AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಪ್ಪುಪಟ್ಟಿಯಿಂದ 312 ಸಿಖ್​ ವಿದೇಶಿ ಪ್ರಜೆಗಳನ್ನು ಕೈಬಿಟ್ಟ ಕೇಂದ್ರ

ದೆಹಲಿ: ದೇಶ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದ ಆರೋಪ ಹೊಂದಿದ್ದ 312 ಸಿಖ್ ವಿದೇಶಿಯರನ್ನು ಕಪ್ಪುಪಟ್ಟಿಯಿಂದ ಕೇಂದ್ರ ಸರ್ಕಾರ ಕೈಬಿಟ್ಟಿದೆ. ಇನ್ಮುಂದೆ ಈ ಸಿಖ್ ವಿದೇಶಿಯರು ಭಾರತದ ವೀಸಾ ಸೌಲಭ್ಯ ಪಡೆಯಬಹುದು ಮತ್ತು ಭಾರತದಲ್ಲಿರುವ ಅವರ ಕುಟುಂಬಸ್ಥರನ್ನು ಭೇಟಿ ಮಾಡಬಹುದು ಎಂದು ಕೇಂದ್ರ ಗೃಹ ಸಚಿವಾಲಯ ಶುಕ್ರವಾರ ಹೇಳಿದೆ. ವಿವಿಧ ಭದ್ರತಾ ಸಂಸ್ಥೆಗಳ ಪರಿಶೀಲನೆ ಬಳಿಕ ಸಿಖ್​ ವಿದೇಶಿಯರನ್ನು ಕಪ್ಪುಪಟ್ಟಿಯಿಂದ ತೆಗೆಯುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. 1980ರ ದಶಕದಲ್ಲಿ ಸಿಖ್​ರಿಗೆ ಪ್ರತೇಕ ನೆಲ ಬೇಕೆಂದು […]

ಕಪ್ಪುಪಟ್ಟಿಯಿಂದ 312 ಸಿಖ್​ ವಿದೇಶಿ ಪ್ರಜೆಗಳನ್ನು ಕೈಬಿಟ್ಟ ಕೇಂದ್ರ
Follow us
ಸಾಧು ಶ್ರೀನಾಥ್​
|

Updated on:Sep 13, 2019 | 2:07 PM

ದೆಹಲಿ: ದೇಶ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದ ಆರೋಪ ಹೊಂದಿದ್ದ 312 ಸಿಖ್ ವಿದೇಶಿಯರನ್ನು ಕಪ್ಪುಪಟ್ಟಿಯಿಂದ ಕೇಂದ್ರ ಸರ್ಕಾರ ಕೈಬಿಟ್ಟಿದೆ. ಇನ್ಮುಂದೆ ಈ ಸಿಖ್ ವಿದೇಶಿಯರು ಭಾರತದ ವೀಸಾ ಸೌಲಭ್ಯ ಪಡೆಯಬಹುದು ಮತ್ತು ಭಾರತದಲ್ಲಿರುವ ಅವರ ಕುಟುಂಬಸ್ಥರನ್ನು ಭೇಟಿ ಮಾಡಬಹುದು ಎಂದು ಕೇಂದ್ರ ಗೃಹ ಸಚಿವಾಲಯ ಶುಕ್ರವಾರ ಹೇಳಿದೆ.

ವಿವಿಧ ಭದ್ರತಾ ಸಂಸ್ಥೆಗಳ ಪರಿಶೀಲನೆ ಬಳಿಕ ಸಿಖ್​ ವಿದೇಶಿಯರನ್ನು ಕಪ್ಪುಪಟ್ಟಿಯಿಂದ ತೆಗೆಯುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

1980ರ ದಶಕದಲ್ಲಿ ಸಿಖ್​ರಿಗೆ ಪ್ರತೇಕ ನೆಲ ಬೇಕೆಂದು ಭಾರತದ ವಿರುದ್ಧ ವಿದೇಶಿಯರ ಜೊತೆ ಸೇರಿ ಸಿಖ್​ರು ಉಗ್ರವಾದ ಚಳವಳಿ ನಡೆಸಿದ್ದರು. ಆಗ ಬಂಧನದಿಂದ ತಪ್ಪಿಸಿಕೊಳ್ಳಲು ಕೆಲವು ಸಿಖ್​ರು ಭಾರತ ದೇಶ ಬಿಟ್ಟು ವಿದೇಶಗಳಲ್ಲಿ ನೆಲೆಸಿ ಅಲ್ಲಿನ ಪ್ರಜೆಗಳಾದರು. ಅಂತವರನ್ನು 2016ರವರೆಗೆ ಕಪ್ಪುಪಟ್ಟಿಯಲ್ಲಿ ಇರಿಸಲಾಗಿತ್ತು. ಅವರಿಗೆ ಭಾರತಕ್ಕೆ ಭೇಟಿ ನೀಡಲು ವೀಸಾ ಸೌಲಭ್ಯ ಕೂಡ ಸಿಗುತ್ತಿರಲಿಲ್ಲ.

ಕಪ್ಪುಪಟ್ಟಿಗೆ ಸೇರಿದ ಬಳಿಕ ವಿದೇಶದಲ್ಲಿದ್ದ ಸಿಖ್​ರು ಭಾರತದಲ್ಲಿರುವ ಅವರ ಕುಟುಂಬಸ್ಥರನ್ನು ಭೇಟಿ ಮಾಡಲು ಆಗುತ್ತಿರಲಿಲ್ಲ. ಆದ್ರೆ ಇದೀಗ ಕಪ್ಪುಪಟ್ಟಿಯಿಂದ ಅವರನ್ನು ಕೈಬಿಡಲಾಗಿದೆ. ಇನ್ಮುಂದೆ ಭಾರತದ ವೀಸಾ ಸೌಲಭ್ಯ ಪಡೆದು ಅವರ ಕುಟುಂಬಸ್ಥರನ್ನು ಭೇಟಿ ಮಾಡಬಹುದಾಗಿದೆ. ಅಲ್ಲದೆ ಸಾಗರೋತ್ತರ ಭಾರತೀಯ ನಾಗರಿಕರ ಗುರುತಿನ ಚೀಟಿಗೂ ಅರ್ಜಿ ಸಲ್ಲಿಸಬಹುದಾಗಿದೆ. ಸಾಮಾನ್ಯ ವೀಸಾ ಮೂಲಕ ಭಾರತದಲ್ಲಿ 2 ವರ್ಷಗಳವರೆಗೆ ಅವರು ನೆಲೆಸಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ.

Published On - 1:53 pm, Fri, 13 September 19

ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್
ಕಡಲೂರಿನ ಕಾರ್ಖಾನೆ ದುರಂತ; ಟ್ಯಾಂಕ್ ಸ್ಫೋಟಗೊಂಡು 20 ಜನರಿಗೆ ಗಾಯ
ಕಡಲೂರಿನ ಕಾರ್ಖಾನೆ ದುರಂತ; ಟ್ಯಾಂಕ್ ಸ್ಫೋಟಗೊಂಡು 20 ಜನರಿಗೆ ಗಾಯ