AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jal Jeevan Mission App: ಜಲ ಜೀವನ ಮಿಷನ್​ ಆ್ಯಪ್​ ಬಿಡುಗಡೆ ಮಾಡಿ, ನೀರು-ನೈರ್ಮಲ್ಯ ಸಮಿತಿ ಜತೆ ಸಂವಾದ ನಡೆಸುತ್ತಿರುವ ಪ್ರಧಾನಿ ಮೋದಿ

Rashtriya Jal Jeevan Kosh: ಜಲ ಜೀವನ ಕೋಶ್​ ಯೋಜನೆಯಡಿ ಗ್ರಾಮೀಣ ಪ್ರದೇಶಗಳ ಮನೆಗಳು, ಶಾಲೆ, ಅಂಗನವಾಡಿ ಕೇಂದ್ರಗಳಿಗೆ ನೀರಿನ ಪೂರೈಕೆ ಮಾಡುವ ಮಹದುದ್ದೇಶ ಹೊಂದಲಾಗಿದೆ.

Jal Jeevan Mission App: ಜಲ ಜೀವನ ಮಿಷನ್​ ಆ್ಯಪ್​ ಬಿಡುಗಡೆ ಮಾಡಿ, ನೀರು-ನೈರ್ಮಲ್ಯ ಸಮಿತಿ ಜತೆ ಸಂವಾದ ನಡೆಸುತ್ತಿರುವ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ
TV9 Web
| Edited By: |

Updated on:Oct 02, 2021 | 3:11 PM

Share

ಪ್ರಧಾನಿ ನರೇಂದ್ರ ಮೋದಿಯವರು ಇದೀಗ ಜಲ ಜೀವನ ಮಿಷನ್ (Jal Jeevan Mission)​ ಬಗ್ಗೆ ವಿಡಿಯೋ ಕಾನ್ಫರೆನ್ಸ್​ ಮೂಲಕ ಗ್ರಾಮ ಪಂಚಾಯತ್​ ಮತ್ತು ಗ್ರಾಮೀಣ ನೀರು ಮತ್ತು ನೈರ್ಮಲ್ಯ ಸಮಿತಿ, ಪಾನಿ ಸಮಿತಿ (VWSCs)ಗಳೊಂದಿಗೆ ಸಂವಾದ ನಡೆಸುತ್ತಿದ್ದಾರೆ. ಈ ಸಂವಾದದಲ್ಲಿ ಪ್ರಧಾನಿ ನರೇಂದ್ರ ಮೋದಿ ನೀರಿನ ಮಹತ್ವ ತಿಳಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ. ಜಲ ಜೀವನ ಮಿಷನ್​​ನ ಮೊಬೈಲ್​ ಆ್ಯಪ್​  ಮತ್ತು ರಾಷ್ಟ್ರೀಯ ಜಲ ಜೀವನ ಕೋಶ್​ನ್ನು ಬಿಡುಗಡೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿಯವರು, ಈ ಯೋಜನೆಗಳ ಉಪಯೋಗದ ಬಗ್ಗೆ ವಿಡಿಯೋ ಕಾನ್ಫರೆನ್ಸ್​ ಮೂಲಕ ಗ್ರಾಮ ಪಂಚಾಯತ್​ ಮತ್ತು ಗ್ರಾಮೀಣ ನೀರು ಮತ್ತು ನೈರ್ಮಲ್ಯ ಸಮಿತಿಗಳಿಗೆ ಅರಿವು ಮೂಡಿಸುತ್ತಿದ್ದಾರೆ. ಹಾಗೇ, ನಮ್ಮ ತಾಯಂದಿರು-ಸಹೋದರಿಯರಿಗೆ ಇನ್ನು ಮುಂದೆ ನೀರಿನ ವಿಚಾರದಲ್ಲಿ ತೊಂದರೆ ಆಗುವುದಿಲ್ಲ ಎಂದೂ ಭರವಸೆ ನೀಡಿದ್ದಾರೆ. 

ರಾಷ್ಟ್ರೀಯ ಜಲ ಜೀವನ ಕೋಶ್​ ಯೋಜನೆಯಡಿ ಗ್ರಾಮೀಣ ಪ್ರದೇಶಗಳ ಮನೆಗಳು, ಶಾಲೆ, ಅಂಗನವಾಡಿ ಕೇಂದ್ರಗಳಿಗೆ ನೀರಿನ ಪೂರೈಕೆ ಮಾಡುವ ಮಹದುದ್ದೇಶ ಹೊಂದಲಾಗಿದೆ. ಹಾಗೇ, ನಲ್ಲಿಗಳನ್ನು ಅಳವಡಿಸಲಾಗುವುದು ಎಂದು ಈಗಾಗಲೇ ಪ್ರಧಾನಮಂತ್ರಿ ಕಚೇರಿ ತಿಳಿಸಿದೆ.  ಹಾಗೇ, ಈ ಕಾರ್ಯಕ್ಕೆ ಯಾವುದೇ ವ್ಯಕ್ತಿ, ಸಂಸ್ಥೆ, ಕಂಪನಿಗಳು ಮತ್ತು ಎನ್​ಜಿಒಗಳು ದೇಣಿಗೆ ನೀಡಬಹುದಾಗಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು 2019ರ ಆಗಸ್ಟ್​ 15ರಂದು ಈ ಜಲ ಜೀವನ ಮಿಷನ್​ನ್ನು ಘೋಷಿಸಿದ್ದರು. ಭಾರತದ ಪ್ರತಿಮನೆಗೂ ಶುದ್ಧ ನೀರಿನ ನಲ್ಲಿಯನ್ನು ಅಳವಡಿಸುವ ಗುರಿ ಹೊಂದಲಾಗಿದೆ. ಈ ಯೋಜನೆ ಪರಿಚಯಿಸುವ ಹೊತ್ತಿಗೆ ಅಂದರೆ 2019ರಲ್ಲಿ ಕೇವಲ 323.23 ಕೋಟಿ ಮನೆಗಳು (ಶೇ.17) ಮಾತ್ರ ನಲ್ಲಿನೀರಿನ ಸೌಲಭ್ಯ ಹೊಂದಿದ್ದವು. ಆದರೆ ಕಳೆದ ಎರಡು ವರ್ಷಗಳಲ್ಲಿ 5 ಕೋಟಿಗೂ ಅಧಿಕ ಮನೆಗಳಿಗೆ ಶುದ್ಧ ನಲ್ಲಿ ನೀರಿನ ಸೌಲಭ್ಯ ಒದಗಿಸಲಾಗಿದೆ. ಕೊರೊನಾ ಸಾಂಕ್ರಾಮಿಕ ರೋಗದ ಮಧ್ಯೆಯೂ ಯಶಸ್ವಿಯಾಗಿ ಯೋಜನೆಯನ್ನು ಮುನ್ನಡೆಸಲಾಗಿದೆ. ಇದೀಗ ಜಲಜೀವನ ಮಿಷನ್​ ಮೊಬೈಲ್ ಆ್ಯಪ್​ ಕೂಡ ಬಿಡುಗಡೆ ಮಾಡಿದ್ದಾರೆ. ಅಂದಹಾಗೆ ಈ ಯೋಜನೆಗಾಗಿ ಕೇಂದ್ರ ಸರ್ಕಾರ 3.60 ಲಕ್ಷ ಕೋಟಿ ರೂಪಾಯಿ ವೆಚ್ಚ ಮಾಡಿದೆ.

ಜಲ ಜೀವನ ಮಿಷನ್​​ನಿಂದ ಜನಸಂಪರ್ಕ ಈ ಜಲ ಜೀವನ ಮಿಷನ್​ ಆ್ಯಪ್​ ಬಿಡುಗಡೆಗೂ ಮೊದಲು ಇಂದು ಮಹಾತ್ಮ ಗಾಂಧಿ ಮತ್ತು ಲಾಲ್​ ಬಹದ್ದೂರ್​ ಶಾಸ್ತ್ರಿ ಜನ್ಮ ದಿನದ ನಿಮಿತ್ತ ಗೌರವ ನಮನ ಸಲ್ಲಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ನಾವಿಂದು ಇಬ್ಬರು ಮಹಾನ್​ ನಾಯಕರ ಜನ್ಮದಿನ ಆಚರಿಸುತ್ತಿದ್ದೇವೆ. ಅದೇ ಸಮಯದಲ್ಲಿ ಜಲ ಜೀವನ್​ ಮಿಷನ್​ ಆ್ಯಪ್​ ಕೂಡ ಬಿಡುಗಡೆಯಾಗುತ್ತಿದೆ. ಜಲ ಜೀವನ್​ ಮಿಷನ್​ ಕೇವಲ ನೀರು ನೀಡುವ ಯೋಜನೆಯಲ್ಲ, ಇದು ಜನರನ್ನು ಕೂಡ ಸಂಪರ್ಕಿಸುವ ಚಳವಳಿಯಾಗಿದೆ. ಇಂದು ಬಿಡುಗಡೆಯಾಗಲಿರುವ ಆಪ್​​ನಿಂದ ಈ ಯೋಜನೆ ಮತ್ತಷ್ಟು ಶಕ್ತಿಯುತ, ಪಾರದರ್ಶಕವಾಗಲಿದೆ. ಹಾಗೇ, ಜಲ ಜೀವನ್ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನೂ ಜನಸಾಮಾನ್ಯರಿಗೆ ಒದಗಿಸಲಿದೆ ಎಂದು ಹೇಳಿದ್ದರು.

ಇದನ್ನೂ ಓದಿ: ಜಲ್ ಜೀವನ್ ಮಿಷನ್: ಗ್ರಾಮ ಪಂಚಾಯತ್, ಪಾನಿ ಸಮಿತಿಗಳ ಜತೆ ಪ್ರಧಾನಿ ಮೋದಿ ಸಂವಾದ ನಾಳೆ

Rashmika Mandanna: ಅಂದುಕೊಂಡಿದ್ದಕಿಂತಲೂ ಮುನ್ನವೇ ‘ಪುಷ್ಪ’ ರಿಲೀಸ್​; ಅಲ್ಲು ಅರ್ಜುನ್​-ರಶ್ಮಿಕಾ ಚಿತ್ರದ ಬಿಡುಗಡೆ ದಿನಾಂಕ ಪ್ರಕಟ

Published On - 12:12 pm, Sat, 2 October 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ