AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಗ್ಲೆಂಡ್ ಮಾಜಿ ಪಿಎಂ ರಿಷಿ ಸುನಕ್ ಕುಟುಂಬವನ್ನು ಭೇಟಿಯಾದ ಪ್ರಧಾನಿ ಮೋದಿ

ಇಂಗ್ಲೆಂಡ್​ನ ಮಾಜಿ ಪ್ರಧಾನಿ ರಿಷಿ ಸುನಕ್, ಅವರ ಪತ್ನಿ ಅಕ್ಷತಾ ಮೂರ್ತಿ, ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಭೇಟಿಯಾಗಿದ್ದಾರೆ. ಪ್ರಧಾನಿ ಮೋದಿ ಅವರು ಈ ಭೇಟಿಯ ಫೋಟೋಗಳನ್ನು ಹಂಚಿಕೊಂಡಿದ್ದು, "ಯುಕೆ ಮಾಜಿ ಪ್ರಧಾನಿ ರಿಷಿ ಸುನಕ್ ಮತ್ತು ಅವರ ಕುಟುಂಬವನ್ನು ಭೇಟಿಯಾಗಿ ಸಂತೋಷವಾಯಿತು! ನಾವು ಅನೇಕ ವಿಷಯಗಳ ಕುರಿತು ಅದ್ಭುತ ಸಂಭಾಷಣೆ ನಡೆಸಿದೆವು" ಎಂದು ಹೇಳಿದ್ದಾರೆ.

ಇಂಗ್ಲೆಂಡ್ ಮಾಜಿ ಪಿಎಂ ರಿಷಿ ಸುನಕ್ ಕುಟುಂಬವನ್ನು ಭೇಟಿಯಾದ ಪ್ರಧಾನಿ ಮೋದಿ
Pm Modi Met Rishi Sunak Family
ಸುಷ್ಮಾ ಚಕ್ರೆ
|

Updated on: Feb 18, 2025 | 10:34 PM

Share

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಯುಕೆ ಮಾಜಿ ಪ್ರಧಾನಿ ರಿಷಿ ಸುನಕ್ ಅವರನ್ನು ಭೇಟಿಯಾಗಿದ್ದಾರೆ. ದೆಹಲಿಯಲ್ಲಿ ಪಿಎಂ ಮೋದಿ ಯುಕೆ ಮಾಜಿ ಪ್ರಧಾನಿ ರಿಷಿ ಸುನಕ್, ಅವರ ಪತ್ನಿ ಅಕ್ಷತಾ ಮತ್ತು ರಾಜ್ಯಸಭಾ ಸಂಸದೆ ಸುಧಾ ಮೂರ್ತಿ ಅವರನ್ನು ಭೇಟಿಯಾದರು. ಈ ವೇಳೆ ರಿಷಿ ಸುನಕ್ ಅವರನ್ನು ಭಾರತದ ದೊಡ್ಡ ಸ್ನೇಹಿತ ಎಂದು ಮೋದಿ ಹೊಗಳಿದ್ದಾರೆ. ರಿಷಿ ಸುನಕ್ ತಮ್ಮ ಭಾರತ ಪ್ರವಾಸದಲ್ಲಿ ತಾಜ್ ಮಹಲ್, ಫತೇಪುರ್ ಸಿಕ್ರಿ ಮತ್ತು ಜೈಪುರಕ್ಕೆ ಭೇಟಿ ನೀಡಿದ್ದಾರೆ.

ಇಂದಿನ ಭೇಟಿಯ ವೇಳೆ ಇಬ್ಬರು ನಾಯಕರು ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದರು. ರಿಷಿ ಸುನಕ್ ಅವರ ಪತ್ನಿ ಅಕ್ಷತಾ ಮೂರ್ತಿ, ಅವರ ಪುತ್ರಿಯರಾದ ಕೃಷ್ಣ ಮತ್ತು ಅನುಷ್ಕಾ ಮತ್ತು ರಾಜ್ಯಸಭೆಯ ಸಂಸತ್ ಸದಸ್ಯರೂ ಆಗಿರುವ ರಿಷಿ ಸುನಕ್ ಅವರ ಅತ್ತೆ ಸುಧಾ ಮೂರ್ತಿ ಕೂಡ ಈ ವೇಳೆ ಜೊತೆಗಿದ್ದರು.

ಈ ಬಗ್ಗೆ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, “ಯುಕೆ ಮಾಜಿ ಪ್ರಧಾನಿ ರಿಷಿ ಸುನಕ್ ಮತ್ತು ಅವರ ಕುಟುಂಬವನ್ನು ಭೇಟಿಯಾಗಿ ಸಂತೋಷವಾಯಿತು! ನಾವು ಅನೇಕ ವಿಷಯಗಳ ಕುರಿತು ಅದ್ಭುತ ಸಂಭಾಷಣೆ ನಡೆಸಿದ್ದೇವೆ. ರಿಷಿ ಸುನಕ್ ಭಾರತದ ಉತ್ತಮ ಸ್ನೇಹಿತ. ಅವರು ಇನ್ನೂ ಬಲವಾದ ಭಾರತ-ಯುಕೆ ಸಂಬಂಧಗಳ ಬಗ್ಗೆ ಉತ್ಸುಕರಾಗಿದ್ದಾರೆ.” ಎಂದಿದ್ದಾರೆ.

ಇದನ್ನೂ ಓದಿ: ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ತಾವೇ ಕತಾರ್ ರಾಜನನ್ನು ಬರಮಾಡಿಕೊಂಡ ಪ್ರಧಾನಿ ಮೋದಿ

ಶನಿವಾರ, ರಿಷಿ ಸುನಕ್ ಕುಟುಂಬವು ಆಗ್ರಾದಲ್ಲಿರುವ ತಾಜ್ ಮಹಲ್‌ಗೆ ಭೇಟಿ ನೀಡಿತ್ತು. ಈ ವೇಳೆ ಯುಕೆ ಮಾಜಿ ಪ್ರಧಾನಿ ಮತ್ತು ಅವರ ಕುಟುಂಬವನ್ನು ನೋಡಲು ಸಂದರ್ಶಕರು ಅಪಾರ ಸಂಖ್ಯೆಯಲ್ಲಿ ಸೇರಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ, ಅವರು ನೆರೆದಿದ್ದ ಜನರತ್ತ ಕೈ ಬೀಸಿದ್ದರು. ರಿಷಿ ಸುನಕ್ ಭಾನುವಾರ ತಮ್ಮ ಕುಟುಂಬದೊಂದಿಗೆ ಐಕಾನಿಕ್ ಫತೇಪುರ್ ಸಿಕ್ರಿ ಸ್ಮಾರಕಕ್ಕೂ ಭೇಟಿ ನೀಡಿದರು.

ಆಗ್ರಾ ಪ್ರವಾಸಕ್ಕೂ ಮುನ್ನ ಸುನಕ್ ಜೈಪುರ ಸಾಹಿತ್ಯ ಉತ್ಸವ ಮತ್ತು ಮುಂಬೈನ ಐಕಾನಿಕ್ ವಾಂಖೆಡೆ ಕ್ರೀಡಾಂಗಣದಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಮತ್ತು ಅಂತಿಮ T20I ಪಂದ್ಯವನ್ನು ವೀಕ್ಷಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ