AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Russia-Ukraine War: ಇಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿಯವರೊಂದಿಗೆ ಪ್ರಧಾನಿ ಮೋದಿ ಮಾತು

ಉಕ್ರೇನ್​ ಮೇಲೆ ಫೆ.24ರಿಂದ ರಷ್ಯಾ ಆಕ್ರಮಣ ಮಾಡುತ್ತಿದೆ.  ಅದಾದ ಎರಡನೇ ದಿನಕ್ಕೆ ಅಂದರೆ ಫೆ.26ರಂದು ಪ್ರಧಾನಿ ಮೋದಿ ಮತ್ತು ಝೆಲೆನ್ಸ್ಕಿ ನಡುವೆ ಚರ್ಚೆ ನಡೆದಿತ್ತು.

Russia-Ukraine War: ಇಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿಯವರೊಂದಿಗೆ ಪ್ರಧಾನಿ ಮೋದಿ ಮಾತು
ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಮತ್ತು ಪ್ರಧಾನಿ ಮೋದಿ
TV9 Web
| Edited By: |

Updated on:Mar 07, 2022 | 9:48 AM

Share

ರಷ್ಯಾ -ಉಕ್ರೇನ್ ಯುದ್ಧ 12ನೇ ದಿನಕ್ಕೆ ಕಾಲಿಟ್ಟಿದ್ದು, ಯುದ್ಧ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ (Ukrainian president Volodymyr Zelensky)ಯವರೊಟ್ಟಿಗೆ ಮಾತನಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಬೆಳಗ್ಗೆಯೇ ಅವರು ಝೆಲೆನ್ಸ್ಕಿಯವರೊಂದಿಗೆ ಫೋನ್​ನಲ್ಲಿ ಚರ್ಚೆ ನಡೆಸಲಿದ್ದಾರೆ. ಅಂದಹಾಗೇ, ಯುದ್ಧ ಶುರುವಾದ ನಂತರ ಇದು ಎರಡನೇ ಬಾರಿಗೆ ಪ್ರಧಾನಿ ಮೋದಿ ಉಕ್ರೇನ್​ ಅಧ್ಯಕ್ಷರೊಂದಿಗೆ ಮಾತನಾಡುತ್ತಿರುವುದು. ಈಗಾಗಲೇ ಎರಡು ಬಾರಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್​ ಪುಟಿನ್​ರೊಟ್ಟಿಗೆ ಫೋನ್​ನಲ್ಲಿ ಮಾತುಕತೆ ನಡೆಸಿದ್ದರು.

ಉಕ್ರೇನ್​ ಮೇಲೆ ಫೆ.24ರಿಂದ ರಷ್ಯಾ ಆಕ್ರಮಣ ಮಾಡುತ್ತಿದೆ.  ಅದಾದ ಎರಡನೇ ದಿನಕ್ಕೆ ಅಂದರೆ ಫೆ.26ರಂದು ಪ್ರಧಾನಿ ಮೋದಿ ಮತ್ತು ಝೆಲೆನ್ಸ್ಕಿ ನಡುವೆ ಚರ್ಚೆ ನಡೆದಿತ್ತು. ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ರಷ್ಯಾ ವಿರುದ್ಧ ನಿರ್ಣಯಕ್ಕೆ ಮತಹಾಕಲು ಭಾರತ ಒಪ್ಪಿರಲಿಲ್ಲ. ಅಂದರೆ ಪರ ಅಥವಾ ವಿರೋಧವಾಗಿ ಮತದಾನ ಮಾಡದೆ ತಟಸ್ಥ ನೀತಿ ಕಾಯ್ದುಕೊಂಡಿತ್ತು. ಇದಾದ ಬಳಿಕ ಝೆಲೆನ್ಸ್ಕಿಯವರು ಪ್ರಧಾನಿ ಮೋದಿಯವರೊಟ್ಟಿಗೆ ಮಾತನಾಡಿ, ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತ ಉಕ್ರೇನ್​ಗೇ ಬೆಂಬಲ ನೀಡಬೇಕು ಎಂದು ಮನವಿ ಮಾಡಿದ್ದರು.

ರಷ್ಯಾ-ಉಕ್ರೇನ್​ ಯುದ್ಧದಲ್ಲಿ ಭಾರತ ಯಾರಿಗೂ ಪರವಾಗಿ-ವಿರೋಧವಾಗಿ ನಿಲುವು ವ್ಯಕ್ತಪಡಿಸಿಲ್ಲ. ಶಾಂತಿಯಿಂದ ಮಾತುಕತೆ ನಡೆಸಿ, ಸಮಸ್ಯೆ ಪರಿಹರಿಸಿಕೊಳ್ಳಿ ಎಂಬ ಸಲಹೆಯನ್ನು ನೀಡುತ್ತಲೇ ಇದೆ. ಅದರೊಂದಿಗೆ ಉಕ್ರೇನ್​​ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಎರಡೂ ದೇಶಗಳ ಬೆಂಬಲ ಪಡೆಯುತ್ತಿದ್ದು, ಆಪರೇಶನ್​ ಗಂಗಾ ಮೂಲಕ ಈಗಾಗಲೇ ಮುಕ್ಕಾಲು ಪಾಲು ವಿದ್ಯಾರ್ಥಿಗಳನ್ನು ವಾಪಸ್​ ಕರೆತಂದಿದೆ. ಉಕ್ರೇನ್​ಗೆ ಮಾನವೀಯ ನೆರವನ್ನೂ ನೀಡುತ್ತಿದೆ. ಉಕ್ರೇನ್​ನಲ್ಲಿರುವ ಭಾರತೀಯರನ್ನು ರಕ್ಷಿಸಲು ತಾವೂ ಸಹಾಯ ಮಾಡುವುದಾಗಿ ರಷ್ಯಾ ಕೂಡ ಸಮ್ಮತಿ ನೀಡಿದೆ.

ಇದನ್ನೂ ಓದಿ: Russia-Ukraine War Live: ಉಕ್ರೇನ್-ರಷ್ಯಾ ಯುದ್ಧ ಹಿನ್ನೆಲೆ ಬದಲಾದ ಪೋಷಕರ ಮನಸ್ಥಿತಿ; ಸ್ವದೇಶದಲ್ಲೇ ಶಿಕ್ಷಣಕ್ಕೆ ಆಗ್ರಹ

Published On - 9:29 am, Mon, 7 March 22

Follow Us
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!