AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಗ್ಲೆಂಡ್ ಮಾಜಿ ಪಿಎಂ ರಿಷಿ ಸುನಕ್ ಕುಟುಂಬವನ್ನು ಭೇಟಿಯಾದ ಪ್ರಧಾನಿ ಮೋದಿ

ಇಂಗ್ಲೆಂಡ್​ನ ಮಾಜಿ ಪ್ರಧಾನಿ ರಿಷಿ ಸುನಕ್, ಅವರ ಪತ್ನಿ ಅಕ್ಷತಾ ಮೂರ್ತಿ, ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಭೇಟಿಯಾಗಿದ್ದಾರೆ. ಪ್ರಧಾನಿ ಮೋದಿ ಅವರು ಈ ಭೇಟಿಯ ಫೋಟೋಗಳನ್ನು ಹಂಚಿಕೊಂಡಿದ್ದು, "ಯುಕೆ ಮಾಜಿ ಪ್ರಧಾನಿ ರಿಷಿ ಸುನಕ್ ಮತ್ತು ಅವರ ಕುಟುಂಬವನ್ನು ಭೇಟಿಯಾಗಿ ಸಂತೋಷವಾಯಿತು! ನಾವು ಅನೇಕ ವಿಷಯಗಳ ಕುರಿತು ಅದ್ಭುತ ಸಂಭಾಷಣೆ ನಡೆಸಿದೆವು" ಎಂದು ಹೇಳಿದ್ದಾರೆ.

ಇಂಗ್ಲೆಂಡ್ ಮಾಜಿ ಪಿಎಂ ರಿಷಿ ಸುನಕ್ ಕುಟುಂಬವನ್ನು ಭೇಟಿಯಾದ ಪ್ರಧಾನಿ ಮೋದಿ
Pm Modi Met Rishi Sunak Family
ಸುಷ್ಮಾ ಚಕ್ರೆ
|

Updated on: Feb 18, 2025 | 10:34 PM

Share

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಯುಕೆ ಮಾಜಿ ಪ್ರಧಾನಿ ರಿಷಿ ಸುನಕ್ ಅವರನ್ನು ಭೇಟಿಯಾಗಿದ್ದಾರೆ. ದೆಹಲಿಯಲ್ಲಿ ಪಿಎಂ ಮೋದಿ ಯುಕೆ ಮಾಜಿ ಪ್ರಧಾನಿ ರಿಷಿ ಸುನಕ್, ಅವರ ಪತ್ನಿ ಅಕ್ಷತಾ ಮತ್ತು ರಾಜ್ಯಸಭಾ ಸಂಸದೆ ಸುಧಾ ಮೂರ್ತಿ ಅವರನ್ನು ಭೇಟಿಯಾದರು. ಈ ವೇಳೆ ರಿಷಿ ಸುನಕ್ ಅವರನ್ನು ಭಾರತದ ದೊಡ್ಡ ಸ್ನೇಹಿತ ಎಂದು ಮೋದಿ ಹೊಗಳಿದ್ದಾರೆ. ರಿಷಿ ಸುನಕ್ ತಮ್ಮ ಭಾರತ ಪ್ರವಾಸದಲ್ಲಿ ತಾಜ್ ಮಹಲ್, ಫತೇಪುರ್ ಸಿಕ್ರಿ ಮತ್ತು ಜೈಪುರಕ್ಕೆ ಭೇಟಿ ನೀಡಿದ್ದಾರೆ.

ಇಂದಿನ ಭೇಟಿಯ ವೇಳೆ ಇಬ್ಬರು ನಾಯಕರು ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದರು. ರಿಷಿ ಸುನಕ್ ಅವರ ಪತ್ನಿ ಅಕ್ಷತಾ ಮೂರ್ತಿ, ಅವರ ಪುತ್ರಿಯರಾದ ಕೃಷ್ಣ ಮತ್ತು ಅನುಷ್ಕಾ ಮತ್ತು ರಾಜ್ಯಸಭೆಯ ಸಂಸತ್ ಸದಸ್ಯರೂ ಆಗಿರುವ ರಿಷಿ ಸುನಕ್ ಅವರ ಅತ್ತೆ ಸುಧಾ ಮೂರ್ತಿ ಕೂಡ ಈ ವೇಳೆ ಜೊತೆಗಿದ್ದರು.

ಈ ಬಗ್ಗೆ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, “ಯುಕೆ ಮಾಜಿ ಪ್ರಧಾನಿ ರಿಷಿ ಸುನಕ್ ಮತ್ತು ಅವರ ಕುಟುಂಬವನ್ನು ಭೇಟಿಯಾಗಿ ಸಂತೋಷವಾಯಿತು! ನಾವು ಅನೇಕ ವಿಷಯಗಳ ಕುರಿತು ಅದ್ಭುತ ಸಂಭಾಷಣೆ ನಡೆಸಿದ್ದೇವೆ. ರಿಷಿ ಸುನಕ್ ಭಾರತದ ಉತ್ತಮ ಸ್ನೇಹಿತ. ಅವರು ಇನ್ನೂ ಬಲವಾದ ಭಾರತ-ಯುಕೆ ಸಂಬಂಧಗಳ ಬಗ್ಗೆ ಉತ್ಸುಕರಾಗಿದ್ದಾರೆ.” ಎಂದಿದ್ದಾರೆ.

ಇದನ್ನೂ ಓದಿ: ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ತಾವೇ ಕತಾರ್ ರಾಜನನ್ನು ಬರಮಾಡಿಕೊಂಡ ಪ್ರಧಾನಿ ಮೋದಿ

ಶನಿವಾರ, ರಿಷಿ ಸುನಕ್ ಕುಟುಂಬವು ಆಗ್ರಾದಲ್ಲಿರುವ ತಾಜ್ ಮಹಲ್‌ಗೆ ಭೇಟಿ ನೀಡಿತ್ತು. ಈ ವೇಳೆ ಯುಕೆ ಮಾಜಿ ಪ್ರಧಾನಿ ಮತ್ತು ಅವರ ಕುಟುಂಬವನ್ನು ನೋಡಲು ಸಂದರ್ಶಕರು ಅಪಾರ ಸಂಖ್ಯೆಯಲ್ಲಿ ಸೇರಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ, ಅವರು ನೆರೆದಿದ್ದ ಜನರತ್ತ ಕೈ ಬೀಸಿದ್ದರು. ರಿಷಿ ಸುನಕ್ ಭಾನುವಾರ ತಮ್ಮ ಕುಟುಂಬದೊಂದಿಗೆ ಐಕಾನಿಕ್ ಫತೇಪುರ್ ಸಿಕ್ರಿ ಸ್ಮಾರಕಕ್ಕೂ ಭೇಟಿ ನೀಡಿದರು.

ಆಗ್ರಾ ಪ್ರವಾಸಕ್ಕೂ ಮುನ್ನ ಸುನಕ್ ಜೈಪುರ ಸಾಹಿತ್ಯ ಉತ್ಸವ ಮತ್ತು ಮುಂಬೈನ ಐಕಾನಿಕ್ ವಾಂಖೆಡೆ ಕ್ರೀಡಾಂಗಣದಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಮತ್ತು ಅಂತಿಮ T20I ಪಂದ್ಯವನ್ನು ವೀಕ್ಷಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!