AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಎಂಡಿಯು ಭಾರತದ ಆಧುನಿಕ ವಿಜ್ಞಾನ, ತಂತ್ರಜ್ಞಾನ ಪ್ರಯಾಣದ ಸಂಕೇತ: ಮೋದಿ

ಭಾರತೀಯ ಹವಾಮಾನ ಇಲಾಖೆಯ 150ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿ ‘ಮಿಷನ್ ಮೌಸಂ’ಗೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು ಇಂದು ಧನು ರಾಶಿಯಿಂದ ಸೂರ್ಯನು ಮಕರ ರಾಶಿಯನ್ನು ಪ್ರವೇಶಿಸುತ್ತಾನೆ. ಸೂರ್ಯನು ಕ್ರಮೇಣ ಉತ್ತರದ ಕಡೆಗೆ ಚಲಿಸುತ್ತಾನೆ. ನಮ್ಮ ಭಾರತೀಯ ಸಂಪ್ರದಾಯದಲ್ಲಿ ಇದನ್ನು ಉತ್ತರಾಯಣ ಎಂದು ಕರೆಯಲಾಗುತ್ತದೆ ಎಂದರು.

ಐಎಂಡಿಯು ಭಾರತದ ಆಧುನಿಕ ವಿಜ್ಞಾನ, ತಂತ್ರಜ್ಞಾನ ಪ್ರಯಾಣದ ಸಂಕೇತ: ಮೋದಿ
ನರೇಂದ್ರ ಮೋದಿ
ನಯನಾ ರಾಜೀವ್
|

Updated on:Jan 14, 2025 | 12:16 PM

Share

ಭಾರತೀಯ ಹವಾಮಾನ ಇಲಾಖೆಯು ಭಾರತದ ವೈಜ್ಞಾನಿಕ ಪ್ರಯಾಣದ ಸಂಕೇತ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಭಾರತೀಯ ಹವಾಮಾನ ಇಲಾಖೆಯ (ಐಎಂಡಿ) 150 ನೇ ವಾರ್ಷಿಕೋತ್ಸವದಂದು ಪ್ರಧಾನಿ ನರೇಂದ್ರ ಮೋದಿ ಇಂದು ಮಿಷನ್ ಮೌಸಂ ಪ್ರಾರಂಭಿಸಿದರು. ವಿವಿಧ ಹವಾಮಾನ ಪರಿಸ್ಥಿತಿಗಳಿಗೆ ಮತ್ತು ಹವಾಮಾನ ಪ್ರಜ್ಞೆಗೆ ಭಾರತವನ್ನು ಸಿದ್ಧಪಡಿಸಲು ಈ ಕಾರ್ಯಾಚರಣೆಯನ್ನು ವಿನ್ಯಾಸಗೊಳಿಸಲಾಗಿದೆ.

ಭಾರತದಲ್ಲಿ ಕಳೆದ 10 ದಿನಗಳು ಹಾಗೂ ಮುಂದಿನ ಹತ್ತು ದಿನಗಳ ಹವಾಮಾನ ಹೇಗಿರಲಿದೆ ಎಂದು ತಿಳಿಸುಕೊಳ್ಳಬಹುದು. ಭವಿಷ್ಯದ ಭಾರತವು ಎಲ್ಲಾ ಹವಾಮಾನ ಪರಿಸ್ಥಿತಿಯನ್ನು ಎದುರಿಸಲು ಸಜ್ಜಾಗಬೇಕಿದೆ, ಕ್ಲೈಮೇಟ್ ಸ್ಮಾರ್ಟ್​ ರಾಷ್ಟ್ರವಾಗಬೇಕಿದೆ ಹೀಗಾಗಿಯೇ ಮಿಷನ್ ಮೌಸಂ ಪ್ರಾರಂಭಿಸಲಾಗಿದೆ ಎಂದರು.

ಹತ್ತು ವರ್ಷಗಳ ಹಿಂದೆ ಕೇವಲ ಶೇ.10ರಷ್ಟು ರೈತರು ಹವಾಮಾನಕ್ಕೆ ಸಂಬಂಧಿಸಿದ ಮಾಹಿತಿಯನ್ನು ಯಾವುದೋ ಮೂಲದಿಂದ ಪಡೆಯುತ್ತಿದ್ದರು, ಆದರೆ ಈಗ ಅದರ ಗಾತ್ರ ಶೇ.50ರಷ್ಟಾಗಿದೆ. ಸ್ಮಾರ್ಟ್​ಫೋಷನ್, ವಾಟ್ಸ್​ಆ್ಯಪ್ ಮೂಲಕವೂ ಹವಾಮಾನದ ಕುರಿತು ಮಾಹಿತಿ ಪಡೆಯಬಹುದಾಗಿದೆ.

ಇಂದು ಸಂಕ್ರಾಂತಿ ಸೂರ್ಯ ಧನು ರಾಶಿಯಿಂದ ಮಕರ ರಾಶಿಗೆ ಪ್ರವೇಶಿಸುತ್ತಾನೆ, ನಿಧಾನವಾಗಿ ಉತ್ತರದ ಕಡೆಗೆ ಶಿಫ್ಟ್ ಆಗುತ್ತಾನೆ ಅದನ್ನು ಉತ್ತರಾಯಣ ಎಂದು ಕರೆಯಲಾಗುತ್ತದೆ. ಕೃಷಿಗಾಗಿ ಸಿದ್ಧತೆಗಳು ಪ್ರಾರಂಭವಾಗುತ್ತವೆ ಮತ್ತು ಅದಕ್ಕಾಗಿಯೇ ಭಾರತೀಯ ಸಂಪ್ರದಾಯದಲ್ಲಿ ಈ ದಿನವನ್ನು ಬಹಳ ಮುಖ್ಯವೆಂದು ಪರಿಗಣಿಸಲಾಗಿದೆ.

ಕೋಟಿಗಟ್ಟಲೆ ಭಾರತೀಯರಿಗೆ ಸೇವೆ ಸಲ್ಲಿಸಿದ್ದು ಮಾತ್ರವಲ್ಲದೆ ಭಾರತದ ವೈಜ್ಞಾನಿಕ ಪ್ರಯಾಣದ ಸಂಕೇತವೂ ಆಗಿದೆ. ವೈಜ್ಞಾನಿಕ ಸಂಸ್ಥೆಗಳಲ್ಲಿ ಸಂಶೋಧನೆ ಮತ್ತು ಆವಿಷ್ಕಾರಗಳು ನವ ಭಾರತದ ನೀತಿಯ ಭಾಗವಾಗಿದೆ. ಆದ್ದರಿಂದ, ಕಳೆದ 10 ವರ್ಷಗಳಲ್ಲಿ, IMDಯ ಮೂಲಸೌಕರ್ಯ ಮತ್ತು ತಂತ್ರಜ್ಞಾನವು ಅಭೂತಪೂರ್ವವಾಗಿ ವಿಸ್ತರಿಸಿದೆ ಎಂದು ಹೇಳಿದರು.

ಮೊದಲು ಮೀನುಗಾರರು ಸಮುದ್ರಕ್ಕಿಳಿಯುತ್ತಿದ್ದಂತೆ ಮನೆಯವರಿಗೆಲ್ಲಾ ಆತಂಕ ಎದುರಾಗುತ್ತಿತ್ತು, ಆದರೆ ಈಗ ಹವಾಮಾನ ಇಲಾಖೆ ಮಾಹಿತಿಯಿಂದಾಗಿ ಅವರ ಕುಟುಂಬದವರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ ಎಂದು ಮೋದಿ ಹೇಳಿದ್ದಾರೆ. ಭಾರತೀಯ ಹವಾಮಾನ ಇಲಾಖೆಯನ್ನು ಜನವರಿ 15 ರಂದು ಮಕರ ಸಂಕ್ರಾಂತಿಯಂದು ಸ್ಥಾಪಿಸಲಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು. ನನ್ನ ನೆಚ್ಚಿನ ಹಬ್ಬ ಮಕರ ಸಂಕ್ರಾಂತಿ. ಭಾರತೀಯ ಸಂಪ್ರದಾಯದಲ್ಲಿ ಮಕರ ಸಂಕ್ರಾಂತಿಯ ಮಹತ್ವ ಎಲ್ಲರಿಗೂ ತಿಳಿದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:14 pm, Tue, 14 January 25

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ