AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನ್ ಕೀ ಬಾತ್​ನಲ್ಲಿ ಚಾಮರಾಜನಗರದ ಮಹಿಳಾ ಉದ್ಯಮಿ ಹೆಸರು ಪ್ರಸ್ತಾಪ: ಟಿವಿ9 ಜತೆ ಖುಷಿ ಹಂಚಿಕೊಂಡ ವರ್ಷಾ

ಮನ್​ ಕಿ ಬಾತ್(Mann Ki Baat)​ ಕಾರ್ಯಕ್ರಮದಲ್ಲಿ  ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಚಾಮರಾಜನಗರ ಜಿಲ್ಲೆಯ ಉಮ್ಮತ್ತೂರು ಗ್ರಾಮದ ನಿವಾಸಿಯಾದ ವರ್ಷ ಎಂಬ ಮಹಿಳಾ ಉದ್ಯಮಿಯ ಹೆಸರು ಪ್ರಸ್ತಾಪ ಮಾಡಿದ್ದಾರೆ. ಈ ಹಿನ್ನಲೆ ಅವರು ಟಿವಿ9 ಜೊತೆ ಖುಷಿಯನ್ನು ಹಂಚಿಕೊಂಡಿದ್ದಾರೆ.

ಮನ್ ಕೀ ಬಾತ್​ನಲ್ಲಿ ಚಾಮರಾಜನಗರದ ಮಹಿಳಾ ಉದ್ಯಮಿ ಹೆಸರು ಪ್ರಸ್ತಾಪ: ಟಿವಿ9 ಜತೆ ಖುಷಿ ಹಂಚಿಕೊಂಡ ವರ್ಷಾ
ಮನ್ ಕೀ ಬಾತ್​ನಲ್ಲಿ ಚಾಮರಾಜನಗರದ ಮಹಿಳಾ ಉದ್ಯಮಿ ಹೆಸರು ಪ್ರಸ್ತಾಪ
ರಾಮ್​, ಮೈಸೂರು
| Edited By: |

Updated on:Nov 26, 2023 | 5:13 PM

Share

ಮೈಸೂರು, ನ.26: 107ನೇ ಮನ್​ ಕಿ ಬಾತ್( Mann Ki Baat)​ ಕಾರ್ಯಕ್ರಮದಲ್ಲಿ  ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಚಾಮರಾಜನಗರ ಜಿಲ್ಲೆಯ ಉಮ್ಮತ್ತೂರು ಗ್ರಾಮದ ನಿವಾಸಿಯಾದ ವರ್ಷ ಎಂಬ ಮಹಿಳಾ ಉದ್ಯಮಿಯ ಹೆಸರು ಪ್ರಸ್ತಾಪ ಮಾಡಿದ್ದಾರೆ. ಈ ಹಿನ್ನಲೆ  ಟಿವಿ9 ಜೊತೆ ಖುಷಿ ಹಂಚಿಕೊಂಡ ಮಹಿಳಾ ಉದ್ಯಮಿ ವರ್ಷ ಅವರು ಮಾತನಾಡಿ ‘2 ವರ್ಷದ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರ ಮನ್ ಕೀ ಬಾತ್ ಕಾರ್ಯಕ್ರಮ ಕೇಳಿದ್ದೆ. ಆ ಸಂದರ್ಭದಲ್ಲಿ ತಮಿಳುನಾಡಿನ ಉದ್ಯಮಿಯೊಬ್ಬರ ಹೆಸರನ್ನು ಮೋದಿಯವರು ಪ್ರಸ್ತಾಪಿಸಿದ್ದರು. ಅದನ್ನ ಕೇಳಿ ನಾವೇಕೆ ಈ ಉದ್ಯಮ ಪ್ರಾರಂಭ ಮಾಡಬಾರದು ಅಂದುಕೊಂಡೆ ಎಂದರು.

ಇವರು ಪ್ರಾರಂಭಿಸಿದ ಉದ್ಯಮ ಯಾವುದು?

‘ಅವರ ಮಾತಿನ ಪ್ರೇರೆಪಣೆಯಿಂದ ಹೊಸ ಉದ್ಯಮ ಪ್ರಾರಂಭಿಸಿದ್ದೇವೆ. ಆಕೃತಿ ಎಕೋ ಫ್ರೆಂಡ್ಲಿ ಎಂಟರ್ ಪ್ರೈಸಸ್ ಮೂಲಕ ಉದ್ಯಮಕ್ಕೆ ಕಾಲಿಟ್ಟಿದ್ದೇವೆ. ನಮ್ಮಲ್ಲಿ ಸ್ಥಳೀಯ ವಸ್ತುಗಳನ್ನೇ, ಉದಾಹರಣೆಗೆ ಬಾಳೆದಿಂಡಿನಿಂದ ಕರಕುಶಲ ವಸ್ತುಗಳನ್ನು ತಯಾರಿಸುತ್ತಿದ್ದೇವೆ. ಪ್ರಧಾನಿ ಮೋದಿಯವರು ನನ್ನ ಹೆಸರನ್ನು ಮನ್ ಕೀ ಬಾತ್​ನಲ್ಲಿ ಹೇಳಿದ್ದು ತುಂಬಾ ಖುಷಿಯಾಗಿದೆ ಎಂದು ಹೇಳಿದರು.

ಇದನ್ನೂ ಓದಿ:ಚಾಮರಾಜನಗರದ ಗ್ರಾಮೀಣ ಮಹಿಳೆ ವರ್ಷಾ ಜೀವನವನ್ನೇ ಬದಲಿಸಿತು ಮೋದಿ ಮನ್​ ಕೀ ಬಾತ್

ನನ್ನ ಸಾಧನೆಗೆ ನಮ್ಮ ಕುಟುಂಬಸ್ಥರು ಸಹ ಸಹಕಾರ ನೀಡಿದ್ದಾರೆ. 2.3 ಲಕ್ಷ ರೂ. ಬಂಡವಾಳ ಹಾಕಿ ಉದ್ಯಮ ಪ್ರಾರಂಭ ಮಾಡಿದೆವು. ಇಂದು ನಮ್ಮ ಕಂಪನಿಯಲ್ಲಿ 8 ಜನರು ಕೆಲಸ ಮಾಡುತ್ತಾರೆ. ಪ್ರಧಾನಿ ಅವರು ನನ್ನ‌ ಬಗ್ಗೆ ಹೇಳಿದ್ದರಿಂದ ಜವಾಬ್ದಾರಿ ಹೆಚ್ಚಾಗಿದೆ. ಮುಂದೆ ಇದನ್ನು ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗುತ್ತೇನೆ ಎಂದು ತಮ್ಮ ಸಂತಸವನ್ನು ವ್ಯಕ್ತಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:57 pm, Sun, 26 November 23

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ