AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಗ್ಲೆಂಡ್ ಮಾಜಿ ಪಿಎಂ ರಿಷಿ ಸುನಕ್ ಕುಟುಂಬವನ್ನು ಭೇಟಿಯಾದ ಪ್ರಧಾನಿ ಮೋದಿ

ಇಂಗ್ಲೆಂಡ್​ನ ಮಾಜಿ ಪ್ರಧಾನಿ ರಿಷಿ ಸುನಕ್, ಅವರ ಪತ್ನಿ ಅಕ್ಷತಾ ಮೂರ್ತಿ, ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಭೇಟಿಯಾಗಿದ್ದಾರೆ. ಪ್ರಧಾನಿ ಮೋದಿ ಅವರು ಈ ಭೇಟಿಯ ಫೋಟೋಗಳನ್ನು ಹಂಚಿಕೊಂಡಿದ್ದು, "ಯುಕೆ ಮಾಜಿ ಪ್ರಧಾನಿ ರಿಷಿ ಸುನಕ್ ಮತ್ತು ಅವರ ಕುಟುಂಬವನ್ನು ಭೇಟಿಯಾಗಿ ಸಂತೋಷವಾಯಿತು! ನಾವು ಅನೇಕ ವಿಷಯಗಳ ಕುರಿತು ಅದ್ಭುತ ಸಂಭಾಷಣೆ ನಡೆಸಿದೆವು" ಎಂದು ಹೇಳಿದ್ದಾರೆ.

ಇಂಗ್ಲೆಂಡ್ ಮಾಜಿ ಪಿಎಂ ರಿಷಿ ಸುನಕ್ ಕುಟುಂಬವನ್ನು ಭೇಟಿಯಾದ ಪ್ರಧಾನಿ ಮೋದಿ
Pm Modi Met Rishi Sunak Family
Follow us
ಸುಷ್ಮಾ ಚಕ್ರೆ
|

Updated on: Feb 18, 2025 | 10:34 PM

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಯುಕೆ ಮಾಜಿ ಪ್ರಧಾನಿ ರಿಷಿ ಸುನಕ್ ಅವರನ್ನು ಭೇಟಿಯಾಗಿದ್ದಾರೆ. ದೆಹಲಿಯಲ್ಲಿ ಪಿಎಂ ಮೋದಿ ಯುಕೆ ಮಾಜಿ ಪ್ರಧಾನಿ ರಿಷಿ ಸುನಕ್, ಅವರ ಪತ್ನಿ ಅಕ್ಷತಾ ಮತ್ತು ರಾಜ್ಯಸಭಾ ಸಂಸದೆ ಸುಧಾ ಮೂರ್ತಿ ಅವರನ್ನು ಭೇಟಿಯಾದರು. ಈ ವೇಳೆ ರಿಷಿ ಸುನಕ್ ಅವರನ್ನು ಭಾರತದ ದೊಡ್ಡ ಸ್ನೇಹಿತ ಎಂದು ಮೋದಿ ಹೊಗಳಿದ್ದಾರೆ. ರಿಷಿ ಸುನಕ್ ತಮ್ಮ ಭಾರತ ಪ್ರವಾಸದಲ್ಲಿ ತಾಜ್ ಮಹಲ್, ಫತೇಪುರ್ ಸಿಕ್ರಿ ಮತ್ತು ಜೈಪುರಕ್ಕೆ ಭೇಟಿ ನೀಡಿದ್ದಾರೆ.

ಇಂದಿನ ಭೇಟಿಯ ವೇಳೆ ಇಬ್ಬರು ನಾಯಕರು ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದರು. ರಿಷಿ ಸುನಕ್ ಅವರ ಪತ್ನಿ ಅಕ್ಷತಾ ಮೂರ್ತಿ, ಅವರ ಪುತ್ರಿಯರಾದ ಕೃಷ್ಣ ಮತ್ತು ಅನುಷ್ಕಾ ಮತ್ತು ರಾಜ್ಯಸಭೆಯ ಸಂಸತ್ ಸದಸ್ಯರೂ ಆಗಿರುವ ರಿಷಿ ಸುನಕ್ ಅವರ ಅತ್ತೆ ಸುಧಾ ಮೂರ್ತಿ ಕೂಡ ಈ ವೇಳೆ ಜೊತೆಗಿದ್ದರು.

ಈ ಬಗ್ಗೆ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, “ಯುಕೆ ಮಾಜಿ ಪ್ರಧಾನಿ ರಿಷಿ ಸುನಕ್ ಮತ್ತು ಅವರ ಕುಟುಂಬವನ್ನು ಭೇಟಿಯಾಗಿ ಸಂತೋಷವಾಯಿತು! ನಾವು ಅನೇಕ ವಿಷಯಗಳ ಕುರಿತು ಅದ್ಭುತ ಸಂಭಾಷಣೆ ನಡೆಸಿದ್ದೇವೆ. ರಿಷಿ ಸುನಕ್ ಭಾರತದ ಉತ್ತಮ ಸ್ನೇಹಿತ. ಅವರು ಇನ್ನೂ ಬಲವಾದ ಭಾರತ-ಯುಕೆ ಸಂಬಂಧಗಳ ಬಗ್ಗೆ ಉತ್ಸುಕರಾಗಿದ್ದಾರೆ.” ಎಂದಿದ್ದಾರೆ.

ಇದನ್ನೂ ಓದಿ: ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ತಾವೇ ಕತಾರ್ ರಾಜನನ್ನು ಬರಮಾಡಿಕೊಂಡ ಪ್ರಧಾನಿ ಮೋದಿ

ಶನಿವಾರ, ರಿಷಿ ಸುನಕ್ ಕುಟುಂಬವು ಆಗ್ರಾದಲ್ಲಿರುವ ತಾಜ್ ಮಹಲ್‌ಗೆ ಭೇಟಿ ನೀಡಿತ್ತು. ಈ ವೇಳೆ ಯುಕೆ ಮಾಜಿ ಪ್ರಧಾನಿ ಮತ್ತು ಅವರ ಕುಟುಂಬವನ್ನು ನೋಡಲು ಸಂದರ್ಶಕರು ಅಪಾರ ಸಂಖ್ಯೆಯಲ್ಲಿ ಸೇರಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ, ಅವರು ನೆರೆದಿದ್ದ ಜನರತ್ತ ಕೈ ಬೀಸಿದ್ದರು. ರಿಷಿ ಸುನಕ್ ಭಾನುವಾರ ತಮ್ಮ ಕುಟುಂಬದೊಂದಿಗೆ ಐಕಾನಿಕ್ ಫತೇಪುರ್ ಸಿಕ್ರಿ ಸ್ಮಾರಕಕ್ಕೂ ಭೇಟಿ ನೀಡಿದರು.

ಆಗ್ರಾ ಪ್ರವಾಸಕ್ಕೂ ಮುನ್ನ ಸುನಕ್ ಜೈಪುರ ಸಾಹಿತ್ಯ ಉತ್ಸವ ಮತ್ತು ಮುಂಬೈನ ಐಕಾನಿಕ್ ವಾಂಖೆಡೆ ಕ್ರೀಡಾಂಗಣದಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಮತ್ತು ಅಂತಿಮ T20I ಪಂದ್ಯವನ್ನು ವೀಕ್ಷಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು