AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಗ್ಲೆಂಡ್ ಮಾಜಿ ಪಿಎಂ ರಿಷಿ ಸುನಕ್ ಕುಟುಂಬವನ್ನು ಭೇಟಿಯಾದ ಪ್ರಧಾನಿ ಮೋದಿ

ಇಂಗ್ಲೆಂಡ್​ನ ಮಾಜಿ ಪ್ರಧಾನಿ ರಿಷಿ ಸುನಕ್, ಅವರ ಪತ್ನಿ ಅಕ್ಷತಾ ಮೂರ್ತಿ, ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಭೇಟಿಯಾಗಿದ್ದಾರೆ. ಪ್ರಧಾನಿ ಮೋದಿ ಅವರು ಈ ಭೇಟಿಯ ಫೋಟೋಗಳನ್ನು ಹಂಚಿಕೊಂಡಿದ್ದು, "ಯುಕೆ ಮಾಜಿ ಪ್ರಧಾನಿ ರಿಷಿ ಸುನಕ್ ಮತ್ತು ಅವರ ಕುಟುಂಬವನ್ನು ಭೇಟಿಯಾಗಿ ಸಂತೋಷವಾಯಿತು! ನಾವು ಅನೇಕ ವಿಷಯಗಳ ಕುರಿತು ಅದ್ಭುತ ಸಂಭಾಷಣೆ ನಡೆಸಿದೆವು" ಎಂದು ಹೇಳಿದ್ದಾರೆ.

ಇಂಗ್ಲೆಂಡ್ ಮಾಜಿ ಪಿಎಂ ರಿಷಿ ಸುನಕ್ ಕುಟುಂಬವನ್ನು ಭೇಟಿಯಾದ ಪ್ರಧಾನಿ ಮೋದಿ
Pm Modi Met Rishi Sunak Family
ಸುಷ್ಮಾ ಚಕ್ರೆ
|

Updated on: Feb 18, 2025 | 10:34 PM

Share

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಯುಕೆ ಮಾಜಿ ಪ್ರಧಾನಿ ರಿಷಿ ಸುನಕ್ ಅವರನ್ನು ಭೇಟಿಯಾಗಿದ್ದಾರೆ. ದೆಹಲಿಯಲ್ಲಿ ಪಿಎಂ ಮೋದಿ ಯುಕೆ ಮಾಜಿ ಪ್ರಧಾನಿ ರಿಷಿ ಸುನಕ್, ಅವರ ಪತ್ನಿ ಅಕ್ಷತಾ ಮತ್ತು ರಾಜ್ಯಸಭಾ ಸಂಸದೆ ಸುಧಾ ಮೂರ್ತಿ ಅವರನ್ನು ಭೇಟಿಯಾದರು. ಈ ವೇಳೆ ರಿಷಿ ಸುನಕ್ ಅವರನ್ನು ಭಾರತದ ದೊಡ್ಡ ಸ್ನೇಹಿತ ಎಂದು ಮೋದಿ ಹೊಗಳಿದ್ದಾರೆ. ರಿಷಿ ಸುನಕ್ ತಮ್ಮ ಭಾರತ ಪ್ರವಾಸದಲ್ಲಿ ತಾಜ್ ಮಹಲ್, ಫತೇಪುರ್ ಸಿಕ್ರಿ ಮತ್ತು ಜೈಪುರಕ್ಕೆ ಭೇಟಿ ನೀಡಿದ್ದಾರೆ.

ಇಂದಿನ ಭೇಟಿಯ ವೇಳೆ ಇಬ್ಬರು ನಾಯಕರು ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದರು. ರಿಷಿ ಸುನಕ್ ಅವರ ಪತ್ನಿ ಅಕ್ಷತಾ ಮೂರ್ತಿ, ಅವರ ಪುತ್ರಿಯರಾದ ಕೃಷ್ಣ ಮತ್ತು ಅನುಷ್ಕಾ ಮತ್ತು ರಾಜ್ಯಸಭೆಯ ಸಂಸತ್ ಸದಸ್ಯರೂ ಆಗಿರುವ ರಿಷಿ ಸುನಕ್ ಅವರ ಅತ್ತೆ ಸುಧಾ ಮೂರ್ತಿ ಕೂಡ ಈ ವೇಳೆ ಜೊತೆಗಿದ್ದರು.

ಈ ಬಗ್ಗೆ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, “ಯುಕೆ ಮಾಜಿ ಪ್ರಧಾನಿ ರಿಷಿ ಸುನಕ್ ಮತ್ತು ಅವರ ಕುಟುಂಬವನ್ನು ಭೇಟಿಯಾಗಿ ಸಂತೋಷವಾಯಿತು! ನಾವು ಅನೇಕ ವಿಷಯಗಳ ಕುರಿತು ಅದ್ಭುತ ಸಂಭಾಷಣೆ ನಡೆಸಿದ್ದೇವೆ. ರಿಷಿ ಸುನಕ್ ಭಾರತದ ಉತ್ತಮ ಸ್ನೇಹಿತ. ಅವರು ಇನ್ನೂ ಬಲವಾದ ಭಾರತ-ಯುಕೆ ಸಂಬಂಧಗಳ ಬಗ್ಗೆ ಉತ್ಸುಕರಾಗಿದ್ದಾರೆ.” ಎಂದಿದ್ದಾರೆ.

ಇದನ್ನೂ ಓದಿ: ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ತಾವೇ ಕತಾರ್ ರಾಜನನ್ನು ಬರಮಾಡಿಕೊಂಡ ಪ್ರಧಾನಿ ಮೋದಿ

ಶನಿವಾರ, ರಿಷಿ ಸುನಕ್ ಕುಟುಂಬವು ಆಗ್ರಾದಲ್ಲಿರುವ ತಾಜ್ ಮಹಲ್‌ಗೆ ಭೇಟಿ ನೀಡಿತ್ತು. ಈ ವೇಳೆ ಯುಕೆ ಮಾಜಿ ಪ್ರಧಾನಿ ಮತ್ತು ಅವರ ಕುಟುಂಬವನ್ನು ನೋಡಲು ಸಂದರ್ಶಕರು ಅಪಾರ ಸಂಖ್ಯೆಯಲ್ಲಿ ಸೇರಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ, ಅವರು ನೆರೆದಿದ್ದ ಜನರತ್ತ ಕೈ ಬೀಸಿದ್ದರು. ರಿಷಿ ಸುನಕ್ ಭಾನುವಾರ ತಮ್ಮ ಕುಟುಂಬದೊಂದಿಗೆ ಐಕಾನಿಕ್ ಫತೇಪುರ್ ಸಿಕ್ರಿ ಸ್ಮಾರಕಕ್ಕೂ ಭೇಟಿ ನೀಡಿದರು.

ಆಗ್ರಾ ಪ್ರವಾಸಕ್ಕೂ ಮುನ್ನ ಸುನಕ್ ಜೈಪುರ ಸಾಹಿತ್ಯ ಉತ್ಸವ ಮತ್ತು ಮುಂಬೈನ ಐಕಾನಿಕ್ ವಾಂಖೆಡೆ ಕ್ರೀಡಾಂಗಣದಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಮತ್ತು ಅಂತಿಮ T20I ಪಂದ್ಯವನ್ನು ವೀಕ್ಷಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?