AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಪುಟ ಪುನಾರಚನೆ ವದಂತಿ; ರಾಷ್ಟ್ರಪತಿಯನ್ನು ಭೇಟಿ ಮಾಡಿದ ಪ್ರಧಾನಿ ಮೋದಿ

ಕೇಂದ್ರ ಸಚಿವ ಜಾರ್ಜ್ ಕುರಿಯನ್ ಅವರ ರಾಜ್ಯಸಭಾ ಅವಧಿ ಮುಗಿದು ಅವರು ರಾಜೀನಾಮೆ ನೀಡಿದ ಮರುದಿನವೇ ಪ್ರಧಾನಿ ನರೇಂದ್ರ ಮೋದಿ ಇಂದು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದ್ದಾರೆ. ಇದು ದೆಹಲಿ ರಾಜಕೀಯ ವಲಯದಲ್ಲಿ ಶೀಘ್ರದಲ್ಲೇ ಕೇಂದ್ರ ಸಚಿವ ಸಂಪುಟ ಪುನಾರಚನೆ ಆಗಲಿದೆ ಎಂಬ ವದಂತಿಗಳಿಗೆ ಪುಷ್ಟಿ ನೀಡಿದೆ. ಕೇಂದ್ರ ಅಲ್ಪಸಂಖ್ಯಾತರ ವ್ಯವಹಾರಗಳು ಹಾಗೂ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆಯ ರಾಜ್ಯ ಸಚಿವರಾಗಿದ್ದ ಜಾರ್ಜ್ ಕುರಿಯನ್ ಅವರಿಗೆ ಜೂನ್ 18ರಂದು ನಡೆದ ರಾಜ್ಯಸಭಾ ಚುನಾವಣೆಗೆ ಬಿಜೆಪಿ ಮತ್ತೆ ಟಿಕೆಟ್ ನೀಡಿರಲಿಲ್ಲ. ಅವರ ರಾಜ್ಯಸಭಾ ಅವಧಿಯು ಜೂನ್ 21ಕ್ಕೆ ಕೊನೆಗೊಂಡಿತ್ತು.

ಸಂಪುಟ ಪುನಾರಚನೆ ವದಂತಿ; ರಾಷ್ಟ್ರಪತಿಯನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
Pm Modi With Droupadi MurmuImage Credit source: PTI
ಸುಷ್ಮಾ ಚಕ್ರೆ
|

Updated on: Jun 23, 2026 | 9:44 PM

Share

ನವದೆಹಲಿ, ಜೂನ್ 23: ಕೇಂದ್ರ ಸಚಿವ ಸಂಪುಟದಲ್ಲಿ ಶೀಘ್ರದಲ್ಲೇ ಭಾರಿ ಬದಲಾವಣೆಯಾಗಲಿದೆ ಎಂಬ ವದಂತಿಗಳ ನಡುವೆಯೇ ಪ್ರಧಾನಿ ನರೇಂದ್ರ ಮೋದಿ (PM Modi) ಇಂದು (ಮಂಗಳವಾರ) ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ರಾಷ್ಟ್ರಪತಿ ಮತ್ತು ಪ್ರಧಾನಿಯವರ ಈ ದಿಢೀರ್ ಭೇಟಿಯು ದೇಶದ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದು, ಸಂಪುಟ ಪುನಾರಚನೆಯ ಸುಳಿವು ನೀಡಿದೆ.

ಕಳೆದ ಕೆಲವು ದಿನಗಳಿಂದ ದೆಹಲಿಯ ರಾಜಕೀಯ ಕಾರಿಡಾರ್‌ಗಳಲ್ಲಿ ಮೋದಿ ಸರ್ಕಾರದ ಸಚಿವ ಸಂಪುಟದಲ್ಲಿ ಬದಲಾವಣೆ ತರಲಾಗುತ್ತದೆ ಎಂಬ ಚರ್ಚೆಗಳು ನಡೆಯುತ್ತಿವೆ. ಮುಂಬರುವ ಕೆಲವು ಪ್ರಮುಖ ರಾಜ್ಯಗಳ ವಿಧಾನಸಭಾ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು, ಕೆಲವು ಹಿರಿಯ ಸಚಿವರನ್ನು ಪಕ್ಷದ ಸಂಘಟನಾ ಜವಾಬ್ದಾರಿಗೆ ಮುಕ್ತಗೊಳಿಸಿ, ಹೊಸ ಮತ್ತು ಯುವ ಮುಖಗಳಿಗೆ ಸಂಪುಟದಲ್ಲಿ ಸ್ಥಾನ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಹಾಲಿ ಸಚಿವರ ಕಾರ್ಯಕ್ಷಮತೆಯ ವರದಿಯನ್ನು ಆಧರಿಸಿ ಕೆಲವು ಪ್ರಮುಖ ಇಲಾಖೆಗಳ ಜವಾಬ್ದಾರಿಯನ್ನು ಬದಲಾಯಿಸುವ ಸಾಧ್ಯತೆಯೂ ಇದೆ.

ಇದನ್ನೂ ಓದಿ: ನೆಹರೂ ಅವರಿಂದ ಮೋದಿವರೆಗೆ ಕೇಂದ್ರ ಸಚಿವ ಸಂಪುಟದಲ್ಲಿ ಮಹಿಳೆಯರ ಪಾತ್ರ ಹೇಗೆಲ್ಲ ಬದಲಾಯ್ತು?

ಸಂಪುಟ ಪುನಾರಚನೆಯ ವದಂತಿಗಳ ಹೊರತಾಗಿ, ಮುಂಬರುವ ಸಂಸತ್ ಜಂಟಿ ಅಧಿವೇಶನ, ದೇಶದ ಪ್ರಸಕ್ತ ಆಂತರಿಕ ಭದ್ರತಾ ಪರಿಸ್ಥಿತಿ ಮತ್ತು ಸರ್ಕಾರದ ಮುಂದಿನ ಪ್ರಮುಖ ಮಸೂದೆಗಳ ಕುರಿತು ಪ್ರಧಾನಿ ಮೋದಿ ಅವರು ರಾಷ್ಟ್ರಪತಿಯವರಿಗೆ ಮಾಹಿತಿ ನೀಡಿರಬಹುದು ಎಂದು ಮೂಲಗಳು ತಿಳಿಸಿವೆ.

ಜೂನ್ 24ರಂದು ಬೆಳಗ್ಗೆ 11 ಗಂಟೆಗೆ ಕೇಂದ್ರ ಸಚಿವ ಸಂಪುಟ ಸಭೆ ಕರೆಯಲಾಗಿದ್ದು, ಬದಲಾವಣೆಗಳ ಅಧಿಕೃತ ಪ್ರಕಟಣೆ ಶೀಘ್ರದಲ್ಲೇ ಹೊರಬೀಳುವ ಸಾಧ್ಯತೆಯಿದೆ. ಇತರ ಪಕ್ಷಗಳನ್ನು ತೊರೆದು ಇತ್ತೀಚೆಗೆ ಎನ್‌ಡಿಎ ಮೈತ್ರಿಕೂಟ ಸೇರಿದ ನಾಯಕರನ್ನು ಸಂಪುಟದಲ್ಲಿ ಸಮಾಧಾನಪಡಿಸುವುದು ಬಿಜೆಪಿಗೆ ಪ್ರಮುಖ ಸವಾಲಾಗಿದೆ.

ಇದನ್ನೂ ಓದಿ: ಮೋದಿ ರಾಜತಾಂತ್ರಿಕತೆ ಯಶಸ್ವಿ; ಬ್ರಿಟನ್, ಕೆನಡಾ ಮತ್ತು ಐರೋಪ್ಯ ಒಕ್ಕೂಟದಿಂದ ಭಾರತಕ್ಕೆ ಭಾರಿ ಆರ್ಥಿಕ ಲಾಭ!

ಏಪ್ರಿಲ್‌ನಲ್ಲಿ ಆಮ್ ಆದ್ಮಿ ಪಕ್ಷದಿಂದ (AAP) ಬಂದು ಬಿಜೆಪಿ ಸೇರಿದ ರಾಘವ್ ಚಡ್ಡಾ ನೇತೃತ್ವದ 7 ರಾಜ್ಯಸಭಾ ಸಂಸದರ ಗುಂಪು ಸಚಿವ ಸ್ಥಾನದ ರೇಸ್‌ನಲ್ಲಿದೆ. ಇದರೊಂದಿಗೆ ತೃಣಮೂಲ ಕಾಂಗ್ರೆಸ್ (TMC) ಬಂಡಾಯ ಬಣದ ಕಾಕೋಲಿ ಘೋಷ್ ದಸ್ತಿದಾರ್ ಗುಂಪು ಮತ್ತು ಉದ್ಧವ್ ಠಾಕ್ರೆ ಬಣದಿಂದ ಹೊರಬಂದು ಏಕನಾಥ್ ಶಿಂಧೆ ಶಿವಸೇನೆಗೆ ಸೇರಿದ ಸಂಸದರಿಗೂ ಸ್ಥಾನ ನೀಡಬೇಕಾಗಬಹುದು.

ಸಂಸತ್ತಿನಲ್ಲಿ ಪ್ರಮುಖ ಮಸೂದೆಗಳನ್ನು ಅಂಗೀಕರಿಸಲು ಮತ್ತು ಸಂವಿಧಾನಿಕ ತಿದ್ದುಪಡಿಗಳಿಗೆ ಅಗತ್ಯವಿರುವ ಮೂರನೇ ಎರಡರಷ್ಟು ಬಹುಮತವನ್ನು ಭದ್ರಪಡಿಸಿಕೊಳ್ಳಲು ಸಣ್ಣ ಪುಟ್ಟ ಪಕ್ಷಗಳು ಮತ್ತು ಸ್ವತಂತ್ರ ಸಂಸದರನ್ನು ಸೆಳೆಯುವ ತಂತ್ರ ಇದರ ಹಿಂದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ