗ್ಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ. ನರೇಂದ್ರ ಮೋದಿ ಅವರು ರಾಜಿ ಮಾಡಿಕೊಂಡ ಕಾರಣದಿಂದ ಈ ವ್ಯಾಪಾರ ಒಪ್ಪಂದದಲ್ಲಿ ನಿಮ್ಮ ಕಠಿಣ ಪರಿಶ್ರಮವನ್ನು ಮಾರಾಟ ಮಾಡಿದ್ದಾರೆ. ಅವರು ದೇಶವನ್ನೇ ಮಾರಿದ್ದಾರೆ” ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.

ಇದನ್ನೂ ಓದಿ: ಪ್ರಕಟವಾಗದ ಪುಸ್ತಕದಲ್ಲಿರುವ ವಿಷಯ ಉಲ್ಲೇಖಿಸಲು ಹೋಗಿ ಸದನದ ಬಾಯಿಗೆ ಆಹಾರವಾದ್ರಾ ರಾಹುಲ್ ಗಾಂಧಿ

ಈ ಬಗ್ಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಕಿರಣ್ ರಿಜಿಜು, “ನಾವು ರಾಹುಲ್ ಗಾಂಧಿಯವರ ಮಾತು ಕೇಳಲು ಬಯಸಿದ್ದೆವು. ಆದರೆ ಅವರು ಒಂದೇ ಮಾತನ್ನು ಪದೇ ಪದೇ ಪುನರಾವರ್ತಿಸುತ್ತಿದ್ದಾರೆ. ಅವರು ನಿಯಮಗಳನ್ನು ಪಾಲಿಸಬೇಕು. ಅವರು ಒಂದೇ ಮಾತನ್ನು ಪದೇ ಪದೇ ಪುನರಾವರ್ತಿಸುವಂತಿಲ್ಲ” ಎಂದು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ?
ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ಅಶೋಕ್ ಗಂಭೀರ ಆರೋಪ
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ಅಶೋಕ್ ಗಂಭೀರ ಆರೋಪ
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್