AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಪ್ಪುಪಟ್ಟಿಯಿಂದ 312 ಸಿಖ್​ ವಿದೇಶಿ ಪ್ರಜೆಗಳನ್ನು ಕೈಬಿಟ್ಟ ಕೇಂದ್ರ

ದೆಹಲಿ: ದೇಶ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದ ಆರೋಪ ಹೊಂದಿದ್ದ 312 ಸಿಖ್ ವಿದೇಶಿಯರನ್ನು ಕಪ್ಪುಪಟ್ಟಿಯಿಂದ ಕೇಂದ್ರ ಸರ್ಕಾರ ಕೈಬಿಟ್ಟಿದೆ. ಇನ್ಮುಂದೆ ಈ ಸಿಖ್ ವಿದೇಶಿಯರು ಭಾರತದ ವೀಸಾ ಸೌಲಭ್ಯ ಪಡೆಯಬಹುದು ಮತ್ತು ಭಾರತದಲ್ಲಿರುವ ಅವರ ಕುಟುಂಬಸ್ಥರನ್ನು ಭೇಟಿ ಮಾಡಬಹುದು ಎಂದು ಕೇಂದ್ರ ಗೃಹ ಸಚಿವಾಲಯ ಶುಕ್ರವಾರ ಹೇಳಿದೆ. ವಿವಿಧ ಭದ್ರತಾ ಸಂಸ್ಥೆಗಳ ಪರಿಶೀಲನೆ ಬಳಿಕ ಸಿಖ್​ ವಿದೇಶಿಯರನ್ನು ಕಪ್ಪುಪಟ್ಟಿಯಿಂದ ತೆಗೆಯುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. 1980ರ ದಶಕದಲ್ಲಿ ಸಿಖ್​ರಿಗೆ ಪ್ರತೇಕ ನೆಲ ಬೇಕೆಂದು […]

ಕಪ್ಪುಪಟ್ಟಿಯಿಂದ 312 ಸಿಖ್​ ವಿದೇಶಿ ಪ್ರಜೆಗಳನ್ನು ಕೈಬಿಟ್ಟ ಕೇಂದ್ರ
ಸಾಧು ಶ್ರೀನಾಥ್​
|

Updated on:Sep 13, 2019 | 2:07 PM

Share

ದೆಹಲಿ: ದೇಶ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದ ಆರೋಪ ಹೊಂದಿದ್ದ 312 ಸಿಖ್ ವಿದೇಶಿಯರನ್ನು ಕಪ್ಪುಪಟ್ಟಿಯಿಂದ ಕೇಂದ್ರ ಸರ್ಕಾರ ಕೈಬಿಟ್ಟಿದೆ. ಇನ್ಮುಂದೆ ಈ ಸಿಖ್ ವಿದೇಶಿಯರು ಭಾರತದ ವೀಸಾ ಸೌಲಭ್ಯ ಪಡೆಯಬಹುದು ಮತ್ತು ಭಾರತದಲ್ಲಿರುವ ಅವರ ಕುಟುಂಬಸ್ಥರನ್ನು ಭೇಟಿ ಮಾಡಬಹುದು ಎಂದು ಕೇಂದ್ರ ಗೃಹ ಸಚಿವಾಲಯ ಶುಕ್ರವಾರ ಹೇಳಿದೆ.

ವಿವಿಧ ಭದ್ರತಾ ಸಂಸ್ಥೆಗಳ ಪರಿಶೀಲನೆ ಬಳಿಕ ಸಿಖ್​ ವಿದೇಶಿಯರನ್ನು ಕಪ್ಪುಪಟ್ಟಿಯಿಂದ ತೆಗೆಯುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

1980ರ ದಶಕದಲ್ಲಿ ಸಿಖ್​ರಿಗೆ ಪ್ರತೇಕ ನೆಲ ಬೇಕೆಂದು ಭಾರತದ ವಿರುದ್ಧ ವಿದೇಶಿಯರ ಜೊತೆ ಸೇರಿ ಸಿಖ್​ರು ಉಗ್ರವಾದ ಚಳವಳಿ ನಡೆಸಿದ್ದರು. ಆಗ ಬಂಧನದಿಂದ ತಪ್ಪಿಸಿಕೊಳ್ಳಲು ಕೆಲವು ಸಿಖ್​ರು ಭಾರತ ದೇಶ ಬಿಟ್ಟು ವಿದೇಶಗಳಲ್ಲಿ ನೆಲೆಸಿ ಅಲ್ಲಿನ ಪ್ರಜೆಗಳಾದರು. ಅಂತವರನ್ನು 2016ರವರೆಗೆ ಕಪ್ಪುಪಟ್ಟಿಯಲ್ಲಿ ಇರಿಸಲಾಗಿತ್ತು. ಅವರಿಗೆ ಭಾರತಕ್ಕೆ ಭೇಟಿ ನೀಡಲು ವೀಸಾ ಸೌಲಭ್ಯ ಕೂಡ ಸಿಗುತ್ತಿರಲಿಲ್ಲ.

ಕಪ್ಪುಪಟ್ಟಿಗೆ ಸೇರಿದ ಬಳಿಕ ವಿದೇಶದಲ್ಲಿದ್ದ ಸಿಖ್​ರು ಭಾರತದಲ್ಲಿರುವ ಅವರ ಕುಟುಂಬಸ್ಥರನ್ನು ಭೇಟಿ ಮಾಡಲು ಆಗುತ್ತಿರಲಿಲ್ಲ. ಆದ್ರೆ ಇದೀಗ ಕಪ್ಪುಪಟ್ಟಿಯಿಂದ ಅವರನ್ನು ಕೈಬಿಡಲಾಗಿದೆ. ಇನ್ಮುಂದೆ ಭಾರತದ ವೀಸಾ ಸೌಲಭ್ಯ ಪಡೆದು ಅವರ ಕುಟುಂಬಸ್ಥರನ್ನು ಭೇಟಿ ಮಾಡಬಹುದಾಗಿದೆ. ಅಲ್ಲದೆ ಸಾಗರೋತ್ತರ ಭಾರತೀಯ ನಾಗರಿಕರ ಗುರುತಿನ ಚೀಟಿಗೂ ಅರ್ಜಿ ಸಲ್ಲಿಸಬಹುದಾಗಿದೆ. ಸಾಮಾನ್ಯ ವೀಸಾ ಮೂಲಕ ಭಾರತದಲ್ಲಿ 2 ವರ್ಷಗಳವರೆಗೆ ಅವರು ನೆಲೆಸಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ.

Published On - 1:53 pm, Fri, 13 September 19

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ