AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದ ಸಿಎಂ ಅಶೋಕ್ ಗೆಹ್ಲೋಟ್​ರನ್ನು ಶ್ಲಾಘಿಸಿದ ಪ್ರಧಾನಿ ಮೋದಿ

ಕಾಂಗ್ರೆಸ್ ನಾಯಕ ಹಾಗೂ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರನ್ನು ಪ್ರಧಾನಿ ಮೋದಿ ಹೊಗಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಬನ್​ಸ್ವಾರ​ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ರಾಜಸ್ಥಾನದ ಸಿಎಂ ಅಶೋಕ್ ಗೆಹ್ಲೋಟ್​ರನ್ನು ಶ್ಲಾಘಿಸಿದ ಪ್ರಧಾನಿ ಮೋದಿ
Narendra Modi, Ashok Gehlot
TV9 Web
| Edited By: |

Updated on:Nov 01, 2022 | 3:43 PM

Share

ಜೈಪುರ: ಕಾಂಗ್ರೆಸ್ ನಾಯಕ ಹಾಗೂ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರನ್ನು ಪ್ರಧಾನಿ ಮೋದಿ ಹೊಗಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಬನ್​ಸ್ವಾರ​ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕಾಂಗ್ರೆಸ್ ಹಿರಿಯ ಮತ್ತು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರನ್ನು ಹೊಗಳಿದರು. ಪ್ರಧಾನಿಯವರು ಅವರನ್ನು ದೇಶದ ಅತ್ಯಂತ ಹಿರಿಯ ಮುಖ್ಯಮಂತ್ರಿಗಳಲ್ಲಿ ಒಬ್ಬರು ಮತ್ತು ಅನುಭವಿ ರಾಜಕಾರಣಿ ಎಂದು ಶ್ಲಾಘಿಸಿದರು.

ಅಶೋಕ್ ಗೆಹ್ಲೋಟ್ ಮತ್ತು ನಾನು ಮುಖ್ಯಮಂತ್ರಿಯಾಗಿದ್ದಾಗ (ಗುಜರಾತ್) ಒಟ್ಟಿಗೆ ಕೆಲಸ ಮಾಡಿದ್ದೆವು. ಮುಖ್ಯಮಂತ್ರಿಗಳ ಪಟ್ಟಿಗಳಲ್ಲಿ ಅವರು ಅತ್ಯಂತ ಹಿರಿಯರು. ಇದೀಗ ನನ್ನ ಜೊತೆಗೆ ವೇದಿಕೆಯಲ್ಲಿ ಕುಳಿತಿರುವವರಲ್ಲಿ ಅಶೋಕ್ ಜಿ ಅವರು ಅತ್ಯಂತ ಹಿರಿಯ ಮುಖ್ಯಮಂತ್ರಿಗಳಲ್ಲಿ ಒಬ್ಬರು ಎಂದು ರಾಜಸ್ಥಾನದ ಬನ್​ಸ್ವಾರ​ದಲ್ಲಿ ಮಂಗರ್ ಧಾಮ್ ಕಿ ಗೌರವ್ ಗಾಥಾದಲ್ಲಿ ಸಭೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ತಮ್ಮ ಭಾಷಣದಲ್ಲಿ, ಪ್ರಧಾನಿ ಮೋದಿ ಅವರು ಸ್ವಾತಂತ್ರ್ಯದ ನಂತರ ಬುಡಕಟ್ಟು ಸಮುದಾಯಗಳ ಹೋರಾಟ ಮತ್ತು ತ್ಯಾಗಕ್ಕೆ ಸರಿಯಾದ ಸ್ಥಾನ ಸಿಗಲಿಲ್ಲ ಎಂದು ವಿಷಾದಿಸಿದರು. ಇಂದು, ದೇಶವು ದಶಕಗಳ ಹಿಂದಿನ ತಪ್ಪನ್ನು ಸರಿಪಡಿಸುತ್ತಿದೆ. ಬುಡಕಟ್ಟು ಸಮುದಾಯವಿಲ್ಲದೆ ಭಾರತದ ಭೂತ, ವರ್ತಮಾನ ಮತ್ತು ಭವಿಷ್ಯವು ಪೂರ್ಣಗೊಳ್ಳುವುದಿಲ್ಲ ಎಂದು ಪ್ರಧಾನಿ ಬನ್​ಸ್ವಾರದಲ್ಲಿ ಹೇಳಿದರು. ನಮ್ಮ ಸ್ವಾತಂತ್ರ್ಯ ಹೋರಾಟದ ಪ್ರತಿ ಹೆಜ್ಜೆ, ಇತಿಹಾಸದ ಪುಟಗಳು ಬುಡಕಟ್ಟು ಶೌರ್ಯದಿಂದ ತುಂಬಿವೆ ಎಂದು ಪ್ರಧಾನಿ ಹೇಳಿದರು.

ನಂತರಲ್ಲಿ ಕಾರ್ಯಕ್ರಮದಲ್ಲಿ ಮಾತನಾಡಿದ ಗೆಹ್ಲೋಟ್, ಪ್ರಜಾಪ್ರಭುತ್ವವು ಆಳವಾಗಿ ಬೇರೂರಿರುವ ದೇಶದ ಪ್ರಧಾನಿಯಾಗಿರುವುದರಿಂದ ಪ್ರಧಾನಿ ಮೋದಿ ಜಾಗತಿಕವಾಗಿ ಗೌರವವನ್ನು ಪಡೆಯುತ್ತಾರೆ ಎಂದು ಹೇಳಿದರು. ಪ್ರಧಾನಿ ನರೇಂದ್ರ ಮೋದಿ ವಿದೇಶಕ್ಕೆ ಹೋದಾಗ ಅವರಿಗೆ ಮಹತ್ವದ ಗೌರವ ಸಿಗುತ್ತದೆ ಎಂದು ಗೆಹ್ಲೋಟ್ ಹೇಳಿದ್ದಾರೆ. ಏಕೆಂದರೆ ಅವರು ಗಾಂಧಿ ರಾಷ್ಟ್ರದ ಪ್ರಧಾನಿಯಾಗಿದ್ದಾರೆ, ಅಲ್ಲಿ ಪ್ರಜಾಪ್ರಭುತ್ವವು ಆಳವಾಗಿ ಬೇರೂರಿದೆ. ಜಗತ್ತು ಇದನ್ನು ಅರಿತುಕೊಂಡಾಗ, ಆ ದೇಶದ ಪ್ರಧಾನಿ ತಮ್ಮ ಬಳಿಗೆ ಬರುತ್ತಿದ್ದಾರೆ ಎಂದು ಅವರು ಹೆಮ್ಮೆಪಡುತ್ತಾರೆ. 1913ರ ಮಂಗರ್ ಹತ್ಯಾಕಾಂಡವನ್ನು ನೆನಪಿಸಿಕೊಳ್ಳುವ ಮಂಗರ್ ಧಮ್ ಕಿ ಗೌರವ್ ಗಾಥಾ ಕಾರ್ಯಕ್ರಮದಲ್ಲಿ ಗೆಹ್ಲೋಟ್ ಹೇಳಿದರು.

ಇದನ್ನು ಓದಿ:ಇಂದಿನಿಂದ 2 ದಿನ ಪ್ರಧಾನಿ ಮೋದಿ ಗುಜರಾತ್ ಪ್ರವಾಸ; 15,670 ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಚಾಲನೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ ಈ ಕಾರ್ಯಕ್ರಮದಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಗೆಹ್ಲೋಟ್ ಅವರೊಂದಿಗೆ ವೇದಿಕೆ ಹಂಚಿಕೊಂಡರು. ರಾಜಸ್ಥಾನದ ಬನ್​ಸ್ವಾರ ಜಿಲ್ಲೆಯ ಮಂಗರ್ ಧಾಮವನ್ನು ರಾಷ್ಟ್ರೀಯ ಸ್ಮಾರಕ ಎಂದು ಪ್ರಧಾನಿ ಘೋಷಿಸಿದರು. ಇಲ್ಲಿಯೇ ಬ್ರಿಟಿಷ್ ಪಡೆಗಳು – ನವೆಂಬರ್ 17, 1913 ರಂದು – ಭಿಲ್ ಬುಡಕಟ್ಟು ಸಮುದಾಯದ 1,500 ಕ್ಕೂ ಹೆಚ್ಚು ಜನರನ್ನು ಗುಂಡಿಕ್ಕಿ ಕೊಂದಿತು ಎಂದರು.

ವೇದಿಕೆಯಲ್ಲಿ ಮಧ್ಯಪ್ರದೇಶ ಮತ್ತು ಗುಜರಾತ್ ಮುಖ್ಯಮಂತ್ರಿಗಳಾದ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಭೂಪೇಂದ್ರ ಪಟೇಲ್ ಕೂಡ ಉಪಸ್ಥಿತರಿದ್ದರು. ಗುಜರಾತಿನ ಮುಖ್ಯಮಂತ್ರಿಯಾಗಿ, ಗುಜರಾತಿನ ಭಾಗವಾಗಿರುವ ಮಂಘರ್ ಪ್ರದೇಶದಲ್ಲಿ ಸೇವೆ ಸಲ್ಲಿಸಿದ್ದನ್ನು ಸ್ಮರಿಸಿದ ಪ್ರಧಾನಿ, ಗೋವಿಂದ ಗುರುಗಳು ತಮ್ಮ ಜೀವನದ ಕೊನೆಯ ವರ್ಷಗಳನ್ನು ಇಲ್ಲಿ ಕಳೆದರು, ಅವರ ಶಕ್ತಿ ಮತ್ತು ಜ್ಞಾನವನ್ನು ಈ ನೆಲದ ಮಣ್ಣಿನಲ್ಲಿ ಇನ್ನೂ ಅನುಭವಿಸಬಹುದು ಎಂದು ತಿಳಿಸಿದರು. .

Published On - 3:43 pm, Tue, 1 November 22

Follow Us
TV9 Web
TV9 Web

TV9 Kannada

Read More
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್