AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನ್ ಕೀ ಬಾತ್​ನಲ್ಲಿ ಚಾಮರಾಜನಗರದ ಮಹಿಳಾ ಉದ್ಯಮಿ ಹೆಸರು ಪ್ರಸ್ತಾಪ: ಟಿವಿ9 ಜತೆ ಖುಷಿ ಹಂಚಿಕೊಂಡ ವರ್ಷಾ

ಮನ್​ ಕಿ ಬಾತ್(Mann Ki Baat)​ ಕಾರ್ಯಕ್ರಮದಲ್ಲಿ  ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಚಾಮರಾಜನಗರ ಜಿಲ್ಲೆಯ ಉಮ್ಮತ್ತೂರು ಗ್ರಾಮದ ನಿವಾಸಿಯಾದ ವರ್ಷ ಎಂಬ ಮಹಿಳಾ ಉದ್ಯಮಿಯ ಹೆಸರು ಪ್ರಸ್ತಾಪ ಮಾಡಿದ್ದಾರೆ. ಈ ಹಿನ್ನಲೆ ಅವರು ಟಿವಿ9 ಜೊತೆ ಖುಷಿಯನ್ನು ಹಂಚಿಕೊಂಡಿದ್ದಾರೆ.

ಮನ್ ಕೀ ಬಾತ್​ನಲ್ಲಿ ಚಾಮರಾಜನಗರದ ಮಹಿಳಾ ಉದ್ಯಮಿ ಹೆಸರು ಪ್ರಸ್ತಾಪ: ಟಿವಿ9 ಜತೆ ಖುಷಿ ಹಂಚಿಕೊಂಡ ವರ್ಷಾ
ಮನ್ ಕೀ ಬಾತ್​ನಲ್ಲಿ ಚಾಮರಾಜನಗರದ ಮಹಿಳಾ ಉದ್ಯಮಿ ಹೆಸರು ಪ್ರಸ್ತಾಪ
ರಾಮ್​, ಮೈಸೂರು
| Edited By: |

Updated on:Nov 26, 2023 | 5:13 PM

Share

ಮೈಸೂರು, ನ.26: 107ನೇ ಮನ್​ ಕಿ ಬಾತ್( Mann Ki Baat)​ ಕಾರ್ಯಕ್ರಮದಲ್ಲಿ  ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಚಾಮರಾಜನಗರ ಜಿಲ್ಲೆಯ ಉಮ್ಮತ್ತೂರು ಗ್ರಾಮದ ನಿವಾಸಿಯಾದ ವರ್ಷ ಎಂಬ ಮಹಿಳಾ ಉದ್ಯಮಿಯ ಹೆಸರು ಪ್ರಸ್ತಾಪ ಮಾಡಿದ್ದಾರೆ. ಈ ಹಿನ್ನಲೆ  ಟಿವಿ9 ಜೊತೆ ಖುಷಿ ಹಂಚಿಕೊಂಡ ಮಹಿಳಾ ಉದ್ಯಮಿ ವರ್ಷ ಅವರು ಮಾತನಾಡಿ ‘2 ವರ್ಷದ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರ ಮನ್ ಕೀ ಬಾತ್ ಕಾರ್ಯಕ್ರಮ ಕೇಳಿದ್ದೆ. ಆ ಸಂದರ್ಭದಲ್ಲಿ ತಮಿಳುನಾಡಿನ ಉದ್ಯಮಿಯೊಬ್ಬರ ಹೆಸರನ್ನು ಮೋದಿಯವರು ಪ್ರಸ್ತಾಪಿಸಿದ್ದರು. ಅದನ್ನ ಕೇಳಿ ನಾವೇಕೆ ಈ ಉದ್ಯಮ ಪ್ರಾರಂಭ ಮಾಡಬಾರದು ಅಂದುಕೊಂಡೆ ಎಂದರು.

ಇವರು ಪ್ರಾರಂಭಿಸಿದ ಉದ್ಯಮ ಯಾವುದು?

‘ಅವರ ಮಾತಿನ ಪ್ರೇರೆಪಣೆಯಿಂದ ಹೊಸ ಉದ್ಯಮ ಪ್ರಾರಂಭಿಸಿದ್ದೇವೆ. ಆಕೃತಿ ಎಕೋ ಫ್ರೆಂಡ್ಲಿ ಎಂಟರ್ ಪ್ರೈಸಸ್ ಮೂಲಕ ಉದ್ಯಮಕ್ಕೆ ಕಾಲಿಟ್ಟಿದ್ದೇವೆ. ನಮ್ಮಲ್ಲಿ ಸ್ಥಳೀಯ ವಸ್ತುಗಳನ್ನೇ, ಉದಾಹರಣೆಗೆ ಬಾಳೆದಿಂಡಿನಿಂದ ಕರಕುಶಲ ವಸ್ತುಗಳನ್ನು ತಯಾರಿಸುತ್ತಿದ್ದೇವೆ. ಪ್ರಧಾನಿ ಮೋದಿಯವರು ನನ್ನ ಹೆಸರನ್ನು ಮನ್ ಕೀ ಬಾತ್​ನಲ್ಲಿ ಹೇಳಿದ್ದು ತುಂಬಾ ಖುಷಿಯಾಗಿದೆ ಎಂದು ಹೇಳಿದರು.

ಇದನ್ನೂ ಓದಿ:ಚಾಮರಾಜನಗರದ ಗ್ರಾಮೀಣ ಮಹಿಳೆ ವರ್ಷಾ ಜೀವನವನ್ನೇ ಬದಲಿಸಿತು ಮೋದಿ ಮನ್​ ಕೀ ಬಾತ್

ನನ್ನ ಸಾಧನೆಗೆ ನಮ್ಮ ಕುಟುಂಬಸ್ಥರು ಸಹ ಸಹಕಾರ ನೀಡಿದ್ದಾರೆ. 2.3 ಲಕ್ಷ ರೂ. ಬಂಡವಾಳ ಹಾಕಿ ಉದ್ಯಮ ಪ್ರಾರಂಭ ಮಾಡಿದೆವು. ಇಂದು ನಮ್ಮ ಕಂಪನಿಯಲ್ಲಿ 8 ಜನರು ಕೆಲಸ ಮಾಡುತ್ತಾರೆ. ಪ್ರಧಾನಿ ಅವರು ನನ್ನ‌ ಬಗ್ಗೆ ಹೇಳಿದ್ದರಿಂದ ಜವಾಬ್ದಾರಿ ಹೆಚ್ಚಾಗಿದೆ. ಮುಂದೆ ಇದನ್ನು ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗುತ್ತೇನೆ ಎಂದು ತಮ್ಮ ಸಂತಸವನ್ನು ವ್ಯಕ್ತಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:57 pm, Sun, 26 November 23

ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​