AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Russia-Ukraine War: ಇಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿಯವರೊಂದಿಗೆ ಪ್ರಧಾನಿ ಮೋದಿ ಮಾತು

ಉಕ್ರೇನ್​ ಮೇಲೆ ಫೆ.24ರಿಂದ ರಷ್ಯಾ ಆಕ್ರಮಣ ಮಾಡುತ್ತಿದೆ.  ಅದಾದ ಎರಡನೇ ದಿನಕ್ಕೆ ಅಂದರೆ ಫೆ.26ರಂದು ಪ್ರಧಾನಿ ಮೋದಿ ಮತ್ತು ಝೆಲೆನ್ಸ್ಕಿ ನಡುವೆ ಚರ್ಚೆ ನಡೆದಿತ್ತು.

Russia-Ukraine War: ಇಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿಯವರೊಂದಿಗೆ ಪ್ರಧಾನಿ ಮೋದಿ ಮಾತು
ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಮತ್ತು ಪ್ರಧಾನಿ ಮೋದಿ
TV9 Web
| Edited By: |

Updated on:Mar 07, 2022 | 9:48 AM

Share

ರಷ್ಯಾ -ಉಕ್ರೇನ್ ಯುದ್ಧ 12ನೇ ದಿನಕ್ಕೆ ಕಾಲಿಟ್ಟಿದ್ದು, ಯುದ್ಧ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ (Ukrainian president Volodymyr Zelensky)ಯವರೊಟ್ಟಿಗೆ ಮಾತನಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಬೆಳಗ್ಗೆಯೇ ಅವರು ಝೆಲೆನ್ಸ್ಕಿಯವರೊಂದಿಗೆ ಫೋನ್​ನಲ್ಲಿ ಚರ್ಚೆ ನಡೆಸಲಿದ್ದಾರೆ. ಅಂದಹಾಗೇ, ಯುದ್ಧ ಶುರುವಾದ ನಂತರ ಇದು ಎರಡನೇ ಬಾರಿಗೆ ಪ್ರಧಾನಿ ಮೋದಿ ಉಕ್ರೇನ್​ ಅಧ್ಯಕ್ಷರೊಂದಿಗೆ ಮಾತನಾಡುತ್ತಿರುವುದು. ಈಗಾಗಲೇ ಎರಡು ಬಾರಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್​ ಪುಟಿನ್​ರೊಟ್ಟಿಗೆ ಫೋನ್​ನಲ್ಲಿ ಮಾತುಕತೆ ನಡೆಸಿದ್ದರು.

ಉಕ್ರೇನ್​ ಮೇಲೆ ಫೆ.24ರಿಂದ ರಷ್ಯಾ ಆಕ್ರಮಣ ಮಾಡುತ್ತಿದೆ.  ಅದಾದ ಎರಡನೇ ದಿನಕ್ಕೆ ಅಂದರೆ ಫೆ.26ರಂದು ಪ್ರಧಾನಿ ಮೋದಿ ಮತ್ತು ಝೆಲೆನ್ಸ್ಕಿ ನಡುವೆ ಚರ್ಚೆ ನಡೆದಿತ್ತು. ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ರಷ್ಯಾ ವಿರುದ್ಧ ನಿರ್ಣಯಕ್ಕೆ ಮತಹಾಕಲು ಭಾರತ ಒಪ್ಪಿರಲಿಲ್ಲ. ಅಂದರೆ ಪರ ಅಥವಾ ವಿರೋಧವಾಗಿ ಮತದಾನ ಮಾಡದೆ ತಟಸ್ಥ ನೀತಿ ಕಾಯ್ದುಕೊಂಡಿತ್ತು. ಇದಾದ ಬಳಿಕ ಝೆಲೆನ್ಸ್ಕಿಯವರು ಪ್ರಧಾನಿ ಮೋದಿಯವರೊಟ್ಟಿಗೆ ಮಾತನಾಡಿ, ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತ ಉಕ್ರೇನ್​ಗೇ ಬೆಂಬಲ ನೀಡಬೇಕು ಎಂದು ಮನವಿ ಮಾಡಿದ್ದರು.

ರಷ್ಯಾ-ಉಕ್ರೇನ್​ ಯುದ್ಧದಲ್ಲಿ ಭಾರತ ಯಾರಿಗೂ ಪರವಾಗಿ-ವಿರೋಧವಾಗಿ ನಿಲುವು ವ್ಯಕ್ತಪಡಿಸಿಲ್ಲ. ಶಾಂತಿಯಿಂದ ಮಾತುಕತೆ ನಡೆಸಿ, ಸಮಸ್ಯೆ ಪರಿಹರಿಸಿಕೊಳ್ಳಿ ಎಂಬ ಸಲಹೆಯನ್ನು ನೀಡುತ್ತಲೇ ಇದೆ. ಅದರೊಂದಿಗೆ ಉಕ್ರೇನ್​​ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಎರಡೂ ದೇಶಗಳ ಬೆಂಬಲ ಪಡೆಯುತ್ತಿದ್ದು, ಆಪರೇಶನ್​ ಗಂಗಾ ಮೂಲಕ ಈಗಾಗಲೇ ಮುಕ್ಕಾಲು ಪಾಲು ವಿದ್ಯಾರ್ಥಿಗಳನ್ನು ವಾಪಸ್​ ಕರೆತಂದಿದೆ. ಉಕ್ರೇನ್​ಗೆ ಮಾನವೀಯ ನೆರವನ್ನೂ ನೀಡುತ್ತಿದೆ. ಉಕ್ರೇನ್​ನಲ್ಲಿರುವ ಭಾರತೀಯರನ್ನು ರಕ್ಷಿಸಲು ತಾವೂ ಸಹಾಯ ಮಾಡುವುದಾಗಿ ರಷ್ಯಾ ಕೂಡ ಸಮ್ಮತಿ ನೀಡಿದೆ.

ಇದನ್ನೂ ಓದಿ: Russia-Ukraine War Live: ಉಕ್ರೇನ್-ರಷ್ಯಾ ಯುದ್ಧ ಹಿನ್ನೆಲೆ ಬದಲಾದ ಪೋಷಕರ ಮನಸ್ಥಿತಿ; ಸ್ವದೇಶದಲ್ಲೇ ಶಿಕ್ಷಣಕ್ಕೆ ಆಗ್ರಹ

Published On - 9:29 am, Mon, 7 March 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್