AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬುದ್ಧ ಪೂರ್ಣಿಮೆ: ಭಾರತ ಸಂಕಷ್ಟದ ಸಮಯ ಎದುರಿಸುತ್ತಿದೆ, ದೇಶವನ್ನುದ್ದೇಶಿಸಿ ಮೋದಿ ಮಾತು

ದೆಹಲಿ: 3ನೇ ಹಂತದ ಲಾಕ್​​ಡೌನ್ ಜಾರಿ ಆದ ಬಳಿಕ ಇಂದು ಪ್ರಧಾನಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿ ಮಾತನಾಡುದ್ರು. ಇಂದು ಏಷ್ಯಾದ ಬೆಳಕಾಗಿರುವ ಬುದ್ಧನ ಜನ್ಮದಿನ. ಹೀಗಾಗಿ ಇಂದು ಆಯೋಜಿಸಿರುವ ವೇಸಾಕ್​ ಗ್ಲೋಬಲ್​ ಸೆಲಬ್ರೇಷನ್​ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್​ ಮೂಲಕ ಭಾಗಿಯಾದರು. ಮೊದಲಿಗೆ ಪ್ರಧಾನಿ ಬುದ್ಧನ ಅನುಯಾಯಿಗಳಿಗೆ ಶುಭಾಶಯ ಕೋರಿದ್ರು. 2015, 2018ರಲ್ಲಿ ದೆಹಲಿ ಕೊಲೊಂಬೊದ ಕಾರ್ಯಕ್ರಮದಲ್ಲಿ ಭಾಗಿಯಾಗುವ ಅವಕಾಶ ನನಗೆ ಸಿಕ್ಕಿತ್ತು. ಆದರೆ ಈಗ ಭಾರತ ಸಂಕಷ್ಟದ ಸಮಯ ಎದುರಿಸುತ್ತಿದೆ ನಿಮ್ಮನ್ನು ಭೇಟಿಯಾಗುವುದಕ್ಕೆ […]

ಬುದ್ಧ ಪೂರ್ಣಿಮೆ: ಭಾರತ ಸಂಕಷ್ಟದ ಸಮಯ ಎದುರಿಸುತ್ತಿದೆ, ದೇಶವನ್ನುದ್ದೇಶಿಸಿ ಮೋದಿ ಮಾತು
ಸಾಧು ಶ್ರೀನಾಥ್​
|

Updated on: May 07, 2020 | 9:46 AM

Share

ದೆಹಲಿ: 3ನೇ ಹಂತದ ಲಾಕ್​​ಡೌನ್ ಜಾರಿ ಆದ ಬಳಿಕ ಇಂದು ಪ್ರಧಾನಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿ ಮಾತನಾಡುದ್ರು. ಇಂದು ಏಷ್ಯಾದ ಬೆಳಕಾಗಿರುವ ಬುದ್ಧನ ಜನ್ಮದಿನ. ಹೀಗಾಗಿ ಇಂದು ಆಯೋಜಿಸಿರುವ ವೇಸಾಕ್​ ಗ್ಲೋಬಲ್​ ಸೆಲಬ್ರೇಷನ್​ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್​ ಮೂಲಕ ಭಾಗಿಯಾದರು. ಮೊದಲಿಗೆ ಪ್ರಧಾನಿ ಬುದ್ಧನ ಅನುಯಾಯಿಗಳಿಗೆ ಶುಭಾಶಯ ಕೋರಿದ್ರು.

2015, 2018ರಲ್ಲಿ ದೆಹಲಿ ಕೊಲೊಂಬೊದ ಕಾರ್ಯಕ್ರಮದಲ್ಲಿ ಭಾಗಿಯಾಗುವ ಅವಕಾಶ ನನಗೆ ಸಿಕ್ಕಿತ್ತು. ಆದರೆ ಈಗ ಭಾರತ ಸಂಕಷ್ಟದ ಸಮಯ ಎದುರಿಸುತ್ತಿದೆ ನಿಮ್ಮನ್ನು ಭೇಟಿಯಾಗುವುದಕ್ಕೆ ಪರಿಸ್ಥಿತಿ ಅವಕಾಶ ನೀಡುತ್ತಿಲ್ಲ. ಹೀಗಾಗಿ ದೂರದಿಂದ ತಂತ್ರಜ್ಞಾನದ ಮೂಲಕ ನಿಮ್ಮ ಜತೆ ನನ್ನ ಅನಿಸಿಕೆ ಹಂಚಿಕೊಳ್ಳುತ್ತಿದ್ದೇನೆ ಎಂದು ಮಾತನ್ನು ಮುಂದುವರೆಸಿದ್ರು.

ಸಂಕಷ್ಟದ ಪರಿಸ್ಥಿತಿಯನ್ನು ಸಾಂಘಿಕವಾಗಿ ಎದುರಿಸುತ್ತೇವೆ. ಭಾರತದ ಸಂಸ್ಕೃತಿ ಯಾವಾಗಲೂ ಹೊಸ ದಿಕ್ಕು ತೋರಿದೆ. ಬುದ್ಧನ ಸಂದೇಶಗಳು ಸಂಸ್ಕೃತಿಯನ್ನು ಸಮೃದ್ಧ ಮಾಡಿವೆ. ಬುದ್ಧ ಯಾವುದೋ ಒಂದು ಪರಿಸ್ಥಿತಿಗೆ ಸೀಮಿತವಾಗಿಲ್ಲ. ಸಮಯ, ಸ್ಥಿತಿ ಬದಲಾಯಿತು, ಆದರೆ ಬುದ್ಧನ ಸಂದೇಶ ನಿರಂತರವಾಗಿ ಜನರನ್ನು ಪ್ರಭಾವಗೊಳಿಸುತ್ತಿದೆ.

ಬುದ್ಧ ಕೇವಲ ಹೆಸರು ಮಾತ್ರವಲ್ಲ, ಪವಿತ್ರ ವಿಚಾರ. ಮಾನವನ ಮನಸ್ಸಿನಲ್ಲಿ ಬುದ್ಧನ ಸಂದೇಶಗಳು ಇವೆ. ಕಠಿಣ ಪರಿಸ್ಥಿತಿಯಿಂದ ಹೊರಬರಲು ಯತ್ನಿಸುತ್ತಿದ್ದೇವೆ. ದಯಾ, ಕರುಣ, ಸುಖ-ದುಃಖದ ಸಮಭಾವ. ಪರಿಸ್ಥಿತಿಯನ್ನು ಬಂದಂತೆ ಸ್ವೀಕರಿಸುವುದು. ಎಷ್ಟು ಸಾಧ್ಯವಾಗುತ್ತದೋ ಅಷ್ಟು ಸಹಾಯ ಮಾಡಿ ಎಂದು ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ಭಗವಾನ್ ಬುದ್ಧನ ಒಂದೊಂದು ಸಂದೇಶವೂ, ಭಾರತದ ಪ್ರತಿಬದ್ಧತೆಯನ್ನು ಸದೃಢಗೊಳಿಸಿದೆ. ನಮ್ಮ ಕೆಲಸ ನಿರಂತರ ಸೇವಾಭಾವದಿಂದ ನಡೆಯುತ್ತಿದೆ. ಎಲ್ಲರ ನೆರವಿಗೂ ಭಾರತ ಸಿದ್ಧವಾಗಿದೆ. ಮಾನವ ಸೇವೆಯಲ್ಲಿ ತೊಡಗಿರುವವರು ಬುದ್ಧನ ನಿಜವಾದ ಅನುಯಾಯಿಗಳು. ಎಲ್ಲರ ಆರೋಗ್ಯ ಉತ್ತಮವಾಗಿರಲಿ ನಿಮ್ಮನ್ನು ನೀವು ರಕ್ಷಿಸಿಕೊಳ್ಳಿ, ಬೇರೆಯವರಿಗೂ ಸಹಾಯ ಮಾಡಿ ಎಂದು ಜನತೆಗೆ ಬುದ್ಧನ ಸಂದೇಶಗಳ ಬಗ್ಗೆ ಅರಿವು ಮೂಡಿಸಿ ದಾನ, ಧರ್ಮ, ಸಹಾಯ ಮಾಡಲು ಕರೆ ನೀಡಿದ್ದಾರೆ.

ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ
‘ದೊಡ್ಡದಾಗಿ ಏನೋ ಕಾಯ್ತಿರಬಹುದು, ಆಗೋದಲ್ಲ ಆಗ್ಲಿ’; ಧನುಶ್
‘ದೊಡ್ಡದಾಗಿ ಏನೋ ಕಾಯ್ತಿರಬಹುದು, ಆಗೋದಲ್ಲ ಆಗ್ಲಿ’; ಧನುಶ್